ನರೇಂದ್ರ ಮೋದಿ-ಕ್ಸಿ ಜಿನ್‌ಪಿಂಗ್‌ ಭೇಟಿ, ಸುಧಾರಿಸಲಿ ಸಂಬಂಧ


Team Udayavani, Apr 25, 2018, 10:57 AM IST

pm.jpg

ಡೋಕ್ಲಾಂನಿಂದ ಉದ್ಭವವಾದ ಕಹಿಯನ್ನು ತಗ್ಗಿಸಲು ಚೀನಾ ಬಯಸುತ್ತದಾ? ಅದರ ಇತ್ತೀಚಿನ ಎರಡು ನಡೆಗಳು ಈ ಬಗ್ಗೆ ಸುಳಿವು ಬಿಟ್ಟು ಕೊಡುತ್ತಿವೆ. 

ಪ್ರಧಾನಿ ನರೇಂದ್ರ ಮೋದಿ ಈ ವಾರ ಚೀನಾ ಪ್ರವಾಸಕ್ಕೆ ತೆರಳಲಿದ್ದಾರೆ. ಅಲ್ಲಿ ಅವರು ಯಾವುದೋ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹೋಗುತ್ತಿಲ್ಲ, ಬದಲಾಗಿ ದ್ವಿಪಕ್ಷೀಯ ಸಂಬಂಧ ಸುಧಾರಣೆಯ ಬಗ್ಗೆ ಚೀನ ಅಧ್ಯಕ್ಷ ಜಿನ್‌ಪಿಂಗ್‌ರೊಂದಿಗೆ ಮಾತುಕತೆಯಾಡಲಿದ್ದಾರೆ. 

ಮೋದಿ ಏ. 27, 28ರಂದು ಚೀನದ  ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿಯಾಗಲಿದ್ದಾರೆ ಎಂಬ ವಿದೇಶಾಂಗ ಇಲಾಖೆಯ ಘೋಷಣೆಯು ಭಾರತೀಯರ ಹುಬ್ಬು ತುಸು ಮೇಲೇರುವಂತೆ ಮಾಡಿದ್ದರೂ ಅಚ್ಚರಿಯೇನಿಲ್ಲ. ಏಕೆಂದರೆ ಡೋಕ್ಲಾಂ ವಿಚಾರದಲ್ಲಿ ಎರಡೂ ದೇಶಗಳ ನಡುವಿನ ಸಂಬಂಧ ಬಿಗಡಾಯಿಸಿತ್ತು. 

ಈ ಭೇಟಿಯ ಮೂಲ ಉದ್ದೇಶ ಈ ಬಿಕ್ಕಟ್ಟನ್ನು ಶಮನಗೊಳಿಸುವುದು ಮತ್ತು ಪರಸ್ಪರ ಸಂಬಂಧವನ್ನು ಉತ್ತಮಗೊಳಿಸುವುದಾಗಿದೆ. ಮೋದಿಯವರ ಚೀನ ಭೇಟಿಯ ಕಾರ್ಯಕ್ರಮ ನಿಗದಿಯಾಗಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಶಾಂಘೈ ಸಹಕಾರ ಸಂಘಟನೆಯ ವಿದೇಶಾಂಗ ಸಚಿವರುಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ವೇಳೆಯಲ್ಲಿ. ಈ ರೀತಿಯ ಆಯೋಜನೆಗಳು ಹೊಸದೇನೂ ಅಲ್ಲ. 1988ರಲ್ಲಿ ಭಾರತದ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಮತ್ತು ಪೀಪಲ್‌ ರಿಪಬ್ಲಿಕ್‌ ಆಫ್ ಚೀನದ ಸರ್ವೋಚ್ಚ ನಾಯಕ ಡೆಂಗ್‌ ಶ್ಯಾವೋ ಪಿಂಗ್‌ ನಡುವೆಯೂ ಇದೇ ರೀತಿಯಲ್ಲಿ ಭೇಟಿ ನಡೆದಿತ್ತು. ಆಗ ಆ ಮಾತುಕತೆಯನ್ನು ಎರಡೂ ದೇಶಗಳ ನಡುವಿನ ನೂತನ ಅಧ್ಯಾಯದ ಆರಂಭ ಎಂದೇ ಕರೆಯಲಾಗಿತ್ತು. 

ಈಗಲೂ ಅಷ್ಟೇ, ಮೋದಿಯವರ ಸಂಭಾವ್ಯ ಭೇಟಿಯೂ ಎರಡೂ ರಾಷ್ಟ್ರಗಳ ನಡುವಿನ ಸಂಬಂಧಕ್ಕೆ ಹೊಸ ಶಕ್ತಿ ತುಂಬಲಿದೆ ಎಂಬ ನಿರೀಕ್ಷೆ ಹುಟ್ಟುಹಾಕಿದೆ. ಸತ್ಯವೇನೆಂದರೆ ತಿಂಗಳುಗಳ ಹಿಂದೆಯೇ ಎರಡೂ ದೇಶಗಳ ನಡುವೆ ಸಂಬಂಧ ಸುಧಾರಣೆಯ ಪ್ರಯತ್ನಗಳು ಆರಂಭವಾಗಿವೆ. ಕಳೆದ ಡಿಸೆಂಬರ್‌ನಲ್ಲಿ ಚೀನದ ವಿದೇಶಾಂಗ ಸಚಿವ ವಾಂಗ್‌ ಯೀ ದೆಹಲಿಗೆ ಬಂದಿದ್ದರು. ಇದಾದ ನಂತರ, ನಮ್ಮ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ಚೀನದ ಸಮಸ್ಥಾನಿ ಯಾಂಗ್‌ ಜಿಯೆಚಿ ಅವರನ್ನು ಭೇಟಿಯಾಗಿದ್ದರು. ಈ ವರ್ಷಾರಂಭದಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಕೂಡ ಬೀಜಿಂಗ್‌ಗೆ ಹೋಗಿದ್ದರು. ಎರಡೂ ದೇಶಗಳ ವಿದೇಶಾಂಗ ಸಚಿವಾಲಯಗಳ ಹಿರಿಯ ಅಧಿಕಾರಿಗಳ ನಡುವೆ ಮಾತುಕತೆಯೂ ನಡೆದಿದೆ. ಇವೆಲ್ಲದರ ಮೂಲಕ ಡೋಕ್ಲಾಂ ವಿವಾದದಿಂದ ಉದ್ಭವವಾದ ಕಹಿಯನ್ನು ತಗ್ಗಿಸುವ ಪ್ರಯತ್ನ ನಡೆದಿದೆ ಎನ್ನಬಹುದು. ಹಾಗಿದ್ದರೆ ಚೀನ ಕೂಡ ಇದನ್ನೇ ಬಯಸುತ್ತದಾ? ಚೀನದ ಇತ್ತೀಚಿನ ಎರಡು ನಡೆಗಳು ಈ ಬಗ್ಗೆ ತುಸು ಸುಳಿವು ಬಿಟ್ಟು ಕೊಡುತ್ತಿವೆ. ಮೊದಲನೆಯದ್ದು, ಸಿಕ್ಕಿಂನಲ್ಲಿ ನಾಥೂಲಾ ಮಾರ್ಗವಾಗಿ ಕೈಲಾಸ ಮಾನಸರೋವರ ಯಾತ್ರೆಯನ್ನು ಮತ್ತೆ ಆರಂಭಿಸಲು ಎರಡೂ ರಾಷ್ಟ್ರಗಳೂ ಒಪ್ಪಿಕೊಂಡಿರುವುದು. ಡೋಕ್ಲಾಂ ಬಿಕ್ಕಟ್ಟು ಎದುರಾದಾಗ ಈ ಯಾತ್ರೆಯನ್ನು ನಿಲ್ಲಿಸಲಾಗಿತ್ತು. 

ಎರಡನೆಯ ಸಕಾರಾತ್ಮಕ ಸಂಕೇತವೆಂದರೆ, ಬ್ರಹ್ಮಪುತ್ರ ಮತ್ತು ಸಟ್ಲೆಜ್‌ ನದಿಯ ಜಲಪ್ರವಾಹ ಸಂಬಂಧಿ ಅಂಕಿಅಂಶಗಳನ್ನು ಭಾರತದೊಂದಿಗೆ ಮತ್ತೆ ಹಂಚಿಕೊಳ್ಳಲು ಚೀನ ಒಪ್ಪಿಕೊಂಡಿರುವುದು. ಇದಷ್ಟೇ ಅಲ್ಲದೆ, “ಮೋದಿ-ಕ್ಸಿ ಭೇಟಿಯಿಂದ ಭಾರತ-ಚೀನ ನಡುವಿನ ಸಂಬಂಧದ ಧನಾತ್ಮಕವಾದ ಹೊಸ ವಿಚಾರ ವಿಶ್ವಕ್ಕೆ ಗೊತ್ತಾಗಲಿದೆ’ ಎಂದು ಚೀನದ ವಿದೇಶಾಂಗ ಇಲಾಖೆ ಹೇಳಿಕೊಂಡಿದೆ. ಇವೆಲ್ಲ ಸಂಗತಿಗಳೂ ಬದಲಾವಣೆಯ ಮಾರ್ಗದತ್ತ ಬೆರಳು ತೋರಿಸುತ್ತಿವೆಯಾದರೂ ಇಷ್ಟಾದ ಮಾತ್ರಕ್ಕೆ ಚೀನ ಬದಲಾಗಿಬಿಟ್ಟಿದೆಯೆಂದು ಅದರತ್ತ ಬೆನ್ನು ತಿರುಗಿಸಿ ನಿಲ್ಲುವಂತಿಲ್ಲ. ಯಾವಾಗಲೂ ಆ ದೇಶದ ಮೇಲೆ ಭಾರತ ಒಂದು ಕಣ್ಣಿಟ್ಟಿರಲೇಬೇಕು. ಭಾರತದೊಂದಿಗೆ ಚೀನದ ಸಂಬಂಧ ಸುಧಾರಿಸಬೇಕೆಂದರೆ ಅದು ಪಾಕ್‌ಗೆ ಹಿಂಬಾಗಿಲಿನಿಂದ ಬೆಂಬಲ ಕೊಡುವುದನ್ನು ನಿಲ್ಲಿಸಬೇಕು. ಆ ಕೆಲಸಕ್ಕೆ ಅದು ಸಿದ್ಧವಿದೆಯೇ? ನಮ್ಮ ರಾಷ್ಟ್ರ ನಾಯಕರು, ಬೌದ್ಧ ಧರ್ಮಗುರುಗಳು, ಇತರೆ ಪ್ರತಿನಿಧಿಗಳು ಅರುಣಾಚಲಕ್ಕೆ ಭೇಟಿ ಕೊಡುವುದನ್ನು ವಿರೋಧಿಸುತ್ತಲೇ ಬಂದಿರುವ ಚೀನ ಇನ್ನು ಮುಂದಾದರೂ ತಗಾದೆ ತೆಗೆಯುವುದನ್ನು ನಿಲ್ಲಿಸುವುದೇ? ದಕ್ಷಿಣ ಚೀನ ಸಮುದ್ರದ ವಿವಾದದಲ್ಲಿ ಭಾರತಕ್ಕೆ ಎದುರಾಗಬಹುದಾದ ತೊಂದರೆಯನ್ನು ತಪ್ಪಿಸಲು ಅದು ಸಿದ್ಧವಿದೆಯೇ? ಪ್ರಧಾನಿ ಮೋದಿ ಮತ್ತು ಕ್ಸಿ ಭೇಟಿಯಲ್ಲಿ ಈ ಪ್ರಶ್ನೆಗಳಿಗೆ ಗುಣಾತ್ಮಕ ಉತ್ತರ ಸಿಗಬಹುದೇ? ಕಾದು ನೋಡಬೇಕು.

ಟಾಪ್ ನ್ಯೂಸ್

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.