Asian Para Games ಭಾರತ ಹೆಚ್ಚು ಪದಕ ಗೆಲ್ಲಲಿ


Team Udayavani, Oct 25, 2023, 6:00 AM IST

indian-flag

ಚೀನದ ಹ್ಯಾಂಗ್‌ಝೂನಲ್ಲಿ ಪ್ಯಾರಾ ಏಷ್ಯನ್‌ ಗೇಮ್ಸ್‌ ಆರಂಭವಾಗಿದ್ದು, ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸೋಮ ವಾರ ಈ ಕೂಟ ಆರಂಭವಾಗಿದ್ದು, ಇದುವರೆಗೆ ಭಾರತ 9 ಬಂಗಾರದ ಪದಕ ಸಹಿತ ಒಟ್ಟು 34 ಪದಕಗಳನ್ನು ಗೆದ್ದಿದೆ. ಸೋಮವಾರ ಆರು ಬಂಗಾರ, ಆರು ಬೆಳ್ಳಿ ಮತ್ತು 5 ಕಂಚಿನ ಪದಕಗಳೊಂದಿಗೆ 17 ಪದಕಗಳನ್ನು ಭಾರತ ತನ್ನ ಮಡಿಲಿಗೆ ಹಾಕಿಕೊಂಡಿತ್ತು. ಮಂಗಳವಾರವೂ ಭಾರತ 17 ಪದಕ ಜಯಿಸಿದ್ದು ಇದರಲ್ಲಿ 3 ಬಂಗಾರ, ಆರು ಬೆಳ್ಳಿ ಮತ್ತು ಎಂಟು ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ. ಈ ಬಾರಿಯ ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ 313 ಕ್ರೀಡಾಪಟುಗಳು ಭಾಗಿಯಾಗಿದ್ದಾರೆ. ಒಟ್ಟು 22 ವಿಭಾಗಗಳಿದ್ದು, ಭಾರತ 17ರಲ್ಲಿ ಭಾಗಿಯಾಗಿದೆ. ಏಷ್ಯನ್‌ ಗೇಮ್ಸ್‌ನಂತೆ ಇದರಲ್ಲಿಯೂ 100 ಪದಕ ಗೆಲ್ಲುವುದು ಭಾರತದ ಗುರಿಯಾಗಿದೆ. 2018ರ ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ 190 ಆ್ಯತ್ಲೀಟ್‌ಗಳು ಭಾಗಿಯಾಗಿದ್ದರು. ಆಗ 15 ಚಿನ್ನ ಸಹಿತ ಭಾರತ 72 ಪದಕ ಜಯಿಸಿತ್ತು. 2014ರ ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 33 ಪದಕ ಜಯಿಸಿತ್ತು.

ಭಾರತ ಮೊದಲ ಎರಡು ದಿನವೇ ಉತ್ತಮ ಸಾಧನೆ ಮಾಡಿದ್ದು, 100 ಪದಕಗಳ ಭರವಸೆಯನ್ನು ಇನ್ನಷ್ಟು ಖಾತ್ರಿಗೊಳಿಸಿದೆ. ಸದ್ಯ ಅಂಕುರ್‌ ಧಾಮಾ, ನಿಷದ್‌ ಕುಮಾರ್‌, ಶೈಲೇಶ್‌ ಕುಮಾರ್‌, ಪ್ರಣವ್‌ ಸೂರ್ಮ, ಅವನಿ ಲೇಖಾರ, ಪ್ರವೀಣ್‌ ಕುಮಾರ್‌, ದೀಪ್ತಿ ಜೀವನ್‌ಜಿà, ಪ್ರಾಚಿ ಯಾದವ್‌, ನೀರಜ್‌ ಯಾಜವ್‌ ಬಂಗಾರ ಗೆದ್ದಿದ್ದಾರೆ.

ಸದ್ಯ ಪದಕ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದೆ. 165 ಪದಕ ಗೆದ್ದಿರುವ ಚೀನ ಮೊದಲ ಸ್ಥಾನದಲ್ಲಿದ್ದರೆ, 47 ಪದಕ ಗೆದ್ದಿರುವ ಇರಾನ್‌ 2ನೇ ಸ್ಥಾನ, 45 ಪದಕ ಗೆದ್ದಿರುವ ಜಪಾನ್‌ ಮೂರನೇ ಸ್ಥಾನದಲ್ಲಿವೆ.

2020ರಲ್ಲಿ ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್‌ನಲ್ಲೂ ಭಾರತ ಉತ್ತಮ ಸಾಧನೆಯನ್ನೇ ಮಾಡಿತ್ತು. ಆಗ ಭಾರತ ಒಟ್ಟಾರೆಯಾಗಿ 19 ಪದಕ ಗೆದ್ದಿತ್ತು. ಇದರಲ್ಲಿ ಐದು ಬಂಗಾರ, 8 ಬೆಳ್ಳಿ ಮತ್ತು 6 ಕಂಚಿನ ಪದಕ ಗೆದ್ದಿತ್ತು.

ಈಗ ಪ್ಯಾರಾ ಏಷ್ಯನ್‌ ಗೇಮ್ಸ್‌ನ ಶೂಟಿಂಗ್‌ನಲ್ಲಿ ಚಿನ್ನ ಗೆದ್ದಿರುವ ಅವನಿ ಲೇಖಾರ ಅವರು ಭಾರತದ ಪರವಾಗಿ ಮೊದಲ ಚಿನ್ನ ಗೆದ್ದ ಪ್ಯಾರಾಲಿಂಪಿಕ್ಸ್‌ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆಗಲೂ ಅವನಿ ಲೇಖಾರ ಜತೆಗೆ ಸುಮಿತ್‌ ಅಂಟಿಲ್‌, ಮನೀಷ್‌ ನರ್ವಾಲ್‌, ಪ್ರಮೋದ್‌ ಭಗತ್‌, ಕೃಷ್ಣ ನಗರ್‌ ಚಿನ್ನ ಗೆದ್ದಿದ್ದರು.

ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಕ್ರೀಡೆಗೆ ಹೆಚ್ಚಿನ ಮಹತ್ವ ಕೊಡಲಾಗುತ್ತಿದ್ದು, ಇದಕ್ಕೆ ಉದಾಹರಣೆಯಾಗಿ ಕೂಟದಿಂದ ಕೂಟಕ್ಕೆ ಪದಕಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಉತ್ತಮವಾಗಿ ತರಬೇತಿ ಮತ್ತು ಪ್ರೋತ್ಸಾಹ ಸಿಕ್ಕರೆ ಭಾರತ ದ ಕ್ರೀಡಾಪಟುಗಳು ಶ್ರೇಷ್ಠ ಪ್ರದರ್ಶನ ನೀಡಬಲ್ಲರು ಎಂಬುದಕ್ಕೆ ಈಗ ಪದಕ ಗೆಲ್ಲುತ್ತಿರುವವರೇ ಸಾಕ್ಷಿಯಾಗಿದ್ದಾರೆ. ಹೀಗೆಯೇ ಭಾರತದ ಪದಕಗಳ ಗಳಿಕೆ ಇನ್ನಷ್ಟು ಹೆಚ್ಚಾಗಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.