ಪ್ಲಾಸ್ಟಿಕ್‌ ನಿಷೇಧ: ಸಮರೋಪಾದಿ ಕೆಲಸ ಮುಖ್ಯ


Team Udayavani, Aug 27, 2019, 5:42 AM IST

n-36

ಒಂದು ಸಲ ಬಳಸಿ ಎಸೆಯುವ ಪ್ಲಾಸ್ಟಿಕ್‌ ಚೀಲಗಳನ್ನು ನಿಷೇಧಿಸುವ ಕುರಿತು ದೇಶದಲ್ಲಿ ಗಂಭೀರವಾದ ಚಿಂತನ ಮಂಥನ ನಡೆಸಲು ಈಗ ಕಾಲ ಕೂಡಿ ಬಂದಿರುವಂತೆ ಕಾಣಿಸುತ್ತದೆ. ಪ್ರಧಾನಿ ಮೋದಿಯವರೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ಲಾಸ್ಟಿಕ್‌ ನಿಷೇಧಿಸಲು ಆಂದೋಲನವನ್ನು ಕೈಗೊಳ್ಳುವ ಅಗತ್ಯವನ್ನು ಪ್ರತಿಪಾದಿಸಿದ್ದರು. ಇದೀಗ ರವಿವಾರದ ಮನ್‌ ಕಿ ಬಾತ್‌ ರೇಡಿಯೊ ಭಾಷಣದಲ್ಲೂ ಈ ವಿಚಾರವನ್ನು ಪುನರುಚ್ಚರಿಸಿದ್ದು ಪ್ಲಾಸ್ಟಿಕ್‌ ನಿಷೇಧವನ್ನು ಸರಕಾರ ಗಂಭೀರವಾಗಿ ಪರಿಗಣಿಸಿರುವುದಕ್ಕೆ ಸಾಕ್ಷಿ. ಸ್ವಚ್ಛ ಭಾರತ ಅಭಿಯಾನದಂತೆ ಪ್ಲಾಸ್ಟಿಕ್‌ ನಿಷೇಧವನ್ನೂ ಒಂದು ಆಂದೋಲನವಾಗಿ ಬದಲಾಯಿಸಬೇಕೆಂದು ಮೋದಿ ಹೇಳಿದ್ದಾರೆ. ವಿಪಕ್ಷಗಳೂ ಪ್ಲಾಸ್ಟಿಕ್‌ ವಿಚಾರದಲ್ಲಿ ಸಹಮತ ವ್ಯಕ್ತಪಡಿಸಿರುವುದು ಭೂ ಮಾತೆಯ ಉಸಿರು ಕಟ್ಟಿಸುತ್ತಿರುವ ಪ್ಲಾಸ್ಟಿಕ್‌ ಮಾಲಿನ್ಯವನ್ನು ತಡೆಯುವಲ್ಲಿ ಒಮ್ಮತ ಮೂಡಿ, ಪ್ರಯತ್ನ ಸಫ‌ಲವಾಗಬಹುದು ಎನ್ನುವ ಆಶಾಭಾವನೆ ಮೂಡಿಸಿದೆ.

ದೇಶದಲ್ಲಿ ನಿತ್ಯ 26000 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ದಿಲ್ಲಿ, ಬೆಂಗಳೂರಿನಂಥ ಬೃಹತ್‌ ನಗರಗಳಲ್ಲಿ ನಿತ್ಯ 7ರಿಂದ 9 ಟನ್‌ ಪ್ಲಾಸ್ಟಿಕ್‌ ತ್ಯಾಜ್ಯ ಸೃಷ್ಟಿಯಾಗುತ್ತಿದ್ದರೂ ಇದರಲ್ಲಿ ಮರು ಸಂಸ್ಕರಣೆಗೆ ಹೋಗುವುದು ಬರೀ ಶೇ. 10 ಮಾತ್ರ. ಉಳಿದ ಪ್ಲಾಸ್ಟಿಕ್‌ ಭೂಮಿಯ ಒಡಲು ಇಲ್ಲವೇ ಕಡಲು ಸೇರಿ ನಿಶ್ಶಬ್ದವಾಗಿ ಮನುಷ್ಯ ಮತ್ತು ಇತರ ಜೀವಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ಲಾಸ್ಟಿಕ್‌ನಿಂದಾಗುವ ಹಾನಿಯ ಬಗ್ಗೆ ಬಹಳಷ್ಟು ಹೇಳಲಾಗಿದೆ ಹಾಗೂ ಅರಿವು ಮೂಡಿಸುವ ಪ್ರಯತ್ನವನ್ನೂ ಸಾಕಷ್ಟು ಮಾಡಲಾಗಿದೆ. ಆದರೆ ಇಂದಿಗೂ ಕನಿಷ್ಠ ಬಳಸಿ ಎಸೆಯುವ ಪ್ಲಾಸ್ಟಿಕ್‌ನ್ನು ನಿಷೇಧಿಸುವುದಕ್ಕೂ ನಮ್ಮಿಂದ ಸಾಧ್ಯವಾಗಿಲ್ಲ ಎಂಬುದು ವಾಸ್ತವ. ಹಾಗೆಂದು, ಪ್ಲಾಸ್ಟಿಕ್‌ನಿಂದಾಗುವ ಹಾನಿಯ ಬಗ್ಗೆ ಅರಿವು ಮೂಡಿಲ್ಲ ಎಂದಲ್ಲ. ಚಿಕ್ಕ ಮಳೆಗೂ ನಗರಗಳ ಚರಂಡಿ ತುಂಬಿ ಪ್ರವಾಹ ಉಂಟಾಗಲು ಪ್ಲಾಸ್ಟಿಕ್‌ನ ಪಾಲು ದೊಡ್ಡದಿದೆ. ಈ ಮಾದರಿಯ ಪ್ಲಾಸ್ಟಿಕ್‌ ನಿಷೇಧಿಸುವ ಸಲುವಾಗಿ 2016ರಲ್ಲೇ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ರಚಿಸಲಾಗಿತ್ತು. 50 ಮೈಕ್ರಾನ್‌ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್‌ ಚೀಲಗಳನ್ನು ಉತ್ಪಾದಿಸುವವರ ಮೇಲೆ ದಂಡ ಹಾಕುವಂಥ ಕಠಿಣ ಅಂಶಗಳು ಇದರಲ್ಲಿ ಇದ್ದವು. ಇದಲ್ಲದೆ ರಾಜ್ಯ ಸರಕಾರಗಳು, ಸ್ಥಳೀಯಾಡಳಿತ ಪ್ಲಾಸ್ಟಿಕ್‌ ನಿಷೇಧಿಸುವ ಪ್ರಯತ್ನ ಮಾಡಿದ್ದುಂಟು. ಕಳೆದ ವರ್ಷ ಮಹಾರಾಷ್ಟ್ರ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿ, ಪ್ಲಾಸ್ಟಿಕ್‌ ಚೀಲಗಳನ್ನು ಹೊಂದಿದ್ದರೆ 5,000 ರೂ. ದಂಡ ಹಾಕುವ ನಿಯಮ ಜಾರಿಗೆ ತಂದಿತ್ತು. ಅದಾಗ್ಯೂ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಿಲ್ಲ. ಪ್ಲಾಸ್ಟಿಕ್‌ ನಿಷೇಧ ವಿಫ‌ಲವಾಗಲು ಮುಖ್ಯ ಕಾರಣ ಪರ್ಯಾಯ ವ್ಯವಸ್ಥೆಯನ್ನು ಒದಗಿಸದೆ ಇರುವುದು. ಪ್ಲಾಸ್ಟಿಕ್‌ ಬದಲಿಗೆ ಅಷ್ಟೇ ಅನುಕೂಲಕರ ಪರ್ಯಾಯ ವ್ಯವಸ್ಥೆ ಏನು ಎಂಬುದಕ್ಕೆ ಸರಕಾರದ ಬಳಿ ಉತ್ತರವಿಲ್ಲ. ಬಟ್ಟೆಯ ಚೀಲ, ಪರಿಸರ ಸ್ನೇಹಿ ವಸ್ತುಗಳಿಂದ ಮಾಡಿದ ಚೀಲ ಎಂಬಿತ್ಯಾದಿ ಪರ್ಯಾಯಗಳಿದ್ದರೂ ಇದು ಎಲ್ಲಾ ಕಾಲದಲ್ಲೂ ಎಲ್ಲರಿಗೂ ಸುಲಭವಾಗಿ ದೊರಕದಿರುವುದರಿಂದ ಪ್ಲಾಸ್ಟಿಕ್‌ ಮೇಲಿನ ಅವಲಂಬನೆಯನ್ನು ಬಿಡಲು ಜನರು ತಯಾರಿಲ್ಲ.

ಕಿರಾಣಿ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ತೆಳು ಪ್ಲಾಸ್ಟಿಕ್‌ ಬಳಸುತ್ತಾರೆ ಎನ್ನುವುದು ನಿಜ. ಇದು ಪರಿಹರಿಸಲಾಗದ ಸಮಸ್ಯೆಯೇನೋ ಅಲ್ಲ. ಇದಕ್ಕೂ ಹೆಚ್ಚಿನ ಏಕ ಬಳಕೆಯ ಪ್ಲಾಸ್ಟಿಕ್‌ ಉಪಯೋಗವಾಗುತ್ತಿರುವುದು ಪ್ಯಾಕೇಜಿಂಗ್‌ ಉದ್ಯಮದಲ್ಲಿ. ಚಾಕೋಲೇಟ್ನಿಂದ ಹಿಡಿದು ವಿಮಾನಗಳ ಬಿಡಿಭಾಗಗಳ ತನಕ ಪ್ರತಿಯೊಂದರ ಪ್ಯಾಕಿಂಗ್‌ಗೂ ಪ್ಲಾಸ್ಟಿಕ್‌ ಅನಿವಾರ್ಯ ಎಂಬ ಸ್ಥಿತಿಯಿದೆ. ಕನಿಷ್ಠ ಆಹಾರ ವಸ್ತುಗಳನ್ನು ಪ್ಲಾಸ್ಟಿಕ್‌ಗಳಲ್ಲಿ ಪ್ಯಾಕ್‌ ಮಾಡುವುದನ್ನು ನಿರ್ಬಂಧಿಸಿದರೂ ಪ್ಲಾಸ್ಟಿಕ್‌ ನಿಷೇಧದಲ್ಲಿ ಮಹತ್ತರ ಯಶಸ್ಸು ಸಾಧಿಸಬಹುದು. ಆದರೆ ಇದು ಬೆಕ್ಕಿಗೆ ಗಂಟೆ ಕಟ್ಟುವಷ್ಟೇ ತ್ರಾಸದಾಯಕವಾದ ಕೆಲಸ. ಸ್ಥಳೀಯ ವ್ಯಾಪಾರಿಗಳು ಕಟ್ಟಿಕೊಡುವ ತೆಳು ಪ್ಲಾಸ್ಟಿಕ್‌ನ್ನು ನಿಷೇಧಿಸಿದಾಗ ದೊಡ್ಡ ಕಾರ್ಪೊರೇಟ್ ಕಂಪೆನಿಗಳ ಪ್ಲಾಸ್ಟಿಕ್‌ ಪೊಟ್ಟಣಗಳಿಗೆ ಹೇಗೆ ಅನುಮತಿ ಸಿಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೇನು ಉತ್ತರ ಎಂದು ಮೊದಲು ಕಂಡುಕೊಳ್ಳಬೇಕು. ವಿಶ್ವ ಪರಿಸರ ದಿನಾಚರಣೆಯ ‘ಪ್ಲಾಸ್ಟಿಕ್‌ ಮಾಲಿನ್ಯ ನಿರ್ಮೂಲನೆ’ ಘೋಷಣೆಯಡಿಯಲ್ಲಿ ಭಾರತ 2022ಕ್ಕಾಗುವಾಗ ಬಳಸಿ ಎಸೆಯುವ ಪ್ಲಾಸ್ಟಿಕ್‌ನ್ನು ಸಂಪೂರ್ಣವಾಗಿ ನಿಷೇಧಿಸುವ ಪ್ರತಿಜ್ಞೆ ಮಾಡಿದೆ. ಇದು ಸಾಧ್ಯವಾಗಬೇಕಾದರೆ ಸಮರೋಪಾದಿಯ ಕಾರ್ಯಾಚರಣೆ ಅಗತ್ಯ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.