ಶಾಸನಸಭೆಗಳು ರಾಜಕೀಯ ಗುಣಮಟ್ಟದ ಕನ್ನಡಿ; ಕಲಾಪ ವ್ಯರ್ಥಾಲಾಪ


Team Udayavani, Feb 16, 2017, 3:35 AM IST

15-ANKANA-3.jpg

ವಿಧಾನಮಂಡಲದ ಏಳು ದಿನಗಳ ಅಧಿವೇಶನ ಯಾವುದೇ ಘನ ಚರ್ಚೆಯಿಲ್ಲದೆ ಮುಗಿದಿದೆ. ಅತ್ತ ಸಂಸತ್‌ ಕಲಾಪವೂ ಇದಕ್ಕಿಂತ ಉತ್ತಮ ಸ್ಥಿತಿಯನ್ನು ಕಂಡಿಲ್ಲ. ಕಲಾಪಗಳ ಗುಣಮಟ್ಟದಲ್ಲಿ ಈ ತೆರನಾದ ಸವಕಳಿ ಕಳವಳಕಾರಿ. ಇದು ಸುಧಾರಣೆಗೊಳ್ಳಲೇ ಬೇಕಿದೆ.

ಒಂದು ದೇಶದ ರಾಜಕೀಯ ವಾತಾವರಣ ತಿಳಿಯಬೇಕಿದ್ದರೆ ಆ ದೇಶದ ಶಾಸನ ಸಭೆಗಳನ್ನು ನೋಡಬೇಕು ಎನ್ನುತ್ತಾರೆ. ಉತ್ತಮ ರಾಜಕೀಯ ವಾತಾವರಣವಿರುವ ದೇಶದ ಜನಪ್ರತಿನಿಧಿಗಳು ಶಾಸನ ಸಭೆಗಳಲ್ಲಿ ಘನತೆಯ ನಡವಳಿಕೆ ಹೊಂದಿರುತ್ತಾರೆ. ಅವರು ಜನರ ಪ್ರತಿನಿಧಿಗಳು ಮಾತ್ರವಲ್ಲದೆ ಒಟ್ಟಾರೆ ಸಮಾಜದ ಪ್ರತಿನಿಧಿಗಳೂ ಆಗಿರುತ್ತಾರೆ ಎನ್ನುವುದು ಈ ಮಾತಿನ ತಾತ್ಪರ್ಯ. ಈ ಮಾತನ್ನು ನಮ್ಮ ವಿಧಾನಸಭೆಗಳಿಗೋ ಸಂಸತ್ತಿಗೋ ಅನ್ವಯಿಸಿದರೆ ಗೊತ್ತಾಗುತ್ತದೆ ನಮ್ಮನ್ನಾಳುವವರ ಹಣೆಬರಹ. ಅಧಿವೇಶನ ಇರುವುದೇ ಪ್ರತಿಭಟಿಸಿ ಧರಣಿ ಮಾಡಲು ಎಂಬ ಪರಿಸ್ಥಿತಿ ಸೃಷ್ಟಿಧಿಯಾಗಿ ದಶಕಗಳೇ ಕಳೆದಿವೆ. ಇತ್ತೀಧಿಚೆಗಿನ ವರ್ಷಗಳಲ್ಲಿ ಅಧಿವೇಶನದಲ್ಲಿ ನಡೆಧಿಯುವ ಕಲಾಪಗಳ ಅವಧಿ ಕಡಿಮೆಧಿಯಾಗುತ್ತಿದೆ. ಕಲಾಪ ನಡೆದರೂ ವಿಪಕ್ಷಗಳ ಪ್ರತಿಭಟನೆಯಿಂದಾಗಿ ವ್ಯರ್ಥಾಲಾಪಧಿವಾಗುಧಿತ್ತಿದೆ. ಸೋಮವಾರದಿಂದ ಏಳು ದಿನಗಳ ಕಾಲ ನಡೆದ ರಾಜ್ಯ ವಿಧಾನಮಂಡಲದ ಅಧಿವೇಶನವೂ ಈ ಮಾತಿಗೆ ಹೊರತಾಗಲಿಲ್ಲ. ರಾಜ್ಯ ವಿಧಾನಮಂಡಲ 60 ದಿನಗಳಿಗೆ ಕಡಿಮೆಯಿಲ್ಲದಂತೆ ಕಲಾಪ ನಡೆಸಬೇಕೆಂಬ ನಿಯಮವನ್ನು 2005ರಲ್ಲಿ ರಚಿಸಿದ್ದರೂ ಅದು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ.

ಬರ, ಅಕ್ರಮ ಮರಳು ಗಣಿಗಾರಿಕೆ, ಎತ್ತಿನಹೊಳೆ ಯೋಜನೆ ವಿವಾದ, ನೈಸ್‌ ಅಕ್ರಮ, ಕಪ್ಪತಗುಡ್ಡ ವಿವಾದವೂ ಸೇರಿದಂತೆ ಹತ್ತಾರು ಜ್ವಲಂತ ಸಮಸ್ಯೆಗಳು ರಾಜ್ಯದಲ್ಲಿವೆ. ಆದರೆ ಬರದ ಕುರಿತು ಗಂಭೀರವಾದ ಚರ್ಚೆಯೇ ಆಗಲಿಲ್ಲ. ಒಟ್ಟಾರೆ ನಡೆದಿರುವುದು 36 ತಾಸುಗಳ ಕಲಾಪ. ಅದರಲ್ಲಿ ಭ್ರಷ್ಟಾಚಾರ ಆರೋಪಗಳ ಕುರಿತು ಗಲಭೆ ಹೊರತುಪಡಿಸಿದರೆ ಬೇರೇನೂ ಆಗಿಲ್ಲ. ಕೊನೆಯ ದಿನವಂತೂ ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಮಾಡಿದ ಭ್ರಷ್ಟಾಚಾರದ ಆರೋಪವೇ ಇಡೀ ಕಲಾಪವನ್ನು ನುಂಗಿ ಹಾಕಿದೆ. ಐದು ಮಸೂದೆಗಳೇನೋ ಆಂಗೀಕಾರವಾಗಿವೆ. ಆದರೆ ಈ ಮಸೂದೆಗಳ ಮೇಲೆ ಗಂಭೀರವಾದ ಚರ್ಚೆ ನಡೆದಿಲ್ಲ. ಕಲಾಪ ಭಂಗಗೊಳಿಸುವ ಪಿಡುಗು ಇಂದು ಎಲ್ಲ ರಾಜ್ಯಗಳಿಗೂ ವ್ಯಾಪಿಸಿದೆ. 

ಕಲಾಪ ನಡೆದರೂ ಸದಸ್ಯರ ಗೈರು ಹಾಜರಿ ಇನ್ನೊಂದು ಗಂಭೀರವಾದ ಸಮಸ್ಯೆ. ಹಾಜರಿ ಪುಸ್ತಕದಲ್ಲಿ ಸಹಿ, ಕಲಾಪಕ್ಕೆ ಚಕ್ಕರ್‌ ಬಹುತೇಕ ಶಾಸಕ, ಸಂಸದರ ಸಾಮಾನ್ಯ ಚಾಳಿ. ಹಾಜರಿ ಹಾಕಿದರೆ ಸಾಕು, ಕಲಾಪದಲ್ಲಿ ಭಾಗವಹಿಸಿದ ಎಲ್ಲ ಭತ್ಯೆ ಸೌಲಭ್ಯಗಳು ಸಿಗುತ್ತವೆ. ಸೌಲಭ್ಯ ಬೇಕು, ಜವಾಬ್ದಾರಿ ಬೇಡ ಎಂಬ ಭಂಡ ನಿಲುವು ಇದು. ಜನಪ್ರತಿನಿಧಿಗಳು ಶಾಸನಸಭೆಯಲ್ಲಿ ಜನರ ಸಮಸ್ಯೆ ಬಗ್ಗೆ ಚರ್ಚಿಸದೆ ಹಾಜರಿ ಹಾಕಿ ಕುಟುಂಬಿಕರ ಜತೆಗೆ ಮಾಲ್‌ಗ‌ಳಲ್ಲಿ ಶಾಪಿಂಗ್‌, ಧಾರ್ಮಿಕ ಕ್ಷೇತ್ರಗಳ ಭೇಟಿ ಇಲ್ಲವೇ ಉದ್ಘಾಟನೆ, ಶಂಕುಸ್ಥಾಪನೆಯಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಜನರಿಗೆ ಮಾಡುವ ವಂಚನೆಯಲ್ಲವೆ?  

ಸದನಗಳಲ್ಲಿ 50 -60ರ ದಶಕಗಳಲ್ಲಿ ಕಂಡು ಬರುತ್ತಿದ್ದ ವಿದ್ವತ್‌ಪೂರ್ಣ ಚರ್ಚೆಗಳು ಈಗ ಇಲ್ಲ. ಇದಕ್ಕೆ ಕಾರಣ ಜನಪ್ರತಿನಿಧಿಗಳಲ್ಲಿ ವೈಚಾರಿಕತೆ ಮತ್ತು ನೈತಿಕತೆಯ ಮಟ್ಟ ಕುಸಿದಿರುವುದು. ಚರ್ಚೆಯ ಬದಲು ಗದ್ದಲ ಎಬ್ಬಿಸಿ ಕಲಾಪ ಭಂಗಗೊಳಿಸಿದರೆ ತಮ್ಮ ಉದ್ದೇಶ ಈಡೇರುತ್ತದೆ ಎಂದು ಶಾಸಕರು, ಸಂಸದರು ನಂಬಿದ್ದಾರೆ. ಈಗ ಪಕ್ಷಗಳು ಚುನಾವಣೆಗೆ ಸ್ಪರ್ಧಿಸಲು ಟಿಕೇಟ್‌ ನೀಡುವುದು ಅವರ ಪ್ರತಿಭೆ ಅಥವಾ ಸಂಸದೀಯ ಪಟುತ್ವವನ್ನು ನೋಡಿಕೊಂಡಲ್ಲ. ಬದಲಾಗಿ ಗೆಲುವಿನ ಸಾಧ್ಯತೆಯೇ ಮಾನದಂಡ. ಏನೇನೋ ಅಕ್ರಮಗಳನ್ನು ಮಾಡಿ ಗೆದ್ದು ಬಂದವರಿಂದ ಉತ್ತಮ ಸಂಸದೀಯ ನಡವಳಿಕೆ ನಿರೀಕ್ಷಿಸುವುದು ಹೇಗೆ? ಮತದಾರನೂ ಅಭ್ಯರ್ಥಿಯ ವೈಯಕ್ತಿಕ ಸಾಮರ್ಥ್ಯಕ್ಕಿಂತ ಪಕ್ಷವನ್ನೇ ನೆಚ್ಚಿಕೊಂಡು ಮತ ಹಾಕುವುದರಿಂದ ಉತ್ತಮ ಜನನಾಯಕರು ಆರಿಸಿ ಬರುವುದಿಲ್ಲ. 

 ಗದ್ದಲದಿಂದ ಕಲಾಪ ಭಂಗವಾದರೆ ಅದೇ ದೊಡ್ಡ ಸಾಧನೆ ಎಂದು ಪಕ್ಷಗಳು ಭಾವಿಸಿರುವುದರಿಂದ ಜನಪ್ರತಿನಿಧಿಗಳ ಸಂಸದೀಯ ವರ್ತನೆಗಳು ಲಘುವಾಗುತ್ತಿವೆ. ಸದನದಲ್ಲಿ ತಮ್ಮ ನಡವಳಿಕೆಗೆ ಜನರು ಹೇಗೆ ಪ್ರತಿಸ್ಪಂದಿಸುತ್ತಿದ್ದಾರೆ ಎಂದು ತಿಳಿಯುವ ಗುಣವನ್ನು ಜನಪ್ರತಿನಿಧಿಗಳು ಬೆಳೆಸಿಕೊಳ್ಳಬೇಕು. ಜನರಿಂದ ಆಯ್ಕೆಯಾಗಿ ಅದೇ ಜನರ ತೆರಿಗೆ ಹಣವನ್ನು ಈ ರೀತಿ ಪೋಲು ಮಾಡಬಾರದು ಎಂಬ ಪರಿಜ್ಞಾನ ಇರಬೇಕು. ಇಲ್ಲದಿದ್ದರೆ ಕಲಾಪಕ್ಕೆ ಅಡ್ಡಿಪಡಿಸುವುದನ್ನು ತಡೆಯುವ ಸಲುವಾಗಿ ಕಠಿನ ಕಾನೂನುಗಳನ್ನು ರೂಪಿಸುವ ಅನಿವಾರ್ಯತೆ ಎದುರಾಗಬಹುದು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.