millets; ಬಿಸಿಯೂಟದಲ್ಲಿ ಸಿರಿಧಾನ್ಯ ಪೌಷ್ಟಿಕ‌ ನಾಡಿಗೆ ಮುನ್ನುಡಿಯಾಗಲಿ


Team Udayavani, Jan 8, 2024, 5:05 AM IST

1-saddasd

ಸಮಾಜದ ಪ್ರತಿಯೊಬ್ಬರಿಗೂ ಪೌಷ್ಟಿಕ ಆಹಾರ ಕಲ್ಪಿಸುವ ಉದ್ದೇಶದಿಂದ ಅಂಗನವಾಡಿ, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟೀನ್‌, ಪಡಿತರ ವಿತರಣೆಯಲ್ಲಿ ಶೀಘ್ರ ಸಿರಿಧಾನ್ಯ ಆಹಾರ ಪರಿಚಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಸ್ವಾಗತಾರ್ಹ.
ಮುಖ್ಯಮಂತ್ರಿಯರ ಈ ಘೋಷಣೆ ಆದಷ್ಟು ಶೀಘ್ರ ಜಾರಿಗೆ ಬರಬೇಕು. ಆ ಮೂಲಕ ರಾಜ್ಯದಲ್ಲಿ ಅಪೌಷ್ಟಿಕತೆ ನಿವಾರಣೆಯ ಹೋರಾಟಕ್ಕೆ ಒಂದು ಮೈಲಿಗಲ್ಲು ಸಿಗುವಂತಾಗಬೇಕು. ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟೀನ್‌ ಹಾಗೂ ಪಡಿತರ ವಿತರಣೆಯಲ್ಲಿ ಸಿರಿಧಾನ್ಯ ಪರಿಚಯಿಸುವುದು ಕೇವಲ ಒಂದು ಕಲ್ಯಾಣ ಕಾರ್ಯಕ್ರಮ ಇಲ್ಲವೇ ಹಸಿವು ನೀಗಿಸುವ ಅಥವಾ ಬಡತನ ನಿವಾರಣೆಯ ಕಾರ್ಯಕ್ರಮವಾಗದೇ ಸಿರಿಧಾನ್ಯದಲ್ಲಿ ಕರ್ನಾಟಕ ಹೊಂದಿರುವ ಸಿರಿವಂತಿಕೆ ಮತ್ತು ಪರಂಪರೆಯ ಮುಂದುವರಿದ ಧಾರೆಯಾಗಬೇಕು. ಆ ಮೂಲಕ ಪೌಷ್ಟಿಕ ನಾಡು ಕಟ್ಟುವ ಸಮಾಜ ಹಾಗೂ ಸರಕಾರದ ಸದಾಶಯ ಸಾಕಾರಗೊಳ್ಳಬೇಕು.

ಪ್ರಧಾನಿ ನರೇಂದ್ರ ಮೋದಿಯ ವರು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಿದ್ದರು. ತಿಂಗಳುಗಳ ಹಿಂದೆ ನಡೆದ ಜಿ20 ಶೃಂಗ ದಲ್ಲೂ ಸಿರಿಧಾನ್ಯವನ್ನು ಪರಿಚಯಿಸಲಾಗಿತ್ತು. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಅವಧಿಯ ಕೊನೆಯ ಬಜೆಟ್‌ನಲ್ಲಿ ಸಿರಿಧಾನ್ಯಕ್ಕೆ ವಿಶೇಷ ಒತ್ತುಕೊಟ್ಟು ರೈತಸಿರಿ ಯೋಜನೆ ಘೋಷಿಸಿದ್ದರು. ಅದಕ್ಕೆ ಪೂರಕವಾಗಿ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಜ್ಜೆ ಇಟ್ಟಿದ್ದು, ಅಂಗನವಾಡಿ, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟೀನ್‌, ಪಡಿತರ ವಿತರಣೆಯಲ್ಲಿ ಸಿರಿಧಾನ್ಯ ಆಹಾರ ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸದ್ಯ 2 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಬಹು ಆಯಾಮ ಬಡತನ ಜಿಲ್ಲೆಗಳ ಪಟ್ಟಿಯಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಮುಂದಿವೆ. ಸಾರಜನಕ, ಲವಣ, ನಾರಿನಾಂಶ ಸೇರಿದಂತೆ ಹಲವು ಪೌಷ್ಟಿಕಾಂ ಶಗಳನ್ನು ಈ ಸಿರಿಧಾನ್ಯಗಳು ಹೊಂದಿವೆ. ರಾಜ್ಯದ ಜನ ಮತ್ತು ಶಾಲಾ ಮಕ್ಕಳಿಗೆ ಇದು ಸಮರ್ಪಕವಾಗಿ ದೊರೆಯುವಂತಾಗಬೇಕು. ಆಗ ಆರೋಗ್ಯ ಸಮಾಜ ನಿರ್ಮಾಣ ಸಾಧ್ಯ. ಈ ಹಿನ್ನೆಲೆಯಲ್ಲಿ ಎಲ್ಲ ಇಂದಿರಾ ಕ್ಯಾಂಟೀನ್‌ಗಳು, ನ್ಯಾಯ ಬೆಲೆ ಅಂಗಡಿಗಳ ಮೂಲಕ ವಿತರಿಸುವ ಪಡಿತರ, ಅಂಗನವಾಡಿ ಮತ್ತು ಶಾಲೆ ಗಳಲ್ಲಿ ವಿತರಿಸುವ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯ ಪರಿಚಯಿಸುವ ಸದುದ್ದೇಶವನ್ನು ಸರಕಾರ ಹೊಂದಿದೆ.

ಕರ್ನಾಟಕ ಸಿರಿಧಾನ್ಯಗಳನ್ನು ಬೆಳೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಸಿರಿಧಾನ್ಯ ವಲಯದಲ್ಲಿ ನವೋದ್ಯಮಗಳಿಗೂ ಸಹ ಹೆಚ್ಚಿನ ಅವಕಾಶಗಳಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಲು ಸರಕಾರ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, ಸರಕಾರದ ಈಗಿನ ತೀರ್ಮಾನ ಅವುಗಳಿಗೆ ಸೇರ್ಪಡೆಯಾಗಿದೆ. ಸಿರಿಧಾನ್ಯಗಳ ಉತ್ಪಾದನೆ ಮತ್ತು ಸೇವನೆಯಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯದ ಒಟ್ಟಾರೆ 16.39 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಿರಿ ಧಾನ್ಯ ಬೆಳೆಯಲಾಗುತ್ತಿದೆ. ಇದರಲ್ಲಿ 8.46 ಲಕ್ಷ ಹೆಕ್ಟೇರ್‌ನಲ್ಲಿ ರಾಗಿ, 6.16 ಲಕ್ಷ ಹೆಕ್ಟೇರ್‌ನಲ್ಲಿ ಜೋಳ, 1.48 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಜ್ಜೆ, 0.29 ಲಕ್ಷ ಹೆಕ್ಟೇರ್‌ ಪ್ರದೇಶಗಳಲ್ಲಿ ಕಿರು ಧಾನ್ಯ, ಸಿರಿಧಾನ್ಯಗಳನ್ನು ಬೆಳೆಯುತ್ತಿದ್ದು, ಒಟ್ಟಾರೆ 20.55 ಲಕ್ಷ ಟನ್‌ ಸಿರಿ ಧಾನ್ಯ ಉತ್ಪಾದನೆಯಾಗುತ್ತಿದೆ. ಸರಕಾರದ ಈ ನಿರ್ಧಾರದಿಂದ ರಾಜ್ಯದಲ್ಲಿ ಸಿರಿಧಾನ್ಯಕ್ಕೆ ಬೇಡಿಕೆ ಇನ್ನೂ ಹೆಚ್ಚಾಗುವುದರ ಜತೆಗೆ, ಅಪೌಷ್ಟಿಕತೆ ಕಡಿಮೆಯಾಗಬಹುದು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.