ಚುನಾವಣಾ ಭರವಸೆಗಳು ಕಾರ್ಯಸಾಧುವಾಗಿರಲಿ


Team Udayavani, Jan 13, 2023, 6:00 AM IST

tdy-30

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮೂರು ತಿಂಗಳುಗಳಷ್ಟೇ ಬಾಕಿ ಉಳಿದಿದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳಾದ ಆಡಳಿತಾರೂಢ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಈಗಾಗಲೇ ಪ್ರಚಾರ ಕಾರ್ಯದಲ್ಲಿ ನಿರತವಾಗಿವೆ. ಚುನಾವಣೆ ಘೋಷಣೆಗೆ ಮುನ್ನ ಬಿಜೆಪಿ ಸರಕಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಪಕ್ಷದ ಘಟಾನುಘಟಿ ನಾಯಕರನ್ನು ರಾಜ್ಯಕ್ಕೆ ಕರೆತಂದು ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರಕಾರದ ಸಾಧನೆ ಮತ್ತು ಭವಿಷ್ಯದ ಯೋಜನೆಗಳನ್ನು ಜನರ ಮುಂದಿಡುವ ಪ್ರಯತ್ನ ನಡೆಸಿದೆ. ವಿಪಕ್ಷ ಕಾಂಗ್ರೆಸ್‌ ಕೂಡ ಈಗಾಗಲೇ ಒಂದು ಸುತ್ತಿನ ಯಾತ್ರೆ ನಡೆಸಿ ಇದೀಗ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಿದೆ. ಜೆಡಿಎಸ್‌ ತನ್ನದೇ ಆದ ಕಾರ್ಯ ತಂತ್ರದೊಂದಿಗೆ ಚುನಾವಣ ಪ್ರಚಾರದಲ್ಲಿ ನಿರತವಾಗಿದೆ.

ಇದೇ ವೇಳೆ ಪಕ್ಷಗಳ ನಾಯಕರು ರಾಜ್ಯದ ಜನತೆಗೆ ಪ್ರಚಾರದ ಸಂದರ್ಭದಲ್ಲಿ ಹತ್ತು ಹಲವು ಭರವಸೆ, ಉಚಿತ ಕೊಡುಗೆಗಳನ್ನು ಘೋಷಿಸಲಾರಂಭಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದೀಚೆಗೆ ದೇಶಾದ್ಯಂತ ಪಕ್ಷ ಗಳು ಚುನಾವಣೆಗೂ ಮುನ್ನ ನೀಡುವ ಈ ಉಚಿತ ಕೊಡುಗೆ, ಭರವಸೆಗಳ ಬಗೆಗೆ ಚರ್ಚೆಗಳು ನಡೆಯುತ್ತಲೇ ಬಂದಿವೆ. ಜನರ ತೆರಿಗೆ ಹಣವನ್ನು ರಾಜಕೀಯ ಪಕ್ಷಗಳು ತಮ್ಮ ಅಧಿಕಾರದ ಲಾಲಸೆಗಾಗಿ ಉಚಿತ ಕೊಡುಗೆಗಳ ಮೂಲಕ ವ್ಯರ್ಥ ಮಾಡುವುದು ಸರಿಯಲ್ಲ ಎಂಬ ವಾದ ಒಂದೆಡೆಯಾದರೆ, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳು ಅಥವಾ ಬಡಜನರಿಗೆ ಇಂಥ ಕೊಡುಗೆಗಳನ್ನು ನೀಡುವ ಮೂಲಕ ಅವರನ್ನೂ ಸಮಾಜದ ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸುವುದರಲ್ಲಿ ತಪ್ಪೇನಿಲ್ಲ ಎಂಬ ಪ್ರತಿವಾದವೂ ಇದೆ. ಇತ್ತೀಚೆಗೆ ಚುನಾವಣ ಆಯೋಗ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ನೀಡುವ ಭರವಸೆ ಮತ್ತು ಕೊಡುಗೆಗಳನ್ನು ಹೇಗೆ ಅನುಷ್ಠಾನಗೊಳಿಸಲಾಗುವುದು ಮತ್ತು ಇವುಗಳಿಗಾಗಿ ಹಣವನ್ನು ಹೇಗೆ ಕ್ರೋಡೀಕರಿಸಲಾಗುವುದು ಎಂದು ಘೋಷಣೆಯ ಸಂದರ್ಭದಲ್ಲಿಯೇ ತಿಳಿಸಬೇಕು ಎಂಬ ಪ್ರಸ್ತಾವವನ್ನು ದೇಶದ ಮುಂದಿಡುವ ಮೂಲಕ ಈ ಕುರಿತಾಗಿನ ಚರ್ಚೆಗೆ ಒಂದು ತಾರ್ಕಿಕ ಅಂತ್ಯ ಹಾಡಲು ದಿಟ್ಟ ಹೆಜ್ಜೆ ಇರಿಸಿದೆ. ಬುಧವಾರ ಬೆಳಗಾವಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಪ್ರತೀ ಮನೆಗೆ ಮಾಸಿಕ 200 ಯೂನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂಥ ಹತ್ತು ಹಲವು ಭರವಸೆಗಳು, ಉಚಿತ ಕೊಡುಗೆಗಳ ಮಹಾಪೂರವೇ ವಿವಿಧ ಪಕ್ಷಗಳು ಮತ್ತು ನಾಯಕರಿಂದ ಹರಿದು ಬರುವ ಸಾಧ್ಯತೆಗಳಿವೆ.

ಯಾವುದೇ ವಿಚಾರವಾಗಿ ಭರವಸೆ ನೀಡುವ ಮುನ್ನ ಅದರ ವಾಸ್ತವಿ ಕತೆ, ಆವಶ್ಯಕತೆ, ಕಾರ್ಯಸಾಧ್ಯತೆ ಮತ್ತು ಅದು ರಾಜ್ಯದ ಅಭಿವೃದ್ಧಿಗೆ ಎಷ್ಟು ಪೂರಕ ಹಾಗೂ ಅನುಷ್ಠಾನದ ಬಗ್ಗೆ ನಾಯಕರು ಒಂದಿಷ್ಟು ಪೂರ್ವಾಲೋಚನೆ ಮಾಡಬೇಕಿರುವುದು ಅತ್ಯಗತ್ಯ. ದೂರದೃಷ್ಟಿ ಹೊಂದಿದ ಮತ್ತು ಜನರ ಹಿತದೃಷ್ಟಿಯಿಂದ ಅತೀ ಅಗತ್ಯ ಅಥವಾ ಅನಿವಾರ್ಯ ಎಂಬಂಥ ಭರವಸೆ, ಕೊಡುಗೆಗಳನ್ನು ನಾಯಕರು ಘೋಷಿಸಿ ಅವುಗಳನ್ನು ಅನುಷ್ಠಾನಕ್ಕೆ ತಂದದ್ದೇ ಆದಲ್ಲಿ ಆ ಘೋಷಣೆಗೂ ಒಂದು ಅರ್ಥ ಬರಲು ಸಾಧ್ಯ. ಹೀಗಾಗಿ ಪ್ರತಿಯೊಂದು ಪಕ್ಷ ಮತ್ತು ನಾಯಕರು ಯಾವುದೇ ಭರವಸೆ ಅಥವಾ ಕೊಡುಗೆಯ ಘೋಷಣೆ ಮಾಡುವುದಕ್ಕೂ ಮುನ್ನ ಒಂದಿಷ್ಟು “ಮನೆಕೆಲಸ’ ಮಾಡುವುದು ಅತ್ಯಗತ್ಯ. ಇನ್ನಾದರೂ ಪಕ್ಷಗಳು ಮತ್ತು ನಾಯಕರು ಇತ್ತ ಗಮನ ಹರಿಸಬೇಕು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.