ರೇಟಿಂಗ್‌ ಏಜೆನ್ಸಿಗಳ ಲೆಕ್ಕಾಚಾರ ತತ್ತರಿಸಿದ ಅರ್ಥವ್ಯವಸ್ಥೆಗಳು


Team Udayavani, May 12, 2020, 5:23 AM IST

ರೇಟಿಂಗ್‌ ಏಜೆನ್ಸಿಗಳ ಲೆಕ್ಕಾಚಾರ ತತ್ತರಿಸಿದ ಅರ್ಥವ್ಯವಸ್ಥೆಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಾಗತಿಕ ಕ್ರೆಡಿಟ್‌ ರೇಟಿಂಗ್‌ ಏಜೆನ್ಸಿ ಮೂಡೀಸ್‌, ಈ ವರ್ಷ ಭಾರತದ ಅಭಿವೃದ್ಧಿ ದರ ಶೂನ್ಯವಿರಬಹುದು ಎಂದು ಹೇಳಿದೆ.

ಆದರೆ ಇದು ಅಚ್ಚರಿಹುಟ್ಟಿಸುವಂಥ ಸಂಗತಿಯೇನೂ ಅಲ್ಲ, ನಿರೀಕ್ಷಿತವೇ ಆಗಿದೆ. ಏಕೆಂದರೆ, ಭಾರತವೆಂದಷ್ಟೇ ಅಲ್ಲ, ಕೋವಿಡ್ ನಿಂದಾಗಿ ಬಹುತೇಕ ರಾಷ್ಟ್ರಗಳ ಅರ್ಥವ್ಯವಸ್ಥೆಯೇ ಬುಡಮೇಲಾಗಿಬಿಟ್ಟಿದೆ. ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಜತೆಗೆ, ಅಭಿವೃದ್ಧಿ ಹೊಂದಿದ ರಾಷ್ಟ್ರಗಳಾದ ಅಮೆರಿಕ, ಬ್ರಿಟನ್‌ ಕೂಡ ತತ್ತರಿಸಿಹೋಗಿವೆ.

ಅದರಲ್ಲೂ ಬ್ರಿಟನ್‌ನ ಅರ್ಥವ್ಯವಸ್ಥೆ ಯಾವ ಪರಿ ಪೆಟ್ಟು ತಿಂದಿದೆ ಎಂದರೆ, ಮುನ್ನೂರು ವರ್ಷಗಳಲ್ಲೇ ಕಾಣದಂಥ ಪತನವನ್ನು ಅದು ಎದುರಿಸಲಿದೆ ಎಂದು ವಿತ್ತ ಸಂಸ್ಥೆಗಳು ಹೇಳುತ್ತಿವೆ.

ಈಗ ಎಲ್ಲಾ ರಾಷ್ಟ್ರಗಳ ಗಮನ ಹಾಗೂ ಶಕ್ತಿ ಸಂಪನ್ಮೂಲಗಳು ಈ ವೈರಸ್‌ನಿಂದ ಮುಕ್ತವಾಗುವುದರತ್ತ ಕೇಂದ್ರಿಕೃತವಾಗಿವೆ. ಪ್ರತಿ ದೇಶವೂ ಲಾಕ್‌ಡೌನ್‌ಗೆ ಒಳಗಾಗಿರುವುದರಿಂದ ಬಹುತೇಕ ಆರ್ಥಿಕ ಚಟುವಟಿಕೆಗಳೇ ನಿಂತುಹೋಗಿವೆ.

ಈ ಕಾರಣಕ್ಕಾಗಿಯೇ, ಕೋವಿಡ್ ಸಾಂಕ್ರಾಮಿಕದ ನಡುವೆಯೇ ಅರ್ಥವ್ಯವಸ್ಥೆಗೆ ಪುನರ್‌ ಚಾಲನೆ ಕೊಡಲು ಭಾರತ ಸೇರಿದಂತೆ ಅನೇಕ ರಾಷ್ಟ್ರಗಳು ಲಾಕ್‌ಡೌನ್‌ ನಿಯಮಗಳಲ್ಲಿ ಬದಲಾವಣೆಗಳನ್ನು ತಂದಿವೆ.

ಹಾಗೆಂದು, ರೇಟಿಂಗ್‌ಗಳ ಬಗ್ಗೆ ಸದ್ಯಕ್ಕೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಭಾವಿಸಬಾರದು. ಅವು ಭವಿಷ್ಯದ ದಿಕ್ಸೂಚಿಯಾಗಿದ್ದು, ಮುಂಬರುವ ಸವಾಲುಗಳ ಅಗಾಧತೆಯನ್ನು ಎದುರಿಡುತ್ತವೆ.

ವಿದೇಶಿ ಹೂಡಿಕೆದಾರರು ಕೂಡ ಮೂಡೀಸ್‌ನಂಥ ರೇಟಿಂಗ್‌ ಏಜೆನ್ಸಿಗಳತ್ತ ಹೆಚ್ಚು ಗಮನಕೊಡುತ್ತಾರೆ ಎನ್ನುವುದನ್ನು ನಾವು ಮರೆಯುವಂತಿಲ್ಲ. ನಿಸ್ಸಂಶಯವಾಗಿಯೂ ಶೂನ್ಯ ಅಭಿವೃದ್ಧಿ ದರವು ದೇಶಕ್ಕೆ ಒಳ್ಳೆಯದಂತೂ ಅಲ್ಲ.

ಆದರೆ ಇದೇ ವೇಳೆಯಲ್ಲೆ, ಮೂಡೀಸ್‌ 2021-22ರಲ್ಲಿ ಜಿಡಿಪಿ ಬೆಳವಣಿಗೆ ದರವು 6 ಪ್ರತಿಶತಕ್ಕಿಂತಲೂ ಅಧಿಕವಿರುತ್ತದೆಂಬ ಭರವಸೆಯ ಮಾತನ್ನೂ ಆಡಿದೆ. ಆದರೆ ಇಷ್ಟು ಕಡಿಮೆ ಅವಧಿಯಲ್ಲೇ ಎಲ್ಲವೂ ಹಠಾತ್ತನೆ ಸರಿಯಾಗಿಬಿಡಲು ಸಾಧ್ಯವಿಲ್ಲ ಎಂದು ಪರಿಣತರು ಹೇಳುತ್ತಾರೆ.

ದೇಶದಲ್ಲಿ ಲಾಕ್‌ಡೌನ್‌ ಅನಂತರದಿಂದ ಬಹುತೇಕ ಚಿಕ್ಕ-ದೊಡ್ಡ ಉದ್ಯೋಗಗಳು ಬಂದ್‌ ಆಗಿವೆ. ಇದರಿಂದಾಗಿ ಆರ್ಥಿಕ ಚಕ್ರವೂ ನಿಂತಿದೆ. ಇನ್ನೊಂದೆಡೆ ಕೋಟ್ಯಂತರ ಜನರ ತಲೆಯ ಮೇಲೆ ನಿರುದ್ಯೋಗದ ತೂಗುಗತ್ತಿಯೂ ನೇತಾಡುತ್ತಿದೆ.

ಎಲ್ಲಾ ಕ್ಷೇತ್ರಗಳೂ ಸಂಪೂರ್ಣವಾಗಿ ಸಕ್ರಿಯವಾಗಲು ಇನ್ನು ಎಷ್ಟು ದಿನ ಹಿಡಿಯುತ್ತದೋ ತಿಳಿಯದು. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುಂದಿನ ನಡೆಯ ಬಗ್ಗೆ ವ್ಯಾಪಕ ಚಿಂತನೆಯನ್ನಂತೂ ನಡೆಸಿವೆ. ಎಲ್ಲಾ ಉದ್ಯೋಗ ವಲಯಗಳೂ ಹಳಿಗೆ ಮರಳಿದ ಅನಂತರವಷ್ಟೇ ಭಾರತದ ಆರ್ಥಿಕತೆ ನಿಧಾನಕ್ಕೆ ವೇಗ ಪಡೆಯಲು ಸಾಧ್ಯ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.