ನಾಗರಿಕ ಸೇವೆಯಲ್ಲಿ ಕನ್ನಡಿಗರ ಕೀರ್ತಿ ಪಸರಿಸಲಿ


Team Udayavani, May 24, 2023, 6:00 AM IST

upsc

ನಾಗರಿಕ ಸೇವಾ ಹುದ್ದೆಗಳ ಭರ್ತಿಗಾಗಿ ಕಳೆದ ಸಾಲಿನಲ್ಲಿ ಲೋಕಸೇವಾ ಆಯೋಗ ನಡೆಸಿದ ಪರೀಕ್ಷೆಯ ಫ‌ಲಿತಾಂಶ ಪ್ರಕಟವಾಗಿದ್ದು 933 ಮಂದಿ ತೇರ್ಗಡೆ ಹೊಂದಿದ್ದಾರೆ. ಮೊದಲ 4 ರ್‍ಯಾಂಕ್‌ಗಳೂ ಮಹಿಳೆಯರ ಪಾಲಾಗಿದ್ದು, ಈ ಬಾರಿ ಸ್ತ್ರೀಶಕ್ತಿ ಅನಾವರಣಗೊಂಡಿದೆ. ಆಲ್‌ ಇಂಡಿಯಾ ರ್‍ಯಾಂಕಿಂಗ್‌ನಲ್ಲಿ ಇಶಿತಾ ಕಿಶೋರ್‌ ಮೊದಲನೇ ರ್‍ಯಾಂಕ್‌ ಗಳಿಸಿಕೊಂಡಿದ್ದು ಇಡೀ ದೇಶಕ್ಕೇ ಹೆಮ್ಮೆ ತಂದಿದ್ದಾರೆ.

ಗರೀಮಾ ಲೋಹಿಯಾ, ಉಮಾ ಹರಥಿ ಎನ್‌. ಕ್ರಮವಾಗಿ 2 ಮತ್ತು 3ನೇ ರ್‍ಯಾಂಕ್‌ ಗಳಿಸಿಕೊಂಡಿದ್ದಾರೆ. ಸ್ಮತಿ ಮಿಶ್ರಾ 4ನೇ ರ್‍ಯಾಂಕ್‌ ಬಂದಿದ್ದಾರೆ. ಕರ್ನಾಟಕದ ಪಾಲಿಗೆ ಭಾವನಾ ಎಚ್‌.ಎಸ್‌. ಅವರು ಮೊದಲನೇ ರ್‍ಯಾಂಕ್‌ ಪಡೆದಿದ್ದರೆ, ಎಐಆರ್‌ನಲ್ಲಿ 55ನೇ ರ್‍ಯಾಂಕ್‌ ಗಳಿಸಿಕೊಂಡಿದ್ದಾರೆ.

ಈ ಬಾರಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕರ್ನಾಟಕದ ಒಟ್ಟು 34ಕ್ಕೂ ಹೆಚ್ಚು ಮಂದಿ ರ್‍ಯಾಂಕ್‌ ಪಡೆದಿರುವುದು ವಿಶೇಷ. ಈ ಬಾರಿ ವೈದ್ಯರು, ಐಆರ್‌ಎಸ್‌ ಅಧಿಕಾರಿಗಳು, ಕೆಎಎಸ್‌ ಅಧಿಕಾರಿಗಳೂ ರ್‍ಯಾಂಕ್‌ ಪಟ್ಟಿಯಲ್ಲಿದ್ದಾರೆ. ರೈತರ ಮಕ್ಕಳು, ಕಂಡಕ್ಟರ್‌ ಪುತ್ರನಿಗೂ ಯುಪಿಎಸ್‌ಸಿ ಗೌರವ ಸಿಕ್ಕಿದೆ.

ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಎರಡನೇ ಸುತ್ತಿನ ಅನಂತರ 3ನೇ ಸುತ್ತಿನಲ್ಲಿ ಎರಡೂವರೆ ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.  ಈ ಬಾರಿ 933ರಲ್ಲಿ 613 ಪುರುಷರು ಮತ್ತು 320 ಮಹಿಳೆಯರು ತೇರ್ಗಡೆಯಾಗಿದ್ದಾರೆ. ಟಾಪ್‌ 25ರಲ್ಲಿ 14 ಮಹಿಳೆಯರು ಮತ್ತು 11 ಪುರುಷರು ಇದ್ದಾರೆ.

ವಿಶೇಷವೆಂದರೆ ಟಾಪ್‌ 25 ಅಭ್ಯರ್ಥಿಗಳು ದೇಶದ ಅತ್ಯುನ್ನತ ಕಾಲೇಜುಗಳು, ವಿ.ವಿ.ಗಳಲ್ಲಿ ಅಧ್ಯಯನ ನಡೆಸಿದ್ದಾರೆ. ಅಂದರೆ, ಐಐಟಿ, ಎನ್‌ಐಟಿ, ದಿಲ್ಲಿ ವಿ.ವಿ., ಗುಜರಾತ್‌ ರಾಷ್ಟ್ರೀಯ ಕಾನೂನು ಕಾಲೇಜು, ಜಾಧವ್‌ಪುರ ವಿ.ವಿ., ಜಿವಾಜಿ ವಿ.ವಿ.ಯಲ್ಲಿ ವಿದ್ಯಾಭ್ಯಾಸ ಮಾಡಿ

ದವರಾಗಿದ್ದಾರೆ.  ಈ ಬಾರಿಯ ಫ‌ಲಿತಾಂಶ ನೋಡಿದರೆ ಸತತ ಅಭ್ಯಾಸ ಮಾಡಿದವರಿಗೆ ನಾಗರಿಕ ಸೇವಾ ಪರೀಕ್ಷೆಗಳು ಕಬ್ಬಿಣದ ಕಡಲೆಯೇನಲ್ಲ ಎಂಬುದು ವೇದ್ಯವಾಗುತ್ತದೆ. ಕಷ್ಟಪಟ್ಟು ಅಭ್ಯಾಸ ಮಾಡಿದರೆ ಯಾರಿಗೆ ಬೇಕಾದರೂ ಈ ಪರೀಕ್ಷೆಗಳು ಒಲಿಯಬಹುದು ಎಂಬುದೂ ಸಾಬೀತಾಗಿದೆ.

ಬಹಳಷ್ಟು ಮಂದಿ ಈಗಾಗಲೇ ಬೇರೆ ಬೇರೆ ಕಡೆಗಳಲ್ಲಿ ಉದ್ಯೋಗದಲ್ಲಿದ್ದು, ಬಿಡುವು ಮಾಡಿಕೊಂಡು ಯುಪಿಎಸ್‌ಸಿ ಪರೀಕ್ಷೆಗೆ ಓದಿದ್ದಾರೆ. ಹಾಗೆಯೇ ಒಬ್ಬ ಅಭ್ಯರ್ಥಿಯ ತಂದೆ ತಾಯಿ ಕೂಲಿಕಾರರಾಗಿದ್ದು, ಅಣ್ಣನ ನೆರವಿನಿಂದಲೇ ಓದಿ ಪಾಸ್‌ ಮಾಡಿಕೊಂಡಿದ್ದಾರೆ.

ಸತತ ಪ್ರಯತ್ನ ಮಾಡಿದರೆ ಯಶಸ್ಸು ಸಾಧ್ಯ ಎಂಬುದನ್ನೂ ಈ ಕಲಿಗಳು ಸಾಧಿಸಿ ತೋರಿಸಿದ್ದಾರೆ. ಈ ಬಾರಿ ಪಾಸಾದವರಲ್ಲಿ ಬಹುತೇಕರು ನಾಲ್ಕೈದು ಬಾರಿ ಪರೀಕ್ಷೆ ತೆಗೆದುಕೊಂಡವರೇ ಆಗಿದ್ದಾರೆ. ಕೆಲವರು ಈ ಹಿಂದೆ ಪರೀಕ್ಷೆ ಬರೆದು, ಆಗ ರ್‍ಯಾಂಕ್‌ ಬಂದಿದ್ದರೂ, ಸಮಾಧಾನಗೊಳ್ಳದೇ ಮತ್ತಷ್ಟು ಓದಿ ಇನ್ನಷ್ಟು ಮೇಲಿನ ರ್‍ಯಾಂಕ್‌ ಪಡೆದಿದ್ದಾರೆ. ಒಂದು ರೀತಿಯಲ್ಲಿ ಇದು ಎಲ್ಲರಿಗೂ ಸ್ಫೂರ್ತಿಯ ಕಥೆಯಂತಾಗಿದೆ.

ಈಗಲೂ ವಿದ್ಯಾರ್ಥಿಗಳು ಕಡಿಮೆ ಅಂಕ ಬಂದರೆ ಅಥವಾ ಫ‌ಲಿತಾಂಶ ಒಂದಷ್ಟು ಏರುಪೇರಾದರೂ ಆಕಾಶವೇ ಕೆಳಗೆ ಬೀಳುವ ರೀತಿ ವರ್ತಿಸುತ್ತಾರೆ. ಆದರೆ ಈ ಐಎಎಸ್‌, ಐಪಿಎಸ್‌ಗೆ ಸೇರಬಯಸುವ ಅಭ್ಯರ್ಥಿಗಳು ಸೋಲನ್ನೇ ಗೆಲುವಿನ ಮೆಟ್ಟಿಲಾಗಿಸಿಕೊಂಡು ಹೋಗುತ್ತಾರೆ. ಇದೇ ಅವರ ಯಶಸ್ಸಿನ ಗುಟ್ಟು ಎಂಬುದನ್ನು ಅರಿತುಕೊಳ್ಳಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಕರ್ನಾಟಕದಿಂದ ಇನ್ನಷ್ಟು ರ್‍ಯಾಂಕ್‌ ಬರುವಂತಾಗಬೇಕು. ಸರ‌ಕಾರವೂ ಈ ನಿಟ್ಟಿನಲ್ಲಿ ತರಬೇತಿ ಕೊಡಿಸುವ ಕೆಲಸ ಮಾಡಬೇಕು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.