ಚಿತ್ರಮಂದಿರಗಳ ಪೂರ್ಣ ಪ್ರವೇಶಕ್ಕೆ ಇದು ಸಕಾಲ


Team Udayavani, Sep 14, 2021, 6:10 AM IST

ಚಿತ್ರಮಂದಿರಗಳ ಪೂರ್ಣ ಪ್ರವೇಶಕ್ಕೆ ಇದು ಸಕಾಲ

ಶಾಲೆ ಆರಂಭವಾಗಿದೆ, ಬಸ್ಸುಗಳಲ್ಲಿ ಜನ ಹೌಸ್‌ಫ‌ುಲ್‌ ಪ್ರಯಾಣ ಮಾಡುತ್ತಿದ್ದಾರೆ. ಮಾರ್ಕೆಟ್‌, ರಸ್ತೆ, ಬೀದಿ ಎಲ್ಲಿ ನೋಡಿದರೂ ಜನ ತುಂಬಿ ತುಳುಕುತ್ತಿದ್ದಾರೆ. ಆದರೆ, ಚಿತ್ರಮಂದಿರಗಳು ಮಾತ್ರ ಖಾಲಿ ಇವೆ. ಇದಕ್ಕೆ ಕಾರಣ ಸರಕಾರ ಇನ್ನೂ ಚಿತ್ರಮಂದಿರಗಳಿಗೆ ಪೂರ್ಣ ಪ್ರವೇಶಾತಿಗೆ ಅನುಮತಿ ನೀಡದಿರುವುದು. ಶೀಘ್ರದಲ್ಲಿ ಸರಕಾರ ಪೂರ್ಣ ಪ್ರವೇಶಾತಿಗೆ ಅನುಮತಿ ನೀಡದಿದ್ದಲ್ಲಿ, ಕನ್ನಡ ಚಿತ್ರರಂಗ ಮತ್ತೆ ಸಂಕಷ್ಟಕ್ಕೆ ಒಳಗಾಗಲಿದೆ. ಚಿತ್ರೀಕರಣಕ್ಕೆ ಅನುಮತಿ ಸಿಕ್ಕರೂ ಕೊನೆಯ ಹಂತದ ಚಿತ್ರೀಕರಣದಲ್ಲಿರುವ ಸಿನೆಮಾಗಳ ನಿರ್ಮಾಪಕರು ಚಿತ್ರೀಕರಣ ಮುಂದುವರೆಸಲು ಆಸಕ್ತಿ ತೋರುತ್ತಿಲ್ಲ. ಇದರ ನೇರ ಪರಿಣಾಮ ಸಿನೆಮಾ ಕಾರ್ಮಿಕರಿಂದ ಹಿಡಿದು ಕಲಾವಿದರು, ತಂತ್ರಜ್ಞರು, ಪೋಸ್ಟರ್‌ ಅಂಟಿಸುವ ವರ್ಗದವರೆಗೂ ತಟ್ಟುತ್ತದೆ. ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಸಿನೆಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಸ್ಟಾರ್‌ ಸಿನೆಮಾಗಳ ದೊಡ್ಡ ಪಟ್ಟಿಯೇ ಇದೆ. ಆದರೆ ಅವೆಲ್ಲವೂ ಚಿತ್ರಮಂದಿರಗಳ ಪೂರ್ಣ ಪ್ರಮಾಣದ ಪ್ರವೇಶಾತಿಗೆ ಕಾಯುತ್ತಿವೆ.

ಈಗಾಗಲೇ ಸರಕಾರ ಶೇ.50 ಸೀಟು ಭರ್ತಿಯೊಂದಿಗೆ ಪ್ರದರ್ಶನಕ್ಕೆ ಅನುಮತಿ ಕೊಟ್ಟಿದೆ. ಆದರೆ ಇದು ಚಿತ್ರರಂಗಕ್ಕೆ ಪೂರಕವಾಗಿಲ್ಲ. ಈ ನಿಟ್ಟಿನಲ್ಲಿ ಸರಕಾರ ಚಿತ್ರರಂಗದ ಬೆಂಬಲಕ್ಕೆ ನಿಲ್ಲಬೇಕಿದೆ. ಸದ್ಯ ಬಹುತೇಕ ಬೇರೆ ಕ್ಷೇತ್ರಗಳಿಗೆ ಪೂರ್ಣ ಪ್ರಮಾಣದ ಅನುಮತಿ ಸಿಕ್ಕಿದೆ. ಆದರೆ ಸಿನೆಮಾ ಮಂದಿ ಮಾತ್ರ ಹೌಸ್‌ಫ‌ುಲ್‌ ಪ್ರದರ್ಶನದ ಕನಸಿನಲ್ಲೇ ದಿನ ದೂಡುವಂತಾಗಿದೆ. ಇದು ಸಿನೆಮಾ ಮಂದಿಯ ಬೇಸರಕ್ಕೂ ಕಾರಣವಾಗಿದೆ. ಹೀಗಾದರೆ ಕಳೆದ ಒಂದೂವರೆ ವರ್ಷದಿಂದ ದೊಡ್ಡ ಮಟ್ಟದ ನಷ್ಟ ಅನುಭವಿಸಿಕೊಂಡು ಬಂದಿರುವ ಕನ್ನಡ ಚಿತ್ರರಂಗದ  ಚೇತರಿಸಿಕೊಳ್ಳೋದು ಕಷ್ಟ.  ಸಿನೆಮಾ ಬಿಡುಗಡೆಗೆ ಪೂರ್ಣ ಪ್ರಮಾಣದಲ್ಲಿ ಅನುಮತಿ ಸಿಗದೇ ಇರುವುದು ನಿರ್ಮಾಪಕ, ನಿರ್ದೇಶಕರಿಗೆ ಎಷ್ಟು ತೊಂದರೆಯೋ ಅದಕ್ಕಿಂತ ಹೆಚ್ಚಿನ ಹೊಡೆತ ಚಿತ್ರಮಂದಿರಗಳ ಮೇಲೂ ಬಿದ್ದಿದೆ. ಸದ್ಯ ಶೇ.50 ಪ್ರವೇಶಾತಿಯಲ್ಲಿ ಸಿನೆಮಾಗಳ ಪ್ರದರ್ಶನಕ್ಕೆ ಅನುಮತಿ ಸಿಕ್ಕಿದ್ದರೂ, ಇಲ್ಲಿಯವರೆಗೆ ಕೇವಲ ನಾಲ್ಕೇ ನಾಲ್ಕು ಹೊಸ ಸಿನೆಮಾಗಳು ಬಿಡುಗಡೆಯಾಗಿವೆ. ಅದೇ ಕಾರಣದಿಂದ ರಾಜ್ಯದ ಬಹುತೇಕ ಥಿಯೇಟರ್‌ಗಳಲ್ಲಿ ಒಂದು ರೀತಿಯ ಅಘೋಷಿತ ಲಾಕ್‌ಡೌನ್‌ ಇನ್ನೂ ಮುಂದುವರಿದಂತಿದೆ. ಸಿನೆಮಾಗಳ ಬಿಡುಗಡೆಯಿಲ್ಲದೆ ರಾಜ್ಯದ ಎಲ್ಲ ಥಿಯೇಟರ್‌ಗಳು ಬಿಕೋ ಎನ್ನುತ್ತಿವೆ. ಶೇ.50 ಪ್ರವೇಶಾತಿಯಲ್ಲಿ ಥಿಯೇಟರ್‌ ಬಾಗಿಲು ತೆಗೆದು ಕುಳಿತರೆ  ಬರುವ ಕಲೆಕ್ಷನ್‌ನಿಂದ  ಥಿಯೇಟರ್‌ಗಳ ನಿರ್ವಹಣ ವೆಚ್ಚವನ್ನೂ ಭರಿಸಲಾಗುವುದಿಲ್ಲ. ಇವೆಲ್ಲವನ್ನು ಸರಕಾರ ಮನಗಂಡು ಚಿತ್ರರಂಗದ ನೆರವಿಗೆ ಧಾವಿಸಬೇಕಿದೆ. ಚಿತ್ರಮಂದಿರಗಳಿಗೆ ಶೇ. 100 ಪ್ರವೇಶಕ್ಕೆ ಅನುಮತಿ ನೀಡುವುದು ಸರಕಾರ ಚಿತ್ರರಂಗಕ್ಕೆ ಮಾಡುವ ದೊಡ್ಡ ಸಹಾಯ ಎಂದು ನಟ ಶಿವ ರಾಜ್‌ಕುಮಾರ್‌ ಇತ್ತೀಚೆಗಷ್ಟೇ ಹೇಳಿದ್ದಾರೆ.

ಅದು ಸತ್ಯ ಕೂಡ. ಕಷ್ಟದಲ್ಲಿರುವ ಕಾರ್ಮಿಕರಿಗೆ ಒಂದಷ್ಟು ದಿನ ಸಹಾಯ ಮಾಡಬಹುದು. ಆದರೆ ಚಿತ್ರರಂಗ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡರೆ ತನ್ನಿಂತಾನೇ ಎಲ್ಲ ವ್ಯವಸ್ಥೆಗಳು ಸರಿ ಹೋಗುತ್ತವೆ. ಪ್ರತಿಯೊಬ್ಬರ ಜೀವನವನ್ನು ಅವರೇ ನಡೆಸಿಕೊಂಡು ಹೋಗುವಂತಾಗುತ್ತದೆ. ಸ್ಟಾರ್‌ಗಳ ಸಿನೆಮಾಗಳು ಕೂಡ ಬಿಡುಗಡೆಯಾಗುವ ಮೂಲಕ ಆರ್ಥಿಕವಾಗಿಯೂ ಚಿತ್ರರಂಗ ಪ್ರಬಲವಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಗಮನ ಹರಿಸಬೇಕಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.