ಪಿಒಕೆ ಕಬಳಿಸಲು ಪಾಕ್‌ನೊಂದಿಗೆ ಕೈಜೋಡಿಸಿದ ಚೀನ


Team Udayavani, Jun 24, 2022, 6:00 AM IST

ಪಿಒಕೆ ಕಬಳಿಸಲು ಪಾಕ್‌ನೊಂದಿಗೆ ಕೈಜೋಡಿಸಿದ ಚೀನ

ಸಾಲದ ಸುಳಿಗೆ ಸಿಲುಕಿ ಆರ್ಥಿಕ ದಿವಾಳಿಯತ್ತ ಮುಖ ಮಾಡಿರುವ ಪಾಕಿಸ್ಥಾನ ಇದೀಗ ತನ್ನನ್ನು ಪಾರು ಮಾಡಿಕೊಳ್ಳಲು ಹರಸಾಹಸ ಪಡುತ್ತಿದೆ. ಪಾಕಿಸ್ಥಾನದ ಪಾಲಿಗೆ ಪರಮಾಪ್ತ ರಾಷ್ಟ್ರವಾಗಿರುವ ಚೀನ ಭರಪೂರ ಪ್ರಮಾಣದಲ್ಲಿ ಹಣಕಾಸು ನೆರವನ್ನು ನೀಡುತ್ತಿದ್ದರೂ ತೀವ್ರ ಸಂಕಷ್ಟದಿಂದ ನರಳುತ್ತಿರುವ ಪಾಕಿಸ್ಥಾನದ ಪಾಲಿಗೆ “ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ಎಂಬಂತಾಗಿದೆ.

ಈ ಹಿನ್ನೆಲೆಯಲ್ಲಿ ಚೀನದಿಂದ ಮತ್ತಷ್ಟು ಹಣಕಾಸು ನೆರವನ್ನು ಪಡೆ ಯುವ ಉದ್ದೇಶದಿಂದ ಪಾಕಿಸ್ಥಾನ, ಪಾಕ್‌ ಆಕ್ರಮಿತ ಪ್ರದೇಶದ ಭಾಗವಾದ ಗಿಲ್ಗಿಟ್- ಬಾಲ್ಟಿಸ್ಥಾನ್‌ ಅನ್ನು ಲೀಸ್‌ ಆಧಾರದಲ್ಲಿ ಚೀನಕ್ಕೆ ಹಸ್ತಾಂತರಿಸಲು ಗಂಭೀರ ಚಿಂತನೆ ನಡೆಸಿದೆ ಎಂದು ಕಾರಕೋರಂ ನ್ಯಾಶನಲ್‌ ಮೂವ್‌ಮೆಂಟ್‌ನ ಅಧ್ಯಕ್ಷ ಮುಮ್ತಾಜ್‌ ನಗ್ರಿ ಗಂಭೀರ ಆರೋಪ ಮಾಡಿದ್ದಾರೆ. ಒಂದು ವೇಳೆ ಪಾಕಿಸ್ಥಾನ ಸರಕಾರ ಇಂಥ ನಿರ್ಧಾರವನ್ನು ಕೈಗೊಂಡದ್ದೇ ಆದಲ್ಲಿ ಈಗಾಗಲೇ ಪ್ರತ್ಯೇಕತಾವಾದ ಮತ್ತು ಪಾಕಿಸ್ಥಾನ ಸರಕಾರದ ತೀವ್ರ ನಿರ್ಲಕ್ಷ್ಯದಿಂದಾಗಿ ಕನಿಷ್ಠ ಮೂಲ ಸೌಲಭ್ಯ ಗಳಿಂದ ವಂಚಿತವಾಗಿರುವ ಈ ಪ್ರದೇಶ ಸದ್ಯೋಭವಿಷ್ಯದಲ್ಲಿ ಯುದ್ಧ ಭೂಮಿಯಾಗಿ ಮಾರ್ಪಡುವ ಎಲ್ಲ ಸಾಧ್ಯತೆಗಳಿವೆ ಎಂದವರು ಆತಂಕ ವ್ಯಕ್ತಪಡಿಸಿದ್ದಾರೆ. ಚೀನ-ಪಾಕಿಸ್ಥಾನ ನಡುವಣ ಆರ್ಥಿಕ ಕಾರಿಡಾರ್‌ ಒಪ್ಪಂದದ ಭಾಗವಾಗಿ ಚೀನ, ಪಿಒಕೆಯ ಭಾಗವಾಗಿರುವ ಗಿಲ್ಗಿಟ್- ಬಾಲ್ಟಿಸ್ಥಾನ್‌ ಭಾಗದಲ್ಲಿ ಬಂಡವಾಳ ಹೂಡಿ ತನಗೆ ಅಗತ್ಯವಿರುವೆಡೆ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸುತ್ತ ಬಂದಿದೆ. ಈ ಮೂಲಕ ಚೀನ ಮತ್ತು ಪಾಕಿಸ್ಥಾನ ಜಂಟಿಯಾಗಿ ಭಾರತದ ವಿರುದ್ಧ ಷಡ್ಯಂತ್ರ ಹೂಡಿದ್ದು, ಈ ಬೆಳವಣಿಗೆಯ ಮುಂದುವರಿದ ಭಾಗವೇ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಚೀನದ ವಶಕ್ಕೆ ಒಪ್ಪಿಸುವುದಾಗಿದೆ ಎಂಬ ವಿಶ್ಲೇಷಣೆಯೂ ಕೇಳಿಬಂದಿದೆ.

ಆರ್ಥಿಕ ಸಂಕಷ್ಟದಿಂದ ಪಾರಾಗಲು ಪಾಕಿಸ್ಥಾನ ಸರಕಾರ ಚೀನದ ಮುಂದೆ ಈ ಪ್ರಸ್ತಾವ ಇಟ್ಟಿದೆ ಎನ್ನಲಾಗುತ್ತಿದೆಯಾದರೂ ಪಾಕಿಸ್ಥಾನ ಸರಕಾರ ಮಾತ್ರ ಈ ವರದಿ ನಿರಾಕರಿಸಿದೆ. ಆದರೂ ಪಾಕ್‌ ಮತ್ತು ಚೀನ ಜಂಟಿ ಷಡ್ಯಂತ್ರ ಹೂಡಿರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು.

ಆದರೆ ಪಾಕಿಸ್ಥಾನದ ಯಾವುದೇ ಹೇಳಿಕೆಗಳನ್ನು ಭಾರತ ಸಹಿತ ವಿಶ್ವ ಸಮುದಾಯ ನಂಬುವ ಸ್ಥಿತಿಯಲ್ಲಿ ಇಲ್ಲ. ಭಯೋತ್ಪಾದಕರಿಗೆ ಆಶ್ರಯ, ಹಣಕಾಸು ನೆರವು ಮತ್ತಿತರ ವಿಚಾರದಲ್ಲಿ ಪಾಕಿಸ್ಥಾನ ದಶಕಗಳಿಂದ ತನ್ನ ಗೋಸುಂಬೆತನವನ್ನು ಪ್ರದರ್ಶಿಸುತ್ತ ಬಂದಿರುವುದರಿಂದ ಈ ಸ್ಪಷ್ಟನೆಯ ಕುರಿತಂತೆಯೂ ಸಹಜವಾಗಿಯೇ ಅನುಮಾನ ವ್ಯಕ್ತವಾಗಿದೆ.

ದಕ್ಷಿಣ ಏಷ್ಯಾದಲ್ಲಿ ತನ್ನ ಪ್ರಾಬಲ್ಯವನ್ನು ವೃದ್ಧಿಸಿಕೊಳ್ಳುವ ಪ್ರಯತ್ನದಲ್ಲಿ­ರುವ ಮತ್ತು ವಿಸ್ತರಣಾವಾದದ ಗುಂಗಿನಲ್ಲಿರುವ ಚೀನದ ಪಾಲಿಗೆ ಪಾಕಿಸ್ಥಾನದ ಈ ಪ್ರಸ್ತಾವ ಬಲುದೊಡ್ಡ ವರದಾನವಾಗಿ ಪರಿಣಮಿಸಲಿದೆ. ಆದರೆ ಪಾಕ್‌ ಆಕ್ರ ಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು ಸದ್ಯ ಪಾಕ್‌ನ ವಶದಲ್ಲಿದೆ. ಇಂಥ ಪರಿಸ್ಥಿತಿಯಲ್ಲಿ ಪಾಕಿಸ್ಥಾನದ ಈ ಪ್ರಸ್ತಾವ ಘನಘೋರ ಪ್ರಮಾದ ವಾಗಲಿದೆಯಲ್ಲದೆ ತಕ್ಕ ಶಾಸ್ತಿ ಅನುಭವಿಸಲಿದೆ.

ಲೀಸ್‌ ಪ್ರಸ್ತಾವನೆ ಭಾರತದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಗಡಿಭಾಗದಲ್ಲಿ ಚೀನ ಮತ್ತೆ ತಕರಾರು ಆರಂಭಿಸುವ ಸಾಧ್ಯತೆ ಇದೆಯಲ್ಲದೆ ವಾಣಿಜ್ಯ-ವ್ಯವಹಾರ ಕ್ಷೇತ್ರಗಳಲ್ಲೂ ಭಾರೀ ಪ್ರತಿಕೂಲ ಪರಿಣಾಮಗಳನ್ನು ಎದುರಿಸಬೇಕಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ಪಾಕ್‌ಗೆ ಇಂಥ ಪ್ರಯತ್ನಕ್ಕೆ ಕೈಹಾಕದಂತೆ ಎಚ್ಚರಿಕೆ ನೀಡುವ ಜತೆಗೆ ಇವರಿಬ್ಬರ ಷಡ್ಯಂತ್ರದ ಕುರಿತಂತೆ ಜಾಗತಿಕ ಸಮುದಾಯದ ಗಮನ ಸೆಳೆಯಬೇಕಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.