ಒಂದೇ ವೇದಿಕೆಯಲ್ಲಿ ಮೋದಿ-ಟ್ರಂಪ್‌, ಐತಿಹಾಸಿಕ ಘಟನೆ


Team Udayavani, Sep 17, 2019, 5:35 AM IST

modi-trump

ಹೂಸ್ಟನ್‌ ಕಾರ್ಯಕ್ರಮ ಪಾಕ್‌ ಹಾಗೂ ಚೀನಾಕ್ಕೊಂದು ಬಲವಾದ ಸಂದೇಶ ನೀಡುವುದು ಖಚಿತ. ಏನೇ ಮಾಡಿ ದರೂ ಜಾಗತಿಕ ವೇದಿಕೆಯಲ್ಲಿ ಭಾರತದ ಪಾರಮ್ಯವನ್ನು ತಡೆಯಲು ಸಾಧ್ಯವಿಲ್ಲ ಎಂಬ ಸಂದೇಶ ಇದರಲ್ಲಿದೆ.

ಟೆಕ್ಸಾಸ್‌ನ ಹೂಸ್ಟನ್‌ನಲ್ಲಿ ಭಾರತೀಯ ಸಮುದಾಯದವರು ಹಮ್ಮಿಕೊಂಡಿರುವ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೂ ಭಾಗವಹಿಸಲಿರುವುದು ಒಂದು ಐತಿಹಾಸಿಕ ಘಟನೆಯಾಗಲಿದೆ. ಉಭಯ ದೇಶಗಳ ನಡುವಿನ ಸ್ನೇಹ ಈ ಮೂಲಕ ಮತ್ತಷ್ಟು ಗಟ್ಟಿಗೊಳ್ಳಲಿರುವುದು ಮಾತ್ರವಲ್ಲದೆ ಇನ್ನೂ ಅನೇಕ ಕಾರಣಗಳಿಗೆ ಸೆ. 22ರಂದು ನಡೆಯಲಿರುವ ಈ ಕಾರ್ಯಕ್ರಮ ಮುಖ್ಯವಾಗುತ್ತದೆ.

ಅಮೆರಿಕದಲ್ಲಿ ಅಲ್ಲಿನ ಅಧ್ಯಕ್ಷರೊಬ್ಬರು ಒಂದೇ ಕಡೆ 50,000 ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಲಿರುವುದು ಇದೇ ಪ್ರಥಮ.ಕಾಶ್ಮೀರ ವಿವಾದ ಬಗೆಹರಿಸುವ ಸಲುವಾಗಿ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ಟ್ರಂಪ್‌ ಕೆಲವು  ಬಾರಿ ಮಂಡಿಸಿದಾಗ ಭಾರತ ಮೂರನೆಯವರ ಹಸ್ತಕ್ಷೇಪವನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಜತೆಗೆ ಜಮ್ಮು-ಕಾಶ್ಮೀರದ 370ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯ ಕುರಿತು ಅಮೆರಿಕದ ಕೆಲವು ಸಂಸದರು ಭಾರೀ ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಭಾರತದ ಬಗ್ಗೆ ಅಮೆರಿಕದ ಮನಸ್ಸಿನಲ್ಲಿ ಕಹಿ ಭಾವನೆ ಇದೆಯೇ ಎಂಬ ಅನುಮಾನವೊಂದು ಇತ್ತು.ಇದೀಗ ಮೋದಿ ಜತೆಗೆ ಟ್ರಂಪ್‌ ವೇದಿಕೆ ಹಂಚಿಕೊಳ್ಳಲು ಒಪ್ಪಿರುವುದರಿಂದ ಈ ಅನುಮಾನ ದೂರವಾಗಿದೆ. ಈ ಹಿನ್ನೆಲೆಯಲ್ಲಿ ಹೂಸ್ಟನ್‌ ಕಾರ್ಯಕ್ರಮಕ್ಕೆ ಬರೀ ಸ್ನೇಹಾಚಾರ ಮಾತ್ರವಲ್ಲದೆ ರಾಜತಾಂತ್ರಿಕವಾದ ಇನ್ನೊಂದು ಆಯಾಮವೂ ಇದೆ.

ಅಮೆರಿಕದಲ್ಲಿ ಮೋದಿ ಭಾರತೀಯ ಸಮುದಾಯದವರ ಬೃಹತ್‌ ಸಭೆಯಲ್ಲಿ ಭಾಗವಹಿಸುತ್ತಿರುವುದು ಇದು ಮೂರನೇ ಬಾರಿ. 2014ರಲ್ಲಿ ಪ್ರಧಾನಿಯಾದ ಬೆನ್ನಿಗೆ ನ್ಯೂಯಾರ್ಕ್‌ನ ಮ್ಯಾಡಿಸನ್‌ ಸ್ಕ್ವೇರ್‌ ಗಾರ್ಡನ್‌ನಲ್ಲಿ ಮತ್ತು 2016ರಲ್ಲಿ ಸಿಲಿಕಾನ್‌ ವ್ಯಾಲಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಈ ಸಭೆಗಳಲ್ಲಿ ಸುಮಾರು 20,000 ಜನರಷ್ಟೇ ಇದ್ದರು. ಈ ದೃಷ್ಟಿಯಿಂದಲೂ ಮೂರನೇ ಸಾರ್ವಜನಿಕ ಸಭೆ ಮಹತ್ವದ್ದಾಗಲಿದೆ.

ಇತ್ತೀಚೆಗಿನ ವರ್ಷಗಳಲ್ಲಿ ಜಗತ್ತಿನ ಎರಡು ಬೃಹತ್‌ ಪ್ರಜಾಪ್ರಭುತ್ವ ದೇಶಗಳ ಪ್ರಮುಖರು ಸಾರ್ವಜನಿಕ ಸಭೆಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಉದಾಹರಣೆಯಿಲ್ಲ. ಈ ದೃಷ್ಟಿಯಿಂದಲೂ ಹೂಸ್ಟನ್‌ ಕಾರ್ಯಕ್ರಮ ಜಗತ್ತಿನಾದ್ಯಂತ ಕುತೂಹಲ ಮೂಡಿಸಿದೆ.

ಅಮೆರಿಕ ಮತ್ತು ಭಾರತದ ಜನರ ನಡುವಿನ ಬಾಂಧವ್ಯವನ್ನು ಮತ್ತು ಜಗತ್ತಿನ ಎರಡು ಅತಿ ಹಳೆಯ ಪ್ರಜಾಪ್ರಭುತ್ವ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಸಿಕ್ಕಿರುವ ಅಪೂರ್ವ ಅವಕಾಶ ಇದಾಗಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ರಾಜತಾಂತ್ರಿಕ ಜಾಣ್ಮೆಯನ್ನು ನಾವು ತೋರಿಸಬೇಕು.

ಚೀನಾ-ಅಮೆರಿಕ ದರ ಸಮರದಿಂದಾಗಿ ಉಂಟಾಗಿರುವ ವಾಣಿಜ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಕೂಡ ಇದು ಸುಸಂದರ್ಭ. ದರ ಸಮರದ ಪರಿಣಾಮವಾಗಿ ಭಾರತದ ಮೇಲೂ ಟ್ರಂಪ್‌ ಹಲವು ನಿರ್ಬಂಧಗಳನ್ನು ಹೇರಿದ್ದಾರೆ. ಈ ಬಗ್ಗೆ ಮೋದಿ ಮಾತುಕತೆ ನಡೆಸುವ ನಿರೀಕ್ಷೆಯಿದೆ. ಅಂತೆಯೇ ಸೌದಿಯ ತೈಲ ಬಾವಿಯ ಮೇಲೆ ಡ್ರೋನ್‌ ದಾಳಿಯಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಬಗ್ಗೆಯೂ ಉಭಯ ನಾಯಕರು ಚರ್ಚಿಸುವ ಸಾಧ್ಯತೆಯಿದೆ. ಈ ಮಾತುಗಳಿಂದ ಹೊರಹೊಮ್ಮುವ ಸಕರಾತ್ಮಕ ಫ‌ಲಿತಾಂಶ ಎರಡೂ ದೇಶಗಳಿಗೆ ಪ್ರಯೋಜಕನಕಾರಿಯಾಗಬಹುದು.

ಇವೆಲ್ಲಗಳಿಗಿಂತ ಮಿಗಿಲಾಗಿ ಹೂಸ್ಟನ್‌ ಕಾರ್ಯಕ್ರಮ ನೆರೆ ರಾಷ್ಟ್ರ ಪಾಕಿಸ್ತಾನ ಹಾಗೂ ಅದರ ಸರ್ವಋತು ಮಿತ್ರ ಚೀನಾಕ್ಕೊಂದು ಬಲವಾದ ಸಂದೇಶ ನೀಡುವುದು ಖಚಿತ. ಏನೇ ತಿಪ್ಪರಲಾಗ ಹಾಕಿದರೂ ಜಾಗತಿಕ ವೇದಿಕೆಯಲ್ಲಿ ಭಾರತದ ಪಾರಮ್ಯವನ್ನು ತಡೆಯಲು ಸಾಧ್ಯವಿಲ್ಲ ಹಾಗೂ ಅಮೆರಿಕ ಮತ್ತು ಭಾರತ ನಡುವಿನ ಬಾಂಧವ್ಯ ಅಬಾಧಿತ ಎಂಬ ಸ್ಪಷ್ಟ ಸಂದೇಶ ಸದಾ ಭಾರತದ ವಿರುದ್ಧ ಮಸಲತ್ತು ನಡೆಸುತ್ತಿರುವ ಈ ಎರಡು ದೇಶಗಳಿಗೆ ಸಿಗಲಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.