Monkey Disease; ರಾಜ್ಯದಲ್ಲಿ ಹೆಚ್ಚುತ್ತಿರುವ ಕೆಎಫ್ ಡಿ: ನಿರ್ಲಕ್ಷ್ಯ ಸಲ್ಲ


Team Udayavani, Feb 21, 2024, 6:15 AM IST

Monkey Disease; ರಾಜ್ಯದಲ್ಲಿ ಹೆಚ್ಚುತ್ತಿರುವ ಕೆಎಫ್ ಡಿ: ನಿರ್ಲಕ್ಷ್ಯ ಸಲ್ಲ

ರಾಜ್ಯದಲ್ಲಿ “ಮಂಗನ ಕಾಯಿಲೆ’ ಎಂದು ಸಾಮಾನ್ಯವಾಗಿ ಕರೆಯಲಾಗುವ ಕೆಎಫ್ ಡಿ ಸೋಂಕಿಗೆ ಗುರಿಯಾದವರ ಸಂಖ್ಯೆ ನೂರು ದಾಟಿರುವುದು ಆತಂಕಕಾರಿ ಬೆಳವಣಿಗೆ. ಕಳೆದ ಕೆಲವು ವರ್ಷಗಳಲ್ಲಿ ಕಾಣಿಸಿಕೊಳ್ಳದಿದ್ದ ಕೆಎಫ್ ಡಿ ಈ ವರ್ಷ ಮತ್ತೆ ಮಲೆನಾಡಿನಲ್ಲಿ ಪತ್ತೆಯಾಗಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಕೆಎಫ್ ಡಿ ಪೀಡಿತ ಎಂದು ಗುರುತಿಸಲಾದ 12 ಜಿಲ್ಲೆಗಳಿವೆಯಾದರೂ, ಈಗ ಬರೆ ಮೂರು ಜಿಲ್ಲೆಗಳಿಗಷ್ಟೇ ಇದು ವ್ಯಾಪಕವಾಗಿರುವುದು ಒಂದಿಷ್ಟು ಸಮಾಧಾನದ ಸಂಗತಿ. ಪ್ರಸಕ್ತ ವರ್ಷ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಂಕು ತೀವ್ರಗತಿಯಲ್ಲಿ ಹಬ್ಬುತ್ತಿದ್ದು, ಈ ತನಕ 4,080 ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಸೋಮವಾರದ ತನಕ 103 ಜನರಿಗೆ ಸೋಂಕು ದೃಢವಾಗಿದೆ.

ದುರಂತವೆಂದರೆ, ಈ ಕಾಯಿಲೆ ಈ ಭಾಗದಲ್ಲಿ ಪತ್ತೆಯಾಗಿ ಅರುವತ್ತು ವರ್ಷಗಳು ಕಳೆದರೂ ಇನ್ನೂ ಅದಕ್ಕೆ ಸೂಕ್ತ ಲಸಿಕೆ ಮತ್ತು ಚಿಕಿತ್ಸೆಗೆ ಸರಕಾರಗಳು ವ್ಯವಸ್ಥೆ ಮಾಡದೇ ಇರುವುದು. ಕೋವಿಡ್‌ನ‌ಂಥ ಮಹಾಮಾರಿಗೆ ಕೆಲವೇ ತಿಂಗಳಲ್ಲಿ ಲಸಿಕೆ ಕಂಡುಹಿಡಿದ ನಮ್ಮ ದೇಶದಲ್ಲಿ ಕೆಎಫ್ಡಿಯಂಥ ಸಮಸ್ಯೆಗೆ ಇನ್ನೂ ಲಸಿಕೆಯನ್ನು ಮರು ಆವಿಷ್ಕಾರ ಮಾಡ ಲಾಗದೇ ಇರುವುದು ನಾಚಿಕೆಗೇಡು. ಇನ್ನೂ ಅಪಮಾನಕಾರಿ ಸಂಗತಿ ಎಂದರೆ, ಈ ಬಗ್ಗೆ ಸಂಶೋಧನೆ ನಡೆಸಲು ಈ ಭಾಗದಲ್ಲಿ ಒಂದೇ ಒಂದು ಕೇಂದ್ರವನ್ನು ಸ್ಥಾಸಲು ಸರಕಾರಗಳು ವಿಫ‌ಲವಾಗಿರುವುದು. ಜನ ಸಾಮಾ ನ್ಯರ ಬದುಕಿನ ಬಗ್ಗೆ ಆಡಳಿತಾರೂಢರಿಗೆ ಇರುವ ಕಳಕಳಿಯನ್ನು ಇದು ಸೂಚಿಸುತ್ತದೆ.
ಹಿಂದೆ ಕೇಂದ್ರ ಸರಕಾರ “ಒನ್‌ ಹೆಲ್ತ್‌’ ಯೋಜನೆಯಡಿ ಕೆಎಫ್ಡಿ ಕುರಿತು ಸಂಶೋಧನೆ ಕೈಗೊಳ್ಳಲಿದೆ ಎಂಬ ವರದಿಗಳು ಬಂದಿದ್ದವು. ಆದರೆ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಇದು ಕಾರ್ಯಸಾಧುವಾಗಲೇ ಇಲ್ಲ. ಈಗ ಶಿರಸಿ ಹಾಗೂ ಸಾಗರದಲ್ಲಿ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಸರಕಾರ ಮುಂದಾಗಿರುವುದು ಶ್ಲಾಘನೀಯ.

ಈ ಸಲ ಕೆಎಫ್ ಡಿ ತೀವ್ರವಾಗಿ ಹರಡುತ್ತಿರುವುದು ಈ ಭಾಗದಲ್ಲಿ ಮತ್ತಷ್ಟು ಭಯಕ್ಕೆ ಕಾರಣವಾಗಿದೆ. ಅಡಿಕೆ ಕುಯಿಲಿನ ಸಂದರ್ಭದಲ್ಲಿ ಈ ವೈರಸ್‌ ಹಬ್ಬುತ್ತಿದೆ ಎನ್ನುವುದು ಈಚೆಗೆ ಬಾಲಕಿಯೊಬ್ಬಳು ಸಾವನ್ನಪ್ಪಿರುವುದರಿಂದ ಖಚಿತವಾಗಿದೆ. ಕೊಪ್ಪದಲ್ಲಿ ತೋಟಕ್ಕೆ ಕೆಲಸಕ್ಕೆಂದು ಬಂದಿದ್ದ ಉತ್ತರ ಭಾರತದ ಕಾರ್ಮಿಕರಲ್ಲೂ ಸೋಂಕು ಕಾಣಿಸಿಕೊಂಡಿದೆ. ಇದನ್ನೆಲ್ಲ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಜನಸಾಮಾನ್ಯರಿಗೆ ಕೆಎಫ್ಡಿ ಸೋಂಕು ಹೇಗೆ ಬರುತ್ತದೆ ಎನ್ನುವ ಸಾಮಾನ್ಯ ಮಾಹಿತಿಯೂ ಇಲ್ಲದೆ ಇರುವುದನ್ನು ನೋಡಿದರೆ ನಮ್ಮ ಆರೋಗ್ಯ ಇಲಾಖೆ ಈ ಕುರಿತು ಯಾವ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿದೆ ಎನ್ನುವುದಕ್ಕೆ ಕನ್ನಡಿ ಹಿಡಿಯುತ್ತದೆ. ಲಸಿಕೆ ಹಾಗೂ ಚಿಕಿತ್ಸೆಯ ಜತೆಗೆ ಈ ಸೋಂಕಿನ ಕುರಿತು ಜನಸಾಮಾನ್ಯರಲ್ಲಿ ಸರಿಯಾದ ಜಾಗೃತಿ ಮೂಡಿಸುವ ಕೆಲಸ ಆದ್ಯತೆಯಲ್ಲಿ ನಡೆಯಬೇಕಿದೆ. ಶಾಲಾ ಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈ ಭಾಗದಲ್ಲಿ ಅನಾರೋಗ್ಯದ ಗುಣಲಕ್ಷಣ ಕಾಣಿಸಿಕೊಂಡ ಕೂಡಲೇ ತಡ ಮಾಡದೆ ತಪಾಸಣೆ ಹಾಗೂ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕಾರ್ಯತತ್ಪರವಾಗಬೇಕು ಹಾಗೂ ಇದಕ್ಕೆ ಜನರ ಸಹಕಾರವೂ ಬೇಕು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.