ಶತಮಾನೋತ್ಸವಕ್ಕೆ ಭಾರತದ ಕೀರ್ತಿ ಇನ್ನಷ್ಟು ಬೆಳೆಯಲಿ


Team Udayavani, Aug 16, 2022, 6:00 AM IST

ಶತಮಾನೋತ್ಸವಕ್ಕೆ ಭಾರತದ ಕೀರ್ತಿ ಇನ್ನಷ್ಟು ಬೆಳೆಯಲಿ

ಭಾರತ ಈಗಷ್ಟೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಆಚರಿಸಿ­ಕೊಂಡಿದೆ. ಸೋಮವಾರವಷ್ಟೇ ಇಡೀ ದೇಶಕ್ಕೆ ದೇಶವೇ 76ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಿದೆ. ಕೆಂಪುಕೋಟೆ­ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತು ಬೆಂಗಳೂರಿನ ಮಾಣೆಕ್‌ ಶಾ ಮೈದಾನ­ದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಷಣ ಮಾಡಿದ್ದು, ದೇಶ ಮತ್ತು ರಾಜ್ಯದ ಪ್ರಗತಿಯ ಯೋಜನೆಗಳನ್ನು ತೆರೆದಿರಿಸಿದ್ದಾರೆ.

ಈ ಹಿಂದಿನ 75 ವರ್ಷಗಳಲ್ಲಿ ಭಾರತ ಸಾಧಿಸಿದ್ದು ಅಪಾರ. ಇದರಲ್ಲಿ ಎರಡು ಮಾತಿಲ್ಲ. ಆದರೆ, ಮುಂದಿನ 25 ವರ್ಷಗಳು ಸವಾಲಿನದ್ದಾಗಿವೆ ಎಂಬುದು ಸತ್ಯವೇ. ಏಕೆಂದರೆ, ಪ್ರಗತಿ ವಿಚಾರದಲ್ಲಿ ಇಡೀ ಜಗತ್ತೇ ತೀವ್ರ ಸ್ಪರ್ಧೆಯಲ್ಲಿದೆ. ಬಹುತೇಕ ರಾಷ್ಟ್ರಗಳು ತಾಮುಂದು ನಾ ಮುಂದು ಎಂದು ನಾಗಾಲೋಟದಲ್ಲಿ ಓಡುತ್ತಿವೆ. ಒಂದೊಮ್ಮೆ ಕೊರೊನಾ ಬಾಧಿಸದೇ ಹೋಗಿದ್ದರೆ, ಈ ವರ್ಷದ ಹೊತ್ತಿಗೆ ಭಾರತವೂ ಸೇರಿದಂತೆ ಬಹಳಷ್ಟು ದೇಶಗಳ ಪ್ರಗತಿ ಉತ್ತಮವಾಗಿ ಇರುತ್ತಿತ್ತು ಎಂಬುದನ್ನು ಆರ್ಥಿಕ ವಿಶ್ಲೇಷಕರೇ ಹೇಳಿದ್ದಾರೆ.

ಈಗ ಕಳೆದುಹೋದ ಕಾಲದ ಬಗ್ಗೆ ಚಿಂತಿಸಿ ಅಗತ್ಯವಿಲ್ಲ. ನಮ್ಮೆಲ್ಲರ ಮುಂದಿರುವುದು ಮುಂದಿನ 25 ವರ್ಷ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಚ ಪ್ರತಿಜ್ಞೆಗಳ ಬಗ್ಗೆ ಕರೆ ನೀಡಿದ್ದಾರೆ. ವಿಶೇಷವೆಂದರೆ, ಈ ಬಾರಿ ಮೋದಿ ಅವರು ಹೊಸ ಯೋಜನೆಗಳನ್ನು ಪ್ರಕಟಿಸಲು ಹೋಗಿಲ್ಲ. ಇದಕ್ಕೆ ಬದಲಾಗಿ ಪ್ರಗತಿಯ ಮಾರ್ಗವನ್ನು ಹಾಕಿಕೊಟ್ಟಿದ್ದಾರೆ. ಅಂದರೆ, ದೇಶದ ಪ್ರಗತಿಗಾಗಿ ಎಲ್ಲರ ಸಹಭಾಗಿತ್ವ, ಒಗ್ಗಟ್ಟು, ಸಂಪ್ರದಾಯಗಳ ಕುರಿತಾದ ಹೆಮ್ಮೆ, ಸಮಾನತೆ, ಮಹಿಳಾ ಸ್ವಾವಲಂಬನೆ ಮತ್ತು ಸಂಪನ್ಮೂಲಗಳ ಮಿತವ್ಯಯಕಾರಿ ಬಳಕೆಯ ಬಗ್ಗೆ ಒತ್ತಿ ಹೇಳಿದ್ದಾರೆ.

ಪ್ರಧಾನಿಯ ಭಾಷಣವನ್ನು ಒರೆಗೆ ಹಚ್ಚಿ ನೋಡುವುದಾದರೆ, ಈ ಎಲ್ಲ ಸಂಗತಿಗಳು ಒಪ್ಪತಕ್ಕವೇ ಆಗಿವೆ. ದೇಶದ ಎಲ್ಲ ಜನರ ಭಾಗೀದಾರಿಕೆ ಇಲ್ಲದೇ ಯಾವುದೇ ಕಾರಣಕ್ಕೂ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುವು­ದಿಲ್ಲ. ಈ ವಿಚಾರವನ್ನು ಎಲ್ಲರೂ ಮನಗಾಣಬೇಕಾಗಿದೆ. ಇದು ಕೇವಲ ಜನರಿಗಷ್ಟೇ ಅಲ್ಲ, ಎಲ್ಲ ಸರಕಾರಗಳಿಗೂ ಅನ್ವಯವಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷಬೇಧ ಮರೆತು ಶ್ರಮಿಸಿದರೆ ಮಾತ್ರ ಯಶಸ್ಸು ಸಾಧ್ಯ.

ಇನ್ನು ಮತ್ತೊಬ್ಬರ ಅನುಕರಣೆ ಮಾಡುವುದು ಸಲ್ಲದು ಎಂಬುದನ್ನು ಅಷ್ಟೇ ಸೂಕ್ಷ್ಮವಾಗಿ ಹೇಳಿದ್ದಾರೆ. ಅಂದರೆ, ಜಗತ್ತಿನಲ್ಲಿ ಬೇರೊಬ್ಬರು ನಮಗೆ ಹಾದಿ ತೋರಿಸಬೇಕಾಗಿಲ್ಲ. ನಮ್ಮ ದಾರಿಯಲ್ಲೇ ನಡೆದು, ಅಭಿವೃದ್ಧಿ ಸಾಧಿಸೋಣ ಎಂಬುದು ಅವರ ಈ ಮಾತಿನ ತಿರುಳು. ಏಕೆಂದರೆ, ಅಹಿಂಸಾ ಹೋರಾಟ ಸೇರಿದಂತೆ ಬಹುತೇಕ ವಿಚಾರಗಳಲ್ಲಿ ನಾವೇ ಜಗತ್ತಿಗೆ ಮಾದರಿಯಾಗಿದ್ದೇವೆ. ಹೀಗಾಗಿ, ಯಾವುದೇ ಕಾರಣಕ್ಕೂ ಇನ್ನೊಬ್ಬರ ಅನುಕರಿಸಿ ದಾಸ್ಯದ ಸಂಕೇತವನ್ನು ಪಾಲಿಸುವುದು ಬೇಡ ಎಂದಿರುವುದು ಸಕಾಲಿಕವಾದ ಸಂಗತಿ. ಇದರ ಜತೆಗೆ ಮೆಚ್ಚತಕ್ಕ ಅಂಶವೆಂದರೆ, ನಮ್ಮ ಪರಂಪರೆಯ ರಕ್ಷಣೆ ಮತ್ತು ಭಾಷೆಯ ಮೇಲಿನ ಕೀಳರಿಮೆ ತೊರೆಯು­ವುದು. ನಮ್ಮಲ್ಲಿ ಎಷ್ಟೋ ಪ್ರತಿಭೆ­ಗಳಿ­ದ್ದರೂ, ಭಾಷೆಯ ಸಮಸ್ಯೆಯಿಂದ ಬೆಳೆಕಿಗೆ ಬರುವುದೇ ಇಲ್ಲ. ಈ ಕೀಳರಿಮೆ ದಾಟಿ ಬೆಳೆಯಬೇಕಾಗಿದೆ. ಅಲ್ಲದೆ, ನಮಗೆ ಬೇರೊಂದು ಭಾಷೆ ಬರುವುದಿಲ್ಲವೆಂಬ ಸಂಕುಚಿತ ಮನೋಭಾವ ತೊರೆಯಬೇಕು ಎಂದಿರು­ವುದು ಈ ಹೊತ್ತಿನಲ್ಲಿ ಗಣನೆಗೆ ತೆಗೆದುಕೊಳ್ಳಬೇಕಾದ ಸಂಗತಿ.

ಏನೇ ಆಗಲಿ ಪ್ರಧಾನಿ ಮೋದಿ ಮುಂದಿನ 25 ವರ್ಷಗಳ ಕನಸನ್ನು ಬಿತ್ತಿ­ದ್ದಾರೆ. ಶತಮಾನೋತ್ಸವದ ವೇಳೆಗೆ ಭಾರತ, ವಿಶ್ವ ಕಿರೀಟಯಾಗಬೇಕೆಂಬುದು ಕನಸು. ಎಲ್ಲರೂ ಈ ಕನಸನ್ನು ನನಸು ಮಾಡುವತ್ತ ಮುಂದಾಗೋಣ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.