ಧ್ಯಾನ್‌ಚಂದ್‌ ಪಾದಕ್ಕೆ ಹೂವಾದ 3 ಪ್ಯಾರಾ ಪದಕಗಳು


Team Udayavani, Aug 30, 2021, 6:10 AM IST

Untitled-1

ರವಿವಾರ ಹಾಕಿ ದೇವರು ಮೇಜರ್‌ ಧ್ಯಾನ್‌ಚಂದ್‌ ಅವರ 116ನೇ ಜನ್ಮದಿನ. ಅವರು ಹುಟ್ಟಿದ ದಿನವನ್ನು ರಾಷ್ಟ್ರೀಯ ಕ್ರೀಡಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಈ ರೀತಿಯ ಸಂಭ್ರಮ ಜಾರಿಯಲ್ಲಿ ರುವಾಗಲೇ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿರುವ ಭಾರತೀಯ ಕ್ರೀಡಾಪಟುಗಳು ಅದ್ಭುತ ಕೊಡುಗೆ ನೀಡಿದ್ದಾರೆ. ಈ ಒಂದೇ ದಿನ ಭಾರತೀಯರು 2 ಬೆಳ್ಳಿ, 1 ಕಂಚಿನ ಸಹಿತ ಮೂರು ಪದಕಗಳನ್ನು ಗೆದ್ದಿದ್ದಾರೆ. ರವಿವಾರ ಬೆಳಗ್ಗೆ ನಡೆದ ಮಹಿಳಾ ಟೇಬಲ್‌ ಟೆನಿಸ್‌ ಫೈನಲ್‌ನಲ್ಲಿ ಗುಜರಾತ್‌ನ ಭವಿನಾಬೆನ್‌ ಪಟೇಲ್‌, ಚೀನದ ಯಿಂಗ್‌ ಝೌ ವಿರುದ್ಧ ಸೋತರು. ಈ ಸೋಲಿನ ಹೊರತಾಗಿಯೂ ಪ್ಯಾರಾಲಿಂಪಿಕ್ಸ್‌ ಟಿಟಿಯಲ್ಲಿ ಬೆಳ್ಳಿ ಗೆದ್ದ ದೇಶದ ಮೊದಲ ಸಾಧಕಿ ಎನಿಸಿಕೊಂಡರು. ದೇಶೀಯರು ಈ ಗೆಲುವಿನ ಸಂಭ್ರಮದಲ್ಲಿದ್ದಾಗಲೇ ನಿಶಾದ್‌ ಕುಮಾರ್‌ ಮತ್ತೂಂದು ಸಿಹಿ ಸುದ್ದಿಯನ್ನು ನೀಡಿದರು. ಅವರು ಎತ್ತರ ಜಿಗಿತದ ಟಿ47 ವಿಭಾಗದಲ್ಲಿ 2.06 ಮೀಟರ್‌ನಷ್ಟು ಮೇಲೆ ಜಿಗಿದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡು ತಮ್ಮದೇ ಏಷ್ಯಾ ದಾಖಲೆಯನ್ನು ಸರಿಗಟ್ಟಿದರು.

ಈ ಇಬ್ಬರ ಅಪೂರ್ವ ಸಾಧನೆಯಲ್ಲಿ ಭಾರತೀಯರು ತೇಲಾಡು ತ್ತಿದ್ದಾಗಲೇ ಅದನ್ನು ಇನ್ನೂ ಹೆಚ್ಚಿಸಿದ್ದು ವಿನೋದ್‌ ಕುಮಾರ್‌. ಅವರು ಡಿಸ್ಕಸ್‌ ಎಸೆತದ ಎಫ್52 ಫೈನಲ್‌ನಲ್ಲಿ ಏಷ್ಯಾ ದಾಖಲೆಯನ್ನು ನಿರ್ಮಿಸಿದರು. ಎಸೆದಿದ್ದು 19.91 ಮೀ. ದೂರ. ಅವರಿಗೆ ಕಂಚಿನ ಪದಕ ಲಭಿಸಿತು. ಇದೊಂದು ರೀತಿಯಲ್ಲಿ ಭಾರತೀಯ ಕ್ರೀಡಾ ಮಾಂತ್ರಿಕ ಧ್ಯಾನ್‌ಚಂದ್‌ಗೆ ನೀಡಿದ ಗೌರವ ಪುರಸ್ಕಾರವೆಂದರೂ ಸರಿಯೇ. ಇದೊಂದು ಸಾರ್ಥಕ ಸಾಧನೆ.

ಭಾರತದಲ್ಲಿನ ಈಗಿನ ಪೀಳಿಗೆಯೂ ಧ್ಯಾನ್‌ಚಂದ್‌ ಹೆಸರನ್ನು ಕೇಳಿಕೊಂಡೇ ಬೆಳೆದಿರುತ್ತದೆ. ಇದಕ್ಕೆ ಕಾರಣಗಳು ಹಲವಿವೆ. ಈ ವ್ಯಕ್ತಿ ಮೂರು ಒಲಿಂಪಿಕ್ಸ್‌ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಜರ್ಮನಿಯ ಮಾಜಿ ಸರ್ವಾಧಿಕಾರಿ ಹಿಟ್ಲರ್‌; ಅವರ ಆಟವನ್ನು ನೋಡಿ ವಿಸ್ಮಿತರಾಗಿ, ತಮ್ಮ ದೇಶಕ್ಕೇ ಬಂದು ನೆಲೆಸಿ ಎಂದು ಎಲ್ಲರೆದುರೇ ಆಹ್ವಾನ ನೀಡಿದ್ದರು. 1928, 1932, 1936ರಲ್ಲಿ ಅವರಿದ್ದ ಭಾರತೀಯ ಹಾಕಿ ತಂಡ ಒಲಿಂಪಿಕ್ಸ್‌ ನಲ್ಲಿ ಚಿನ್ನದ ಪದಕವನ್ನೇ ಗೆದ್ದಿತ್ತು. ಈ ಮೂರೂ ಕೂಟಗಳಲ್ಲಿ ಅವರು ಗೋಲಿನ ಸುರಿಮಳೆಯನ್ನೇ ಸುರಿಸಿದ್ದರು. ಅವರ ಆಟದ ಮಾಂತ್ರಿಕತೆ ಹಾಗಿತ್ತು. ಇತ್ತೀಚೆಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದಿತ್ತು. ಅದಾದ ಮೇಲೆ ಕೂಡಲೇ ದೇಶದ ಪರಮೋಚ್ಚ ಕ್ರೀಡಾಪ್ರಶಸ್ತಿ ಖೇಲ್‌ರತ್ನಕ್ಕೆ; ಧ್ಯಾನ್‌ಚಂದ್‌ ಖೇಲ್‌ರತ್ನ ಎಂದು ನಾಮಕರಣ ಮಾಡಲಾಯಿತು. ಅದಕ್ಕೂ ಮುನ್ನ ಅದನ್ನು ರಾಜೀವ್‌ ಖೇಲ್‌ರತ್ನ ಎಂದು ಕರೆಯಲಾಗುತ್ತಿತ್ತು. ವಿಶ್ವದ ಇನ್ನೊಂದು ರಾಷ್ಟ್ರದಲ್ಲಿ ಅಂತಹ ಹಾಕಿ ಮಾಂತ್ರಿಕ ಮತ್ತೆ ಕಾಣಿಸಿಕೊಂಡಿಲ್ಲ ಎನ್ನುವುದು ಧ್ಯಾನ್‌ಚಂದ್‌ ಸಾಮರ್ಥ್ಯಕ್ಕೆ ಸಾಕ್ಷಿ.

ಧ್ಯಾನ್‌ಚಂದ್‌ 1905, ಆ.29ರಂದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನಿಸಿದರು. 1979, ಡಿ.3ರಂದು ಹೊಸದಿಲ್ಲಿಯಲ್ಲಿ ನಿಧನ ಹೊಂದಿದರು. ಇಂತಹ ಮಹಾನ್‌ ಚೇತನಕ್ಕೆ ಭಾರತರತ್ನ ಸಿಗಲಿಲ್ಲ ಎಂಬ ಕೊರಗು ದೇಶವಾಸಿಗಳಿಗಿದ್ದೇ ಇದೆ. ಆದರೆ ಕೆಲವರು ಪ್ರಶಸ್ತಿಗಳನ್ನೂ ಮೀರಿರುತ್ತಾರೆ. ಅವರ ಸಾಧನೆಯನ್ನು ಪುರಸ್ಕಾರಗಳಿಂದ ಅಳೆಯಲು ಸಾಧ್ಯವೇ ಅಲ್ಲ. ಅಂತಹ ಅಪೂರ್ವ ಚೇತನಕ್ಕೆ ಪ್ಯಾರಾಲಿಂಪಿಕ್ಸ್‌ನಲ್ಲಿ ರವಿವಾರ ಭಾರತೀಯರು ಗೆದ್ದ ಮೂರು ಪದಕಗಳೇ ಹೂವಿನಂತೆ ಅರ್ಪಿತವಾಗಲಿ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.