ಮಾನಸಿಕ ಆರೋಗ್ಯಕ್ಕೆ ಹಾನಿ ನಿರಾಶಾವಾದ ಬೇಡ


Team Udayavani, Jul 24, 2020, 5:47 AM IST

ಮಾನಸಿಕ ಆರೋಗ್ಯಕ್ಕೆ ಹಾನಿ ನಿರಾಶಾವಾದ ಬೇಡ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಳೆದ ಡಿಸೆಂಬರ್‌ನಲ್ಲಿ ಚೀನದ ವುಹಾನ್‌ನಲ್ಲಿ ಆರಂಭವಾಗಿ ಜಗತ್ತಿನಾದ್ಯಂತ ವ್ಯಾಪಿಸಿದ ಕೋವಿಡ್‌-19ನ ಹಾವಳಿಯು ಈಗಲೂ ನಿಲ್ಲುವ ಸೂಚನೆ ತೋರಿಸುತ್ತಲೇ ಇಲ್ಲ.

ಜಗತ್ತಿನ ಜನರ ದೈಹಿಕ ಆರೋಗ್ಯಕ್ಕೆ, ಆರ್ಥಿಕತೆಗೆ, ಸಾಮಾಜಿಕ ಸಮತೋಲನಕ್ಕೆ ಪೆಟ್ಟು ನೀಡಿರುವ ಈ ವೈರಸ್‌ ಈಗ ಮಾನಸಿಕ ಆರೋಗ್ಯದ ಮೇಲೂ ಅಪಾರ ಒತ್ತಡ ಸೃಷ್ಟಿಸಲಾರಂಭಿಸಿದೆ.

ಆದಾಗ್ಯೂ ರೋಗದ ಬಗ್ಗೆ ಆರಂಭಿಕ ಸಮಯದಲ್ಲಿ ಇದ್ದಂಥ ತಪ್ಪು ಕಲ್ಪನೆಗಳು ಈಗ ಇಲ್ಲ. ಈಗ ಜನರಿಗೆ ರೋಗ ಮಾರಣಾಂತಿಕವಲ್ಲ ಎನ್ನುವುದು ಅರಿವಾಗಿರುವುದರಿಂದ ರೋಗದ ಬಗ್ಗೆ ಇದ್ದ ಅನಗತ್ಯ ಭಯ, ಊಹಾಪೋಹಗಳು ಕಡಿಮೆಯಾಗಿದೆ. ಆದರೆ, ಕೋವಿಡ್‌- 19 ಬೇರೆಯದ್ದೇ ರೀತಿಯಲ್ಲಿ ಮಾನಸಿಕ ಆರೋಗ್ಯಕ್ಕೆ ತೊಂದರೆಯುಂಟುಮಾಡುತ್ತಿದೆ.

ದೇಶಗಳ ಆರ್ಥಿಕ ಚಕ್ರದ ವೇಗ ಬಹುಪಾಲು ತಗ್ಗಿಬಿಟ್ಟಿದೆ. ತತ್ಪರಿಣಾಮವಾಗಿ ಭವಿಷ್ಯದ ಬಗ್ಗೆ ಬಹುದೊಡ್ಡ ಪ್ರಶ್ನಾರ್ಥಕ ಚಿಹ್ನೆ ಜನರೆದುರು ಕಾಣಿಸಿಕೊಂಡಿದೆ. ಹಾಗೆಂದು ಆರ್ಥಿಕತೆ ಸಂಪೂರ್ಣ ನೆಲ ಕಚ್ಚಿದೆ ಎಂದೇನೂ ಅರ್ಥವಲ್ಲ.

ಆದಕ್ಕೆ ಮರುವೇಗ ಕೊಡುವ ಪ್ರಯತ್ನಗಳೂ ಭರದಿಂದ ಸಾಗಿವೆ. ಈ ನಿಟ್ಟಿನಲ್ಲಿ ಭಾರತದಲ್ಲೂ ಪ್ರಯತ್ನ ವೇಗಪಡೆದಿದೆ. ಆದರೆ ಕೋವಿಡ್ 19 ಒಟ್ಟಾರೆಯಾಗಿ ಸೃಷ್ಟಿಸಿರುವ ಅನಿಶ್ಚಿತತೆ, ಜನರ ಓಡಾಟ-ಒಡನಾಟದ ರೀತಿ, ಬದುಕಿನ ಶೈಲಿಯಲ್ಲಿ ಮಾಡಿರುವ ಪಲ್ಲಟ ಬೃಹತ್ತಾದದ್ದು.

ಇದನ್ನು ಈಗ ತಜ್ಞರು ಹೊಸ ಸಹಜತೆ ಎಂದು ಕರೆಯಲಾರಂಭಿಸಿದ್ದಾರೆ. ಆದರೆ ಈ ಬದಲಾವಣೆಗೆ ಹೊಂದಿಕೊಳ್ಳಲು ಜನರಿಗೆ ಕಷ್ಟವಾಗುತ್ತಿದೆ. ಹಿರಿಯರೆಂದಷ್ಟೇ ಅಲ್ಲ, ಮಕ್ಕಳಿಗೂ ಇವೆಲ್ಲ ಬಿಕ್ಕಟ್ಟಿನ ಸಂಗತಿಗಳೇ. ವಿದ್ಯಾರ್ಥಿಗಳ ವಿಚಾರಕ್ಕೆ ಬಂದರೆ, ಆಟ-ಪಾಠದಲ್ಲಿ ಸೃಷ್ಟಿಯಾಗಿರುವ ಏರುಪೇರಿನಿಂದಾಗಿ ಅವರ ಮನದ ಮೇಲೂ ಒತ್ತಡ ಬೀಳಲಾರಂಭಿಸಿದೆ.

ಇನ್ನು ಕಳೆದ ಕೆಲವು ತಿಂಗಳುಗಳಿಂದ ಜಗತ್ತಿನಾದ್ಯಂತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚುತ್ತಿದೆ ಎಂಬ ವರದಿಗಳು ಬರಲಾರಂಭಿಸಿವೆ. ಇವನ್ನೆಲ್ಲ ನೋಡಿದಾಗ, ಈ ಸಾಂಕ್ರಾಮಿಕವು ಮನುಷ್ಯನ ಮಾನಸಿಕ ಆರೋಗ್ಯದ ಮೇಲೆ, ಸಂಬಂಧಗಳ ಮೇಲೆ ದೊಡ್ಡ ಗಾಯ ಮಾಡುತ್ತಿದೆ ಎನ್ನುವುದು ಅರಿವಾಗುತ್ತದೆ.

ಆದಾಗ್ಯೂ, ಯಾವುದೇ ಬದಲಾವಣೆಯಿರಲಿ ಅದಕ್ಕೆ ಒಗ್ಗಿಕೊಳ್ಳಲು ಮನಸ್ಸು ಮೊದಲು ನಿರಾಕರಿಸುತ್ತದೆ, ಪ್ರತಿರೋಧ ಒಡ್ಡುತ್ತದೆ ಎನ್ನುತ್ತದೆ ಮನಃಶ್ಯಾಸ್ತ್ರ. ಹಾಗೆಂದು ಕೋವಿಡ್‌ ಸಮಸ್ಯೆ ಶಾಶ್ವತವಾಗಿ ಇರಲಿದೆ ಎಂದೇನೂ ಅರ್ಥವಲ್ಲ. ಈಗ ಸೃಷ್ಟಿಯಾಗಿರುವ ಬಿಕ್ಕಟ್ಟಂತೂ ನಿಸ್ಸಂಶಯವಾಗಿಯೂ ಮುಂದಿನ ದಿನಗಳಲ್ಲಿ ಬಗೆಹರಿಯಲಿದೆ.

ಹೀಗಾಗಿ, ಪ್ರಪಂಚವೇ ಮುಳುಗಿಹೋಗುತ್ತಿದೆ ಎಂಬ ನಿರಾಶಾವಾದ ಖಂಡಿತ ಬೇಡ. ಎಂಥ ಕ್ಲಿಷ್ಟ ಸಮಯದಲ್ಲೂ ಬದುಕುವ ಮಾರ್ಗವನ್ನು ಕಂಡುಕೊಳ್ಳುವುದು, ಸಂತೋಷವನ್ನು ದಕ್ಕಿಸಿಕೊಳ್ಳುವುದು ಮನುಷ್ಯನ ಬಹುದೊಡ್ಡ ಶಕ್ತಿ. ಈ ಶಕ್ತಿಯನ್ನು ನಾವು ಮರೆಯದಿರೋಣ. ನಮ್ಮ ಸುತ್ತಲಿರುವವರೂ ಖನ್ನತೆಯತ್ತ ಮುಖ ಮಾಡದಂತೆ ಜಾಗೃತಿ ವಹಿಸೋಣ. ಕತ್ತಲು ಕಳೆದು ಬೆಳಕು ಬಂದೇ ಬರುತ್ತದೆ ಎನ್ನುವುದು ನೆನಪಿರಲಿ. ನಿರಾಶಾವಾದಿಗಳಾಗದಿರಿ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.