ಜನ ಸೇವಕ: ಸಮರ್ಪಕ ಅನುಷ್ಠಾನವೇ ಸವಾಲು


Team Udayavani, Nov 2, 2021, 6:05 AM IST

ಜನ ಸೇವಕ: ಸಮರ್ಪಕ ಅನುಷ್ಠಾನವೇ ಸವಾಲು

ರಾಜ್ಯ ಸರಕಾರ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಮನೆ ಬಾಗಿಲಿಗೆ ಸೇವೆಯ (ಜನ ಸೇವಕ, ಜನ ಸ್ಪಂದನ) ಯೋಜನೆಗಳನ್ನು ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಈ ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದ್ದು, ಸರಕಾರಿ ವ್ಯವಸ್ಥೆಯಲ್ಲಿ ಇದು ಕ್ರಾಂತಿಕಾರಿ ಹೆಜ್ಜೆ ಎಂದು ಹೇಳಿದ್ದಾರೆ.

ಪ್ರಮುಖವಾಗಿ ಸಾರಿಗೆ ಇಲಾಖೆಯಲ್ಲಿ ಕಲಿಕಾ ಪರವಾನಗಿ, ಪರವಾ ನಗಿ, ಗಾಡಿ ನೋಂದಣಿ ಮಾಡುವಂತಹ ಸಣ್ಣ ಪುಟ್ಟ ಕೆಲಸಗಳಿಗೂ ಸಾರ್ವಜನಿಕರು ತಿಂಗಳು ಗಟ್ಟಲೇ ಅಲೆದಾಡುವ ವಾಸ್ತವ ಸಾರ್ವ ಜನಿಕರಿಗಷ್ಟೇ ಅಲ್ಲ, ಆಳುವ ಸರಕಾರಗಳಿಗೂ ಗೊತ್ತಿದೆ. ಅದಕ್ಕೆ ತಮ್ಮದೇ ಆಡಳಿತ ವ್ಯವಸ್ಥೆಯ ಲೋಪ ಎನ್ನುವ ಸತ್ಯವೂ ಆಳುವವರಿಗೆ ಗೊತ್ತಿರುವವ ವಿಷಯ. ಹೀಗಾಗಿ ಸಾರಿಗೆ ಇಲಾಖೆಯ 30 ಸೇವೆಗಳನ್ನು ಜನಸ್ಪಂದನ ಯೋಜನೆ ಅಡಿಯಲ್ಲಿ ಘೋಷಣೆ ಮಾಡಿದ್ದು, ಇದರಲ್ಲಿ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ತಂತ್ರಜ್ಞಾನದ ಮೂಲಕ ಎಲ್ಲ ಸೇವೆಗಳನ್ನು ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಇತರ ಇಲಾಖೆಗಳ 56 ಸೇವೆಗಳನ್ನು ಸರಕಾರದ ಜನ ಸೇವಕರೇ ಫ‌ಲಾನುಭವಿಗಳ ಮನೆಗಳಿಗೆ ಅವರು ನಿಗದಿ ಪಡಿಸಿದ ಸಮಯದಲ್ಲಿಯೇ ಬಂದು ಪರಿಹರಿಸಿಕೊಡುವ ಮಹತ್ವದ ಯೋಜನೆಗೆ ಚಾಲನೆ ನೀಡಿದ್ದಾರೆ.

ಎರಡೂ ಯೋಜನೆಗಳು ಸರಕಾರದ ಬಾಗಿಲಿಗೆ ಜನರು ಬರಬಾರದು, ಜನರ ಬಳಿಯೇ ಸರಕಾರ ಹೋಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿರು ವುದು ಶ್ಲಾಘನೀಯ. ಸ್ವತಃ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಹೇಳಿದಂತೆ ಆಳುವವರು ಯೋಜನೆಗಳನ್ನು ಘೋಷಣೆ ಮಾಡಿದ ಮೇಲೆ ಆಡಳಿತ ನಡೆಸುವವರು (ಅಧಿಕಾರಿ ವರ್ಗ) ಅದನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಪ್ರತಿಯೊಂದು ಸರಕಾರಿ ಯೋಜನೆ ಯಶಸ್ವಿಯಾಗಬೇಕೆಂದರೆ ಆಡಳಿತದಲ್ಲಿರುವ ಅಧಿಕಾರಿ ವರ್ಗದ ಪಾತ್ರ ಮಹತ್ವದದ್ದಾಗಿದೆ. ಸಕಾಲ ಯೋಜನೆ ಅಡಿಯಲ್ಲಿ ಪ್ರತೀ ದಿನ ಐದು ಸಾವಿರಕ್ಕೂ ಅರ್ಜಿಗಳು ಬರುತ್ತಿವೆ. ಅವುಗಳ ವಿಲೇವಾರಿಯೇ ಸರಕಾರಕ್ಕೆ ಸವಾಲಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯ ಒಂದು ಕಡತ ಅಧಿಕಾರಿಗಳ ಮಟ್ಟದಲ್ಲಿ ಯಾವುದೇ ಹಂತದಲ್ಲಿದ್ದರೂ, ಅದು ಮುಂದಿನ ಟೇಬಲ್‌ಗೆ ಹೋಗಲು ಅಧಿಕಾರಿಗಳ ಕೈ ಬಿಸಿ ಮಾಡಬೇಕೆಂಬ ಸಾಮಾನ್ಯ ಮಾತು ಎಲ್ಲೆಡೆ ಜನಜನಿತ. ಯಾವುದೇ ಕಾನೂನಿನ ತೊಡಕಿಲ್ಲದ ಒಂದು ಕಡತ ಒಬ್ಬ ಅಧಿಕಾರಿ ಬಳಿ ಕನಿಷ್ಠ ಒಂದು ವಾರಕ್ಕಿಂತ ಹೆಚ್ಚಿನ ದಿನ ಇದ್ದರೆ, ಅದಕ್ಕೆ ಕಾರಣವೇನು ಎಂದಾದರೂ ಕೇಳುವ ವ್ಯವಸ್ಥೆಯೇ ಇಲ್ಲ. ಹೀಗಾಗಿ ಸಾಮಾನ್ಯ ನಾಗರಿಕ ಲಂಚ ನೀಡದೇ ಅಲೆದಾಡುವುದು ತಪ್ಪುವುದಿಲ್ಲ.

ಇದನ್ನೂ ಓದಿ:ಟಿ20 ವಿಶ್ವಕಪ್‌ : ಇಂಗ್ಲೆಂಡ್‌ ಸೆಮಿಫೈನಲ್‌ ಸಂಭ್ರಮ

ಈಗ ಮುಖ್ಯಮಂತ್ರಿಗಳು ಜಾರಿಗೊಳಿಸಿರುವ ಯೋಜನೆಗಳಲ್ಲಿ ಅನುಷ್ಠಾನಾಧಿಕಾರಿಗಳ ಪ್ರಾಮಾಣಿಕತೆ ಅತ್ಯಂತ ಮುಖ್ಯವಾಗಿದೆ. ಸಾರಿಗೆ ಇಲಾಖೆಯ ಜನ ಸ್ಪಂದನ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ ಸಾರಿಗೆ ಕಚೇರಿಗೆ ಭೇಟಿ ನೀಡದ ಹೊರತು ಅನುಮತಿಯೇ ದೊರೆಯದೇ ಹೋದರೆ, ಅನುಮತಿಗೆ ವಿಳಂಬವಾದರೆ, ಯಾರು ಹೊಣೆ ಎನ್ನುವುದನ್ನು ಆಳ್ವಿಕೆ ನಡೆಸುವವರು ತಾಕೀತು ಮಾಡಬೇಕು. ಇಲ್ಲದೇ ಹೋದರೆ ಜನಸ್ನೇಹಿಯಾದ ಮಹತ್ವದ ಯೋಜನೆಗಳು ಜನರಿಗೆ ತಲುಪದಂತಾ ಗುತ್ತದೆ. ಆಳಿಕೆ ಮಾಡುವವರಿಗೆ ಒಳ್ಳೆಯ ಯೋಜನೆ ಘೋಷಿಸಿದ ಖುಷಿ ಇದ್ದರೂ, ನಿಜವಾದ ಫ‌ಲಾನುಭವಿಗೆ ತಲುಪದಿದ್ದರೇ, ಎಷ್ಟೇ ಜನಸ್ನೇಹಿ ಯೋಜನೆಯಾದರೂ ನಿಷ್ಪ್ರಯೋಜಕವಾಗುತ್ತದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.