ಸಾವಿನ ಲೆಕ್ಕಾಚಾರದಲ್ಲಿ ರಾಜಕೀಯ ತರವಲ್ಲ


Team Udayavani, Apr 18, 2022, 6:03 AM IST

ಸಾವಿನ ಲೆಕ್ಕಾಚಾರದಲ್ಲಿ ರಾಜಕೀಯ ತರವಲ್ಲ

ಕೊರೊನಾ ಆರಂಭದ ಕಾಲದಿಂದಲೂ ವ್ಯತಿರಿಕ್ತ ಹೇಳಿಕೆಗಳಿಂದ ಮತ್ತು ಚೀನದ ಕೈಗೊಂಬೆಯಂತೆ ವರ್ತಿಸುತ್ತಿರುವ ವಿಶ್ವ ಆರೋಗ್ಯ ಸಂಸ್ಥೆ, ಈಗ ಅಂಥದ್ದೇ ಮತ್ತೊಂದು ವಿವಾದಕ್ಕೆ ಕೈ ಹಾಕಿದೆ. ಈಗಿನ ಪ್ರಮುಖ ವಿಚಾರ, ಭಾರತ ಕೊರೊನಾದಿಂದ ಮಡಿದವರ ಲೆಕ್ಕವನ್ನು ಸರಿಯಾಗಿ ಕೊಟ್ಟಿಲ್ಲ ಎಂಬುದು. ಹಾಗೆಯೇ ನಾವು ಸರಿಯಾಗಿ ಕೊಡಲು ಪ್ರಯತ್ನಿಸುವಾಗ ಅದು ತಡೆದಿದೆ ಎಂಬ ವಿಚಾರವನ್ನು ಪ್ರಸ್ತಾವಿಸಿದೆ. ಈ ಬಗ್ಗೆ ಅಮೆರಿಕ ಮೂಲದ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದ್ದು, ಈಗ ಒಂದಷ್ಟು ವಿವಾದಕ್ಕೆ ಕಾರಣವಾಗಿದೆ.

ಮೊದಲಿಗೆ ಹೇಳಬೇಕಾದರೆ, ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವಿಚಾರದಲ್ಲಿ ತನ್ನ ವಿಶ್ವಾಸಾರ್ಹತೆ ಹೊಂದಿದೆಯೇ ಎಂಬ ಪ್ರಶ್ನೆ ತಲೆದೋರುತ್ತದೆ. ಇಂದಿಗೂ ಕೊರೊನಾ ಉಗಮವಾಗಿದ್ದು ಎಲ್ಲಿ ಮತ್ತು ಹೇಗೆ ಎಂಬ ವಿಚಾರ ಇಡೀ ಜಗತ್ತನ್ನೇ ಕಾಡುತ್ತಿದೆ. ಅಮೆರಿಕವೂ ಸೇರಿದಂತೆ ಪ್ರಪಂಚದ ಬಹುತೇಕ ದೇಶಗಳ ಅನುಮಾನ ಚೀನದತ್ತಲೇ ಇದೆ. ಚೀನದಲ್ಲಿರುವ ವುಹಾನ್‌ ಲ್ಯಾಬ್‌ನಲ್ಲಿ ಕೊರೊನಾ ವೈರಸ್‌ ಜನ್ಮತಾಳಿರಬಹುದು ಎಂಬ ಸಂದೇಹಗಳಿವೆ. ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಅವರು ವೈರಸ್‌ ಮೂಲ ಕಂಡು ಹಿಡಿಯಿರಿ ಎಂದು ಕೇಳಿದಾಗ, ಈ ಬಗ್ಗೆ ಅಸಹಾಯಕತೆಯಿಂದ ವರ್ತಿಸಿದ್ದು ಇದೇ

ವಿಶ್ವ ಆರೋಗ್ಯ ಸಂಸ್ಥೆ. ಇಡೀ ಜಗತ್ತಿನ ಅವ್ಯವಸ್ಥೆ, ಅಪಾರ ಸಾವು ನೋವುಗಳಿಗೆ ಕಾರಣವಾಗಿರುವ ಈ ವೈರಸ್‌ನ ಮೂಲವನ್ನೇ ಪತ್ತೆ ಹಚ್ಚದಿರುವ ಡಬ್ಲ್ಯುಎಚ್‌ಒ ಸಂಸ್ಥೆ, ಈಗ ಭಾರತದಲ್ಲಿನ ಕೊರೊನಾ ಸಾವುಗಳ ಬಗ್ಗೆ ನಾವು ಭಾರೀ ದತ್ತಾಂಶಗಳನ್ನು ಸಂಗ್ರಹಿಸಿದ್ದೇವೆ. ಅದನ್ನು ಭಾರತದಲ್ಲಿ ಪ್ರಕಟಿಸಲು ಬಿಡುತ್ತಿಲ್ಲ ಎಂದು ಹೇಳುತ್ತಿದೆ.

ಡಬ್ಲ್ಯುಎಚ್‌ಒ ಪ್ರಕಾರ, ಭಾರತದಲ್ಲಿ 5 ಲಕ್ಷ ಮಂದಿಯಲ್ಲ,ಬದಲಾಗಿ 40 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೆ ಅದು ಬೇರೆ ಬೇರೆ ವಿಧಾನಗಳನ್ನು ಅಳವಡಿಸಿಕೊಂಡಿದೆ. ಅಮೆರಿಕದ ಪತ್ರಿಕೆಯ ವರದಿ ಬಳಿಕ ಕೇಂದ್ರ ಆರೋಗ್ಯ ಇಲಾಖೆ, ಈ ಸಾವಿನ ಲೆಕ್ಕಾಚಾರದ ಬಗ್ಗೆ ಸ್ಪಷ್ಟನೆಯನ್ನೂ ನೀಡಿದೆ. ಚಿಕ್ಕ ದೇಶಕ್ಕೂ ಮತ್ತು ದೊಡ್ಡ ಜನಸಂಖ್ಯೆ ಇರುವ ದೇಶಗಳಿಗೂ ಒಂದೇ ಲೆಕ್ಕಾಚಾರದ ವಿಧಾನ ಸರಿ ಹೊಂದುವುದಿಲ್ಲ. ಹಾಗೆಯೇ ತಾಳೆ ಮಾಡುವುದಕ್ಕೂ ಸಾಧ್ಯವಿಲ್ಲ. ನಾವು ತಂತ್ರಜ್ಞಾನ

ಬಳಸಿಕೊಂಡು ಕೊರೊನಾ, ಸೋಂಕಿತರ ಮತ್ತು ಸಾವಿನ ಲೆಕ್ಕಾಚಾರ ಹಾಕುತ್ತಿದ್ದೇವೆ. ಜತೆಗೆ 130 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಒಂದೊಂದು ರಾಜ್ಯ ಒಂದೊಂದು ರೀತಿಯ ವಾತಾವರಣ ಹೊಂದಿವೆ. ಕೆಲವು ಕಡೆಗಳಲ್ಲಿ ಹವಾಮಾನ ಸಂಬಂಧಿ ಮರಣಗಳು ಉಂಟಾಗಿರಬಹುದು. ಇದನ್ನು ಕೊರೊನಾಕ್ಕೆ ಸೇರಿಸಲು ಸಾಧ್ಯವಿಲ್ಲ ಎಂದಿದೆ.

ನಿಜವಾಗಿಯೂ ಡಬ್ಲ್ಯುಎಚ್‌ಒ ವರದಿಗೆ ವಿಶ್ವಾಸಾರ್ಹತೆ ಬರಲೇಬೇಕು ಎಂದಾದಲ್ಲಿ, ಎಲ್ಲ ಟಯರ್‌ 1 ದೇಶಗಳಲ್ಲಿನ ಸಾವುಗಳನ್ನೂ ಇದೇ ಮಾದರಿಯಲ್ಲಿ ಲೆಕ್ಕ ಹಾಕಿ ವರದಿ ಕೊಡಿ. ಆಗ ಏನು ಫ‌ಲಿತಾಂಶ ಬರುತ್ತದೆ ನೋಡಿ ಎಂದೂ ಹೇಳಿದೆ. ಜತೆಗೆ ಈ ವರದಿಗೆ ಚೀನ, ರಷ್ಯಾ, ಈಜಿಪ್ಟ್, ಇರಾನ್‌ ದೇಶಗಳೂ ಆಕ್ಷೇಪ ಎತ್ತಿವೆ. ಈ ದೇಶಗಳ ಬಗ್ಗೆ ಹೆಚ್ಚು ಮಾತನಾಡದೆ, ಭಾರತದ ಮರಣ ಸಂಖ್ಯೆಯನ್ನು ಮಾತ್ರ ಪ್ರಕಟಿಸಿ ಉಳಿದ ದೇಶಗಳ ಸಾವಿನ ಸಂಖ್ಯೆಯನ್ನು ಏಕೆ ಬಹಿರಂಗ ಪಡಿಸಿಲ್ಲ ಎಂಬ ಪ್ರಶ್ನೆಯನ್ನೂ ಕೇಂದ್ರ ಆರೋಗ್ಯ ಇಲಾಖೆ ಕೇಳಿದೆ. ಈ ವರದಿ ಗಮನಿಸಿದರೆ ಎಲ್ಲೋ ಒಂದು ಕಡೆ ಪೂರ್ವಾಗ್ರಹ ಪೀಡಿತವಾಗಿ ಪ್ರಕಟಿಸಿರಬಹುದು ಎಂಬುದು ಕೇಂದ್ರ ಸರಕಾರದ ಸ್ಪಷ್ಟನೆಯಲ್ಲಿದೆ.

 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.