ಒಂದೇ ವೇದಿಕೆಯಲ್ಲಿ ಮೋದಿ-ಟ್ರಂಪ್‌, ಐತಿಹಾಸಿಕ ಘಟನೆ


Team Udayavani, Sep 17, 2019, 5:35 AM IST

modi-trump

ಹೂಸ್ಟನ್‌ ಕಾರ್ಯಕ್ರಮ ಪಾಕ್‌ ಹಾಗೂ ಚೀನಾಕ್ಕೊಂದು ಬಲವಾದ ಸಂದೇಶ ನೀಡುವುದು ಖಚಿತ. ಏನೇ ಮಾಡಿ ದರೂ ಜಾಗತಿಕ ವೇದಿಕೆಯಲ್ಲಿ ಭಾರತದ ಪಾರಮ್ಯವನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶ ಇದರಲ್ಲಿದೆ.

ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ಭಾರತೀಯ ಸಮುದಾಯದವರು ಹಮ್ಮಿಕೊಂಡಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೂ ಭಾಗವಹಿಸಲಿರುವುದು ಒಂದು ಐತಿಹಾಸಿಕ ಘಟನೆಯಾಗಲಿದೆ. ಉಭಯ ದೇಶಗಳ ನಡುವಿನ ಸ್ನೇಹ ಈ ಮೂಲಕ ಮತ್ತಷ್ಟು ಗಟ್ಟಿಗೊಳ್ಳಲಿರುವುದು ಮಾತ್ರವಲ್ಲದೆ ಇನ್ನೂ ಅನೇಕ ಕಾರಣಗಳಿಗೆ ಸೆ. 22ರಂದು ನಡೆಯಲಿರುವ ಈ ಕಾರ್ಯಕ್ರಮ ಮುಖ್ಯವಾಗುತ್ತದೆ.

ಅಮೆರಿಕದಲ್ಲಿ ಅಲ್ಲಿನ ಅಧ್ಯಕ್ಷರೊಬ್ಬರು ಒಂದೇ ಕಡೆ 50,000 ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಲಿರುವುದು ಇದೇ ಪ್ರಥಮ.ಕಾಶ್ಮೀರ ವಿವಾದ ಬಗೆಹರಿಸುವ ಸಲುವಾಗಿ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಟ್ರಂಪ್‌ ಕೆಲವು  ಬಾರಿ ಮಂಡಿಸಿದಾಗ ಭಾರತ ಮೂರನೆಯವರ ಹಸ್ತಕ್ಷೇಪವನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಜತೆಗೆ ಜಮ್ಮು-ಕಾಶ್ಮೀರದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯ ಕುರಿತು ಅಮೆರಿಕದ ಕೆಲವು ಸಂಸದರು ಭಾರೀ ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಭಾರತದ ಬಗ್ಗೆ ಅಮೆರಿಕದ ಮನಸ್ಸಿನಲ್ಲಿ ಕಹಿ ಭಾವನೆ ಇದೆಯೇ ಎಂಬ ಅನುಮಾನವೊಂದು ಇತ್ತು.ಇದೀಗ ಮೋದಿ ಜತೆಗೆ ಟ್ರಂಪ್‌ ವೇದಿಕೆ ಹಂಚಿಕೊಳ್ಳಲು ಒಪ್ಪಿರುವುದರಿಂದ ಈ ಅನುಮಾನ ದೂರವಾಗಿದೆ. ಈ ಹಿನ್ನೆಲೆಯಲ್ಲಿ ಹೂಸ್ಟನ್‌ ಕಾರ್ಯಕ್ರಮಕ್ಕೆ ಬರೀ ಸ್ನೇಹಾಚಾರ ಮಾತ್ರವಲ್ಲದೆ ರಾಜತಾಂತ್ರಿಕವಾದ ಇನ್ನೊಂದು ಆಯಾಮವೂ ಇದೆ.

ಅಮೆರಿಕದಲ್ಲಿ ಮೋದಿ ಭಾರತೀಯ ಸಮುದಾಯದವರ ಬೃಹತ್‌ ಸಭೆಯಲ್ಲಿ ಭಾಗವಹಿಸುತ್ತಿರುವುದು ಇದು ಮೂರನೇ ಬಾರಿ. 2014ರಲ್ಲಿ ಪ್ರಧಾನಿಯಾದ ಬೆನ್ನಿಗೆ ನ್ಯೂಯಾರ್ಕ್‌ನ ಮ್ಯಾಡಿಸನ್‌ ಸ್ಕ್ವೇರ್‌ ಗಾರ್ಡನ್‌ನಲ್ಲಿ ಮತ್ತು 2016ರಲ್ಲಿ ಸಿಲಿಕಾನ್‌ ವ್ಯಾಲಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಈ ಸಭೆಗಳಲ್ಲಿ ಸುಮಾರು 20,000 ಜನರಷ್ಟೇ ಇದ್ದರು. ಈ ದೃಷ್ಟಿಯಿಂದಲೂ ಮೂರನೇ ಸಾರ್ವಜನಿಕ ಸಭೆ ಮಹತ್ವದ್ದಾಗಲಿದೆ.

ಇತ್ತೀಚೆಗಿನ ವರ್ಷಗಳಲ್ಲಿ ಜಗತ್ತಿನ ಎರಡು ಬೃಹತ್‌ ಪ್ರಜಾಪ್ರಭುತ್ವ ದೇಶಗಳ ಪ್ರಮುಖರು ಸಾರ್ವಜನಿಕ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಉದಾಹರಣೆಯಿಲ್ಲ. ಈ ದೃಷ್ಟಿಯಿಂದಲೂ ಹೂಸ್ಟನ್‌ ಕಾರ್ಯಕ್ರಮ ಜಗತ್ತಿನಾದ್ಯಂತ ಕುತೂಹಲ ಮೂಡಿಸಿದೆ.

ಅಮೆರಿಕ ಮತ್ತು ಭಾರತದ ಜನರ ನಡುವಿನ ಬಾಂಧವ್ಯವನ್ನು ಮತ್ತು ಜಗತ್ತಿನ ಎರಡು ಅತಿ ಹಳೆಯ ಪ್ರಜಾಪ್ರಭುತ್ವ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಸಿಕ್ಕಿರುವ ಅಪೂರ್ವ ಅವಕಾಶ ಇದಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ರಾಜತಾಂತ್ರಿಕ ಜಾಣ್ಮೆಯನ್ನು ನಾವು ತೋರಿಸಬೇಕು.

ಚೀನಾ-ಅಮೆರಿಕ ದರ ಸಮರದಿಂದಾಗಿ ಉಂಟಾಗಿರುವ ವಾಣಿಜ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕೂಡ ಇದು ಸುಸಂದರ್ಭ. ದರ ಸಮರದ ಪರಿಣಾಮವಾಗಿ ಭಾರತದ ಮೇಲೂ ಟ್ರಂಪ್‌ ಹಲವು ನಿರ್ಬಂಧಗಳನ್ನು ಹೇರಿದ್ದಾರೆ. ಈ ಬಗ್ಗೆ ಮೋದಿ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಅಂತೆಯೇ ಸೌದಿಯ ತೈಲ ಬಾವಿಯ ಮೇಲೆ ಡ್ರೋನ್‌ ದಾಳಿಯಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಬಗ್ಗೆಯೂ ಉಭಯ ನಾಯಕರು ಚರ್ಚಿಸುವ ಸಾಧ್ಯತೆಯಿದೆ. ಈ ಮಾತುಗಳಿಂದ ಹೊರಹೊಮ್ಮುವ ಸಕರಾತ್ಮಕ ಫ‌ಲಿತಾಂಶ ಎರಡೂ ದೇಶಗಳಿಗೆ ಪ್ರಯೋಜಕನಕಾರಿಯಾಗಬಹುದು.

ಇವೆಲ್ಲಗಳಿಗಿಂತ ಮಿಗಿಲಾಗಿ ಹೂಸ್ಟನ್‌ ಕಾರ್ಯಕ್ರಮ ನೆರೆ ರಾಷ್ಟ್ರ ಪಾಕಿಸ್ತಾನ ಹಾಗೂ ಅದರ ಸರ್ವಋತು ಮಿತ್ರ ಚೀನಾಕ್ಕೊಂದು ಬಲವಾದ ಸಂದೇಶ ನೀಡುವುದು ಖಚಿತ. ಏನೇ ತಿಪ್ಪರಲಾಗ ಹಾಕಿದರೂ ಜಾಗತಿಕ ವೇದಿಕೆಯಲ್ಲಿ ಭಾರತದ ಪಾರಮ್ಯವನ್ನು ತಡೆಯಲು ಸಾಧ್ಯವಿಲ್ಲ ಹಾಗೂ ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯ ಅಬಾಧಿತ ಎಂಬ ಸ್ಪಷ್ಟ ಸಂದೇಶ ಸದಾ ಭಾರತದ ವಿರುದ್ಧ ಮಸಲತ್ತು ನಡೆಸುತ್ತಿರುವ ಈ ಎರಡು ದೇಶಗಳಿಗೆ ಸಿಗಲಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.