ಸಾಮೂಹಿಕ ವಲಸೆ ಅಪಾಯಕಾರಿ


Team Udayavani, Sep 13, 2019, 5:31 AM IST

q-39

ಮಹಾರಾಷ್ಟ್ರದಲ್ಲಿ ಈಗಾಗಲೇ ಚುನಾವಣೆ ತಯಾರಿ ಪ್ರಾರಂಭವಾಗಿದೆ. ಬಿಜೆಪಿ ಈ ನಿಟ್ಟಿನಲ್ಲಿ ಉಳಿದ ಪಕ್ಷಗಳಿಗಿಂತ ಮಾತ್ರವಲ್ಲದೆ ಮಿತ್ರ ಪಕ್ಷ ಶಿವಸೇನೆಗಿಂತಲೂ ಒಂದು ಹೆಜ್ಜೆ ಮುಂದಿದೆ. ವಿಪಕ್ಷವಾಗಿ ಕಾಂಗ್ರೆಸ್‌-ಎನ್‌ಸಿಪಿ ಕೂಟವೂ ಸೀಟು ಹಂಚಿಕೆ ಇತ್ಯಾದಿ ಮಾತುಕತೆಗಳನ್ನು ಪೂರೈಸಿದೆ. ಆದರೆ ಅಲ್ಲಿ ಸದ್ಯ ನಡೆಯುತ್ತಿರುವ ಪಕ್ಷಾಂತರವನ್ನು ಗಮನಿಸಿದರೆ ವಿಪಕ್ಷ ಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಢಾಳಾಗಿಯೇ ಗೋಚರಿಸುತ್ತಿದೆ.

ಕಾಂಗ್ರೆಸ್‌ ಮತ್ತು ಎನ್‌ಸಿಪಿಯ ಘಟಾನುಘಟಿ ನಾಯಕರೇ ಬಿಜೆಪಿ ಮತ್ತು ಶಿವಸೇನೆಯಲ್ಲಿ ಆಶ್ರಯಪಡೆಯಲು ಹಾತೊರೆಯುತ್ತಿದ್ದಾರೆ. ನವಿಮುಂಬಯಿಯಲ್ಲಿ ಎನ್‌ಸಿಪಿಯ ಪ್ರಭಾವಿ ನಾಯಕರಾಗಿದ್ದ ಗಣೇಶ್‌ ನಾಯಕ್‌ ಮತ್ತು ಪುಣೆಯ ಬಲಾಡ್ಯ ಕಾಂಗ್ರೆಸ್‌ ನಾಯಕ್‌ ಹರ್ಷವರ್ಧನ ಪಾಟೀಲ್ ಇತ್ತೀಚೆಗೆ ಕೇಸರಿ ಪಾಳಯಕ್ಕೆ ಜಿಗಿದಿರುವ ಪ್ರಮುಖ ನಾಯಕರು. ಇದಕ್ಕೂ ಮೊದಲು ವೈಭವ್‌ ಪಿಛಡ್‌, ಶಿವೇಂದ್ರ ಭೋಸಲೆ ಸೇರಿದಂತೆ ಅನೇಕರು ಪಕ್ಷಾಂತರ ಮಾಡಿದ್ದಾರೆ. ಇವರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಲಾಡ್ಯರು. ಇವರ ಪಕ್ಷಾಂತರ ವಿಪಕ್ಷ ಕೂಟಕ್ಕೆ ಖಂಡಿತ ಹಾನಿ ಮಾಡಲಿದೆ. ಕೆಲ ಸಮಯದ ಹಿಂದೆಯಷ್ಟೇ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರು, ‘ವಿಪಕ್ಷದ ಕನಿಷ್ಠ 50 ಶಾಸಕರು ಬಿಜೆಪಿ ಸೇರುವ ಉತ್ಸುಕತೆಯಲ್ಲಿದ್ದಾರೆ’ ಎಂದಿದ್ದರು. ಕೇಸರಿ ಕೂಟಕ್ಕೆ ಸೇರುತ್ತಿರುವ ವಿಪಕ್ಷ ನಾಯಕರ ದಂಡನ್ನು ನೋಡಿದರೆ ಅವರ ಹೇಳಿಕೆ ಉತ್ಪ್ರೇಕ್ಷಿತ ಅಲ್ಲ ಎಂದೆನಿಸುತ್ತಿದೆ.

ಈ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ಮುಂಬಯಿ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೇಟಿನಲ್ಲಿ ಸ್ಪರ್ಧಿಸಿದ್ದ ಚಿತ್ರನಟಿ ಊರ್ಮಿಳಾ ಮಾತೊಂಡ್ಕರ್‌ ಆರೇ ತಿಂಗಳಲ್ಲಿ ಪಕ್ಷ ಬಿಟ್ಟಿದ್ದಾರೆ. ಊರ್ಮಿಳಾ ಕಾಂಗ್ರೆಸ್‌ಗೆ ಬಂದದ್ದೇ ಚುನಾವಣೆ ನಿಕಟವಾದಾಗ. ಅವರೇನೋ ಕಾಂಗ್ರೆಸಿನ ತಳಮಟ್ಟದ ಕಾರ್ಯಕರ್ತರೂ ಅಲ್ಲ. ಅವರ ಸೇರ್ಪಡೆಯಿಂದ ಕಾಂಗ್ರೆಸಿನ ತಾರಾ ವರ್ಚಸ್ಸು ಒಂದಿಷ್ಟು ಹೆಚ್ಚಾಗಿತ್ತಷ್ಟೆ. ಆದರೆ ಅವರು ಪಕ್ಷ ತೊರೆಯಲು ನೀಡಿರುವ ಕಾರಣ ಮಾತ್ರ ಮಹಾರಾಷ್ಟ್ರ ಎಂದಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್‌ ನಾಯಕತ್ವ ಎಷ್ಟು ದುರ್ಬಲವಾಗಿದೆ ಎನ್ನುವು ದನ್ನು ಬಯಲಾಗಿಸಿದೆ. ಮುಂಬಯಿ ಕಾಂಗ್ರೆಸ್‌ನ ಒಳಜಗಳದಿಂದ ಬೇಸತ್ತು ಪಕ್ಷ ತ್ಯಜಿಸಿರುವುದಾಗಿ ಊರ್ಮಿಳಾ ಹೇಳಿದ್ದಾರೆ. ಈ ಒಳ ಜಗಳ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿಲ್ಲ, ಕಾಂಗ್ರೆಸ್‌ ಅಷ್ಟಿಷ್ಟು ಅಸ್ತಿತ್ವ ಉಳಿಸಿಕೊಂಡಿರುವ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಕೇರಳ ಸೇರಿ ಹಲವು ರಾಜ್ಯಗಳಲ್ಲಿ ಇದೆ. ಸತತ 2 ಲೋಕಸಭಾ ಚುನಾವಣೆಗಳನ್ನು ಹೀನಾಯವಾಗಿ ಸೋತು ಕೂಡ ಕಾಂಗ್ರೆಸ್‌ ಪಾಠ ಕಲಿಯುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.

ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ ಎನ್‌ಸಿಪಿ 4 ಮತ್ತು ಕಾಂಗ್ರೆಸ್‌ 1ರಲ್ಲಿ ಮಾತ್ರ ಗೆದ್ದಿದೆ. ಬಿಜೆಪಿ 23 ಮತ್ತು ಶಿವಸೇನೆ 18 ಸ್ಥಾನಗಳನ್ನು ಗಳಿಸಿವೆ. ಎನ್‌ಡಿಎ ಅಭ್ಯರ್ಥಿಗಳು ಗೆದ್ದಿರುವ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಎನ್‌ಸಿಪಿ ಅಭ್ಯರ್ಥಿಗಳು 2 ಲಕ್ಷಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ ಎನ್ನುವುದು ಚುನಾವಣೆಗೆ ವಿಪಕ್ಷ ಎಷ್ಟು ಕಳಪೆ ತಯಾರಿ ಮಾಡಿಕೊಂಡಿತ್ತು ಎನ್ನುವುದನ್ನು ತಿಳಿಸುತ್ತಿದೆ. ಪ್ರಚಲಿತ ರಾಜಕೀಯದಲ್ಲಿ ಪಕ್ಷ ನಿಷ್ಠೆ, ಸಿದ್ಧಾಂತ, ನೈತಿಕತೆ ಇವೆಲ್ಲ ಬೆಲೆ ಕಳೆದುಕೊಂಡಿರುವ ಶಬ್ದಗಳು. ಅದೇ ರೀತಿ ಚುನಾವಣೆ ಸನ್ನಿಹಿತವಾಗುವಾಗ ನಾಯಕರು ಪಕ್ಷ ಬದಲಾಯಿಸುವುದು ಭಾರತದ ರಾಜಕಾರಣದಲ್ಲಿ ಹೊಸ ಸಂಪ್ರದಾಯವೂ ಅಲ್ಲ. ಆದರೆ ಮಹಾರಾಷ್ಟ್ರದಲ್ಲಾಗಿರುವಂತೆ ನಾಯಕರೆಲ್ಲ ಸಾಮೂಹಿಕ ವಲಸೆ ಹೋಗುವುದು ಪ್ರಜಾತಂತ್ರದ ಹಿತದೃಷ್ಟಿಯಿಂದ ಸರಿಯಲ್ಲ. ಇಂಥ ಬೆಳವಣಿಗೆ ಜನರ ಮನಸ್ಸಲ್ಲಿ ರಾಜಕೀಯದ ಬಗ್ಗೆ ಭಿನ್ನವಾದ ಒಂದು ಚಿತ್ರಣ ಮೂಡಿಸುತ್ತದೆ ಮತ್ತು ಈ ಚಿತ್ರಣ ಫ‌ಲಿತಾಂಶದ ಮೇಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.