ರಾಜಕೀಯಕ್ಕಾಗಿಯೇ ಎನ್‌ಇಪಿ ಬಗ್ಗೆ ವಿರೋಧ ಬೇಡ


Team Udayavani, Sep 25, 2021, 6:00 AM IST

Untitled-1

ಹಳೇ ತಲೆಮಾರುಗಳು ಕಳೆದು ಹೊಸ ತಲೆಮಾರುಗಳು ಬರುತ್ತಿದ್ದಂತೆ ಬದಲಾವಣೆಯಾಗಲೇಬೇಕು. ಹಿಂದೆ ಓದುತ್ತಿದ್ದ ವಿಷಯವನ್ನೇ ಈಗಲೂ ಓದಲು ಸಾಧ್ಯವಿಲ್ಲ. ಪರಿಸ್ಥಿತಿಗೆ ಮತ್ತು ಆಸಕ್ತಿಗೆ ತಕ್ಕಂತೆ ವಿದ್ಯಾಭ್ಯಾಸದ ವಿಷಯವೂ ಬದಲಾಗಬೇಕು. ಈ ನಿಟ್ಟಿನಲ್ಲಿಯೇ ಕೇಂದ್ರ ಸರಕಾರ ಹೊಸದಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಹೆಚ್ಚು ವಿವರಣೆ ಸದ್ಯದ ಮಟ್ಟಿಗೆ ಅಗತ್ಯವೇನಲ್ಲ. ಈಗಾಗಲೇ ಈ ಬಗ್ಗೆ ಹಲವಾರು ಚರ್ಚೆಗಳು ಆಗಿವೆ. ಸುಮಾರು ಒಂದೂವರೆ ವರ್ಷದ ಹಿಂದೆಯೇ ರಾಷ್ಟ್ರೀಯ ನೀತಿ ಬಗ್ಗೆ ಕೇಂದ್ರ ಸರಕಾರ ಘೋಷಣೆ ಮಾಡಿದೆ. ಸದ್ಯ ಚರ್ಚೆ ಇರುವುದು ರಾಜ್ಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಈ ನೀತಿ ಜಾರಿಯಾಗುತ್ತಿರುವ ಬಗ್ಗೆ.

ಇಡೀ ದೇಶದಲ್ಲೇ ಮೊದಲಿಗೆ ರಾಷ್ಟ್ರೀಯ ನೀತಿ ಜಾರಿ ಮಾಡಬೇಕು ಎಂಬ ಉದ್ದೇಶದಿಂದ ರಾಜ್ಯ ಸರಕಾರ ಪದವಿ ಕಾಲೇಜುಗಳಲ್ಲಿ ಎನ್‌ಇಪಿ ಅಡಿಯಲ್ಲಿ ಪಠ್ಯಕ್ರಮ ಮತ್ತು ಕೋರ್ಸ್‌ಗಳನ್ನು ಪರಿಚಯ ಮಾಡುತ್ತಿದೆ. ಒಂದು ಲೆಕ್ಕಾಚಾರದಲ್ಲಿ ಹೇಳುವುದಾದರೆ, ರಾಜ್ಯ ಸರಕಾರ ತೀರಾ ಅವಸರದಲ್ಲಿ ಎನ್‌ಇಪಿ ಜಾರಿ ಮಾಡುತ್ತಿದೆ. ಹೊಸ ನೀತಿ ಜಾರಿಗೂ ಮುನ್ನ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು. ಅದರಲ್ಲೂ ವಿಪಕ್ಷಗಳ ನಾಯಕರ ಜತೆ ಒಂದು ಚರ್ಚೆ ನಡೆಸಬಹುದಿತ್ತು. ಇದನ್ನು ಬಿಟ್ಟು ಏಕಾಏಕಿ ಜಾರಿ ಮಾಡುತ್ತಿದೆ ಎಂಬ ಆರೋಪವೂ ಇದೆ.

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ವಿಧಾನಪರಿಷತ್‌ನಲ್ಲಿ ಗುರುವಾರ ಸಾಕಷ್ಟು ಚರ್ಚೆ ನಡೆದಿದ್ದು, ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ್‌ ಅವರು ಸದಸ್ಯರ ಪ್ರಶ್ನೆಗಳಿಗೆ ಉತ್ತರ ಕೊಡುವ ಪ್ರಯತ್ನ ಮಾಡಿದ್ದಾರೆ. ಆದರೆ, ಶುಕ್ರವಾರ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಗೆ ಬಂದಿದ್ದು, ಕಾಂಗ್ರೆಸ್‌ ಸದಸ್ಯರು ನೇರವಾಗಿಯೇ ಇದನ್ನು ನಾಗ್ಪುರ ಮತ್ತು ಆರ್‌ಎಸ್‌ಎಸ್‌ ಶಿಕ್ಷಣ ನೀತಿ ಎಂದು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಸಾಕಷ್ಟು ಗದ್ದಲವೂ ಆಗಿದೆ. ಕಡೆಗೆ ಗದ್ದಲ ಹೆಚ್ಚಾದಾಗ ಅನಿವಾರ್ಯವಾಗಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನವನ್ನು ಅನಿರ್ದಿಷ್ಠಾವಧಿಗೆ ಮುಂದೂಡಿಕೆ ಮಾಡಿದ್ದಾರೆ.

ಆದರೆ ಕಡೇ ದಿನ ಎನ್‌ಇಪಿ ಬಗ್ಗೆ ರಾಜಕೀಯ ಬದಿಗಿಟ್ಟು ಆಡಳಿತ ಮತ್ತು ವಿಪಕ್ಷಗಳು ಕುಳಿತು ವಿಸ್ತೃತವಾಗಿ ಚರ್ಚೆ ನಡೆಸಬಹುದಿತ್ತು. ಇನ್ನೂ ಚರ್ಚೆಗೆ ಅವಕಾಶ ಬೇಕು ಎಂದಾದಲ್ಲಿ ಇನ್ನೊಂದಿಷ್ಟು ದಿನ ಅಧಿವೇಶನವನ್ನು ವಿಸ್ತರಣೆ ಮಾಡಬಹುದಿತ್ತು. ಈ ಮೂಲಕವಾದರೂ, ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ-ಬಾಧಕಗಳ ಬಗ್ಗೆ ಸದನದಲ್ಲೇ ಚರ್ಚಿಸಬಹುದಿತ್ತು.

ಪ್ರಸ್ತುತದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಗತ್ಯವಿದೆ. ನಾವು ಇನ್ನೂ ಹಳೇ ಸಂಪ್ರದಾಯದಂತೆಯೇ ವಿದ್ಯಾಭ್ಯಾಸ ಮುಂದುವರಿಸಿಕೊಂಡು ಬಂದಿದ್ದೇವೆ. ಪದವಿ ಶಿಕ್ಷಣ ಮುಗಿಸಿದ ಅನಂತರ ಮುಂದೇನು ಎಂಬ ಪ್ರಶ್ನೆ ಬಹುತೇಕ ವಿದ್ಯಾರ್ಥಿಗಳಲ್ಲಿ ಇನ್ನೂ ಇದೆ. ಹೀಗಾಗಿ, ಉದ್ಯೋಗ ಕೇಂದ್ರಿತವಾಗಿ ಹೊಸ ಪಠ್ಯಕ್ರಮ ಬರುತ್ತಿರುವುದು ಸ್ವಾಗತಾರ್ಹವೇ. ಹೀಗಾಗಿ ವಿಪಕ್ಷಗಳು ರಾಜಕೀಯಕ್ಕಾಗಿಯೇ ವಿರೋಧ ಮಾಡುವುದನ್ನು ಬಿಟ್ಟು ಎನ್‌ಇಪಿಯಲ್ಲಿರುವ ಸಂಗತಿಗಳ ಬಗ್ಗೆ ಗಮನಹರಿಸಬೇಕು. ಸರಕಾರವೂ ತನ್ನ ಪಟ್ಟು ಬಿಟ್ಟು ವಿಪಕ್ಷಗಳೊಂದಿಗೆ ಕುಳಿತು ಈ ಬಗ್ಗೆ ಚರ್ಚೆ ನಡೆಸಬೇಕು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.