ತೈಲ ಬೆಲೆ ಏರಿಕೆ ಹೆಚ್ಚಾಗದಿರಲಿ ಹೊರೆ


Team Udayavani, Jan 9, 2021, 5:50 AM IST

ತೈಲ ಬೆಲೆ ಏರಿಕೆ ಹೆಚ್ಚಾಗದಿರಲಿ ಹೊರೆ

ಕೋವಿಡ್‌ ಹಾಗೂ ಲಾಕ್‌ಡೌನ್‌ ಎದುರಿಟ್ಟ ಸವಾಲುಗಳಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಸಾಮಾನ್ಯ ಭಾರತೀಯರಿಗೆ ಈಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯು ಹೊಸ ಸಮಸ್ಯೆಯಾಗಿ ಬದಲಾಗುತ್ತಿದೆ. ಕಳೆದೊಂದು ತಿಂಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಹಠಾತ್ತನೆ ಹೆಚ್ಚಳವಾಗಿದೆ. ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪೆನಿಗಳು ಇಂಧನ ಬೆಲೆಯನ್ನು ಹೆಚ್ಚಿಸಿದ ಕಾರಣ, ಪೆಟ್ರೋಲ್‌ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿ ಜನಸಾಮಾನ್ಯರು ತತ್ತರಿಸುವಂತೆ ಮಾಡಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಕಾಣಿಸಿಕೊಂಡಿರುವುದೇ ಭಾರತದಲ್ಲಿ ಬೆಲೆ ದುಬಾರಿಯಾಗಲು ಕಾರಣ ಎನ್ನಲಾಗುತ್ತದೆ. ಮಾರುಕಟ್ಟೆ ತಜ್ಞರ ಪ್ರಕಾರ, ಜಗತ್ತಿನ ಅತೀದೊಡ್ಡ ತೈಲ ರಫ್ತುದಾರ ರಾಷ್ಟ್ರವಾಗಿರುವ ಸೌದಿ ಅರೇಬಿಯಾ ತೈಲೋತ್ಪಾದನೆಯನ್ನು ಕಡಿತಗೊಳಿಸುವ ನಿರ್ಧಾರಕ್ಕೆ ಬಂದಿರುವುದೇ ಬೆಲೆ ಏರಿಕೆಗೆ ಕಾರಣ. ಒಪೆಕ್‌ ರಾಷ್ಟ್ರಗಳು ಹಾಗೂ ಇತರ ಪ್ರಮುಖ ತೈಲೋತ್ಪಾದನಾ ರಾಷ್ಟ್ರಗಳೊಂದಿಗೆ ನಡೆದ ಸಭೆಯಲ್ಲಿ ಸೌದಿ ಅರೇಬಿಯಾ ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ನಿತ್ಯ 10 ಲಕ್ಷ ಬ್ಯಾರೆಲ್‌ಗ‌ಳಷ್ಟು ಆಂತರಿಕ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ಹೇಳಿದೆ. ಈ ಕಾರಣದಿಂದಾಗಿ, ಕಳೆದು 10 ತಿಂಗಳುಗಳಲ್ಲೇ ಜಾಗತಿಕ ಕಚ್ಚಾ ತೈಲದ ಬೆಲೆಯಲ್ಲಿ ಈ ಪರಿ ಹೆಚ್ಚಳ ಕಾಣಿಸಿಕೊಂಡಿದೆ. ಪರಿಸ್ಥಿತಿ ಹೀಗೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್‌ ಬೆಲೆ ಇನ್ನೆಷ್ಟು ಹೆಚ್ಚಬಹುದೋ ಎನ್ನುವ ಆತಂಕ ಭಾರತೀಯರನ್ನು ಕಾಡುತ್ತಿದೆ.

ಆದಾಗ್ಯೂ ತೈಲ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ನಿತ್ಯ ಪರಿಷ್ಕರಿಸಬೇಕಿದ್ದರೂ ಕೋವಿಡ್‌-19  ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪೆನಿಗಳು ಹಲವು ಸಮಯದವರೆಗೆ ಹಾಗೆ ಮಾಡಿರಲಿಲ್ಲ. ಆದರೆ ಈಗ ಏಕಾಏಕಿ ಬೆಲೆ ಹೆಚ್ಚಿಸುತ್ತಾ ಹೊರಟಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಎದುರಾಗುತ್ತದೆ. ಏಕೆಂದರೆ ಪೆಟ್ರೋಲ್‌ ಹಾಗೂ ಡೀಸೆಲ್‌ನ ಮೇಲಿನ ಅಧಿಕ ತೆರಿಗೆಯೂ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನುವುದನ್ನು ಅಲ್ಲಗಳೆಯಲಾಗದು.

ಒಂದೆಡೆ ಜಾಗತಿಕ ಕಚ್ಚಾತೈಲದ ಬೆಲೆ ಹೆಚ್ಚುತ್ತಿದ್ದಂತೆಯೇ, ಬೆಲೆ ಹೆಚ್ಚಿಸುವ ಕಂಪೆನಿಗಳು, ಕಚ್ಚಾತೈಲದ ಬೆಲೆ ಇಳಿಕೆಯಾದಾಗ ಮಾತ್ರ ಸುಮ್ಮನಾಗಿಬಿಡುತ್ತವೆ. ಕಳೆದ ಮಾರ್ಚ್‌ ತಿಂಗಳಲ್ಲಿ ಕೋವಿಡ್‌ ಹಾವಳಿ, ತತ್ಪರಿಣಾಮವಾಗಿ ವಿವಿಧ ದೇಶಗಳಲ್ಲಿ ಜಾರಿಯಾದ ಲಾಕ್‌ಡೌನ್‌ನಿಂದಾಗಿ ಜಾಗತಿಕ ಕಚ್ಚಾತೈಲದ ಬೇಡಿಕೆಯಲ್ಲಿ ಅಪಾರ ಕುಸಿತವಾಗಿ, ಬೆಲೆಯೂ ಗಣನೀಯವಾಗಿ ತಗ್ಗಿತ್ತು.

ಆಗ ತೈಲ ಮಾರಾಟ ಕಂಪೆನಿಗಳು, ಅದರ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸುವ ಪ್ರಯತ್ನ ಮಾಡಲಿಲ್ಲ. ಆದರೆ ಕಚ್ಚಾತೈಲದ ಬೆಲೆ ಏರಿಕೆಯಾದಾಗ ಮಾತ್ರ,  ಇದು ಅನಿವಾರ್ಯ ಎಂಬಂತೆ ಅತ್ತ ಬೆರಳು ತೋರಿಸುತ್ತದೆ. ಕೇಂದ್ರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಆಲೋಚನೆ  ಇಲ್ಲ ಎಂಬ ನಿಲುವಿನಲ್ಲಿದೆ. ಇತ್ತ, ಪೆಟ್ರೋಲಿಯಂನಿಂದ ಕುಸಿದ ತಮ್ಮ ಆರ್ಥಿಕತೆಯನ್ನು ಸರಿಪಡಿಸಬೇಕು ಎಂಬ ಹಠಕ್ಕೆ ಬಿದ್ದಿರುವ ರಾಜ್ಯ ಸರಕಾರಗಳೂ ತೆರಿಗೆ ತಗ್ಗಿಸಲು ಸಿದ್ಧವಿಲ್ಲ. ರಾಜ್ಯ ಸರಕಾರಗಳು ಮಾರಾಟ ತೆರಿಗೆ ಹೆಚ್ಚಿಸಿದಾಗ ಕಂಪೆನಿಗಳೂ ಆ ಹೊರೆಯನ್ನು ಗ್ರಾಹಕರ ಮೇಲೆ ಹಾಕಿದ್ದನ್ನು ಗಮನಿಸಿದ್ದೇವೆ.

ಈಗಲೂ ದೇಶವಾಸಿಗಳು ಕೊರೊನಾ ನೀಡಿರುವ ಆರ್ಥಿಕ ಪೆಟ್ಟಿನಿಂದ ಚೇತರಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ, ರಾಜ್ಯ-ಕೇಂದ್ರ ಸರಕಾರ ಗಳು-ಪೆಟ್ರೋಲಿಯಂ ಕಂಪೆನಿಗಳು ಒಂದಾಗಿ ಕುಳಿತು, ಜನರ ಮೇಲಿನ ಹೊರೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳುವಂತಾಗಲಿ.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.