ಮೇಕೆದಾಟು ವಿಚಾರದಲ್ಲಿ ರಾಜ್ಯ ಸಮರ್ಥ ವಾದ ಮಂಡಿಸಲಿ


Team Udayavani, Jul 22, 2022, 6:00 AM IST

ಮೇಕೆದಾಟು ವಿಚಾರದಲ್ಲಿ ರಾಜ್ಯ ಸಮರ್ಥ ವಾದ ಮಂಡಿಸಲಿ

ಕಾವೇರಿ ವಿಚಾರದಲ್ಲಿ ಪದೇ ಪದೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ನೆರೆಯ ತಮಿಳುನಾಡು ಸರಕಾರ ಮೇಕೆದಾಟು ವಿಚಾರದಲ್ಲಿಯೂ ಅದೇ ಪ್ರವೃತ್ತಿ ಮುಂದುವರಿಸಿದೆ. ಕಾವೇರಿ ನಿರ್ವಹಣ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್‌ಗಳೆರಡರಲ್ಲಿಯೂ ತನ್ನ ಮೊಂಡುವಾದ ಮುಂದಿಡುತ್ತಲೇ, ರಾಜ್ಯದ ಯೋಜನೆಗಳಿಗೆ ವಿರೋಧಿಸುವ ಅದು, ತನ್ನ ಮೂಗಿನ ನೇರಕ್ಕೆ ಚಿಂತಿಸುವುದನ್ನು ಚಾಳಿ ಮಾಡಿಕೊಂಡಂತೆ ಕಾಣಿಸುತ್ತಿದೆ.

ಬುಧವಾರವಷ್ಟೇ ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿ ವಿಚಾರಣೆ ನಡೆದಿದ್ದು, ಈ ಸಂದರ್ಭದಲ್ಲಿ ಶುಕ್ರವಾರದ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗಿದೆ. ಅಲ್ಲದೆ, ಚರ್ಚೆಯನ್ನೇ ನಡೆಸಲು ಅವಕಾಶ ನೀಡಬಾರದು ಎಂಬ ಆ ರಾಜ್ಯದ ಮನವಿಯನ್ನು ಸುಪ್ರೀಂಕೋರ್ಟ್‌ ತಳ್ಳಿಹಾಕಿರುವುದು ಸ್ವಾಗತಾರ್ಹ. ಮುಂದಿನ ವಾರ ರಾಜ್ಯದ ಅರ್ಜಿಯ ವಿಚಾರಣೆ ಜತೆಗೆ ಅಂತಿಮ ವಿಚಾರಣೆಯೂ ನಡೆಯಲಿದ್ದು, ರಾಜ್ಯ ಸರಕಾರದ ವಕೀಲರು ಸಮರ್ಥ ವಾದ ಮಂಡಿಸಬೇಕಾಗಿದೆ.

ಮೇಕೆದಾಟು ಪ್ರಕರಣದಲ್ಲಿ ತಮಿಳುನಾಡಿನ ವಾದಗಳೇ ಸರಿಯಾಗಿಲ್ಲ ಎಂದು ತೋರುತ್ತದೆ. ಅಲ್ಲದೆ ರಾಜ್ಯದ ಡಿಪಿಆರ್‌ ಬಗ್ಗೆಯೂ ಚರ್ಚೆಗೆ ಸಿದ್ಧವಿಲ್ಲ ಎಂದಾದ ಮೇಲೆ, ಇದರ ಸಾಧಕ-ಬಾಧಕಗಳ ಅರಿವೂ ಅದಕ್ಕೆ ಬೇಕಾಗಿಲ್ಲ. ಮೇಕೆದಾಟು ಯೋಜನೆಗೆ ಡಿಪಿಆರ್‌ ಸಿದ್ಧವಾಗಿದ್ದಿನಿಂದಲೂ ಕರ್ನಾಟಕವು ಈ ಯೋಜನೆಯಿಂದ ತಮಿಳುನಾಡು ರೈತರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಇದನ್ನು ಸಂಪೂರ್ಣವಾಗಿ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಸಂಬಂಧ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿಕೊಂಡು ಬರುತ್ತಲೇ ಇದೆ. ಆದರೆ ಈ ವಾದವನ್ನು ಒಪ್ಪದೇ ಹಿಂಬಾಗಿಲ ಮೂಲಕ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವುದು ಖೇದಕರ.

ಈ ಪ್ರಕರಣದಲ್ಲಿ ತಮಿಳುನಾಡು ಒಂದೇ ಆಯಾಮದಲ್ಲಿ ವಿರೋಧ ಮಾಡುತ್ತಿಲ್ಲ. ಅದು ಸುಪ್ರೀಂ ಮೂಲಕವೇ ಇಡೀ ಯೋಜನೆಗೆ ತಡೆಹಾಕುವ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ. ಅಂದರೆ ತನ್ನ ಅರ್ಜಿಯಲ್ಲಿ ಅದು ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರಕ್ಕೆ ಈ ಬಗ್ಗೆ ಚರ್ಚಿಸುವ ಅಧಿಕಾರವೇ ಇಲ್ಲ ಎಂದು ಹೇಳುತ್ತಿದೆ. ಅಲ್ಲದೆ, ಕೇಂದ್ರ ಪರಿಸರ ಸಚಿವಾಲಯವೂ ಈ ಬಗ್ಗೆ ನಿರಪೇಕ್ಷಣ ಪತ್ರ ನೀಡಬಾರದು ಎಂದು ಸೂಚಿಸಿ ಎಂಬುದಾಗಿಯೂ ಸುಪ್ರೀಂಗೆ ಮನವಿ ಮಾಡಿದೆ. ಜತೆಗೆ ಇತಿಹಾಸದಿಂದಲೂ ಕೇಂದ್ರ ಸರಕಾರಗಳ ಮೇಲೆ ತನ್ನದೇ ಆದ ಪ್ರಭಾವ ಬಳಸಿಕೊಂಡು ಕಾವೇರಿ ನದಿ ನೀರಿನ ಬಗ್ಗೆ ಕರ್ನಾಟಕದ ಮೇಲೆ ಅನ್ಯಾಯ ಮಾಡಿಕೊಂಡು ಬರುತ್ತಲೇ ಇದೆ. ಈಗ ಮಂಗಳವಾರ ಮತ್ತೆ ಸುಪ್ರೀಂಕೋರ್ಟ್‌ ಮುಂದೆ ಕರ್ನಾಟಕದ ಅರ್ಜಿ ವಿಚಾರಣೆಗೆ ಬರಲಿದೆ. ಕರ್ನಾಟಕದ ಪರ ಶ್ಯಾಮ್‌ ದಿವಾನ್‌ ಅವರು ವಾದ ಮಂಡಿಸಲಿದ್ದು, ಕರ್ನಾಟಕ ಸರಕಾರವು ಸಮರ್ಥ ವಾದ ಮಂಡನೆಗಾಗಿ ಪೂರಕ ಮಾಹಿತಿಗಳನ್ನು ಒದಗಿಸಬೇಕು.

ಅಲ್ಲದೆ, ಶುಕ್ರವಾರದ ಸಭೆ ವೇಳೆಯೂ ರಾಜ್ಯದ ಅಧಿಕಾರಿಗಳು ಮೇಕೆದಾಟು ಯೋಜನೆ ಕುರಿತಂತೆ ಸಮರ್ಥವಾಗಿ ಚರ್ಚೆ ಮಂಡಿಸಬೇಕು. ಇಲ್ಲಿ ತಮಿಳುನಾಡಿನ ಅಧಿಕಾರಿಗಳು ಅಡ್ಡಿಪಡಿಸಿಯೇ ತೀರುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಅವರ ವಾದ ಮೇಲಾಗದಂತೆ ನೋಡಿಕೊಂಡು, ಕಾವೇರಿ ನಿರ್ವಹಣ ಪ್ರಾಧಿಕಾರದ ಅಧಿಕಾರದ ಬಗ್ಗೆ ವಿಸ್ತೃತವಾಗಿ ವಾದ ಮಂಡಿಸಬೇಕು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.