ಏಕಕಾಲ ಚುನಾವಣೆ; ರಮ್ಯ ಚಿಂತನೆ-ಅನುಷ್ಠಾನ ಕಷ್ಟಸಾಧ್ಯ


Team Udayavani, Apr 13, 2018, 6:28 PM IST

One-election.jpg

ಕಾನೂನು ಆಯೋಗ ದೇಶಾದ್ಯಂತ ಎರಡು ಹಂತಗಳಲ್ಲಿ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಚುನಾವಣೆ ನಡೆಸಲು ರೂಪುರೇಷೆ ಹಾಕಿಕೊಡುವುದರೊಂದಿಗೆ “ಒಂದು ದೇಶ ಒಂದು ಚುನಾವಣೆ’ ಎಂಬ ಪದ್ಧತಿಯನ್ನು ಜಾರಿಗೆ ತರುವ ಪ್ರಯತ್ನದಲ್ಲಿ ಕೇಂದ್ರ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಲೋಕಸಭೆಗೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಪದೇ ಪದೇ ಚುನಾವಣೆ ನಡೆಸುವ ಬದಲಾಗಿ ಒಂದೇ ಸಲ ನಡೆಸಬೇಕೆನ್ನುವ ಆಶಯದೊಂದಿಗೆ ಹುಟ್ಟಿಕೊಂಡಿರುವ ವಾದವಿದು. ಪ್ರಸ್ತುತ ಎನ್‌ಡಿಎ ಸರಕಾರ ಏಕಕಾಲದಲ್ಲಿ ಚುನಾವಣೆ ನಡೆಸುವ ವಾದದ ಪರವಾಗಿದೆ.

ಪ್ರಧಾನಿ ಮೋದಿ ಅವಕಾಶ ಸಿಕ್ಕಿದಾಗಲೆಲ್ಲ ಈ ವಿಚಾರವನ್ನು ಪ್ರಸ್ತಾವಿಸುತ್ತಿದ್ದಾರೆ. ಪದೇ ಪದೇ ಚುನಾವಣೆ ನಡೆಸಲು ಅಪಾರ ವೆಚ್ಚವಾಗುತ್ತಿದೆ, ಭದ್ರತಾ ಸಿಬಂದಿಗಳು ಮತ್ತು ಸರಕಾರಿ ನೌಕರರನ್ನು ಚುನಾವಣಾ ಕರ್ತವ್ಯಕ್ಕೆ  ನಿಯೋಜಿಸಬೇಕಾಗುತ್ತದೆ, ನೀತಿ ಸಂಹಿತೆ ಜಾರಿಯಾದ ಬಳಿಕ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗದೆ ಆಡಳಿತ ಕುಂಟುತ್ತದೆ ಮತ್ತು ಜನಜೀವನ ಬಾಧಿತವಾಗುತ್ತದೆ ಎನ್ನುವುದು ಏಕಕಾಲಕ್ಕೆ ಚುನಾವಣೆ ನಡೆಯಬೇಕೆಂದು ಹೇಳುವವರು ಮಂಡಿಸುವ ತರ್ಕ. ಐದು ವರ್ಷಕ್ಕೊಮ್ಮೆ ಮಾತ್ರ ಚುನಾವಣೆ ನಡೆಯುತ್ತದೆ
ಎಂದಾದರೆ ರಾಜಕೀಯ ಪಕ್ಷಗಳು ಮತ್ತು ಸರಕಾರಗಳು ಸಂಪೂರ್ಣವಾಗಿ ಆಡಳಿತ ಮತ್ತು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿ ಕೊಳ್ಳಬಹುದು ಎನ್ನುವುದು ಕಲ್ಪಿಸಿಕೊಳ್ಳಲು ಬಹಳ ರಮ್ಯವಾಗಿದೆ.

ಆದರೆ ವಾಸ್ತವದಲ್ಲಿ ಇದು ಸಾಧ್ಯವೇ ಎನ್ನುವುದು ಮುಖ್ಯ ಪ್ರಶ್ನೆ. ಏಕಕಾಲದಲ್ಲಿ ಚುನಾವಣೆ ನಡೆಸುವುದನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌ ಸೇರಿದಂತೆ ಎಲ್ಲ ವಿಪಕ್ಷಗಳು ಈ ಅಂಶದ ಬಗ್ಗೆ ಚಿಂತನೆ ನಡೆಸಿರುವಂತೆ ಕಾಣಿಸುವುದಿಲ್ಲ. ಅವುಗಳ ಹೆದರಿಕೆ ಏಕಕಾಲದಲ್ಲಿ ಚುನಾವಣೆ ನಡೆದರೆ ಆ ಸಂದರ್ಭದಲ್ಲಿ ಯಾವ ಪಕ್ಷದ ಅಲೆಯಿರುತ್ತದೋ ಅದೇ ಪಕ್ಷ ಕೇಂದ್ರ ಮತ್ತು ಎಲ್ಲ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಬಹುದು. ಹೀಗಾದರೆ ನಾವು ಅಧಿಕಾರ ಅನುಭವಿಸಲು ಮತ್ತೆ ಐದು ವರ್ಷ ಕಾದು ಕುಳಿತುಕೊಳ್ಳಬೇಕಲ್ಲ ಎಂಬಷ್ಟಕ್ಕೆ ಸೀಮಿತ. ಇನ್ನು, ಚುನಾವಣೆ ನಡೆಸಲು ಭಾರೀ ಪ್ರಮಾಣದ ಹಣ ಖರ್ಚಾಗುತ್ತದೆ ಎನ್ನುವುದು ಏಕಕಾಲದಲ್ಲಿ ಚುನಾವಣೆ ನಡೆಯಲಿ ಎನ್ನುವುದಕ್ಕೆ ಬಲವಾದ ಸಮರ್ಥನೆಯಲ್ಲ. ಚುನಾವಣಾ ಆಯೋಗದ ಅಂದಾಜಿನ ಪ್ರಕಾರ ಲೋಕಸಭೆ ಚುನಾವಣೆಗೆ ಸುಮಾರು 8000 ಕೋ. ರೂ. ಖರ್ಚಾಗುತ್ತದೆ.

ಅಂದರೆ ಪ್ರತಿಯೊಬ್ಬ ಮತದಾರನಿಗೆ ಸರಾಸರಿ 27 ರೂಪಾಯಿಯಂತೆ ಖರ್ಚು ಬೀಳುತ್ತದೆ. ಜಗತ್ತಿನ 6ನೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿರುವ ರಾಷ್ಟ್ರಕ್ಕೆ 5 ವರ್ಷಕ್ಕೊಮ್ಮೆ ಇಷ್ಟು ಖರ್ಚು ಮಾಡುವುದು ದೊಡ್ಡ ಹೊರೆಯಾಗದು.

ನಿಜವಾಗಿ ನಾವು ತಲೆಕೆಡಿಕೊಳ್ಳಬೇಕಾದದ್ದು ಚುನಾವಣೆಯಲ್ಲಿ ಚಲಾವಣೆ ಯಾಗುವ ಕಪ್ಪುಹಣದ ಬಗ್ಗೆ. ಚುನಾವಣೆ ಗೆಲ್ಲಲು ಕೋಟಿಗಟ್ಟಲೆ ಖರ್ಚು ಮಾಡುವವರು ಗೆದ್ದು ಬಂದ ಬಳಿಕ ಮರಳಿ ಗಳಿಸಲು ಅಡ್ಡದಾರಿ ಹಿಡಿಯುತ್ತಾರೆ. ಹೀಗೆ ಸಂಗ್ರಹವಾಗುವ ಕಪ್ಪುಹಣವೇ ಅನಂತರ ರಾಜಕೀಯವನ್ನು ನಿರ್ದೇಶಿಸುತ್ತಾ ಹೋಗುತ್ತದೆ. ಏಕಕಾಲದ ಚುನಾವಣೆ ಯಿಂದ ಕಪ್ಪುಹಣದ ಹರಿವನ್ನು ನಿಯಂತ್ರಿಸಲು  ಸಾಧ್ಯವಾದರೆ ಪ್ರಯೋಜನ ವಾದೀತು.

ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಅವಿಶ್ವಾಸ ಮತ ಮಂಡಿಸಿ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಸಾಂವಿಧಾನಿಕ ಹಕ್ಕಿಗೆ ಚ್ಯುತಿಯಾಗುವ ಸಾಧ್ಯತೆಯಿದೆ. ಬಹುಮತ ಇರಲಿ ಇಲ್ಲದಿರಲಿ ಐದು ವರ್ಷಸರಕಾರವನ್ನು ಸಹಿಸಿಕೊಳ್ಳಬೇಕು ಇಲ್ಲವೇ ರಾಷ್ಟ್ರಪತಿಯ ಕೈಗೆ ಚುಕ್ಕಾಣಿಯನ್ನು ನೀಡಬೇಕು. ಈ ಅಂಶಗಳತ್ತಲೂ ಗಮನ ಹರಿಸುವುದು ಅಗತ್ಯ. ಏನೇ ಆದರೂ ಏಕಕಾಲದಲ್ಲಿ ಚುನಾವಣೆ ನಡೆಸುವುದು ಕೆಟ್ಟ ಚಿಂತನೆಯಂತೂ ಅಲ್ಲ. ಆದರೆ ಯಾವ ರೀತಿ ಅದನ್ನು ಸಂವಿಧಾನ ಮತ್ತು ಪ್ರಜಾತಂತ್ರದ ಮೂಲ ಆಶಯಗಳಿಗೆ ಧಕ್ಕೆಯಾಗದಂತೆ ಜಾರಿಗೆ ತರಬಹುದು ಎನ್ನುವುದನ್ನು ಸ್ಪಷ್ಟ ಪಡಿಸಿಕೊಳ್ಳುವ ಅಗತ್ಯವಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.