ಪಂಡಿತರಿಗೆ ಮತದಾನ ಅವಕಾಶ: ಕ್ರಾಂತಿಕಾರಿ ಕ್ರಮ


Team Udayavani, Apr 5, 2019, 6:00 AM IST

c-14

ಈ ಚುನಾವಣೆಯಲ್ಲಿ ಕಾಶ್ಮೀರ ವಿಚಾರ ಮುನ್ನೆಲೆಗೆ ಬಂದಿದೆ.ಇದಕ್ಕೆ ಪಕ್ಷವೊಂದರ ಪ್ರಣಾಳಿಕೆಯಲ್ಲಿರುವ ಸೇನೆಯ ವಿಶೇಷಾಧಿಕಾರ ಕಾಯಿದೆಯನ್ನು ಪರಿಶೀಲಿಸುವ ಭರವಸೆ ಒಂದು ಕಾರಣವಾದರೆ ನ್ಯಾಶನಲ್‌ ಕಾನ್ಫರೆನ್ಸ್‌ ನಾಯಕ ಉಮರ್‌ ಅಬ್ದುಲ್ಲ ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂದು ಹೇಳಿ ವಿವಾದದ ಕಿಡಿ ಹಚ್ಚಿರುವುದು ಇನ್ನೊಂದು ಕಾರಣ. ಈ ವಿವಾದಗಳ ನಡುವೆ ಚುನಾವಣಾ ಆಯೋಗ ಕಾಶ್ಮೀರದ ನಿರಾಶ್ರಿತ ಪಂಡಿತ ಸಮುದಾಯಕ್ಕೆ ತಮ್ಮ ಕ್ಷೇತ್ರದ ಹೊರಗೆ ವಿಶೇಷ ಮತಗಟ್ಟೆಯಲ್ಲಿ ಕಾಶ್ಮೀರದ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡಿರುವ ವಿಚಾರ ಹೆಚ್ಚು ಗಮನ ಸೆಳೆದಿಲ್ಲ.

ಮೂರು ದಶಕಗಳಿಂದ ಹುಟ್ಟೂರಿನಿಂದ ದೂರವಾಗಿ ಎಲ್ಲೆಲ್ಲೊ ನಿರಾಶ್ರಿತರಂತೆ ಬದುಕುತ್ತಿರುವ ಕಾಶ್ಮೀರಿ ಪಂಡಿತರಿಗೆ ತಮ್ಮ ಕ್ಷೇತ್ರದ ಅಭ್ಯರ್ಥಿಗೆ ಮತ ನೀಡಲು ಅವಕಾಶ ನೀಡಿರುವ ಈ ಕ್ರಮ ನಿಜಕ್ಕೂ ಕ್ರಾಂತಿಕಾರಿಯಾದದ್ದು. ಇದರ ಜತೆಗೆ ಅವರಿಗೆ ಅಂಚೆ ಮತದಾನಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಕಾಶ್ಮೀರಿ ಪಂಡಿತರನ್ನು ಮುಖ್ಯವಾಹಿನಿಗೆ ತರಲು ಚುನಾವಣಾ ಆಯೋಗ ಒಂದು ಸಕರಾತ್ಮಕ ಕ್ರಮ ಕೈಗೊಂಡಂತಾಗಿದೆ.

ಈ ಮೊದಲು ಕಾಶ್ಮೀರಿ ವಲಸಿಗರಿಗೆ ಅಂಚೆ ಮತದಾನಕ್ಕೆ ಅವಕಾಶವಿರಲಿಲ್ಲ. ಅವರು ಮತದಾನ ಮಾಡಲು ದಿಲ್ಲಿ ಅಥವಾ ಜಮ್ಮುವಿನ ವಿಶೇಷ ಮತಗಟ್ಟೆಗೆ ಹೋಗಬೇಕಾಗಿತ್ತು. ಶ್ರೀನಗರ, ಅನಂತನಾಗ್‌ ಮತ್ತು ಬಾರಾಮುಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು ಒಂದೂವರೆ ಲಕ್ಷ ಪಂಡಿತ ಸಮುದಾಯದ ಮತದಾರರಿದ್ದಾರೆ. ಆದರೆ ದೇಶದ ಎಲ್ಲೆಲ್ಲೋ ಹಂಚಿ ಹೋಗಿರುವುದರಿಂದ ಇಷ್ಟರ ತನಕ ಪ್ರಬಲ ರಾಜಕೀಯ ಧ್ವನಿಯಾಗಿರಲಿಲ್ಲ. ಅವರು ಕಾಶ್ಮೀರ ಕಣಿವೆ ಹೊರಗೆ ತಮಗಾಗಿ ಸ್ಥಾಪಿಸುವ ವಿಶೇಷ ಮತಗಟ್ಟೆಗಳಲ್ಲಿ ಮತದಾನ ಮಾಡಬೇಕಿತ್ತು. ಈ ಎಲ್ಲ ರಗಳೆಗಳು ಬೇಡ ಎಂದು ಅವರು ತಾವಿರುವ ಪ್ರದೇಶದ ಮತದಾರರಾಗಿ ನೋಂದಾವಣೆ ಮಾಡಿಕೊಳ್ಳುತ್ತಿದ್ದರು. ತಮಗೂ ಹುಟ್ಟೂರಿನ ಮತದಾನ ಪ್ರಕ್ರಿಯೆಯಲ್ಲಿ ನೇರವಾಗಿ ಪಾಲ್ಗೊಳ್ಳಲು ಅವಕಾಶ ನೀಡಬೇಕೆಂದು ಎರಡು ದಶಕಗಳಿಂದ ಅವರು ಆಯೋಗವನ್ನು ಒತ್ತಾಯಿಸುತ್ತಿದ್ದರು. ಇದೀಗ ಅವರ ಈ ಬೇಡಿಕೆ ಈಡೇರಿದೆ.

ನಿರಾಶ್ರಿತ ಕಾಶ್ಮೀರಿ ವ್ಯಕ್ತಿ ಮತಪತ್ರ ಸಿಕ್ಕಿದ ಬಳಿಕ ಮತ ಚಲಾವಣೆ ಮಾಡಿ ಅದನ್ನು ಸ್ಪೀಡ್‌ಪೋಸ್ಟ್‌ ಮೂಲಕ ಕಳುಹಿಸಿಕೊಡಬೇಕು. ದೇಶದ ಯಾವುದೇ ಭಾಗದಲ್ಲಿರುವ ಚುನಾವಣಾಧಿಕಾರಿ ಕಾಶ್ಮೀರಿ ನಿರಾಶ್ರಿತರ ಮತಪತ್ರವನ್ನು ಅಂಚೆಯಲ್ಲಿ ಸ್ವೀಕರಿಸಿ ಅದನ್ನು ಜಮ್ಮುವಿನ ಸಹಾಯಕ ನಿರ್ವಚನಾಧಿಕಾರಿಗೆ ವಿದ್ಯುನ್ಮಾನ ಮಾಧ್ಯಮದ ಮೂಲಕ ರವಾನಿಸಬೇಕು. ಇದರ ವೆಚ್ಚವನ್ನು ಚುನಾವಣಾ ಆಯೋಗವೇ ಭರಿಸಲಿದೆ. ಇದರ ಜತೆಗೆ ಜಮ್ಮು, ಉಧಾಮ್‌ಪುರ ಮತ್ತು ದಿಲ್ಲಿಯ 26 ಮತಗಟ್ಟೆಗಳಲ್ಲಿ ಎ-ಫಾರ್ಮ್ಗಳ ವ್ಯವಸ್ಥೆ ಮಾಡಲೂ ಆಯೋಗ ನಿರ್ಧರಿಸಿದೆ. ಈ ಮೂಲಕ ತಂತ್ರಜ್ಞಾನವನ್ನು ಬಳಸಿಕೊಂಡು ಕಾಶ್ಮೀರಿ ನಿರಾಶ್ರಿತರ ದಶಕಗಳ ಕನಸನ್ನು ಈಡೇರಿಸಲು ಮುಂದಾಗಿರುವ ಚುನಾವಣಾ ಆಯೋಗ ಅಭಿನಂದನೆಗೆ ಅರ್ಹವಾಗುತ್ತದೆ.

ಕಾಶ್ಮೀರಿ ಪಂಡಿತರದ್ದೊಂದು ದುರಂತ ಕತೆ.ಸುಮಾರು ಮೂರು ದಶಕಗಳಿಂದ ತಮ್ಮದೇ ದೇಶದಲ್ಲಿ ನಿರಾಶ್ರಿತರಂತೆ ಬದುಕುತ್ತಿರುವ ಅವರನ್ನು ಎಲ್ಲ ರಾಜಕೀಯ ಪಕ್ಷಗಳು ಕಡೆಗಣಿಸುತ್ತಾ ಬಂದಿವೆ. 2014ರ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕಾಶ್ಮೀರಿ ಪಂಡಿತರು ಪೂರ್ಣ ಘನತೆಯೊಂದಿಗೆ , ಸುರಕ್ಷಿತವಾಗಿ ತಮ್ಮ ಪೂರ್ವಜರ ನೆಲದಲ್ಲಿ ನೆಲೆಯಾಗುವುದನ್ನು ಖಾತರಿಪಡಿಸುತ್ತೇವೆ ಎಂದಿದ್ದರೂ ಈ ಭರವಸೆಯನ್ನು ಈಡೇರಿಸಿಕೊಳ್ಳಲು ಅದರಿಂದ ಸಾಧ್ಯವಾಗಿಲ್ಲ. ಇದಕ್ಕೆ ಕಾಶ್ಮೀರದ ಸಂಕೀರ್ಣ ರಾಜಕೀಯ ಪರಿಸ್ಥಿತಿ ಮತ್ತು ಇನ್ನೂ ಶಮನವಾಗದ ಭೀತಿವಾದ ಕಾರಣವಾಗಿರಬಹುದು. ಆದರೆ ಈ ನಿಟ್ಟಿನಲ್ಲಿ ಒಂದಿಷ್ಟಾದರೂ ಪ್ರಯತ್ನ ಮಾಡುವ ಬಾಧ್ಯತೆ ಅಧಿಕಾರಕ್ಕೇರಿದ ಸರಕಾರಕ್ಕೆ ಇತ್ತು.

ಕಾನೂನು ಪ್ರಕಾರ ನಿರಾಶ್ರಿತರಿಗೆ ವಿಶೇಷ ಮತಗಟ್ಟೆಗಳಲ್ಲಿ ಮತದಾನ ಮಾಡುವ ಅವಕಾಶ ಇದ್ದರೂ ಕೆಂಪುಪಟ್ಟಿಯ ಅಡೆತಡೆಗಳು, ಅಧಿಕಾರಶಾಹಿಯ ನಿಧಾನ ಗತಿಯ ಕಾರ್ಯಶೈಲಿ ಇತ್ಯಾದಿ ಕಾರಣಗಳಿಂದ ಈ ಹಕ್ಕನ್ನು ಪಡೆಯಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಭಾರತೀಯರಾಗಿದ್ದೂ ತಮ್ಮದೇ ದೇಶದಲ್ಲಿ ನಿರಾಶ್ರಿತರಂತೆ ಬದುಕುತ್ತಿರುವ ಕಾಶ್ಮೀರಿ ಪಂಡಿತರಿಗೆ ಅವರ ಸಂವಿಧಾನದತ್ತವಾದ ಹಕ್ಕನ್ನು ಚಲಾಯಿಸುವ ಅವಕಾಶವೂ ಇಲ್ಲದಂತಾಗಿರುವುದು ದೇಶದ ಪ್ರಜಾತಂತ್ರಕ್ಕೊಂದು ಕಳಂಕ. ಮತದಾನದ ಅವಕಾಶ ಇಲ್ಲದ ಕಾರಣ ಯಾವ ಪಕ್ಷವೂ ಇಷ್ಟರ ತನಕ ನಿರಾಶ್ರಿತ ಅಭ್ಯರ್ಥಿಗೆ ಟಿಕೇಟ್‌ ಕೊಡುವ ಔದಾರ್ಯವನ್ನು ತೋರಿಸಿರಲಿಲ್ಲ. ಅವರ ಒಂದು ರೀತಿಯಲ್ಲಿ ಅಗೋಚರ ಮತದಾರರಾಗಿ ಉಳಿದಿದ್ದರು. ಇದೀಗ ಚುನಾವಣಾ ಆಯೋಗದ ಕ್ರಮದಿಂದಾಗಿ ನಿರಾಶ್ರಿತರ ಮತಗಳಿಗೂ ಬಲ ಬಂದಿದೆ. ಕಣಿವೆಯ ಪ್ರಬಲ ರಾಜಕೀಯ ಶಕ್ತಿಯಾಗುವ ಅವಕಾಶ ಅವರಿಗೆ ಸಿಕ್ಕಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.