ಅಲ್ಪಾಯುಷಿ ಮೈತ್ರಿಕೂಟಗಳು


Team Udayavani, Jun 6, 2019, 6:10 AM IST

alpayushi

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿನ ಬಳಿಕ ಹಲವು ರಾಜ್ಯಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ಶಿಥಿಲಗೊಳ್ಳುತ್ತಿದೆ. ಮುಖ್ಯವಾಗಿ ಕರ್ನಾಟಕ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆಗಳು ವಿಪಕ್ಷಗಳ ಹತಾಶ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿವೆ. ಈ ಚುನಾವಣೆ ವಿಪಕ್ಷಗಳಿಗೆ ಕೊಟ್ಟಿರುವ ಹೊಡೆತ ಏನು ಎನ್ನುವುದಕ್ಕೆ ಅವುಗಳೊಳಗಿನ ತಳಮಳವೇ ಸಾಕ್ಷಿ.

ಚುನಾವಣೆಗೂ ಮೊದಲು ಎಲ್ಲ ಸಮಾನ ಮನಸ್ಕ ಪಕ್ಷಗಳು ಸೇರಿ ಮಹಾಘಟಬಂಧನ್‌ ರಚಿಸಿಕೊಳ್ಳುವ ಪ್ರಯತ್ನ ವಿಫ‌ಲಗೊಂಡ ಬಳಿಕ ಉತ್ತರ ಪ್ರದೇಶದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಮೈತ್ರಿ ಮಾಡಿಕೊಂಡಿದ್ದವು. ರಾಷ್ಟ್ರೀಯ ಲೋಕದಳ ಕಿರಿಯ ಪಾಲುದಾರನಾಗಿ ಈ ಮೈತ್ರಿಯನ್ನು ಸೇರಿಕೊಂಡಿತ್ತು. ಕರ್ನಾಟಕದಲ್ಲಿ ಅದಾಗಲೇ ಅಸ್ತಿತ್ವದಲ್ಲಿ ಇದ್ದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಮತ್ತು ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿಕೂಟ ಜತೆಯಾಗಿ ಸ್ಪರ್ಧಿಸಿದ್ದವು.

ಈ ಪೈಕಿ ಹೆಚ್ಚು ಗಮನ ಸೆಳೆದದ್ದು ಉತ್ತರ ಪ್ರದೇಶದ ಎಸ್‌ಪಿ-ಬಿಎಸ್‌ಪಿ ಮೈತ್ರಿ. ಬಿಜೆಪಿಯ ಹಿಂದುತ್ವ ಅಜೆಂಡಾದ ಮೇಲೆ ದಲಿತರು ಮತ್ತು ಒಬಿಸಿ ವರ್ಗದ ಮತಗಳನ್ನು ಸೆಳೆಯುವ ತಂತ್ರಕ್ಕೆ ಪ್ರತಿಯಾಗಿ ಈ ಎರಡು ವರ್ಗಗಳನ್ನು ಪ್ರತಿನಿಧಿಸುವ ಎಸ್‌ಪಿ ಮತ್ತು ಬಿಎಸ್‌ಪಿ ಜತೆಯಾದರೆ ಗೆಲ್ಲಬಹುದು ಎಂಬ ಜಾತಿ ಲೆಕ್ಕಾಚಾರದಲ್ಲಿ ರಚಿಸಲ್ಪಟ್ಟ ಪ್ರತಿತಂತ್ರದ ಮೈತ್ರಿಯಿದು. ಬಿಜೆಪಿಯ ಓಟವನ್ನು ತಡೆಯಬೇಕೆಂಬ ಉದ್ದೇಶದಿಂದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಎಸ್‌ಪಿಯ ಮುಲಾಯಂ ಸಿಂಗ್‌ ಯಾದವ್‌ ಹಾಗೂ ಅವರ ಪುತ್ರ ಅಖೀಲೇಶ್‌ ಯಾದವ್‌ ಬಹುಕಾಲದ ವೈಷಮ್ಯವನ್ನು ಮರೆತು ಜತೆಯಾದರು. ಕೆಲವು ಉಪಚುನಾವಣೆಗಳಲ್ಲಿ ಜತೆಯಾಗಿ ಸ್ಪರ್ಧಿಸಿ ದಕ್ಕಿದ ಗೆಲುವು ಅವರಿಗೆ ಸ್ಫೂರ್ತಿಯಾಗಿತ್ತು. ಆದರೆ ಲೋಕಸಭಾ ಚುನಾವಣೆಯ ಫ‌ಲಿತಾಂಶ ಮೈತ್ರಿಯ ಲೆಕ್ಕಾಚಾರವನ್ನೆಲ್ಲ ಬುಡಮೇಲು ಮಾಡಿದೆ. 80 ಸ್ಥಾನಗಳ ಪೈಕಿ ಮೈತ್ರಿಗೆ ಸಿಕ್ಕಿರುವುದು ಬರೀ 15 ಸ್ಥಾನಗಳು. 2014ರಲ್ಲಿ ಶೂನ್ಯ ಗಳಿಕೆ ಮಾಡಿದ್ದ ಬಿಎಸ್‌ಪಿಗೆ 10 ಸ್ಥಾನಗಳು ಸಿಕ್ಕಿದರೆ ಎಸ್‌ಪಿ 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

ಬಿಎಸ್‌ಪಿಗೆ ಸ್ಥಾನಗಳ ಲೆಕ್ಕದಲ್ಲಿ ಲಾಭವಾಗಿದ್ದರೂ ಫ‌ಲಿತಾಂಶ ನಿರೀಕ್ಷಿತ ಮಟ್ಟಕ್ಕೇರಲಿಲ್ಲ ಎಂಬ ಅಸಮಾಧಾನ ಮಾಯಾವತಿಯದ್ದು. ಹೀಗಾಗಿ ಅವರೇ ಈ ಅನುಕೂಲಸಿಂಧು ಮೈತ್ರಿಯಿಂದ ಮೊದಲು ಹೊರಗಡಿಯಿಟ್ಟರು. ಅಖೀಲೇಶ್‌ ಯಾದವ್‌ ಕೂಡಾ ಒತ್ತಾಯದ ಮೈತ್ರಿ ಬೇಡ ಎಂದು ಈಗ ಗುಡ್‌ಬೈ ಹೇಳಿದ್ದಾರೆ.

ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರೂ ವಿಪಕ್ಷ ನಾಯಕರಿಗೆ ಇನ್ನೂ ಜನರ ನಾಡಿಮಿಡಿತವನ್ನು ಅರಿಯಲು ಸಾಧ್ಯವಾಗಿಲ್ಲ. ಬಿಜೆಪಿಯ ಸೈದ್ಧಾಂತಿಕ, ಸಂಘಟನಾತ್ಮಕ ಮತ್ತು ಸಾಂಪತ್ತಿಕ ಬಲಗಳಿಗೆ ಸರಿಮಿಗಿಲಾಗುವ ಸಾಮರ್ಥ್ಯ ಸದ್ಯ ಯಾವ ಪಕ್ಷದಲ್ಲೂ ಇಲ್ಲ. ಅದಾಗ್ಯೂ ಫ‌ಲಿತಾಂಶದಿಂದ ಈ ಪಕ್ಷಗಳು ಯಾವ ಪಾಠವನ್ನೂ ಕಲಿತಿಲ್ಲ ಎನ್ನುವುದಕ್ಕೆ ಕರ್ನಾಟಕದಲ್ಲಿ ಮೈತ್ರಿ ಪಕ್ಷಗಳ ನಡುವೆ ಮುಂದುವರಿದಿರುವ ಮುಸುಕಿನ ಗುದ್ದಾಟವೇ ಸಾಕ್ಷಿ.

ವಿಪಕ್ಷಗಳು ಈಗಲೂ ಜಾತಿ ಬಲದಿಂದ ಚುನಾವಣೆ ಗೆಲ್ಲಬಹುದು ಎಂದು ಭಾವಿಸಿದ್ದರೆ ಮುಂದಿನ ಚುನಾವಣೆಗಳಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ. ಜನರು ಜಾತಿ ಲೆಕ್ಕಾಚಾರವನ್ನು, ವಂಶ ಪಾರಂಪರ್ಯ ನಾಯಕತ್ವವನ್ನು ಮೀರಿ ತಮಗೆ ಯಾರು ಹಿತವರು ಎಂದು ಯೋಚಿಸುವಷ್ಟು ಪ್ರಬುದ್ಧರಾಗಿದ್ದಾರೆ ಎನ್ನುವುದನ್ನು 2019ರ ಲೋಕಸಭಾ ಚುನಾವಣೆ ಅಗತ್ಯಕ್ಕಿಂತಲೂ ಹೆಚ್ಚು ಸ್ಪಷ್ಟವಾಗಿಯೇ ತಿಳಿಸಿಕೊಟ್ಟಿದೆ. ಅದರಲ್ಲೂ ಬರೀ ಜಾತಿ ಬಲದಿಂದಲೇ ರಾಜಕೀಯ ಮಾಡುತ್ತಿರುವ ಪಕ್ಷಗಳು ಇನ್ನಾದರೂ ವಿಶಾಲವಾಗಿ ಚಿಂತಿಸುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಎಲ್ಲ ಕಾಲಕ್ಕೂ ಜಾತಿಯ ಹೆಸರೇಳಿ ಮತದಾರರಿಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎನ್ನುವುದನ್ನು ಈ ಪಕ್ಷಗಳು ತಿಳಿದುಕೊಳ್ಳಬೇಕು.

ಮೈತ್ರಿ ಮಾಡಿಕೊಳ್ಳುವಾಗ ಎಲ್ಲರೂ ಸಮಾನ ಮನಸ್ಕ ಪಕ್ಷಗಳು ಒಂದಾಗುವುದು, ಸಮಾನ ಸೈದ್ಧಾಂತಿಕ ಚಿಂತನೆ ಎಂದೆಲ್ಲ ಹೇಳುತ್ತವೆ. ನಿಜವಾಗಿ ಇವುಗಳದ್ದೆಲ್ಲ ಅವಕಾಶವಾದಿ ರಾಜಕಾರಣವಷ್ಟೇ. ಇವೆಲ್ಲ ಅಲ್ಪಾಯುಷಿ ಮೈತ್ರಿಗಳು. ಅಧಿಕಾರಕ್ಕಾಗಿ ಇವರೆಲ್ಲ ಸಂದರ್ಭ ಬಂದಾಗ ಒಗ್ಗಟ್ಟಾಗುತ್ತಾರೆ ಎನ್ನುವುದು ಈಗ ಮತದಾರರಿಗೆ ಸ್ಪಷ್ಟವಾಗಿದೆ. ಹೀಗಾಗಿ ಅವರು ಈ ಸಲ ಮೈತ್ರಿಕೂಟಗಳನ್ನೆಲ್ಲ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಸದ್ಯಕ್ಕೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾಗವಂಥ ಬಲಿಷ್ಠ ಪಕ್ಷ ಇಲ್ಲದಂತಾಗಿದೆ. ಪ್ರಜಾತಂತ್ರದ ಆರೋಗ್ಯದ ದೃಷ್ಟಿಯಿಂದ ಇದು ಬಹಳ ಅಪಾಯಕಾರಿ ಸ್ಥಿತಿ. ಆದರೆ ಹೀಗಾಗಲು ವಿಪಕ್ಷಗಳ ನಡುವಿನ ಗೊಂದಲವೇ ಕಾರಣ.ಈ ನಿಟ್ಟಿನಲ್ಲಿ ಅವುಗಳು ಆತ್ಮವಲೋಕನ ನಡೆಸಿದರೆ ಉತ್ತಮ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.