ಮೋಟಾರ್‌ ವಾಹನ ತಿದ್ದುಪಡಿ ಬಿಲ್ : ರಸ್ತೆ ಸುರಕ್ಷತೆಯ ಸವಾಲು:


Team Udayavani, Jul 18, 2019, 5:21 AM IST

u-36

ದೇಶದಲ್ಲಿನ ರಸ್ತೆ ಅಪಘಾತಗಳ ಗ್ರಾಫ್ ಮೇಲೇರುತ್ತಿರುವುದನ್ನು ನೋಡಿದರೆ, ರಸ್ತೆ ಸುರಕ್ಷತೆಯ ಬಗ್ಗೆ ನಮ್ಮ ಒಟ್ಟಾರೆ ವ್ಯವಸ್ಥೆ ಎಷ್ಟು ನಿಷ್ಕಾಳಜಿಯಿಂದಿದೆ ಎನ್ನುವುದು ಅರ್ಥವಾಗುತ್ತದೆ. ಪ್ರತಿ ನಿತ್ಯವೂ ತೀವ್ರತರ ರಸ್ತೆ ಅಪಘಾತಗಳ ಸುದ್ದಿ ಒಂದಲ್ಲ ಒಂದು ಕಡೆಯಿಂದ ಕೇಳಿಬರುತ್ತಲೇ ಇರುತ್ತದೆ. ಕಳೆದ ವರ್ಷದ ಡಿಸೆಂಬರ್‌ ತಿಂಗಳಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಪಾಂಡವಪುರ ಸಮೀಪದ ವಿ.ಸಿ. ನಾಲೆಗೆ ಖಾಸಗಿ ಬಸ್ಸೊಂದು ಉರುಳಿ ಮೂವತ್ತು ಜನ ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ನಮ್ಮ ರಾಜ್ಯ ಸಾಕ್ಷಿಯಾಯಿತು. ನಮ್ಮಲ್ಲಿ ಅಂತಲ್ಲ, ಪ್ರತಿ ರಾಜ್ಯದಲ್ಲೂ ಈ ರೀತಿಯ ಅವಗಢಗಳು ವರದಿಯಾಗುತ್ತಲೇ ಇರುತ್ತವೆ. ಕಳೆದ ತಿಂಗಳಷ್ಟೇ ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಬಸ್‌ ಅಪಘಾತಗಳಲ್ಲೂ ಬಹಳ ಸಂಖ್ಯೆಯಲ್ಲಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಎರಡೂ ದುರ್ಘ‌ಟನೆಗಳಲ್ಲಿದ್ದ ಒಂದು ಸಾಮ್ಯತೆಯೇನೆಂದರೆ, ಎರಡರಲ್ಲೂ ಪೂರ್ವನಿರ್ಧರಿತ ಕ್ಷಮತೆಗಿಂತ ಮೂರು ಪಟ್ಟು ಹೆಚ್ಚು ಜನ ಪಯಣಿಸುತ್ತಿದ್ದರು ಎನ್ನುವುದು.

ಬಹುತೇಕ ಅಪಘಾತಗಳು ಚಾಲಕನ ನಿರ್ಲಕ್ಷ್ಯದಿಂದಾಗಿಯೇ ಆಗುತ್ತಿವೆ. ಈ ಸಮಸ್ಯೆಯನ್ನು ಹೇಗೆ ತಗ್ಗಿಸುವುದು ಎನ್ನುವುದೇ ಈಗ ಇರುವ ಸವಾಲು. ಭಾರತದಲ್ಲಿ ರಸ್ಥೆ ಸುರಕ್ಷತೆ ಮತ್ತು ಪರಿವಾಹನ ಸಂಬಂಧಿತ ಕಾಯ್ದೆ-ಕಾನೂನುಗಳು ಹಳೆಯವೇ ಇವೆ. ಇದಕ್ಕಿಂತಲೂ ಗಂಭೀರ ಸಂಗತಿಯೆಂದರೆ, ಈ ಕಾನೂನುಗಳನ್ನೂ ಜನ ಅನಾಯಾಸವಾಗಿ ಉಲ್ಲಂಘಿಸುತ್ತಲೇ ಇದ್ದಾರೆ ಎನ್ನುವುದು. ಕಾನೂನಿನ ಬಗ್ಗೆ ಯಾರಿಗೂ ಭಯವೇ ಉಳಿದಿಲ್ಲ. ಹೀಗಾಗಿ ಎಲ್ಲಿಯವರೆಗೂ ಕಾನೂನಿನ ಪುನರ್‌ ರಚನೆ ಆಗುವುದಿಲ್ಲವೋ, ನವ ಕಾನೂನುಗಳು ಕಟ್ಟು ನಿಟ್ಟಾಗಿ ಜಾರಿಯಾಗುವುದಿಲ್ಲವೋ ಅಲ್ಲಿಯವರೆಗೂ ಅವಘಡಗಳ ಪ್ರಮಾಣವೇನೂ ತಗ್ಗುವುದಿಲ್ಲ.

ಈ ಹಿನ್ನೆಲೆಯಲ್ಲಿ ಸೋಮವಾರ ಲೋಕಸಭೆಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿಯವರು ಮಂಡಿಸಿದ ಮೋಟಾರ್‌ ವಾಹನ ತಿದ್ದುಪಡಿ ವಿಧೇಯಕ 2019 ಶ್ಲಾಘನೀಯ. ವಾಹನ, ರಸ್ತೆ ಮತ್ತು ಚಾಲಕರಿಗೆ ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮಗಳ ಪ್ರಸ್ತಾಪಗಳು ಇದರಲ್ಲಿವೆ. ವಿಶೇಷ ಸಂಗತಿಯೆಂದರೆ, ಈ ವಿಧೇಯಕದಲ್ಲಿ ಚಾಲನಾ ಪರವಾನಗಿ ಸಂಬಂಧಿ ನಿಯಮಗಳನ್ನು ಮತ್ತಷ್ಟು ಬಲಿಷ್ಠಗೊಳಿಸುವ ಪ್ರಸ್ತಾಪವಿದೆ. ದೇಶದಲ್ಲಿನ 30 ಪ್ರತಿಶತಕ್ಕೂ ಹೆಚ್ಚು ಡ್ರೈವಿಂಗ್‌ ಲೈಸೆನ್ಸ್‌ಗಳು ನಕಲಿ ಎಂದು ಖುದ್ದು ಸಚಿವರೇ ಒಪ್ಪಿಕೊಂಡಿದ್ದಾರೆ. ವಾಸ್ತವದಲ್ಲಿ ಈ ಪ್ರಮಾಣ ಇನ್ನೂ ಅಧಿಕವೇ ಇರುವ ಸಾಧ್ಯತೆ ಇದೆ. ತಿದ್ದುಪಡಿ ವಿಧೇಯಕದಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಲಾಗೂ ಮಾಡುವ ಪ್ರಸ್ತಾಪವಿದೆ. ಅಲ್ಲದೇ ಈ ವಿಧೇಯಕವು: ವಾಹನಗಳಲ್ಲಿ ತಾಂತ್ರಿಕ ದೋಷವಿದ್ದರೆ ಸಂಬಂಧಿತ ನಿರ್ಮಾತೃ ಕಂಪನಿಯು ಅದನ್ನು ವಾಪಸ್‌ ಪಡೆಯಬೇಕಾಗುತ್ತದೆ ಎಂದೂ, ಹೊಸ ವಾಹನಗಳ ಪರೀಕ್ಷಣಾ ಪ್ರಕ್ರಿಯೆಯನ್ನು ಬದಲಿಸಿ, ಅದನ್ನು ಇನ್ನಷ್ಟು ಬಿಗಿಗೋಳಿಸಲಾಗುತ್ತದೆಂದೂ ಹೇಳುತ್ತದೆ. ಇನ್ನು ಟಯರ್‌ ಕಂಪನಿಗಳನ್ನೂ ಉತ್ತರಾದಿಯನ್ನಾಗಿಸುವ ಪ್ರಸ್ತಾಪವಿದೆ. ಒಂದು ವೇಳೆ ವಾಹನ ಅಥವಾ ಟಯರ್‌ನಲ್ಲಿನ ದೋಷದಿಂದಾಗಿ ಅವಘಡ ನಡೆದರೆ, ಸಂಬಂಧಿಸಿದ ಕಂಪನಿಗಳೇ ಕಾರಣೀಕರ್ತವಾಗುತ್ತವೆ. ಇದೇ ರೀತಿಯಲ್ಲೇ ಹೆದ್ದಾರಿ ನಿರ್ಮಾಣ ಕಂಪನಿಗಳ ಸುತ್ತಲೂ ಬಿಗಿ ನಿಯಮಗಳನ್ನು ರಚಿಸಲಾಗಿದೆ.

ನಕಲಿ ಲೈಸೆನ್ಸ್‌ ಮಾಡಿಸುವ ದಂಧೆಯ ಬೆನ್ನು ಹತ್ತಿದರೆ ದೇಶದ ಲಕ್ಷಾಂತರ ಆರ್‌ಟಿಒ ಕಚೇರಿಗಳಲ್ಲಿನ ತಿಮಿಂಗಲಗಳು ಸಿಕ್ಕಿ ಬೀಳುವುದು ನಿಶ್ಚಿತ. ಇನ್ನು, ಅವಘಡದ ಸಮಯದಲ್ಲಿ ತಪ್ಪೆಸಗಿದ ಜನರಿಗೆ/ ಕಂಪನಿಗಳಿಗೆ ವಿಧಿಸಲು ಪ್ರಸ್ತಾಪಿಸಲಾಗಿರುವ ಭಾರೀ ಮೊತ್ತದ ದಂಡದ ಪ್ರಮಾಣವೇ ಸಾಕು, ಜನರಲ್ಲಿ ಎಚ್ಚರಿಕೆ- ಭಯ ಹುಟ್ಟಿಸಲು. ಆದರೆ, ಇದಕ್ಕಿಂತಲೂ ಮುಖ್ಯವಾಗಿ ಕಾನೂನಿನ ಪ್ರಾಮಾಣಿಕ ಅನುಷ್ಠಾನವೂ ಮುಖ್ಯವಾಗುತ್ತದೆ. ದುರಂತವೆಂದರೆ, ರಸ್ತೆ ಸುರಕ್ಷತೆಯಂಥ ಮಹತ್ತರ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ತಾಳಮೇಳವೇ ಇಲ್ಲದಂತಾಗಿದೆ. ಈ ಕಾರಣಕ್ಕಾಗಿಯೇ ಮೋಟಾರ್‌ ವಾಹನ ವಿಧೇಯಕಕ್ಕೆ ವಿರೋಧ ಎದುರಾಗಿದೆ. ಈ ಕಾನೂನು ತಮ್ಮ ಅಧಿಕಾರ ಕಸಿದುಕೊಳ್ಳಲಿದೆ ಎನ್ನುವುದು ರಾಜ್ಯಗಳ ವಾದ. ಕಳೆದ ಬಾರಿಯೂ ಲೋಕಸಭೆಯಲ್ಲಿ ಈ ವಿಧೇಯಕ ಅನುಮೋದನೆಗೊಂಡಿತ್ತು, ಆದರೆ ರಾಜ್ಯಸಭೆಯಲ್ಲಿ ಪೆಟ್ಟು ತಿಂದಿತು. ಆದಾಗ್ಯೂ ಇದರ ಅನುಷ್ಠಾನ ರಾಜ್ಯಗಳಿಗೆ ಬಿಟ್ಟ ವಿಷಯ ಕೇಂದ್ರ ಸಾರಿಗೆ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಅನುಷ್ಠಾನದ ವಿಷಯದಲ್ಲೇ ಭಿನ್ನಾಭಿಪ್ರಾಯ ಇದ್ದಾಗ, ರಸ್ತೆ ಸುರಕ್ಷತೆಯ ವಿಚಾರದಲ್ಲಿ ಬಲಿಷ್ಠ ಕಾನೂನುಗಳು ರೂಪುಗೊಳ್ಳುವುದಾದರೂ ಹೇಗೆ, ಅವು ಅನುಷ್ಠಾನವಾಗುವುದಾದರೂ ಹೇಗೆ ಎನ್ನುವ ಪ್ರಶ್ನೆಯೂ ಉದ್ಭವವಾಗುತ್ತದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.