ಪಾಕ್‌ ಹೊಸ ನಕ್ಷೆ; ನಿಲ್ಲದ ಹುಚ್ಚಾಟ


Team Udayavani, Aug 8, 2020, 10:09 AM IST

ಪಾಕ್‌ ಹೊಸ ನಕ್ಷೆ; ನಿಲ್ಲದ ಹುಚ್ಚಾಟ

ಸಾಂದರ್ಭಿಕ ಚಿತ್ರ

ಭಾರತದೊಂದಿಗೆ ಗಡಿ ವಿಷಯದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ತಂಟೆ ತೆಗೆಯದಿದ್ದರೆ ಪಾಕಿಸ್ಥಾನದ ಮನಸ್ಸಿಗೆ ನೆಮ್ಮದಿಯೇ ಇರದೇನೋ. ಈಗ ಇಮ್ರಾನ್‌ ಸರಕಾರ ಕಾಶ್ಮೀರದ ಸಿಯಾಚಿನ್‌ನಿಂದ ಹಿಡಿದು, ಗುಜರಾತ್‌ನ ಜುನಾಗಢದವರೆಗಿನ ಪ್ರದೇಶ ತನ್ನದೆಂದು ಹೇಳುತ್ತಿದೆ. ಪಾಕಿಸ್ಥಾನದ ಸಚಿವ ಸಂಪುಟವು ಮಂಗಳವಾರ ಹೊಸ ನಕ್ಷೆ ಬಿಡುಗಡೆ ಮಾಡಿದ್ದು, ಭಾರತದ ಈ ಭೂಪ್ರದೇಶಗಳೆಲ್ಲ ತನ್ನವು ಎಂದು ಹೇಳುತ್ತಿದೆ ಪಾಕಿಸ್ಥಾನ. ಈಗ ಈ ನಕ್ಷೆಯನ್ನು ವಿಶ್ವಸಂಸ್ಥೆಯಲ್ಲಿ ಮಂಡಿಸಲು ಪಾಕ್‌ ನಿರ್ಧರಿಸಿದೆಯಂತೆ.

ಗಮನಿಸಬೇಕಾದ ಅಂಶವೆಂದರೆ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್‌ 370 ರದ್ದತಿಯ ವಿಷಯ ಪಾಕಿಸ್ಥಾನಕ್ಕೆ ಬಹಳವೇ ಯಾತನೆ ನೀಡುತ್ತಿದೆ. ಹೀಗಾಗಿ, ಅವಕಾಶ ಸಿಕ್ಕಾಗಲೆಲ್ಲ ಈ ವಿಷಯವನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ವಿವಾದ ಮಾಡಲು ಇಮ್ರಾನ್‌ ಸರಕಾರ ಪ್ರಯತ್ನಿಸುತ್ತಲೇ ಇದೆಯಾದರೂ, ಅದರ ಮಾತನ್ನು ಕೇಳಿಸಿಕೊಳ್ಳುವವರು ಯಾರೂ ಇಲ್ಲ. ಪಾಕಿಸ್ಥಾನ ತನ್ನ ನಕ್ಷೆಯಲ್ಲಿ ಹಠಾತ್ತನೆ ಬದಲಾವಣೆ ಮಾಡಿರುವುದೂ ಸಹ, ಈ ಹಿನ್ನೆಲೆಯಲ್ಲಿಯೇ ಎಂಬುದು ಸ್ಪಷ್ಟ.

ಕೆಲವು ಸಮಯದ ಹಿಂದೆ ನೇಪಾಲ ಸಹ ಇದೇ ರೀತಿಯಲ್ಲೇ ಹೊಸ ನಕ್ಷೆಯೊಂದನ್ನು ಬಿಡುಗಡೆ ಮಾಡಿ, ಭಾರತಕ್ಕೆ ಸೇರಿದ ಕಾಲಾಪಾನಿ, ಲಿಪುಲೇಖ ಹಾಗೂ ಲಿಂಪಿಯಾಧುರಾ ಪ್ರದೇಶಗಳನ್ನು ತನ್ನದೆಂದು ಹೇಳಿತು. ಇನ್ನೊಂದೆಡೆ ಚೀನ ಸಹ ಭಾರತದೊಂದಿಗೆ ಗಡಿ ವಿಚಾರದಲ್ಲಿ ಬಿಕ್ಕಟ್ಟು ಸೃಷ್ಟಿಸಿದೆ. ಇವನ್ನೆಲ್ಲ ಗಮನಿಸಿದಾಗ ಇದು ಭಾರತಕ್ಕೆ ತೊಂದರೆ ಕೊಡುವ ಉದ್ದೇಶದಿಂದ ಚೀನದ ಜತೆ ಕೈಜೋಡಿಸಿ ಇವೆರಡೂ ರಾಷ್ಟ್ರಗಳು ಮಾಡುತ್ತಿರುವ ಕುತಂತ್ರ ಎಂದೂ ಅನಿಸುತ್ತದೆ. ಆದರೆ ಗಮನಾರ್ಹ ಸಂಗತಿಯೆಂದರೆ, ಈಗಾಗಲೇ ನೇಪಾಲದ ಪ್ರಧಾನಿ ಕೆ.ಪಿ. ಓಲಿ ತಮ್ಮ ಭಾರತ ವಿರೋಧಿ ನೀತಿಯಿಂದಾಗಿ ಅಧಿಕಾರ ಕಳೆದುಕೊಳ್ಳುವ ಸ್ಥಿತಿ ತಲುಪಿದ್ದಾರೆ.

ಈ ಕಾರಣದಿಂದಾಗಿಯೇ ಕೆಲವು ಸಮಯದಿಂದ ಅವರು ಭಾರತದ ವಿಷಯದಲ್ಲಿ ಸುಮ್ಮನಾಗಿಬಿಟ್ಟಿದ್ದಾರೆ. ಇತ್ತ ಈಗ ಪಾಕಿಸ್ಥಾನವೂ ಸಹ ಚೀನವನ್ನು ಮೆಚ್ಚಿಸುವುದಕ್ಕಾಗಿ ಅಥವಾ ಅದರ ಕುಮ್ಮಕ್ಕಿನಿಂದಲೇ ಹೊಸ ನಕ್ಷೆಯ ಆಟ ಆಡುತ್ತಿರಬಹುದು. ಇಮ್ರಾನ್‌ ಖಾನ್‌ ಅಧಿಕಾರಕ್ಕೆ ಬಂದಾಗ ತಾವು ಪಾಕಿಸ್ಥಾನವನ್ನು ಹೊಸ ದಿಕ್ಕಿಗೆ ಕರೆದೊಯ್ಯುವ ಬಗ್ಗೆ ಭಾಷಣ ಮಾಡುತ್ತಲೇ ಇದ್ದರು. ಅವರೂ ಸಹ ಉಗ್ರಪರ ಧೋರಣೆಯನ್ನು, ಭಾರತ ವಿರೋಧಿ ಮನಃಸ್ಥಿತಿಯನ್ನು ಢಾಳಾಗಿಯೇ ಪ್ರದರ್ಶಿಸುತ್ತಿದ್ದಾರೆ. ಪಾಕಿಸ್ಥಾನದ ಈ ಹುಚ್ಚಾಟಕ್ಕೆ ಮಣೆ ಹಾಕುವ ಮನಃಸ್ಥಿತಿ ಈಗ ಎಲ್ಲೂ ಉಳಿದಿಲ್ಲ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.