ಎನ್‌ಇಪಿ ಜಾರಿ: ಪ್ರಥಮ ಸ್ಥಾನದ ದಾಖಲೆಗಾಗಿ ತರಾತುರಿ ಬೇಡ


Team Udayavani, Aug 26, 2022, 6:00 AM IST

ಎನ್‌ಇಪಿ ಜಾರಿ: ಪ್ರಥಮ ಸ್ಥಾನದ ದಾಖಲೆಗಾಗಿ ತರಾತುರಿ ಬೇಡ

ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಅನುಷ್ಠಾನಗೊಳಿಸಿದ ಮೊದಲ ರಾಜ್ಯವೆಂಬ ಪಟ್ಟ ಪಡೆಯುವುದಕ್ಕಾಗಿ ತರಾತುರಿಯಲ್ಲಿ ನೀತಿ ಅನುಷ್ಠಾನ ಮಾಡುವ ಬದಲು ಸಂಪೂರ್ಣ ಸಿದ್ಧತೆಯನ್ನು ಮಾಡಿಕೊಂಡು ಅನುಷ್ಠಾನಗೊಳಿಸಿದರೆ, ನೀತಿಗೊಂದು ಅರ್ಥ ಬರಲಿದೆ. ಮಾತ್ರವಲ್ಲ, ಸರಕಾರದ ಆಶಯ ಈಡೇರಿದಂತಾಗಲಿದೆ.

ಎನ್‌ಇಪಿಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವೆಂಬ ಹೆಗ್ಗಳಿಕೆಯನ್ನು ಕರ್ನಾಟಕ ಹೊಂದಿದೆ. ಕೊರೊನಾ ನಡುವೆಯೇ ಉನ್ನತ ಶಿಕ್ಷಣದಲ್ಲಿ ಎನ್‌ಇಪಿಯನ್ನು ಜಾರಿಗೊಳಿಸಲಾಯಿತು. ಈಗ ಅದೇ ದಾರಿಯಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿಯೂ ಆಗುತ್ತಿದೆ. ಪ್ರಾಥಮಿಕ ಶಿಕ್ಷಣದಲ್ಲಿ 3 ವರ್ಷದಿಂದ 18 ವರ್ಷದವರೆಗೆ ಶಾಲಾ ಶಿಕ್ಷಣವೆಂದು ಪರಿಗಣಿಸಲಾಗಿದೆ. ಮೊದಲ ಹಂತವಾದ 3ರಿಂದ 5 ವರ್ಷದ ಮಕ್ಕಳಿಗೆ ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣವನ್ನು (ಇಸಿಸಿಇ) ನೀಡುತ್ತಿದೆ. 20 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ 2022-23ನೇ ಸಾಲಿನಿಂದ ಎನ್‌ಇಪಿ ಆರಂಭ ಮಾಡುವುದಾಗಿ ಸರಕಾರವು ಕಳೆದ ಎಪ್ರಿಲ್‌ನಿಂದಲೇ ಹೇಳಿಕೊಂಡು ಬಂದಿದೆ. ಆ ಪ್ರಕಾರವಾಗಿ ಜೂನ್‌ನಿಂದಲೇ ಆರಂಭ ಮಾಡುವುದಾಗಿಯೂ ತಿಳಿಸಿತ್ತು.

ಆದರೆ ಈಗ ಪ್ರಾಥಮಿಕ ಶಿಕ್ಷಣ ಕುರಿತಂತೆ ಅಕ್ಟೋಬರ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್‌ಸಿಇಆರ್‌ಟಿ) ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು  (ಎನ್‌ಸಿಎಫ್) ಬಿಡುಗಡೆ ಮಾಡಲಿದೆ. ಅದಕ್ಕೆ ತಕ್ಕಂತೆ ರಾಜ್ಯದಲ್ಲಿಯೂ ಕರ್ನಾಟಕ ಪಠ್ಯಕ್ರಮ ಚೌಕಟ್ಟು (ಕೆಸಿಎಫ್) ಮಾಡಿದ ಅನಂತರ ಪಠ್ಯಪುಸ್ತಕವನ್ನು ಸಿದ್ಧಪಡಿಸಲಾಗುತ್ತದೆ. ನವೆಂಬರ್‌ನಲ್ಲಿ ಎನ್‌ಇಪಿ ಪಠ್ಯವನ್ನು ಅಳವಡಿಸಿಕೊಳ್ಳುವುದಾಗಿ ಸರಕಾರ ತಿಳಿಸಿದೆ.

ಪಠ್ಯಕ್ರಮ ರಚನೆಗೆ ಸಂಬಂಧಿಸಿದಂತೆ ಸರಕಾರವು ವಿವಿಧ 6 ಉಪ ಸಮಿತಿಗಳನ್ನು ರಚನೆ ಮಾಡಿದೆ. ನೀತಿ ಅನುಷ್ಠಾನಕ್ಕಾಗಿ ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌ ನೇತೃದಲ್ಲಿ ಕಾರ್ಯಪಡೆ ರಚಿಸಿದೆ. ಆದರೆ ಕೇಂದ್ರ ಸರಕಾರ ಬಿಡುಗಡೆ ಮಾಡುವ ಎನ್‌ಪಿಎಫ್ ಅನುಗುಣವಾಗಿ ರಾಜ್ಯದ ಪಠ್ಯಕ್ರಮ ರಚನೆ ಮಾಡಿ, ಪಠ್ಯಪುಸ್ತಕಗಳನ್ನು ಮುದ್ರಣ ಮಾಡುವ ಕೆಲಸ ಕೇವಲ ಒಂದು ತಿಂಗಳಿನಲ್ಲಿ ಸಾಧ್ಯವಾಗಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಎನ್‌ಇಪಿ ಜಾರಿಗೂ ಮುನ್ನ ಸರಕಾರವು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪೂರ್ಣವಾಗಿ ಅಣಿಗೊಳಿಸಬೇಕು. ರಾಜ್ಯದಲ್ಲಿ ಈವರೆಗೆ ಪಠ್ಯಪುಸ್ತಕವೇ ರಚನೆಯಾಗಿಲ್ಲ, ಇನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ಯಾವ ಆಧಾರದಲ್ಲಿ ತರಬೇತಿ ನೀಡಿ ಸಿದ್ಧಗೊಳಿಸಿದ್ದಾರೆ ಎಂಬುದು ತಿಳಿಯುತ್ತಿಲ್ಲ.

ರಾಜ್ಯದಲ್ಲಿ 61 ಸಾವಿರ ಅಂಗನವಾಡಿಗಳಿದ್ದು, ಇಲ್ಲಿ 732 ಸ್ನಾತಕೋತ್ತರ ಪದವಿ, 6,017 ಪದವಿ, 14,303 ಪಿಯುಸಿ ಹಾಗೂ 40,787 ಎಸ್ಸೆಸ್ಸೆಲ್ಸಿ ಪೂರೈಸಿದ ಕಾರ್ಯಕರ್ತೆಯರು ಇದ್ದಾರೆ. ಈ ಎಸೆಸೆಲ್ಸಿ ಪೂರೈಸಿದವರಲ್ಲಿ ಬಹುತೇಕರು 48 ವರ್ಷ ಮೇಲ್ಪಟ್ಟವರಾಗಿ ದ್ದಾರೆ. ಇವರು ಸರಕಾರ ಎನ್‌ಇಪಿಯನ್ನು ಎಷ್ಟರಮಟ್ಟಿಗೆ ಅರ್ಥ ಮಾಡಿಕೊಂಡು ಬೋಧಿಸುತ್ತಾರೆ ಎಂಬುದನ್ನು ಕಾಡು ನೋಡಬೇಕಿದೆ.

ಮಕ್ಕಳ ಶೇ.80ರಷ್ಟು ಮೆದುಳು ಬೆಳವಣಿಗೆಯು ಬಾಲ್ಯಾವಸ್ಥೆಯಲ್ಲಿ, ಅದರಲ್ಲಿಯೂ 3ರಿಂದ 8 ವರ್ಷದ ಅವಧಿಯಲ್ಲಿ ಆಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಈ ವಯಸ್ಸಿನ ಮಕ್ಕಳಿಗೆ ಆತುರಾತುರವಾಗಿ ಯೋಜನೆ ಜಾರಿ ಮಾಡಿ, ತಾವೇ ಮೊದಲು ಎಂದು ಬೀಗುವುದಕ್ಕಿಂತ ಸಂಪೂರ್ಣ ಸಿದ್ಧತೆ ಮಾಡಿಕೊಂಡು ಮುಂದಿನ ವರ್ಷದಿಂದ ಅನುಷ್ಠಾನ ಮಾಡುವುದು ಒಳಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.