2ನೇ ಅಲೆ ವೇಳೆಯಲ್ಲಾದ ಪ್ರಮಾದ ಮತ್ತೆ ಬೇಡ


Team Udayavani, Jan 15, 2022, 6:00 AM IST

2ನೇ ಅಲೆ ವೇಳೆಯಲ್ಲಾದ ಪ್ರಮಾದ ಮತ್ತೆ ಬೇಡ

ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ವ್ಯಾಪಕಗೊಳ್ಳುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೀಡುಮಾಡಿದೆ. ಕೊರೊನಾ ರೂಪಾಂತರಿ ವೈರಸ್‌ನ ಹರಡುವಿಕೆಯ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ದಿನಕ್ಕೊಂದು ಮಾರ್ಗಸೂಚಿ, ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಆದರೆ ಈಗಾಗಲೇ ವೈದ್ಯಕೀಯ ತಜ್ಞರು ಹೇಳಿರುವಂತೆಯೇ ಕೊರೊನಾ ವೈರಸ್‌ನ ರೂಪಾಂತರಿ ಒಮಿಕ್ರಾನ್‌ ಈ ಹಿಂದಿನ ರೂಪಾಂ ತರಿಯಾದ ಡೆಲ್ಟಾದಷ್ಟು ಅಪಾಯಕಾರಿಯಲ್ಲವಾದರೂ ಇದರ ಹರಡು ವಿಕೆ ಬಹಳಷ್ಟು ತೀವ್ರಗತಿಯಲ್ಲಿರುತ್ತದೆ ಎಂಬುದು ಕಳೆದೆರಡು ವಾರ ಗಳ ಅಂಕಿಅಂಶಗಳನ್ನು ಅವಲೋಕಿಸಿದಾಗ ಸಾಬೀತಾಗುತ್ತದೆ. ಈಗಾ ಗಲೇ ಚಾಲ್ತಿಯಲ್ಲಿರುವ ಕೊರೊನಾ ನಿರೋಧಕ ಲಸಿಕೆಯನ್ನು ಎಲ್ಲರೂ ಪಡೆದುಕೊಳ್ಳುವುದು ಅತ್ಯಂತ ಸುರಕ್ಷಿತ ಕ್ರಮವಾಗಿದ್ದು ಒಂದು ವೇಳೆ ಲಸಿಕೆ ಪಡೆದುಕೊಂಡವರಿಗೂ ಸೋಂಕು ತಗಲಿದಲ್ಲಿ ಗಂಭೀರ ಪರಿ ಣಾಮವೇನೂ ಆಗದೆಂದು ಪ್ರತಿಪಾದಿಸುತ್ತ ಬರಲಾಗಿದೆ.

ಇವೆಲ್ಲದರ ನಡುವೆ ಒಮಿಕ್ರಾನ್‌ ಸೋಂಕಿತರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಲೇ ಸಾಗಿದೆಯಾದರೂ ಪ್ರಾಣ ಹಾನಿ, ಆಸ್ಪತ್ರೆಗೆ ದಾಖ ಲಾಗುತ್ತಿರುವವರ ಸಂಖ್ಯೆ ಕಡಿಮೆ ಇರುವುದು ಒಂದಿಷ್ಟು ನಿಟ್ಟುಸಿರು ಬಿಡುವ ವಿಚಾರ. ಇದರ ಹೊರತಾಗಿಯೂ ಕೇಂದ್ರ ಮತ್ತು ರಾಜ್ಯ ಸರಕಾರ ಸೋಂಕು ನಿಯಂತ್ರಣ ನೆಪದಲ್ಲಿ ಪದೇ ಪದೆ ನಿರ್ಬಂಧಗಳನ್ನು ಹೇರುವುದು, ಕೆಲವು ತಜ್ಞರು ಬೇಕಾಬಿಟ್ಟಿಯಾಗಿ ಸಲಹೆಗಳನ್ನು ನೀಡುತ್ತಿರುವುದು, ಕೊರೊನಾ ನಿರೋಧಕ ಲಸಿಕೆ ತಯಾರಿಕ ಕಂಪೆನಿಗಳು ತಮ್ಮ ಲಸಿಕೆಗಳು ಹೆಚ್ಚು ಸಕ್ಷಮ.. ಹೀಗೆ ತರಹೇವಾರಿ ಹೇಳಿಕೆ ನೀಡುವ ಮೂಲಕ ಜನರನ್ನು ಗೊಂದಲದ ಮಡುವಿನಲ್ಲಿ ಮುಳುಗಿಸುವ ಪ್ರಯತ್ನ ನಡೆಯುತ್ತಿವೆ. ಜನರ ಆರೋಗ್ಯದ ವಿಚಾರದಲ್ಲಿ ವೈದ್ಯಕೀಯ ರಂಗ ಕೂಡ ಒಂದಿಷ್ಟು ಸೂಕ್ಷ್ಮತೆಯಿಂದ ನಡೆದು ಕೊಳ್ಳಬೇಕಾದ ಅನಿವಾರ್ಯತೆ ಇದೆ. ವೈದ್ಯರು ಮತ್ತು ಆಸ್ಪತ್ರೆಗಳು ಕೊರೊನಾದ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಾಕ್ಷಣ ಆ ವ್ಯಕ್ತಿ ಯನ್ನು ಅನಗತ್ಯ ಪರೀಕ್ಷೆ, ಚಿಕಿತ್ಸೆ, ಔಷಧೋಪಚಾರ, ಆಸ್ಪತ್ರೆ ದಾಖಲೀ ಕರಣ ಮತ್ತಿತರ ಕ್ರಮಗಳನ್ನು ಅನುಸರಿಸುತ್ತಿರುವುದು ಸಹಜ ವಾಗಿಯೇ ಜನರು ಪರೀಕ್ಷೆಗಾಗಿ ಆಸ್ಪತ್ರೆ ಅಥವಾ ಪರೀಕ್ಷಾ ಕೇಂದ್ರಕ್ಕೆ ತೆರಳಲೂ ಹಿಂದೇಟು ಹಾಕುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಸದ್ಯ ದೇಶಾದ್ಯಂತ ಚಳಿಗಾಲವಾದ್ದರಿಂದ ಶೀತ, ನೆಗಡಿ, ಕೆಮ್ಮು, ಜ್ವರ ಜನರನ್ನು ಕಾಡುವುದು ಸಾಮಾನ್ಯವಾಗಿದ್ದು ಇವೆಲ್ಲವುಗಳಿಗೂ ಮಿತಿಮೀರಿದ ಔಷಧೋಪಚಾರ ನಡೆಸುತ್ತಿರುವ ಬಗ್ಗೆೆ ಆರೋಪಗಳು ಕೇಳಿ ಬರಲಾರಂಭಿಸಿವೆ. ಈ ಬಗ್ಗೆ ಸುಮಾರು 35 ಮಂದಿ ವೈದ್ಯರ ಗುಂಪು ಕೇಂದ್ರ, ರಾಜ್ಯ ಸರಕಾರಗಳಿಗೆ ಬಹಿರಂಗ ಪತ್ರ ಬರೆದು ಇವೆಲ್ಲವುಗಳಿಗೆ ಕಡಿವಾಣ ಹಾಕಲು ಕಿವಿಮಾತು ಹೇಳಿದೆ.

ಕೊರೊನಾ ಸೋಂಕಿತರ ಪರೀಕ್ಷೆ, ಚಿಕಿತ್ಸೆ ಮತ್ತು ನೀಡುವ ಔಷಧಗಳ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕು. ಸೋಂಕಿತರ ಮೇಲೆ ಪ್ರಯೋಗ ನಡೆಸುವ ಅಭ್ಯಾಸವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ತಕ್ಕಬದ್ಧ ಮತ್ತು ಶಿಫಾರಸು ಮಾಡಲ್ಪಟ್ಟ ಔಷಧಗಳು, ಚಿಕಿತ್ಸೆಗಳು ಮತ್ತು ಪರೀಕ್ಷೆಗಳನ್ನು ಮಾತ್ರವೇ ನಡೆಸಲು ನಿರ್ದೇಶನ ನೀಡುವಂತೆಯೂ ಈ ವೈದ್ಯರು ಆಗ್ರಹಿಸಿದ್ದಾರೆ. ವೈದ್ಯರ ನೈಜ ಕಳಕಳಿಯನ್ನು ಅರ್ಥ ಮಾಡಿ ಕೊಂಡು ಜನತೆಯಲ್ಲಿನ ಗೊಂದಲ, ಅನುಮಾನಗಳನ್ನು ನಿವಾರಿಸ ಬೇಕು. ಆ ಮೂಲಕ ಜನರ ಆರೋಗ್ಯವನ್ನು ಕಾಪಾಡಬೇಕು.

ಟಾಪ್ ನ್ಯೂಸ್

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.