ಮೇಕೆದಾಟು: ರಾಜ್ಯದ ಹಿತ ಕಾಯುವ ನಿರ್ಧಾರ ಬರಲಿ


Team Udayavani, Mar 12, 2022, 6:00 AM IST

ಮೇಕೆದಾಟು: ರಾಜ್ಯದ ಹಿತ ಕಾಯುವ ನಿರ್ಧಾರ ಬರಲಿ

ಮೇಕೆದಾಟು ಯೋಜನೆ ಸಂಬಂಧ ತಮಿಳುನಾಡು ಸರಕಾರದ ಅಡ್ಡಿ ಮತ್ತು ಕೇಂದ್ರ ಸರಕಾರದಿಂದ ಸಿಗದ ಪರಿಸರ ಅನುಮತಿ ಕುರಿತಂತೆ ಮುಂದಿನ ವಾರ ಸರ್ವಪಕ್ಷಗಳ ಸಭೆ ಕರೆಯಲು ರಾಜ್ಯ ಸರಕಾರ ಮುಂದಾಗಿರುವ ಕ್ರಮ ಸ್ವಾಗತಾರ್ಹವಾಗಿದೆ. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಸಲುವಾಗಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಹಿಂದಿನ ಸರಕಾರಗಳೇ ಡಿಪಿಆರ್‌ ಸಿದ್ಧಪಡಿಸಿದ್ದು, ಕೇಂದ್ರ ಸರಕಾರದ ಒಪ್ಪಿಗೆ ಬೇಕಿದೆ. ಅಲ್ಲದೆ ಕೇಂದ್ರ ಪರಿಸರ ಇಲಾಖೆಯೂ ಇದಕ್ಕೆ ಒಪ್ಪಿಗೆ ನೀಡಬೇಕು.

ಮೊದಲಿನಿಂದಲೂ ಕಾವೇರಿ ಎಂದರೆ, ತಮಿಳುನಾಡು ಸರಕಾರಗಳಿಗೆ ಜಮೀನು ಮತ್ತು ಕುಡಿಯುವ ನೀರು ಒದಗಿಸುವ ಇರುವ ಜೀವ ಜಲ ಎಂಬುದಕ್ಕಿಂತ ಹೆಚ್ಚಾಗಿ ಹಕ್ಕು ಸಾಧಿಸುವುದು ಮತ್ತು ವಿವಾದ ಮಾಡುವುದೇ ಕಾಯಕವಾಗಿದೆ. ಕರ್ನಾಟಕದ ಕಡೆಯಿಂದ ಕಾವೇರಿ ಕುರಿತಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಹೊರಟರೂ, ತಮಿಳುನಾಡು ರಾಜಕಾರಣಿಗಳು ನಿದ್ದೆಯಲ್ಲಿ ಕೆಟ್ಟ ಕನಸು ಬಿದ್ದವರಂತೆ ಗಾಬರಿಗೊಂಡವರಂತೆ ಆಡುತ್ತಾರೆ. ಇದು ತೀರಾ ಉತ್ಪ್ರೇಕ್ಷೆಯೇನಲ್ಲ. ಇತಿಹಾಸವನ್ನು ಒಮ್ಮೆ ತಿರುಗಿಸಿ ನೋಡಿದರೆ ಇದು ತಿಳಿಯುತ್ತದೆ.

ಈಗಂತೂ ಕರ್ನಾಟಕದ ಸರಕಾರಗಳು ಮೇಕೆದಾಟು ಯೋಜನೆಯನ್ನು ರೂಪಿಸಿರುವುದೇ ಬೆಂಗಳೂರು ಜನತೆಗೆ ಕುಡಿಯುವ ನೀರು ಒದಗಿಸುವ ಸಲುವಾಗಿ. ಇದನ್ನು ಹಿಂದಿನಿಂದಲೂ ತಮಿಳುನಾಡು ಮುಂದೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿಕೊಂಡೇ ಬಂದಿವೆ. ಆದರೆ ಇದುವರೆಗೂ ತಮಿಳುನಾಡಿಗೆ ಇದು ಅರ್ಥವಾಗಿಲ್ಲ. ಅಲ್ಲದೆ ಅಲ್ಲಿನ ರಾಜಕಾರಣಿಗಳಂತೂ, ಕಾವೇರಿ ವಿಚಾರದಲ್ಲಿ ಒಂದಾದಷ್ಟು ಬೇರೆ ಯಾವುದೇ ವಿಚಾರದಲ್ಲಿ ಒಂದಾಗುವುದಿಲ್ಲ.

ಈಗ ರಾಜ್ಯ ಸರಕಾರ ಮುಂದಿನ ವಾರ ಮೇಕೆದಾಟು ವಿಚಾರದಲ್ಲಿ ಸರ್ವಪಕ್ಷಗಳ ಸಭೆ ಕರೆಯಲು ಹೊರಟಿರುವುದು ಸಕಾಲಿಕ ಮತ್ತು ತೀರಾ ಅಗತ್ಯವಿರುವ ಸಂಗತಿ. ಇಲ್ಲಿ ಆಡಳಿತ ಪಕ್ಷವೊಂದೇ ಏನನ್ನೂ ಮಾಡಲು ಸಾಧ್ಯವಿಲ್ಲ. ಅಲ್ಲದೆ ಕಾವೇರಿ ವಿಷಯದಲ್ಲಿ ಎಲ್ಲ ಪಕ್ಷಗಳ ಸಹಕಾರವೂ ಅತ್ಯಗತ್ಯವಾಗಿರುತ್ತದೆ. ಇದಕ್ಕೆ ಬಲವಾದ ಕಾರಣವೂ ಇದೆ. ಹಿಂದಿನಿಂದಲೂ ಅಧಿಕಾರ ಮಾಡಿಕೊಂಡು ಬಂದಿರುವ ಮತ್ತು ಈಗ ವಿಪಕ್ಷದಲ್ಲಿ ಕುಳಿತಿರುವ ಪಕ್ಷಗಳಿಗೂ ಕಾವೇರಿ ಕುರಿತ ನೋವಿನ ಬಗ್ಗೆ ಅರಿವಿದೆ. ಹಾಗೆಯೇ ಎಲ್ಲರೂ ಒಂದಿಲ್ಲೊಂದು ವಿಚಾರದಲ್ಲಿ ಕೋರ್ಟ್‌ ಮುಂದೆಯೂ ಎಲ್ಲ ಸರಕಾರಗಳು ಕಾವೇರಿ ಕುರಿತಾಗಿ ವಾದ ಮಂಡಿಸಿವೆ.

ಈಗಲೂ ಅಷ್ಟೇ ರಾಜ್ಯ ಸರಕಾರ, ಮೇಕೆದಾಟು ಯೋಜನೆ ಜಾರಿ ಸಂಬಂಧ ವಿಪಕ್ಷಗಳಿಂದ ಅಗತ್ಯ ಸಲಹೆ ಸೂಚನೆ ಪಡೆಯಬೇಕು. ಇದುವರೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡದಿರುವುದು ಮತ್ತು ಇತ್ತೀಚೆಗಷ್ಟೇ ಕೇಂದ್ರದ ಜಲಶಕ್ತಿ ಸಚಿವರು ಮೇಕೆದಾಟು ವಿವಾದ ಸಂಬಂಧ ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳ ಮಧ್ಯೆ ಮಾತುಕತೆಗೆ ವೇದಿಕೆ ಸೃಷ್ಟಿಸುತ್ತೇನೆ ಎಂದಿರುವುದು ಬೇರೆಯದ್ದೇ ರಾಜಕೀಯ ವಾಸನೆ ತೋರಿಸಿದಂತಿದೆ. ಅಂದರೆ ಈಗಾಗಲೇ ಕೇಂದ್ರದ ಮುಂದೆ ತಮಿಳುನಾಡು ಕರ್ನಾಟಕದ ಬಗ್ಗೆ ದೂರು ಹೇಳಿರುವ ಸಾಧ್ಯತೆಗಳಿವೆ. ಇದನ್ನು ಮನಗಂಡೇ ಒಂದು ಸರ್ವಸಮ್ಮತ ನಿರ್ಧಾರ ತೆಗೆದುಕೊಂಡು, ಒಟ್ಟಾಗಿಯೇ ದಿಲ್ಲಿಗೆ ಹೋಗಿ ಕೇಂದ್ರ ಸರಕಾರದ ಮನವೊಲಿಕೆ ಮಾಡಬೇಕಾಗಿದೆ.

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.