ರಾಷ್ಟ್ರೀಯ ಆರೋಗ್ಯ ಸಮೀಕ್ಷೆ: ಸುಧಾರಿಸಬೇಕಿದೆ ಜನಜೀವನ


Team Udayavani, Dec 17, 2020, 6:02 AM IST

ರಾಷ್ಟ್ರೀಯ ಆರೋಗ್ಯ ಸಮೀಕ್ಷೆ: ಸುಧಾರಿಸಬೇಕಿದೆ ಜನಜೀವನ

ರಾಷ್ಟ್ರೀಯ ಆರೋಗ್ಯ ಸಮೀಕ್ಷೆಯ ಇತ್ತೀಚಿನ ವರದಿಯು ಅನೇಕ ದೃಷ್ಟಿಯಿಂದ ಮಹತ್ವ ಪಡೆದಿದೆ. ಆದಾಗ್ಯೂ 2015-2016ರ 4ನೇ ಸಮೀಕ್ಷೆಯ ಅನಂತರ ಬಂದಿರುವ ಈ 5ನೇ ಸಮೀಕ್ಷೆಯು ಕೋವಿಡ್‌ ಕಾರಣದಿಂದಾಗಿ ಎಲ್ಲ ರಾಜ್ಯಗಳಲ್ಲೂ ನಡೆದಿಲ್ಲ. ಕರ್ನಾಟಕ ಸೇರಿದಂತೆ 17 ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದಿದೆ. ಮುಂದಿನ ಆರು ತಿಂಗಳುಗಳಲ್ಲಿ ಉಳಿದ ರಾಜ್ಯಗಳಲ್ಲಿನ ಜನಜೀವನದ ವಿಭಿನ್ನ ಕ್ಷೇತ್ರಗಳ ಸಮೀಕ್ಷೆ ನಡೆದು ಪೂರ್ಣ ವರದಿ ಬರುವ ನಿರೀಕ್ಷೆಯಿದೆ. ಆದಾಗ್ಯೂ, ಈಗಿನ ವರದಿಯು ಕೋವಿಡ್‌ ಬರುವ ಮುನ್ನದ ದಿನಗಳನ್ನು ಆಧರಿಸಿದೆಯಾದರೂ ಹಲವು ಗಮನಾರ್ಹ ವಿಷಯಗಳತ್ತ ಬೆಳಕು ಚೆಲ್ಲುತ್ತಿದೆ.

ಉದಾಹರಣೆಗೆ ಭಾರತದಲ್ಲಿ ಅನೇಕ ರಾಜ್ಯಗಳಲ್ಲಿ ವಿದ್ಯುತ್‌ ಸೌಲಭ್ಯ ಪಡೆದ ಕುಟುಂಬಗಳ ಪ್ರಮಾಣ ಅಧಿಕವಾಗಿದೆ. ಇದಷ್ಟೇ ಅಲ್ಲದೇ, ಶುದ್ಧ ಕುಡಿಯುವ ನೀರು ಪಡೆಯುತ್ತಿರುವ ಕುಟುಂಬಗಳ ಸಂಖ್ಯೆಯಲ್ಲೂ ವೃದ್ಧಿಯಾಗಿದೆ. ಇನ್ನು ಶೌಚಾಲಯ ಸೌಲಭ್ಯ ಹಾಗೂ ಸ್ವತ್ಛ ಇಂಧನ ಲಭ್ಯತೆಯ ವಿಚಾರದಲ್ಲೂ ಸಮೀಕ್ಷೆಗೊಳಪಟ್ಟ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಿತಿ ಬಹಳ ಸುಧಾರಿಸಿದೆ.

ಆದರೆ ಇದೇ ವೇಳೆಯಲ್ಲೇ ಈ ವಲಯಗಳಲ್ಲಿ ಆಗಬೇಕಾದ ಕೆಲಸಗಳು ಇನ್ನೂ ಬಹಳಷ್ಟಿವೆ ಎನ್ನುವುದೂ ಇದರಿಂದ ವೇದ್ಯವಾಗುತ್ತದೆ. ಉದಾಹರಣೆಗೆ, ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಫ‌ಲಪ್ರದದ ಹೊರತಾಗಿಯೂ ಜನಸಂಖ್ಯೆಯ ಕಾಲು ಭಾಗದಷ್ಟು ಜನರು ಹೊಗೆರಹಿತ ಇಂಧನಗಳಿಂದ ವಂಚಿತರಾಗಿದ್ದಾರೆ. ಅಂತೆಯೇ ಸ್ವತ್ಛ ಭಾರತ ಅಭಿಯಾನದಡಿಯಲ್ಲಿ ಬಹುತೇಕ ಜನಸಂಖ್ಯೆಗೆ ಶೌಚಾಲಯ ಸೌಲಭ್ಯ ಸಿಕ್ಕಿದೆಯಾದರೂ ಕಾಲು ಭಾಗದಷ್ಟು ಕುಟುಂಬಗಳ ಮನೆಗಳಲ್ಲಿ ಪ್ರತ್ಯೇಕ ಶೌಚಾಲಯಗಳು ಇನ್ನೂ ಇಲ್ಲ. ಇಂಥ ಕುಟುಂಬಗಳು ಸಾಮೂಹಿಕ ಶೌಚಾಲಯಗಳನ್ನು ಅವಲಂಬಿಸಿವೆ. ಈಗಲೂ ಗ್ರಾಮೀಣ ಪ್ರದೇಶಗಳು ಬಯಲುಶೌಚ ಪದ್ಧತಿಯಿಂದ ಮುಕ್ತವಾಗಿಲ್ಲ ಎಂದು ಮಾಧ್ಯಮ ವರದಿಗಳು ಹೇಳುತ್ತಲೇ ಇವೆ. ಎಲ್ಲಕ್ಕಿಂತ ಕಳವಳ ಹುಟ್ಟಿಸುವ ಸಂಗತಿಯೆಂದರೆ, ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಠಿಕತೆ. 2015-16ರ ಸರ್ವೇಯಲ್ಲಿ ಈ ವಿಷಯದಲ್ಲಿ ಸುಧಾರಣೆ ಕಾಣಿಸಿಕೊಂಡಿತ್ತು. ಅಂದರೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಇಳಿಕೆಯಾಗಿತ್ತು. ಆದರೆ ಎನ್‌ಎಫ್ಎಎಚ್‌ಎಸ್‌ -5(ನೂತನ ವರದಿ) ಪ್ರಕಾರ, 13 ರಾಜ್ಯಗಳಲ್ಲಿ ವಯಸ್ಸಿಗೆ ತಕ್ಕಂಥ ಬೆಳವಣಿಗೆಯಿಲ್ಲದ ಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ.

ಈ ಕಾರಣಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯಸರಕಾರಗಳು ಈ ವಿಷಯವನ್ನು ಆದ್ಯತೆಯಾಗಿಸಿಕೊಂಡು ಮಕ್ಕಳ ದೈಹಿಕ ಆರೋಗ್ಯ ಸದೃಢವಾಗುವಂಥ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಾತ್ರಿಪಡಿಸುವ ಅಗತ್ಯವಿದೆ. ದೇಶದ ಯಾವ ಮಗುವೂ ಅಪೌಷ್ಟಿಕತೆಯಿಂದ ಬಳಲುವಂತಾಗಬಾರದು. ಇದರ ಜತೆಗೇ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ವರದಿಯು ಕೆಲವು ರಾಜ್ಯಗಳಲ್ಲಿ ಮಹಿಳೆಯರಲ್ಲಿ ಅತೀಕಡಿಮೆ ಸಾಕ್ಷರತೆ ಪ್ರಮಾಣವಿರುವುದನ್ನೂ ಪತ್ತೆಹಚ್ಚಿದೆ. ಒಟ್ಟಾರೆಯಾಗಿ ಈ ಎಲ್ಲ ಅಂಶಗಳನ್ನು ಆಯಾ ರಾಜ್ಯ ಸರಕಾರಗಳು ಗಂಭೀರವಾಗಿ ಪರಿಗಣಿಸಿ, ಜನಜೀವನ ಸುಧಾರಿಸುವ ನಿಟ್ಟಿನಲ್ಲಿ ಪೂರಕ ಹೆಜ್ಜೆಗಳನ್ನಿಡಲು ತಡಮಾಡಬಾರದು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.