ಭಾರತಕ್ಕೂ ಒಮಿಕ್ರಾನ್‌ ಪ್ರವೇಶ; ಸುಖಾಸುಮ್ಮನೆ ಆತಂಕ ಬೇಡ


Team Udayavani, Dec 3, 2021, 6:15 AM IST

ಭಾರತಕ್ಕೂ ಒಮಿಕ್ರಾನ್‌ ಪ್ರವೇಶ; ಸುಖಾಸುಮ್ಮನೆ ಆತಂಕ ಬೇಡ

ದಕ್ಷಿಣ ಆಫ್ರಿಕಾದಲ್ಲಿ ಮೊದಲಿಗೆ ಕಾಣಿಸಿಕೊಂಡು, ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಹರಡಿದ್ದ ಕೊರೊನಾದ ಹೊಸ ರೂಪಾಂತರಿ ಒಮಿಕ್ರಾನ್‌, ಈಗ ಭಾರತಕ್ಕೂ ಪ್ರವೇಶ ಕೊಟ್ಟಿದೆ. ಅದೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೂ ಕಾರಣವಾಗಿದೆ.

ಸದ್ಯ ಈ ವೈರಸ್‌ ಎಷ್ಟು ಅಪಾಯ ತರಬಲ್ಲದು ಎಂಬ ಬಗ್ಗೆ ನಾನಾ ಗೊಂದಲಗಳಿವೆ. ಕೆಲವರು ಅಂಥ ಗಂಭೀರವಾದ ಪರಿಣಾಮ ಬೀರಲ್ಲ ಎಂದಿದ್ದರೆ, ಇನ್ನೂ ಕೆಲವರು ಒಂದು ವಾರ ಕಳೆದ ಮೇಲಷ್ಟೇ ಹೇಳಲು ಸಾಧ್ಯ ಎಂದಿದ್ದಾರೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು, ಈ ಹೊಸ ರೂಪಾಂತರಿ ಭಾರತದಲ್ಲಿ ಹೆಚ್ಚು ಹರಡದಂತೆ ತಡೆಯುವ ಅಗತ್ಯವಿದೆ. ನಿಯಂತ್ರಣಕ್ಕೆ ಬೇಕಾದ ಸಿದ್ಧತೆಗಳಾದ ವಿಮಾನ ನಿಲ್ದಾಣಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ನಡೆಸುವುದು, ಬೇಗನೆ ಪರೀಕ್ಷಾ ವರದಿ ನೀಡುವುದು, ಸಾಧ್ಯವಾದಷ್ಟು ಕಠಿನ ಐಸೊಲೇಶ‌ನ್‌ ನಿಯಮ ಜಾರಿ ತರಬೇಕಾದ ಅಗತ್ಯವಿದೆ.

ಇತ್ತ ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾದವರೇ ಒಬ್ಬರು ಮತ್ತು ಬೆಂಗಳೂರಿನ ವೈದ್ಯರೊಬ್ಬರಿಗೆ ಈ ಸೋಂಕು ತಗಲಿರುವುದು ಪತ್ತೆಯಾಗಿದೆ. ವಿಚಿತ್ರವೆಂದರೆ ನ.20ರಂದು ಬೆಂಗಳೂರಿಗೆ ಬಂದಿದ್ದ ದಕ್ಷಿಣ ಆಫ್ರಿಕಾದ ಪ್ರಜೆ, ನ.27ರಂದು ವಾಪಸ್‌ ಹೋಗಿದ್ದಾರೆ. ಆದರೆ ಬೆಂಗಳೂರಿನಲ್ಲಿ ಪತ್ತೆಯಾಗಿರುವ ವೈದ್ಯರಿಗೆ ಯಾವುದೇ ವಿದೇಶಿ ಪ್ರಯಾಣದ ಹಿನ್ನೆಲೆ ಇಲ್ಲ. ಅಲ್ಲದೆ ದಕ್ಷಿಣ ಆಫ್ರಿಕಾದ ಪ್ರಜೆ ಜತೆಗೂ ಸಂಪರ್ಕ ಇರಲಿಲ್ಲ. ಇವರಿಗೆ ಹೇಗೆ ಈ ಸೋಂಕು ತಗಲಿತು ಎಂಬುದೇ ಪ್ರಶ್ನೆಯಾಗಿದೆ.

ಇದನ್ನೂ ಓದಿ:ಜೋಹರ್‌ ಕಣಿವೆ ರಸ್ತೆ 2023ರಲ್ಲಿ ಮುಕ್ತಾಯ

ಈ ವೈದ್ಯರ ಸೋಂಕಿನ ಕುರಿತು ಇನ್ನೂ ಗೊಂದಲಗಳಿರುವಂತೆಯೇ ಹಾಲಿ ನಡೆಸುತ್ತಿರುವ ಪರೀಕ್ಷೆಗಳಲ್ಲಿ ಕೆಲವಾದರೂ ಮಾದರಿಗಳನ್ನು ವಂಶವಾಹಿ ಪತ್ತೆಗೆ ಕಳುಹಿಸಬೇಕಾದ ಅಗತ್ಯವಿದೆ. ಆರಂಭದಲ್ಲೇ ಇದನ್ನು ಪತ್ತೆ ಮಾಡಿದರೆ ಎಲ್ಲೆಡೆ ಹರಡುವುದನ್ನು ತಪ್ಪಿಸಬಹುದು.

ಬೆಂಗಳೂರಿನಲ್ಲಿಯೇ ಒಮಿಕ್ರಾನ್‌ ಪತ್ತೆಯಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಒಂದಷ್ಟು ಆತಂಕದ ಸನ್ನಿವೇಶ ನಿರ್ಮಾಣವಾಗಿದೆ. ಆದರೆ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಹೆದರಬೇಡಿ. ಸೋಂಕು ಪತ್ತೆಯಾಗಿರುವ ಇಬ್ಬರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನೂ ಪತ್ತೆ ಹಚ್ಚಿ ಪರೀಕ್ಷೆ ನಡೆಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ವ್ಯಕ್ತಿಯ ಸಂಪರ್ಕಿತರಲ್ಲಿ ಯಾರಿಗೂ ಪಾಸಿಟಿವ್‌ ಬಂದಿಲ್ಲ ಎಂದು ತಿಳಿಸಿದೆ. ಇದು ಒಂದಷ್ಟು ಸಮಾಧಾನಕರ ಸಂಗತಿಯಾಗಿದೆ.

ಸದ್ಯದ ಮಟ್ಟಿಗೆ ಒಮಿಕ್ರಾನ್‌ ಬರದಂತೆ ತಡೆಯುವ ಶಕ್ತಿ ಸರಕಾರಗಳಿಗಾಗಲಿ ಅಥವಾ ಜನರಿಗಾಗಲಿ ಇಲ್ಲ. ಆದರೆ ನಮ್ಮ ಬಳಿ ಬರದಂತೆ ಮಾತ್ರ ನಾವೇ ನೋಡಿಕೊಳ್ಳಬಹುದು. ಅಂದರೆ ಸರಕಾರ ಈಗಾಗಲೇ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅಲ್ಲದೆ ದಕ್ಷಿಣ ಆಫ್ರಿಕಾದ ಪ್ರಕರಣಗಳು ಮತ್ತು ಇಲ್ಲಿನ ಪ್ರಕರಣಗಳನ್ನು ನೋಡಿದರೆ ಒಮಿಕ್ರಾನ್‌ಗೆ ಹೆಚ್ಚು ಹರಡುವ ಶಕ್ತಿ ಇದೆಯೇ ಹೊರತು, ಆರೋಗ್ಯದ ಮೇಲೆ ಗಂಭೀರವಾದ ದುಷ್ಪರಿಣಾಮ ಆಗಿರುವ ವರದಿಗಳಿಲ್ಲ. ಇದನ್ನು ಸಚಿವ ಸುಧಾಕರ್‌ ಅವರೂ ಇಲ್ಲಿನ ಕೇಸ್‌ಗಳನ್ನು ಪರಿಶೀಲಿಸಿ ಹೇಳಿದ್ದಾರೆ. ಹೀಗಾಗಿ ಜನ ಆತಂಕಕ್ಕೆ ಈಡಾಗುವ ಬದಲು ಮುನ್ನೆಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಒಮಿಕ್ರಾನ್‌ ಬಂದಿದೆಯಂತೆ, ಇದು ಭಾರೀ ಅಪಾಯವಂತೆ ಎಂಬೆಲ್ಲ ವದಂತಿಗಳನ್ನು ನಂಬ ಬಾರದು ಮತ್ತು ಭಯವನ್ನು ಹರಡಬಾರದು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.