ಸಂಸತ್‌ ಅಧಿವೇಶನ: ಹಠ, ಪ್ರತಿಷ್ಠೆ ಬಿಟ್ಟು ಸುಗಮ ಕಲಾಪ ನಡೆಸಿ


Team Udayavani, Aug 2, 2021, 6:40 AM IST

ಸಂಸತ್‌ ಅಧಿವೇಶನ: ಹಠ, ಪ್ರತಿಷ್ಠೆ ಬಿಟ್ಟು ಸುಗಮ ಕಲಾಪ ನಡೆಸಿ

ಸದ್ಯ ಸಂಸತ್‌ನ ಉಭಯ ಸದನಗಳ ಮುಂಗಾರು ಅಧಿವೇಶನ ನಡೆಯುತ್ತಿದೆ. ಕೊರೊನಾದ ಹಿನ್ನೆಲೆಯಲ್ಲಿ ಬರೋಬ್ಬರಿ 18 ತಿಂಗಳುಗಳ ಅನಂತರ ನಡೆಯುತ್ತಿರುವ ಅಧಿವೇಶನ ಇದಾಗಿದೆ. ಈ ಬಾರಿ ಅಧಿವೇಶನದಲ್ಲಿ ಹಲವಾರು ಮಹತ್ತರ ವಿಷಯಗಳು, ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳ ಕುರಿತಂತೆ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಸ್ತೃತ ಚರ್ಚೆ ನಡೆದಾವು ಎಂಬ ದೇಶದ ಜನತೆಯ ಊಹೆ ಹುಸಿಯಾಗಿದೆ. ಜುಲೈ 19ರಿಂದೀಚೆಗೆ ಉಭಯ ಸದನಗಳಲ್ಲಿ ಯಾವುದೇ ಕಲಾಪಗಳು ನಡೆದಿಲ್ಲ.

ಸಂಸತ್‌ನ ಮುಂಗಾರು ಅಧಿವೇಶನದ ಮೊದಲ ದಿನವಾದ ಜು. 19ರಿಂದಲೇ ವಿಪಕ್ಷಗಳು ಪೆಗಾಸಸ್‌ ಗೂಢಚರ್ಯೆ ಪ್ರಕರಣವನ್ನು ಮುಂದಿಟ್ಟು ಚರ್ಚೆಗೆ ಅವಕಾಶ ನೀಡುವಂತೆ ಮತ್ತು ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಬೇಕೆಂಬ ಆಗ್ರಹವನ್ನು ಮುಂದಿಟ್ಟು ಕಲಾಪಕ್ಕೆ ತಡೆಯೊಡ್ಡಿವೆ. ಇದರ ಜತೆಯಲ್ಲಿ ಈಗಾಗಲೇ ಸಂಸತ್‌ನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಮೂರು ಕೃಷಿ ಕಾಯಿದೆಗಳೂ ಸರಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳಿಗೆ ಅಸ್ತ್ರವಾಗಿವೆ. ಹೀಗಾಗಿ ಕಳೆದೆರಡು ವಾರಗಳ ಸಂಸತ್‌ ಅಧಿವೇಶನ ಸಂಪೂರ್ಣ ವ್ಯರ್ಥವಾಗಿವೆ. ಹಾಗೆಂದು ಅಧಿವೇಶನದ ಸಂದರ್ಭದಲ್ಲಿ ಸದಸ್ಯರಿಗೆ ನೀಡಲಾಗುವ ಎಲ್ಲ ವಿಶೇಷ ಭತ್ತೆ, ಸೌಲಭ್ಯಗಳೂ ಲಭಿಸುತ್ತಿವೆ. ಇದರಿಂದಾಗಿ ಸಾರ್ವಜನಿಕರ ಹಣದಲ್ಲಿ 133 ಕೋ. ರೂ. ಪೋಲಾದಂತಾಗಿದೆ.

ಆ.13ರಂದು ಅಧಿವೇಶನ ಕೊನೆಗೊಳ್ಳಲಿದ್ದು ವಿಪಕ್ಷಗಳು ಮತ್ತು ಸರಕಾರದ ನಡುವೆ ಸಹಮತ ಮೂಡದೇ ಹೋದಲ್ಲಿ ಮುಂದಿನ ಹತ್ತು ದಿನಗಳ ಅವಧಿಯಲ್ಲಿ ಸುಗಮ ಕಲಾಪಗಳೂ ನಡೆಯುವುದು ಅನುಮಾನ. ಕಲಾಪಗಳು ನಡೆಯದೇ ಸಮಯ ವ್ಯರ್ಥವಾಗುತ್ತಿರು­ವುದರ ಕುರಿತಂತೆಯೂ ಆಡಳಿತ ಮತ್ತು ವಿಪಕ್ಷಗಳು ಪರಸ್ಪರ ಬೆರಳು ತೋರಿಸುವುದರತ್ತಲೇ ತಮ್ಮೆಲ್ಲ ಗಮನವನ್ನು ಹರಿಸಿವೆಯೇ ವಿನಾ ಈ ಬಿಕ್ಕಟ್ಟಿಗೆ ಪರಿಹಾರ ಸೂತ್ರ ಕಂಡುಹಿಡಿದು ಕಲಾಪಗಳು ಸುಗಮವಾಗಿ ನಡೆಯುವಂತಾಗಲು ಚಿಂತಿಸದಿರುವುದು ದುರದೃಷ್ಟಕರ.

ಹಾಲಿ ಅಧಿವೇಶನದಲ್ಲಿ ಸರಕಾರ ಸುಮಾರು 43 ಮಸೂದೆಗಳಿಗೆ ಸಂಸತ್‌ನ ಉಭಯ ಸದನಗಳ ಒಪ್ಪಿಗೆ ಪಡೆಯಲು ನಿರ್ಧರಿಸಿತ್ತು. ಈವರೆಗಿನ 2 ವಾರಗಳ ಅವಧಿಯಲ್ಲಿ ಕೇವಲ 8 ಮಸೂದೆಗಳಿಗೆ ಸದನದ ಒಪ್ಪಿಗೆ ಪಡೆಯಲು ಸರಕಾರ ಸಫ‌ಲವಾಗಿದೆ. ಕೆಲವೊಂದು ಮಹತ್ತರ ಮಸೂದೆಗಳಿಗೆ ಕೇಂದ್ರ ಸರಕಾರ ವಿಪಕ್ಷಗಳ ಗದ್ದಲದ ನಡುವೆಯೇ ಯಾವುದೇ ಚರ್ಚೆ ಇಲ್ಲದೆ ಸದನದ ಅಂಗೀಕಾರವನ್ನು ಪಡೆದುಕೊಂಡಿದೆ ಎಂಬುದು ಇಲ್ಲಿ ಗಮನಾರ್ಹ.

ವಿಪಕ್ಷಗಳ ಹಠಮಾರಿತನ, ಆಡಳಿತ ಪಕ್ಷದ ಪ್ರತಿಷ್ಠೆಯಿಂದಾಗಿ ಸಂಸತ್‌ ಕಲಾಪಗಳು ವ್ಯರ್ಥಗೊಳ್ಳುತ್ತಿವೆ. ಅಧಿವೇಶನದ ಸಂದರ್ಭದಲ್ಲಿ ಕಲಾಪಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವ ಸಮಾನ ಹೊಣೆಗಾರಿಕೆ ವಿಪಕ್ಷಗಳು ಮತ್ತು ಆಡಳಿತ ಪಕ್ಷದ ಮೇಲಿದೆ. ಬಹುಮತ ಇದೆ ಎಂದಾಕ್ಷಣ ವಿಪಕ್ಷಗಳು ಎತ್ತಿದ ವಿಷಯಗಳೆಲ್ಲವನ್ನೂ ಸಾರಾಸಗ­ಟಾಗಿ ತಿರಸ್ಕರಿಸಿ ಕಲಾಪವನ್ನು ಮುಂದುವರಿಸಿಕೊಂಡು ಹೋಗುವ ಆಡಳಿತ ಪಕ್ಷದ ನಿಲುವಾಗಲಿ, ತಾನು ಹೇಳಿದಂತೆ ಕಲಾಪಗಳು ನಡೆಯಬೇಕೆಂಬ ವಿಪಕ್ಷಗಳ ಹಠಮಾರಿ ಧೋರಣೆಯಾಗಲಿ ಸ್ವೀಕಾರಾ ರ್ಹವಲ್ಲ. ಎರಡೂ ಕಡೆ ಯ ವರೂ ಈ ವಿಚಾ ರ ದಲ್ಲಿ ಪ್ರತಿಷ್ಠೆ ಬಿಡಲಿ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.