ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕ್ರಮ ಇನ್ನೂ ಬಿರುಸಾಗಲಿ


Team Udayavani, Dec 6, 2022, 6:15 AM IST

ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕ್ರಮ ಇನ್ನೂ ಬಿರುಸಾಗಲಿ

ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಮಟ್ಟ ಹಾಕಲಾಗಿದೆ ಎನ್ನುವುದು ನಿಜ. ಆದರೂ ಆಗೊಮ್ಮೆ-ಈಗೊಮ್ಮೆ ಕಾಶ್ಮೀರ ಪಂಡಿತ ಸಮುದಾಯದವರನ್ನು, ಹಿಂದೂಗಳನ್ನು ಗುರಿಯಾಗಿ ಇರಿಸಿಕೊಂಡು ಬೆದರಿಕೆ ಹಾಕುವುದು, ಹಲ್ಲೆ, ದಾಳಿ ನಡೆಸುವ‌ ಖಂಡನೀಯ ಕೃತ್ಯಗಳು ನಡೆಯುತ್ತಿವೆ.

ಪಾಕಿಸ್ಥಾನ ಪ್ರೇರಿತ ಉಗ್ರ ಸಂಘಟನೆ ಲಷ್ಕರ್‌-ಎ-ತಯ್ಯ ಬಾದ ಸಹವರ್ತಿ ಸಂಸ್ಥೆ ದ ರೆಸಿಸ್ಟೆನ್ಸ್‌ ಫ್ರಂಟ್‌ ಕಾಶ್ಮೀರಿ ಪಂಡಿತ ಸಮುದಾಯದ 56 ಮಂದಿ ಉದ್ಯೋಗಿಗಳು ಹಾಗೂ ಹಿಂದೂ ಸಮುದಾಯದವರು ಕೇಂದ್ರಾಡಳಿತ ಪ್ರದೇಶ ಬಿಟ್ಟು ತೆರಳುವಂತೆ ಹೇಳಿದೆ. ಜತೆಗೆ ಅವರ ಹೆಸರು ಸಹಿತ ಪೂರ್ಣ ವಿವರವನ್ನೂ ಬಹಿರಂಗ ಮಾಡಿದೆ. ಹೀಗಾಗಿ ಕೇಂದ್ರ ಸರಕಾರದ ಕಠಿನ ಕ್ರಮದ ಹೊರತಾಗಿಯೂ ಕಣಿವೆ ಪ್ರದೇಶದಲ್ಲಿ ಪ್ರತ್ಯೇಕತಾವಾದಿ ಧೋರಣೆ ಹೊಂದಿರುವ ಮನಸ್ಸುಗಳ ನಿರ್ಮೂಲನೆ ಆಗಿಲ್ಲವೆನ್ನುವುದು ಸ್ಪಷ್ಟವಾಯಿತು.

ಹೆಚ್ಚಾ ಕಡಿಮೆ ಒಂದು ವರ್ಷದ ಅವಧಿಯಲ್ಲಿ ಕಾಶ್ಮೀರ ಪಂಡಿತ ಸಮುದಾಯಕ್ಕೆ ಸೇರಿದ 24 ಮಂದಿಯನ್ನು ದ ರೆಸಿಸ್ಟೆನ್ಸ್‌ ಫ್ರಂಟ್‌, ಲಷ್ಕರ್‌ ಸೇರಿದಂತೆ ಪಾಕ್‌ ಪ್ರೇರಿತ ಉಗ್ರರು ಹಾರಿಸಿದ ಗುಂಡಿಗೆ ಬಲಿಯಾಗಿದ್ದಾರೆ. ಪ್ರಧಾನಮಂತ್ರಿ ಪುನರ್ವಸತಿ ಯೋಜನೆಯಲ್ಲಿ ಆರು ಸಾವಿರಕ್ಕಿಂತಲೂ ಅಧಿಕ ಮಂದಿ ಪಂಡಿತ ಸಮುದಾಯದವರು ಜೀವನಾಧಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.

ಪಾಕ್‌ ಪ್ರೇರಿತ ಉಗ್ರ ಸಂಘಟನೆಗಳು ನೇರವಾಗಿ ಕಿಡಿಗೇಡಿತನದ ಕೃತ್ಯಗಳನ್ನು ನಡೆಸದೆ ಅದನ್ನೂ ಹೊರ ಗುತ್ತಿಗೆ ನೀಡಿದ್ದಾರೆ. ಹೈಬ್ರಿಡ್‌ ಭಯೋತ್ಪಾದನೆ ಎಂಬ ಹೆಸರಿನಿಂದ ಅದನ್ನು ಈಗಾಗಲೇ ಗುರುತಿಸ ಲಾಗಿದೆ. ಇದು ವೇ ಕೇಂದ್ರಾಡಳಿತ ಪ್ರದೇಶದಲ್ಲಿ ವಿವಿಧ ಭದ್ರತಾ ಸಂಸ್ಥೆಗಳಿಗೆ ಸವಾಲಾಗಿರುವ ಅಂಶ. ಅದಕ್ಕೆ ಪೂರಕವಾಗಿ ನಮ್ಮ ದೇಶದ ಒಳಗೇ ಇರುವ ಕೆಲವೊಂದು ಶಕ್ತಿಗಳು ಈಗಲೂ ಉಗ್ರರ ಪರ ಮೃದು ಧೋರಣೆ ಹೊಂದಿರುವುದೂ ಕಳವಳಕಾರಿಯಾಗಿದೆ. ಒಂದು ಹಂತದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಹಿಂಸಾಕೃತ್ಯಗಳನ್ನು ಮಟ್ಟ ಹಾಕಿದ್ದೇ 2014ರಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರಕಾರ ಎಂದರೆ ತಪ್ಪಾಗಲಾರದು.

ಕಿಡಿಗೇಡಿತನದ ಕೃತ್ಯಗಳನ್ನು ನಡೆಸುತ್ತಿರುವ ಉಗ್ರ ಸಂಘಟನೆಗಳು, ಅವುಗಳಿಗೆ ವಿವಿಧ ಹಂತದಲ್ಲಿ ವಿತ್ತೀಯ ನೆರವು ನೀಡಿ ಪ್ರೋತ್ಸಾಹ ನೀಡುತ್ತಿರುವವರನ್ನು ಕಾನೂನಿನ ವ್ಯಾಪ್ತಿಯಲ್ಲಿ ಶಿಕ್ಷೆಗೆ ಗುರಿಪಡಿಸುವ ಕೆಲಸಗಳು ಆರಂಭವಾಗಿವೆ. ಇದರ ಹೊರತಾಗಿಯೂ ಕೂಡ ರವಿವಾರ ಬೆದರಿಕೆ ಹಾಕಿದಂಥ ಪ್ರಕರಣಗಳು ನಡೆಯುತ್ತಿವೆ ಎಂದಾದರೆ ಈಗ ಕೇಂದ್ರ ಸರಕಾರ ಅನುಸರಿಸುತ್ತಿರುವ ಉಗ್ರ ನಿಗ್ರಹ ಕ್ರಮಗಳನ್ನು ಮತ್ತಷ್ಟು ಬಿರುಸುಗೊಳಿಸಬೇಕು ಎನ್ನುವುದು ಸ್ಪಷ್ಟ.

ಪಾಕಿಸ್ಥಾನ ಸರಕಾರ ಈಗಾಗಲೇ ಹಲವು ಸಂದರ್ಭಗಳಲ್ಲಿ ಚೀನ, ಟರ್ಕಿಯ ಬೆಂಬಲದೊಂದಿಗೆ ವಿಶ್ವಸಂಸ್ಥೆ ಸಹಿ ತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕಾಶ್ಮೀರ ವಿಚಾರ ಅಲ್ಲಿ ನಮ್ಮ ಸೇನಾಪಡೆಗಳು ಮಾನವ ಹಕ್ಕುಗಳ ಉಲ್ಲಂಘನೆ ನಡೆಸುತ್ತಿದೆ ಎಂಬ ಅಪಪ್ರಚಾರ ನಡೆಸಲು ಹೋಗಿ ಬೋರಲು ಬಿದ್ದು ನಗೆ ಪಾಟಲಿಗೆ ಈಡಾಗಿದ್ದುಂಟು. ಈ ಎಲ್ಲ ಘಟನೆಗಳ ಹಿನ್ನೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಉಗ್ರ ನಿಗ್ರಹ ಕ್ರಮಗಳನ್ನು ಮತ್ತಷ್ಟು ಬಿರುಸುಗೊಳಿಸುವುದು ಅನಿವಾರ್ಯವೇ ಆಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.