ಅಂತರ್ಜಲ ಉಳಿಸಲು ತುರ್ತು ಗಮನ ಹರಿಸಿ


Team Udayavani, Jul 2, 2019, 5:00 AM IST

20

ದೇಶದ ಶೇ. 16ರಷ್ಟು ತಾಲೂಕುಗಳು, ಹಳ್ಳಿಗಳು, ಹೋಬಳಿಗಳಲ್ಲಿ ಅಂತರ್ಜಲ ಬತ್ತಿ ಹೋಗುವ ಸಮಸ್ಯೆ ಮಿತಿಮೀರಿದೆ. ಅದರಲ್ಲೂ ಶೇ. 4ರಷ್ಟು ತಾಲೂಕು, ಹಳ್ಳಿ ಮತ್ತು ಹೋಬಳಿಗಳಲ್ಲಿನ ಅಂತರ್ಜಲ ಮಟ್ಟ ಶೋಚನೀಯ ಸ್ಥಿತಿಗೆ ತಲುಪಿದೆ ಎಂದಿದೆ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದ ವರದಿ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಿದ ಅಧ್ಯಯನದ ವರದಿ ಇದು. ಯಾವ ಪರಿಯಲ್ಲಿ ಅಂತರ್ಜಲ ಲೂಟಿಯಾಗುತ್ತಿದೆ ಎನ್ನುವುದನ್ನು ಈ ವರದಿ ತಿಳಿಸುತ್ತಿದೆ. ಆದರೆ ಅಂತರ್ಜಲ ಬತ್ತುತ್ತಿದೆ ಎನ್ನಲು ಇಂಥ ವರದಿಯ ಅಗತ್ಯ ಇಲ್ಲ. ಏಕೆಂದರೆ ಅದನ್ನು ನಾವು ಈಗಾಗಲೇ ಅನುಭವಿಸುತ್ತಿದ್ದೇವೆ.

ಚೆನ್ನೈ ನಗರ ಹಿಂದೆಂದೂ ಕಂಡಿರದ ಜಲ ಕ್ಷಾಮಕ್ಕೆ ತುತ್ತಾಗಿದೆ, ಬೆಂಗಳೂರು ನಗರದ ಪರಿಸ್ಥಿತಿಯೂ ಆಶಾದಾಯಕವೇನಲ್ಲ. ನೀರಿನ ಅಧಿಕ ಬಳಕೆಯನ್ನು ತಡೆಯುವ ಸಲುವಾಗಿ ಬೆಂಗಳೂರಿನಲ್ಲಿ ಐದು ವರ್ಷದ ಮಟ್ಟಿಗೆ ಅಪಾರ್ಟ್‌ಮೆಂಟ್‌ಗಳ ನಿರ್ಮಾಣಕ್ಕೆ ತಡೆಯೊಡ್ಡುವ ಕುರಿತು ರಾಜ್ಯ ಸರ್ಕಾರ ಚಿಂತಿಸುತ್ತಿದೆ. ದೇಶದ 21 ಪ್ರಮುಖ ನಗರಗಳಲ್ಲಿ ಅಂತರ್ಜಲ ಬತ್ತಿ ಹೋಗುವ ಪರಿಣಾಮವಾಗಿ 2020ಕ್ಕಾಗುವಾಗ ತೀವ್ರ ನೀರಿನ ಸಮಸ್ಯೆ ಅನುಭವಿಸಲಿದೆ ಎನ್ನುವ ವಿಚಾರವನ್ನು ನೀತಿ ಆಯೋಗ ಈಗಾಗಲೇ ಬಹಿರಂಗಪಡಿಸಿದೆ. ಹಳ್ಳಿಗಳ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ. ಪ್ರತಿ ಬೇಸಿಗೆಯಲ್ಲಿ ನೀರಿಗಾಗಿ ಜನರ ಹಾಹಾಕಾರ ಮುಗಿಲು ಮುಟ್ಟುತ್ತಿದೆ. ಕರಾವಳಿಯಂಥ ಸಮೃದ್ಧ ಮಳೆಯಾಗುವ ಪ್ರದೇಶದಲ್ಲೇ ಈ ಬೇಸಿಗೆಯಲ್ಲಿ ನೀರಿಗಾಗಿ ಜನರು ಪರದಾಡಿದ ಸ್ಥಿತಿಯನ್ನು ಗಮನಿಸಿದರೆ ಭವಿಷ್ಯದಲ್ಲಿ ನೀರು ಎಷ್ಟು ದೊಡ್ಡ ಸಮಸ್ಯೆಯಾಗಬಹುದು ಎಂಬ ಅಂದಾಜು ಸಿಗಬಹುದು.

ಅಂತರ್ಜಲದ ನಿರಂತರ ಶೋಷಣೆ, ನೀರಿನ ಬಗ್ಗೆ ಇರುವ ನಿರ್ಲಕ್ಷ್ಯ, ನೀರು ಸಂರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಲು ಉದಾಸೀನ ಈ ಮುಂತಾದ ಕಾರಣಗಳಿಂದ ಅಂತರ್ಜಲದ ಪ್ರಮಾಣ ಬತ್ತುತ್ತಿದೆ. ಅಂತರ್ಜಲ ಬಳಕೆಯಲ್ಲಿ ಜಗತ್ತಿನಲ್ಲೇ ನಮ್ಮ ದೇಶಕ್ಕೆ ಮೊದಲ ಸ್ಥಾನವಿದೆ. ಆದರೆ ಈ ಪ್ರಮಾಣದಲ್ಲಿ ಅಂತರ್ಜಲ ಮರುಪೂರಣವಾಗುತ್ತಿಲ್ಲ. ದೇಶದಲ್ಲಿ ವಾರ್ಷಿಕವಾಗಿ ಸಂರಕ್ಷಿಸಲಾಗುವ ಮಳೆ ನೀರಿನ ಪ್ರಮಾಣ ಬರೀ ಶೇ. 8 ಮಾತ್ರ. ಜಲ ಸಂಗ್ರಹವಾಗುವ ಮೂಲಗಳನ್ನೆಲ್ಲ ಕೃಷಿ, ಜನವಸತಿ ಹಾಗೂ ಇನ್ನಿತರ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಪರಿಣಾಮವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಬೆಂಗಳೂರು, ಚೆನ್ನೈಯಂಥ ನಗರಗಳಲ್ಲಿ ನೀರಿನ ಸಮಸ್ಯೆ ಉಂಟಾಗಲು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವುದೂ ಒಂದು ಕಾರಣ. 80ರ ದಶಕದಿಂದೀಚೆಗೆ ರಿಯಲ್ ಎಸ್ಟೇಟ್ ವ್ಯವಹಾರ ಬಿರುಸುಗೊಂಡ ಬಳಿಕ ಕೆರೆಗಳೆಲ್ಲ ಸೈಟ್‌ಗಳಾಗಿ ಬದಲಾಗಿವೆ.

ಅಂತರ್ಜಲ ಬತ್ತುವುದರಲ್ಲಿ ಕೃಷಿ ಚಟುವಟಿಕೆಗಳ ಪಾತ್ರವೂ ದೊಡ್ಡದು. ಭಾರೀ ಪ್ರಮಾಣದ ನೀರು ಅಗತ್ಯವಿರುವ ಬತ್ತ, ಕಬ್ಬು ಇತ್ಯಾದಿ ಬೆಳೆಗಳನ್ನು ವ್ಯಾಪಕವಾಗಿ ಬೆಳೆಯಲಾಗುತ್ತದೆ. ಕೃಷಿಯಲ್ಲಿ ವೈಜ್ಞಾನಿಕ ವಿಧಾನವನ್ನು ಅಳವಡಿಸಿಕೊಂಡು ನೀರಿನ ಬಳಕೆಯನ್ನು ಮಿತಗೊಳಿಸಬೇಕೆಂದು ತಜ್ಞರು ಪದೇ ಪದೆ ಸಲಹೆ ನೀಡುತ್ತಿದ್ದರೂ ಪ್ರಗತಿ ಏನೇನೂ ಸಾಲದು. ಕೃಷಿಗೆ ಉಚಿತವಾಗಿ ವಿದ್ಯುತ್‌ ಪೂರೈಸುವಂಥ ಕ್ರಮಗಳಿಂದ ಕೃಷಿಕರಿಗೇನೋ ಖುಷಿಯಾಗಬಹುದು, ಆದರೆ ವಿದ್ಯುತ್‌ ಬಳಸಿಕೊಂಡು ಅಂತರ್ಜಲವನ್ನು ಎತ್ತುತ್ತಿರುವುದರಿಂದ ಆಗುತ್ತಿರುವ ಪರಿಣಾಮಗಳನ್ನೂ ಗಮನಿಸಬೇಕು.

ಪ್ರತಿ ಸಲ ರಾಷ್ಟ್ರೀಯ ಜಲ ನೀತಿಯನ್ನು ಪರಿಷ್ಕರಿಸುವಾಗ ಹೊಸ ಗುರಿಗಳನ್ನು ಇಟ್ಟುಕೊಳ್ಳಲಾಗುತ್ತದೆ. ಕೊನೆಯದಾಗಿ 2012ರಲ್ಲಿ ಜಲನೀತಿಯನ್ನು ಮರು ರೂಪಿಸಲಾಗಿದ್ದು, ಇದರಲ್ಲಿ ದೇಶದ ಎಲ್ಲ ಪ್ರಜೆಗಳಿಗೆ ಆರೋಗ್ಯಕರ ಜೀವನಕ್ಕೆ ಅಗತ್ಯವಿರುವ ಕನಿಷ್ಠ ಪ್ರಮಾಣದ ಕುಡಿಯುವ ನೀರನ್ನು ಒದಗಿಸುವ ಗುರಿ ಇರಿಸಿಕೊಳ್ಳಲಾಗಿತ್ತು. ಇದನ್ನೇ ಹಾಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ತುಸು ಪರಿಷ್ಕರಿಸಿ ಪ್ರತಿ ಮನೆಗೆ ಶುದ್ಧವಾದ ಕುಡಿಯುವ ನೀರನ್ನು ಕೊಳವೆ ಮೂಲಕ ಪೂರೈಸುವ ಗುರಿಯಿರಿಸಿಕೊಂಡಿದೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೂ ಈ ಅಂಶವನ್ನು ಸೇರ್ಪಡೆಗೊಳಿಸಲಾಗಿತ್ತು. ಆದರೆ ಈಗಿರುವ ಪ್ರಶ್ನೆ ಇಷ್ಟು ಪ್ರಮಾಣದ ನೀರನ್ನು ಎಲ್ಲಿಂದ ತರುವುದು ಎಂದು.

ಹಾಗೆಂದು ನೀರು ಸಂರಕ್ಷಿಸುವ ನಿಟ್ಟಿನಲ್ಲಿ ಏನೂ ಪ್ರಯತ್ನ ಆಗಿಲ್ಲ ಎಂದಲ್ಲ. ಸ್ವತಹ ಪ್ರಧಾನಿಯೇ ಮನ್‌ ಕಿ ಬಾತ್‌ನಲ್ಲಿ ನೀರು ಸಂರಕ್ಷಿಸಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ನೀರಿಗಾಗಿಯೇ ಜಲಶಕ್ತಿ ಎಂಬ ಹೊಸ ಸಚಿವಾಲಯ ಸೃಷ್ಟಿಸಲಾಗಿದೆ. ಮಳೆ ನೀರು ಕೊಯ್ಲು, ಜಲಮೂಲಗಳ ನವೀಕರಣ, ಬೋರ್‌ವೆಲ್ಗಳ ಮರುಪೂರಣ ಇತ್ಯಾದಿಗಳನ್ನು ನಡೆಸುವುದು ತುರ್ತಾಗಿ ಆಗಬೇಕಾದ ಕಾರ್ಯ. ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ರೂಪಿಸಿ ಇದಕ್ಕಾಗಿ ಬಜೆಟ್‌ನಲ್ಲಿ ಸಾಕಷ್ಟು ಅನುದಾನವನ್ನು ಮೀಸಲಿಡಬೇಕು. ನೀರು ಸಂರಕ್ಷಣೆಗಾಗಿ ಕಠಿನ ಕಾನೂನುಗಳನ್ನು ರಚಿಸಿ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು. ಈ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ವಿವಿಧ ಸಂಘಟನೆಗಳನ್ನು, ಎನ್‌ಜಿಒಗಳನ್ನು ಒಳಗೊಂಡು ಇಂಥಹ ಕಾರ್ಯಕ್ರಮಗಳನ್ನು ಮಾಡಬಹುದು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.