ಸಂಪತ್ತು ಕ್ರೋಡೀಕರಣ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ


Team Udayavani, Aug 25, 2021, 6:00 AM IST

ಸಂಪತ್ತು ಕ್ರೋಡೀಕರಣ ಯೋಜನೆ ಸಮರ್ಪಕವಾಗಿ ಜಾರಿಯಾಗಲಿ

ಕೊರೊನಾ ಸೋಂಕು ಇಡೀ ಜಗತ್ತಿನ ಆರ್ಥಿಕತೆಯನ್ನು ಬುಡಮೇಲು ಮಾಡಿರುವುದು ಸುಳ್ಳಲ್ಲ. ಆರಂಭದಲ್ಲಿ ಇಡೀ ಜಗತ್ತೇ ಇದರಿಂದ ತತ್ತರಿಸುತ್ತಿದ್ದರೂ ಚೀನದ ಆರ್ಥಿಕತೆ ಮಾತ್ರ ಸುಧಾರಣೆಯತ್ತ ಮುನ್ನುಗ್ಗುತ್ತಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿತ್ತು. ಆದರೆ ಈಗ ಅಲ್ಲಿನ ಆರ್ಥಿಕತೆ ಕುರಿತ ಸತ್ಯಸಂಗತಿಗಳೂ ಹೊರಬರುತ್ತಿವೆ. ಕ್ರಮೇಣವಾಗಿ ಅಲ್ಲಿನ ಆರ್ಥಿಕತೆಗೂ ಪೆಟ್ಟು ಬೀಳಲು ಶುರುವಾಗಿದೆ.

ಒಂದು ದೇಶಕ್ಕೆ ಪೆಟ್ಟು ಬಿದ್ದ ಕೂಡಲೇ ಮಗದೊಂದು ದೇಶಕ್ಕೂ ಅದರ ಪರಿಣಾಮ ತಟ್ಟುವುದು ವಾಡಿಕೆ. ಹಾಗೆಯೇ ಈ ಕೊರೊನಾ ಸುಳಿಯಲ್ಲಿ ಭಾರತದ ಆರ್ಥಿಕತೆಯೂ ಸಿಲುಕಿರುವುದೂ ಸತ್ಯ. ಅದರಲ್ಲೂ ಕೊರೊನಾ ಲಾಕ್‌ಡೌನ್‌ ಘೋಷಿಸಿದಾಗಂತೂ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಸರಿಯಾಗಿ ತೆರಿಗೆ ಸಂಗ್ರಹವಾಗದೇ ಕೈಗಾರಿಕೆಗಳು, ಇತರ ವ್ಯವಹಾರಗಳು ನಡೆಯದೇ ಸರಕಾರದ ಕೈಗಳನ್ನು ಕಟ್ಟಿಹಾಕಿದಂತಾಗಿದೆ.

ಹೀಗಾಗಿಯೇ ಕೇಂದ್ರ ಸರಕಾರ, ಆರ್ಥಿಕ ಉತ್ತೇಜನಕ್ಕಾಗಿ ಈಗಾಗಲೇ ಹಲವಾರು ಘೋಷಣೆಗಳನ್ನು ಮಾಡಿದೆ. ಈ ಮೂಲಕ ಸಣ್ಣಪುಟ್ಟ ಕೈಗಾರಿಕೆಗಳು ಮತ್ತು ಪುಟ್ಟದಾಗಿ ವ್ಯಾಪಾರ-ವಹಿವಾಟು ಮಾಡುತ್ತಿರುವವರಿಗೆ ಕಡಿಮೆ ಬಡ್ಡಿಯಲ್ಲಿ ಸುಲಭ ಸಾಲದಂಥ ಯೋಜನೆಗಳನ್ನೂ ಜಾರಿಗೆ ತಂದಿದೆ. ಇದರಿಂದಾಗಿ ಜನರ ಕೈಯಲ್ಲಿ ನಗದು ಲಭ್ಯತೆ ಕೇಂದ್ರ ಸರಕಾರದ ಇಚ್ಛೆಯಾಗಿತ್ತು. ಇದರ ಮುಂದುವರಿದ ಭಾಗವಾಗಿ ಈಗ ಸೋಮವಾರವಷ್ಟೇ ರಾಷ್ಟ್ರೀಯ ಸಂಪತ್ತು ಕ್ರೋಡೀಕರಣ ಯೋಜನೆಯನ್ನು ಆರಂಭಿಸಿದೆ. ಇದನ್ನು ಕಳೆದ ಬಜೆಟ್‌ನಲ್ಲಿಯೇ ಘೋಷಿಸಲಾಗಿತ್ತು.

ಈ ಯೋಜನೆಯ ಉದ್ದೇಶವೊಂದೇ; ಸರಕಾರದ ಆಸ್ತಿಗಳ ಮೂಲಕ ಹಣವನ್ನು ಕ್ರೋಡೀಕರಣ ಮಾಡುವುದು. ಈ ಹಣವನ್ನು ಬೇರೆ ಬೇರೆ ಯೋಜನೆಗಳಿಗೆ ಬಳಕೆ ಮಾಡುವುದು. ಇದಕ್ಕಾಗಿ ಮುಂದಿನ 4 ವರ್ಷ ಗಳಲ್ಲಿ 6 ಲಕ್ಷ ಕೋಟಿ ರೂ. ಗಳಿಕೆ ಮಾಡುವುದು ಸರಕಾರದ ಚಿಂತನೆ. ಅಷ್ಟೇ ಅಲ್ಲ, ಪ್ರಸಕ್ತ ಆರ್ಥಿಕ ವರ್ಷದಲ್ಲೇ 88 ಸಾವಿರ ಕೋಟಿ ರೂ. ಸಂಗ್ರಹಿಸುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ. ಅಂದರೆ ಸರಕಾರದ ಮಾಲಕತ್ವದಲ್ಲಿರುವ ಬಂದರು, ವಿಮಾನ ನಿಲ್ದಾಣ, ಹೆದ್ದಾರಿಗಳ ಮೂಲಕ ಹಣಗಳಿಸಲಾಗುತ್ತದೆ. ಇದಕ್ಕಾಗಿ ರೈಲು, ವಿಮಾನ ನಿಲ್ದಾಣಗಳು ಮತ್ತು ಕಲ್ಲಿದ್ದಲು ಗಣಿ ಎಂಬ ಮೂರು ವಿಭಾಗಗಳನ್ನೂ ಮಾಡಲಾಗಿದೆ. ಆದರೆ ಹಣ ಸಂಗ್ರಹಕ್ಕಾಗಿ ಸರಕಾರದ ಯಾವುದೇ ಆಸ್ತಿಗಳನ್ನು ಮಾರಾಟ ಮಾಡುವುದಿಲ್ಲ ಎಂದಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಗುತ್ತಿಗೆ ಅಥವಾ ಲೀಸ್‌ಗೆ ಕೊಡುವ ಬಗ್ಗೆ ಹೇಳಿದ್ದಾರೆ.

ಕೇಂದ್ರ ಸರಕಾರ ಹೇಳಿರುವ ಪ್ರಚಾರ, ಈ ಯೋಜನೆಯ ಪ್ರಮುಖ ಉದ್ದೇಶ, ಉದ್ಯೋಗ ಸೃಷ್ಟಿ, ಗ್ರಾಮೀಣ, ಸಣ್ಣ ಪುಟ್ಟ ನಗರಗಳಲ್ಲಿ ಆರ್ಥಿಕ ಅಭಿವೃದ್ಧಿ ಸೇರಿದಂತೆ ಸಾರ್ವಜನಿಕ ಕಲ್ಯಾಣವಾಗಿದೆ. ಇಂತಿಷ್ಟು ವಲಯಗಳಿಂದ ಇಷ್ಟೇ ಹಣ ಸಂಗ್ರಹಿಸಬೇಕು ಎಂದು ಗುರಿ ಹಾಕಿಕೊಂಡಿರುವ ಸರಕಾರ, ಇದಕ್ಕಾಗಿ ಸಮರೋಪಾದಿಯಲ್ಲಿ ಕೆಲಸ ಮಾಡುವ ಭರವಸೆಯನ್ನೂ ನೀಡಿದೆ. ಕೇಂದ್ರ ಸರಕಾರದ ಈ ನಿರ್ಧಾರಕ್ಕೆ ವಿಪಕ್ಷಗಳ ಕಡೆಯಿಂದ ವಿರೋಧವೂ ವ್ಯಕ್ತವಾಗಿದೆ. ಹಿಂದಿನಿಂದಲೂ ಗಳಿಸಿಕೊಂಡು ಬಂದಿರುವ ಸರಕಾರದ ಆಸ್ತಿಗಳನ್ನು ಒಂದು ರೀತಿಯಲ್ಲಿ ಮಾರಾಟ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. ಆದರೆ ಇದಕ್ಕೆ ಮೊದಲ ಸ್ಪಷ್ಟನೆ ಕೊಟ್ಟಂತೆ ಕಾಣುತ್ತಿದ್ದು, ನಾವು ಕೇವಲ ಲೀಸ್‌ ಕೊಡುತ್ತಿದ್ದೇವೆ ಎಂದೂ ಕೇಂದ್ರ ಸರಕಾರ ಹೇಳಿದೆ.

ಏನೇ ಆಗಲಿ ಈ ಯೋಜನೆಯಂತೂ ಈಗಲೇ ಆರಂಭವಾಗಲಿದೆ. ಸರಕಾರದ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಅನುಮಾನ ಯಾವುದೇ ಕಾರಣಕ್ಕೂ ಜನರನ್ನು ಕಾಡಬಾರದು. ಹಾಗೆಯೇ ಎಲ್ಲ ಫ‌ಲಾನುಭವಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರಾಜ್ಯಗಳ ಜತೆಗೂ ಚರ್ಚಿಸಿಕೊಂಡು ಇದರ ಜಾರಿಗೆ ಮುಂದಾಗಬೇಕು.

ಟಾಪ್ ನ್ಯೂಸ್

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.