ವಲಸೆ ಕಾರ್ಮಿಕರಿಗೆ ಸಹಾಯ ಸಹಾನುಭೂತಿ ಮುಖ್ಯ


Team Udayavani, May 29, 2020, 5:11 AM IST

ವಲಸೆ ಕಾರ್ಮಿಕರಿಗೆ ಸಹಾಯ ಸಹಾನುಭೂತಿ ಮುಖ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಾಕ್‌ಡೌನ್‌ ಆರಂಭವಾದಾಗಿನಿಂದ ದೇಶಾದ್ಯಂತ ಅತಿಹೆಚ್ಚು ಸಂಕಷ್ಟಕ್ಕೊಳಗಾದ ವರ್ಗವೆಂದರೆ ವಲಸೆ ಕಾರ್ಮಿಕರು.

ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಪಟ್ಟ, ಪಡುತ್ತಿರುವ ಪಡಿಪಾಟಲು ಅಷ್ಟಿಷ್ಟಲ್ಲ. ಸುಡುಬಿಸಿಲಲ್ಲಿ ನೂರಾರು ಕಿಲೋಮೀಟರ್‌ ನಡೆದವರೆಷ್ಟೋ, ಮಧ್ಯದಲ್ಲೇ ಹಸಿವು, ಅಪಘಾತ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಅಸುನೀಗಿದವರೆಷ್ಟೋ.

ಲಾಕ್‌ಡೌನ್‌ನ ಮೂರು ಚರಣಗಳಲ್ಲಿ ರಾಜ್ಯಗಳೆಲ್ಲ ತಮ್ಮ ಗಡಿಯನ್ನು ಮುಚ್ಚಿದ್ದರಿಂದಾಗಿ ಹಾಗೂ ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಬಂಧದಿಂದಾಗಿ ವಲಸಿಗ ಕಾರ್ಮಿಕರ ತೊಂದರೆ ತಾರಕಕ್ಕೇರುವಂತಾಯಿತು.

ಆದರೆ ಮೇ ತಿಂಗಳ ಆರಂಭದಿಂದ ಅನ್ಯ ರಾಜ್ಯಗಳಲ್ಲಿ ಸಿಲುಕಿರುವ ವಲಸಿಗರನ್ನು ಅವರ ಊರುಗಳಿಗೆ ತಲುಪಿಸುವ ಕೆಲಸ ಭರದಿಂದ ಸಾಗಿರುವುದು ಸ್ವಾಗತಾರ್ಹ. ಮೇ 1ರಿಂದ 27ರ ವರೆಗೆ 97 ಲಕ್ಷ ಜನರನ್ನು ಅವರ ಊರುಗಳಿಗೆ ತಲುಪಿಸಿರುವುದಾಗಿ ಕೇಂದ್ರ ಸರಕಾರ ಗುರುವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಈ ಅವಧಿಯಲ್ಲಿ ಶ್ರಮಿಕ್‌ ವಿಶೇಷ ರೈಲುಗಳ ಮೂಲಕ 50 ಲಕ್ಷ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರೆ, 41 ಲಕ್ಷ ಜನ ರಸ್ತೆಗಳ ಮೂಲಕ ತಲುಪಿದ್ದಾರೆ ಎಂದಿದೆ ಕೇಂದ್ರ.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಕೂಡ ಸರಕಾರಕ್ಕೆ ನಿರ್ದೇಶನಗಳನ್ನು ನೀಡಿದ್ದು, ವಲಸೆ ಕಾರ್ಮಿಕರಿಗೆ ಪ್ರಯಾಣ ದರ ವಿಧಿಸದಂತೆ, ನೀರು,ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಹೇಳಿದೆ.

ಅಲ್ಲದೇ, ಒಂದು ವೇಳೆ ಅನ್ಯ ರಾಜ್ಯಗಳಲ್ಲಿ ಸಿಲುಕಿರುವವರು ತಮ್ಮ ಊರುಗಳಿಗೆ ಹಿಂದಿರುಗಲು ಬಯಸಿದರೆ, ರಾಜ್ಯ ಸರಕಾರಗಳು ಅವರನ್ನು ತಡೆಯಬಾರದು ಎಂದೂ ನ್ಯಾಯಪೀಠ ಹೇಳಿರುವುದು ಸ್ವಾಗತಾರ್ಹ.

ಇದೇ ವೇಳೆಯಲ್ಲೇ, ಹಠಾತ್ತನೆ ಭಾರೀ ಪ್ರಮಾಣದಲ್ಲಿ ಹಿಂದಿರುಗುತ್ತಿರುವ ಜನರೊಂದಿಗೆ, ಕೊವಿಡ್ ಪ್ರಕರಣಗಳ ಸಂಖ್ಯೆಯೂ ದೇಶದಲ್ಲಿ ಹೆಚ್ಚಳವಾಗುತ್ತಿರುವುದು, ಇದುವರೆಗೂ ಹಸುರು ವಲಯಗಳಾಗಿ ಉಳಿದಿದ್ದ ಪ್ರದೇಶಗಳಲ್ಲಿ ಸೋಂಕುಗಳು ಪತ್ತೆಯಾಗುತ್ತಿರುವುದು ಕಳವಳಕಾರಿ ವಿಷಯ.

ಆದಾಗ್ಯೂ, ಇಂಥದ್ದೊಂದು ಸನ್ನಿವೇಶವನ್ನು ದೇಶ ನಿರೀಕ್ಷಿಸಿರಲಿಲ್ಲ ಎನ್ನುವುದು ತಪ್ಪಾದೀತು. ಲಾಕ್‌ಡೌನ್‌ನ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿರುವಂತೆಯೇ, ಜನರ ಓಡಾಟ ಹೆಚ್ಚುವುದನ್ನು ನಿರೀಕ್ಷಿಸಿದ್ದ ಕೇಂದ್ರ-ರಾಜ್ಯ ಸರಕಾರಗಳು, ಆರೋಗ್ಯ ವಲಯಗಳು ಈ ರೀತಿಯ ಸವಾಲಿಗೆ ಸಾಕಷ್ಟು ಸಿದ್ಧತೆಯನ್ನೂ ನಡೆಸಿದ್ದವು.

ಈ ಸಿದ್ಧತೆಯ ಪರಿಣಾಮವನ್ನು ನಾವೀಗ ನೋಡುತ್ತಿದ್ದೇವೆ. ರಾಜ್ಯದಲ್ಲೂ ಮಹಾರಾಷ್ಟ್ರ, ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಿಂದ ಹಿಂದಿರುಗಿರುವವರನ್ನು ಪರೀಕ್ಷಿಸಿ ಅವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗುತ್ತಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರು. ನಮ್ಮಲ್ಲಷ್ಟೇ ಅಲ್ಲ, ಹಠಾತ್ತನೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾದ ರಾಜ್ಯಗಳಲ್ಲೂ ಇದೇ ಸ್ಥಿತಿ ಕಾಣಿಸುತ್ತಿದೆ.

ಹಾಗೆಂದು, ಇದಕ್ಕೆ ಸೋಂಕಿತರನ್ನು ತಪ್ಪಿತಸ್ಥರಂತೆ ನೋಡುವ ತಪ್ಪನ್ನು ಯಾರೂ ಮಾಡಬಾರದು. ವಲಸಿಗ ಕಾರ್ಮಿಕರು ತಿಂಗಳುಗಳಿಂದ ಪಟ್ಟ ಪಡಿಪಾಟಲು ಅಷ್ಟಿಷ್ಟಲ್ಲ. ದೇಶದ ಬಹುತೇಕ ಆರ್ಥಿಕ ಚಟುವಟಿಕೆಗಳು ನಿಂತಿದ್ದರಿಂದಾಗಿ, ದಿನಗೂಲಿಯ ಮೇಲೆ ಅವಲಂಬಿತರಾದ ಅವರ ಜೀವನ ಹಠಾತ್ತನೆ ಬೀದಿಗೆ ಬಂದು ಬಿದ್ದಿದೆ.

ಕೋವಿಡ್ ಗಿಂತಲೂ ಊಟವಿಲ್ಲದೇ ಎಲ್ಲಿ ಪ್ರಾಣ ಕಳೆದುಕೊಳ್ಳುತ್ತೇವೋ ಎಂಬ ಭಯ ಅನೇಕರನ್ನು ಕಾಡಿದ್ದುಂಟು. ಹೀಗಾಗಿ, ಆರ್ಥಿಕವಾಗಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿರುವ ಅವರನ್ನೆಲ್ಲ ಸುರಕ್ಷಿತವಾಗಿ ಕರೆತರುವುದು, ಅವರ ಕಾಳಜಿ ಮಾಡುವುದು ರಾಜ್ಯಗಳ ಜವಾಬ್ದಾರಿ.

ಅಲ್ಲದೆ, ಹೀಗೆ ಹಿಂದಿರುಗಿರುವವರನ್ನು ಆಯಾ ಪ್ರದೇಶಗಳ ಜನರೂ ಕೂಡ ಸಹಾನುಭೂತಿಯ ದೃಷ್ಟಿಯಿಂದ ನೋಡಬೇಕೇ ಹೊರತು, ಯಾವುದೇ ಕಾರಣಕ್ಕೂ ಅವರನ್ನು ಕಳಂಕಿತರೆಂಬಂತೆ ನೋಡಲೇಬಾರದು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.