NEET-JEE ಚರ್ಚೆ ಗೊಂದಲ ಬೇಡ


Team Udayavani, Aug 29, 2020, 6:18 AM IST

NEET-JEE ಚರ್ಚೆ ಗೊಂದಲ ಬೇಡ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆಗಳಾದ ಎನ್‌ಇಇಟಿ ಮತ್ತು ಜೆಇಇ ವಿಚಾರದಲ್ಲಿ ಈಗ ದೇಶಾದ್ಯಂತ ಪರ-ವಿರೋಧ ವೇಗ ಪಡೆದಿದೆ.

ಸೆಪ್ಟಂಬರ್‌ 1ರಿಂದ 6ರವರೆಗೆ ಜೆಇಇ ಪರೀಕ್ಷೆ ನಡೆಸಲು ಹಾಗೂ ಸೆಪ್ಟಂಬರ್‌ 13ಕ್ಕೆ ಎನ್‌ಇಇಟಿ ಪರೀಕ್ಷೆ ನಡೆಸಲು ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ನಿರ್ಧರಿಸಿದೆ.

ಈ ಹಿಂದೆಯೇ ಈ ಪರೀಕ್ಷೆಗಳು ಸಾಂಕ್ರಾಮಿಕದ ಕಾರಣಕ್ಕೆ ಎರಡು ಬಾರಿ ಮುಂದೂಡಲ್ಪಟ್ಟಿದ್ದವು.

ಈಗ ಕೋವಿಡ್‌-19 ಕಾರಣಕ್ಕೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ವಿಪಕ್ಷಗಳು ಹೇಳುತ್ತಿವೆ.

ಬಿಜೆಪಿಯಲ್ಲೂ ಒಂದಿಬ್ಬರು ನಾಯಕರು ಇದೇ ವಾದವನ್ನೇ ಎದುರಿಟ್ಟಿದ್ದಾರೆ. ಆದರೆ ಸುರಕ್ಷತ ಕ್ರಮಗಳ ಪರಿಪಾಲನೆಯ ಮೂಲಕ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಬಹುದು ಎನ್ನುವ ಭರವಸೆಯನ್ನು ನೀಡುತ್ತಿದೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ.

ಎನ್‌ಇಇಟಿಯೊಂದರ ವಿಚಾರವನ್ನೇ ನೋಡಿದರೆ ಈ ಪರೀಕ್ಷೆಯನ್ನು ಬರೆಯಲು ಈಗಾಗಲೇ ದೇಶಾದ್ಯಂತ 15.94 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ 90 ಪ್ರತಿಶತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಡ್ಮಿಷನ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಇದೊಂದು ರೀತಿಯಲ್ಲಿ ಇಕ್ಕಟ್ಟಿನ ವಿಚಾರವೇ ಸರಿಯಾದರೂ ಒಂದು ಸ್ಪಷ್ಟ ನಿರ್ಧಾರಕ್ಕೆ ಬರುವ ಅಗತ್ಯವಂತೂ ಇತ್ತು. ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿದೆ ಎನ್ನುವುದನ್ನು ಕರ್ನಾಟಕ ರುಜುವಾತು ಮಾಡಿದೆ. ಅದನ್ನೇ ಮಾದರಿಯಾಗಿಟ್ಟುಕೊಂಡು ಮುಂದುವರಿಯಬೇಕು ಎಂದು ದೇಶಾದ್ಯಂತ ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಾರೆ.

ಆದರೆ ಇದು ವಿದ್ಯಾರ್ಥಿಗಳ ಜೀವನದ ಜತೆಗಿನ ಚೆಲ್ಲಾಟ ಎನ್ನುವುದು ಪರೀಕ್ಷೆಗಳನ್ನು ಮುಂದೂಡಲು ಆಗ್ರಹಿಸುವವರ ವಾದ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ಗೂ ಕೂಡ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ಕೋರ್ಟ್‌ ಈ ಅರ್ಜಿಗಳನ್ನೆಲ್ಲ ತಿರಸ್ಕರಿಸಿ, ವೈರಸ್‌ನ ಜತೆಗೇ ಜೀವನ ಸಾಗಬೇಕಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದೆ.

ರಾಜ್ಯದ ವಿಷಯಕ್ಕೆ ಬರುವುದಾದರೆ, ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರು ನೀಟ್‌ ಮತ್ತು ಜೆಇಇ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಬಹುದು, ಸಿಇಟಿ ಸಮಯದಲ್ಲಿ ಬರದ ಕೋವಿಡ್ 19 ಜೆಇಇ ಪರೀಕ್ಷೆಯಲ್ಲಿ ಬರುತ್ತದೆಯೇ ಎಂದು ಪ್ರಶ್ನಿಸುತ್ತಾರೆ. ಅಲ್ಲದೇ ಈ ಎರಡೂ ಪರೀಕ್ಷೆಗಳನ್ನು ಮುಂದೂಡಿಸಲು ಪ್ರಯತ್ನಿಸುತ್ತಿರುವುದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ ಎಂದೂ ಅವರು ಹೇಳುತ್ತಿದ್ದಾರೆ.

ಗಮನಿಸಬೇಕಾದ ಸಂಗತಿಯೆಂದರೆ, ಪರೀಕ್ಷೆಗಳನ್ನು ಮುಂದೂಡಿದರೂ, ಎಲ್ಲಿಯವರೆಗೆ ಮುಂದೂಡಬೇಕು ಎನ್ನುವ ಪ್ರಶ್ನೆ ಎದುರಾಗುತ್ತದೆ. ಏಕೆಂದರೆ, ಇಂದು ಜಗತ್ತಿನಾದ್ಯಂತ ಕೋವಿಡ್ 19 ಸೋಂಕಿನ ಎರಡನೇ ಅಲೆಯ ಅಪಾಯವಿದೆ.

ಹೀಗಾಗಿ ಮುಂದೂಡುತ್ತಾ ಹೋದಷ್ಟೂ ಸವಾಲು ಹೆಚ್ಚುತ್ತಲೇ ಹೋಗುತ್ತದೆ. ಕೆಲವರು ಎರಡು ತಿಂಗಳು ಮುಂದೂಡಬೇಕು ಎನ್ನುತ್ತಾರೆ.ಆದರೆ ಎರಡು ತಿಂಗಳುಗಳಲ್ಲಿ ಕೋವಿಡ್‌ ಸವಾಲು ಕಡಿಮೆಯಾಗುತ್ತದೆ ಎನ್ನಲಾಗುವುದಿಲ್ಲ.

ಒಟ್ಟಿನಲ್ಲಿ ಪರೀಕ್ಷೆಗಳು ನಡೆಯುವುದೇ ಆದರೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರಿಕೆಯ ಕ್ರಮಗಳನ್ನು ಪಾಲಿಸುವಂತಾಗಬೇಕು. ನಿಗದಿಯಾದ ದಿನಕ್ಕೆ ಇನ್ನೂ ಕೆಲವೇ ಸಮಯ ಬಾಕಿ ಉಳಿದಿದೆ.

ಈ ಸಮಯದಲ್ಲಿ ಒಂದು ಸ್ಪಷ್ಟತೆ ವಿದ್ಯಾರ್ಥಿಗಳಲ್ಲಿ ಮನೆಮಾಡಬೇಕಿದೆ. ಪರೀಕ್ಷೆ ನಡೆಯುತ್ತದೋ ಇಲ್ಲವೋ ಎನ್ನುವ ಗೊಂದಲ ಅವರಲ್ಲಿ ಒತ್ತಡ ಉಂಟುಮಾಡಬಾರದು. ವಿದ್ಯಾರ್ಥಿಗಳೂ ಸಹ ಪರ-ವಿರೋಧದ ರಾಜಕೀಯ ಚರ್ಚೆಗಳತ್ತ ಗಮನಹರಿಸದೇ ಪರೀಕ್ಷಾ ತಯಾರಿಯತ್ತ ಗಮನಹರಿಸುವುದು ಒಳಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.