ಮಕ್ಕಳಾಟವಾಗದಿರಲಿ ಸಂಸತ್‌ ಅಧಿವೇಶನ


Team Udayavani, Aug 13, 2021, 6:10 AM IST

ಮಕ್ಕಳಾಟವಾಗದಿರಲಿ ಸಂಸತ್‌ ಅಧಿವೇಶನ

ಆಡಳಿತ ಮತ್ತು ವಿಪಕ್ಷಗಳ ಪಟ್ಟು, ಪ್ರತಿಷ್ಠೆಯಿಂದಾಗಿ ಈ ಬಾರಿಯ ಮುಂಗಾರು ಅಧಿವೇಶನ ಕೊಚ್ಚಿ ಹೋಗಿದೆ. ಜು.19ರಂದು ಆರಂಭವಾದ ಈ ಬಾರಿಯ ಅಧಿವೇಶನದಲ್ಲಿ ಎರಡೂ ಸದನಗಳಲ್ಲೂ ಒಂದೇ ಒಂದು ದಿನವೂ ಸರಿಯಾಗಿ ಕಲಾಪ ನಡೆಯಲಿಲ್ಲ. ವಿಪಕ್ಷಗಳು ಪೆಗಾಸಸ್‌ ಗೂಢಾಚಾರ ವಿವಾದ ಮತ್ತು ಮೂರು ಕೃಷಿ ಕಾಯ್ದೆಗಳ ವಿರೋಧಿಸಿ ಪ್ರತಿಭಟನೆ ನಡೆಸಿದ ಕಾರಣದಿಂದಾಗಿ ಎರಡು ದಿನ ಮೊದಲೇ ಉಭಯ ಸದನಗಳ ಕಲಾಪವೂ ಅಂತ್ಯವಾಗಿದೆ. ಈ ಬಾರಿಯ ಸದನವಂತೂ ಮಕ್ಕಳಾಟಕ್ಕೂ ಕಡೆಯಾದಂತಿತ್ತು ಎಂದರೆ ತಪ್ಪಾಗಲಾರದು.

ಸಂಸದೀಯ ವ್ಯವಸ್ಥೆಯಲ್ಲಿ ವಾದ-ಪ್ರತಿವಾದ ಇದ್ದೇ ಇರುತ್ತದೆ. ಇದಿಲ್ಲದಿದ್ದರೆ ಪ್ರಜಾಪ್ರಭುತ್ವಕ್ಕೆ ಯಾವುದೇ ರೀತಿಯಲ್ಲೂ ಬೆಲೆ ಇರುವುದಿಲ್ಲ. ಸರಕಾರಗಳು ಮಾಡಿದ್ದೆಲ್ಲವನ್ನೂ ವಿಪಕ್ಷಗಳು ಒಪ್ಪಲೇಬೇಕು ಎಂದೇನಿಲ್ಲ. ಹಾಗೆಯೇ ವಿಪಕ್ಷಗಳ ಎಲ್ಲ ವಾದವನ್ನು ಸರಕಾರಗಳು ಒಪ್ಪಬೇಕು ಅಂತೇನಿಲ್ಲ. ಆದರೆ ಪರಸ್ಪರ ಸಹಕಾರದಿಂದ, ಜನರ ತೆರಿಗೆ ಹಣ ಪೋಲಾಗದಂತೆ ನೋಡಿಕೊಳ್ಳಬೇಕಾದದ್ದು ಸರಕಾರ ಮತ್ತು ಜನಪ್ರತಿನಿಧಿಗಳ ಆದ್ಯ ಕರ್ತವ್ಯ.

ಆದರೆ ಈ ಬಾರಿ ಆಗಿದ್ದೇ ಬೇರೆ. ನಿಜವಾಗಿಯೂ ಜನರ ಮೇಲೆ ಕಾಳಜಿ ಇದ್ದಿದ್ದರೆ ಸರಕಾರ ಮತ್ತು ವಿಪಕ್ಷಗಳು ದೇಶವನ್ನು ಹೆಚ್ಚಾಗಿ ಕಾಡುತ್ತಿರುವ ಕೊರೊನಾ ಬಗ್ಗೆ ಚರ್ಚೆ ಮಾಡಬೇಕಿತ್ತು. ಏಕೆಂದರೆ, ಕೆಲವೇ ದಿನಗಳಲ್ಲಿ ಕೊರೊನಾ ಮೂರನೇ ಅಲೆ ದೇಶವನ್ನು ಬಾಧಿಸಲಿದೆ ಎಂಬ ಅಂದಾಜು ಇದೆ. ಈ ಬಗ್ಗೆ ತಜ್ಞರು ಎಚ್ಚರಿಕೆಯನ್ನೂ ನೀಡಿದ್ದಾರೆ. ಎರಡನೇ ಅಲೆಯಂತೆ ಆಗಬಾರದು ಎಂಬ ಕಾರಣಕ್ಕಾಗಿ ಮತ್ತು ದೇಶದ ಜನರ ಪ್ರಾಣ ಉಳಿಸುವ ಸಲುವಾಗಿಯಾದರೂ ಸಂಸತ್‌ನ ಉಭಯ ಸದನಗಳಲ್ಲಿ ಕುಳಿತು ಚರ್ಚೆಯನ್ನಾದರೂ ನಡೆಸಬಹುದಾಗಿತ್ತು. ಹಾಗೆಯೇ, ಕೊರೊನಾದಿಂದಾಗಿ ಆರ್ಥಿಕತೆ ಕುಸಿತ ಕಂಡಿದೆ. ಆರ್ಥಿಕ ವ್ಯವಸ್ಥೆಯನ್ನು ಮೇಲೆತ್ತುವ ಸಲುವಾಗಿ ಸರಕಾರ ವಿಪಕ್ಷಗಳ ಸಲಹೆ ಕೇಳಬಹುದಾಗಿತ್ತು. ಆದರೆ ಈ ಯಾವುದೇ ಚರ್ಚೆಗಳು ಆಗಲೇ ಇಲ್ಲ. ಇದಕ್ಕೆ ಬದಲಾಗಿ ಜು.19ರಿಂದ ಅಧಿವೇಶನ ಕೊನೆಗೊಂಡ ಆ.11ರ ವರೆಗೂ ಸರಕಾರ ಮತ್ತು ವಿಪಕ್ಷಗಳು ಜಿದ್ದಿಗೆ ಬಿದ್ದವರಂತೆ ನಾ ಕೊಡೆ, ನೀ ಬಿಡೆ ಎಂಬಂತೆಯೇ ವರ್ತನೆ ಮಾಡಿದವು.

ಇದರ ನಡುವೆಯೇ ಕೊನೆ ದಿನ ರಾಜ್ಯಸಭೆಯಲ್ಲಿ ವಿಪಕ್ಷ ಸದಸ್ಯರು ಮತ್ತು ಮಾರ್ಷಲ್‌ಗಳ ನಡುವೆ ನಡೆದ ಗದ್ದಲವೂ ಒಪ್ಪತಕ್ಕದ್ದಲ್ಲ. ಮಾರ್ಷಲ್‌ಗಳೇ ನಮ್ಮ ಮಹಿಳಾ ಸಂಸದರ ಮೇಲೆ ದಾಳಿ ಮಾಡಿದ್ದಾರೆ ಎಂದು ವಿಪಕ್ಷಗಳ ಸದಸ್ಯರು ಆರೋಪಿಸಿದ್ದಾರೆ. ಆದರೆ ಸರಕಾರ ಈ ಆರೋಪವನ್ನು ತಳ್ಳಿಹಾಕಿದ್ದು, ವಿಪಕ್ಷಗಳ ಸದಸ್ಯರೇ ಮಹಿಳಾ ಮಾರ್ಷಲ್‌ಗಳ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದೆ. ಜತೆಗೆ ಈ ಬಗ್ಗೆ ಉನ್ನತ ಮಟ್ಟದ ತನಿಖೆಯೂ ಆಗಬೇಕು ಎಂದು ಸ್ಪೀಕರ್‌ ಓಂ ಬಿರ್ಲಾ ಮತ್ತು ರಾಜ್ಯಸಭಾ ಸಭಾಪತಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಲ್ಲಿ ಮನವಿ ಮಾಡಿಕೊಂಡಿದೆ.

ಏನೇ ಆಗಲಿ, ಈ ಬಾರಿ ಲೋಕಸಭೆಯಲ್ಲಿ 96 ಗಂಟೆಗಳ ಒಟ್ಟಾರೆ ಅವಧಿಯಲ್ಲಿ ಕಲಾಪ ನಡೆದಿರುವುದು 21 ಗಂಟೆ. ಹಾಗೆಯೇ, ರಾಜ್ಯಸಭೆಯ 98 ಗಂಟೆಗಳಲ್ಲಿ 28 ಗಂಟೆ ಕಲಾಪ ನಡೆದಿದೆ. ಅಂದರೆ, ಒಟ್ಟಾಗಿ ತೆಗೆದುಕೊಳ್ಳುವುದಾದರೆ ಎರಡೂ ಸೇರಿ ತಲಾ ಒಂದು ದಿನ ಕಲಾಪ ನಡೆದಂತೆ ಆಯಿತು. ಒಟ್ಟಾರೆಯಾಗಿ ಇಡೀ ಕಲಾಪ ಗದ್ದಲದಲ್ಲೇ ಮುಳುಗಿ ಯಾವುದೇ ಚರ್ಚೆ ಇಲ್ಲದಂತಾಯಿತು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.