ಅಗಲಿದ ಪ್ರಣವ್‌


Team Udayavani, Sep 1, 2020, 5:55 AM IST

ಅಗಲಿದ ಪ್ರಣವ್‌

ಮಾಜಿ ರಾಷ್ಟ್ರಪತಿ, ಕಾಂಗ್ರೆಸ್‌ ಹಿರಿಯ ನಾಯಕ ಪ್ರಣವ್‌ ಮುಖರ್ಜಿ ಭಾರತೀಯ ರಾಜಕಾರಣದಲ್ಲಿ, ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದವರು.

ತಮ್ಮ ನೇರ ನಿಷ್ಠುರ ನಡೆಗಳಿಂದ ಗುರುತಿಸಿಕೊಂಡಿದ್ದ ಪ್ರಣವ್‌ ಮುಖರ್ಜಿ ಎಲ್ಲರಿಗೂ ಪ್ರೀತಿಯ ಪ್ರಣವ್‌ ದಾ ಆಗಿದ್ದವರು. ತಮ್ಮ ಹೆಗಲೇರಿದ ಜವಾಬ್ದಾರಿಗಳನ್ನೆಲ್ಲ ನಿಷ್ಠೆಯಿಂದ ನಿಭಾಯಿಸಿದವರು.

ವಿತ್ತ ಸಚಿವರಾಗಿ ಅವರು ತಂದ ಕೆಲವು ಸುಧಾರಣೆಗಳು ಭಾರತೀಯ ಆರ್ಥಿಕತೆಯ ದಿಕ್ಕನ್ನೇ ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವು ಎಂದರೆ ಸುಳ್ಳಾಗದು.

ಈ ಕಾರಣಕ್ಕಾಗಿಯೇ ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ವಿಚಾರ ಪ್ರಸ್ತಾಪವಾಗುವಾಗೆಲ್ಲ, ಕಡ್ಡಾಯವಾಗಿ ಪ್ರಣವ್‌ ಮುಖರ್ಜಿ ಹೆಸರು ಬಂದೇ ಬರುತ್ತದೆ.

ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೆ ತರಲು ಶ್ರಮಿಸಿದವರಲ್ಲಿ ಪ್ರಣವ್‌ ಕೂಡ ಒಬ್ಬರು. ಮೂಲ ಸೌಕರ್ಯಾಭಿವೃದ್ಧಿ ಯೋಜನೆಗಳಿಗೆ ಬಲ ನೀಡುವುದೇ ಆರ್ಥಿಕ ಬಲದ ಮೂಲ ಮಂತ್ರ ಎಂದು ಬಲವಾಗಿ ಪ್ರತಿಪಾದಿಸುತ್ತಿದ್ದ ಪ್ರಣವ್‌ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳು, ವಿದ್ಯುತ್‌ ಸೇವಾ ಯೋಜನೆಗಳ ವಿಸ್ತರಣೆ ಸೇರಿದಂತೆ ಹಲವಾರು ಜನಪರ ಯೋಜನೆಗಳಿಗೆ ಕಾರಣವಾದವರು.

90ರ ದಶಕದಿಂದ ಏರುಗತಿಯಲ್ಲಿ ಸಾಗುತ್ತಿದ್ದ ವಿತ್ತೀಯ ಕೊರತೆಯನ್ನು ನಿಯಂತ್ರಣಕ್ಕೆ ತರುವ ವಿಚಾರದಲ್ಲಾಗಲಿ, ಲೈಸನ್ಸ್‌ ರಾಜ್‌ ಪದ್ಧತಿ ಕೊನೆಗೊಳ್ಳುವ ವಿಚಾರದಲ್ಲೇ ಆಗಲಿ ಪ್ರಣವ್‌ ನೀಡಿದ ಕೊಡುಗೆಗೆ ಸರಿಸಮನಾದದು ಇಲ್ಲ.
ಪ್ರಣವ್‌ ತಮ್ಮ ದಶಕಗಳ ರಾಜಕೀಯ ಜೀವನದಲ್ಲಿ ಹಲವಾರು ಉನ್ನತ ಸ್ಥಾನಗಳನ್ನು ಅಲಂಕರಿಸಿದವರು.

ವಿದೇಶಾಂಗ, ವಾಣಿಜ್ಯ, ರಕ್ಷಣೆ, ಕೈಗಾರಿಕೆ ಇಲಾಖೆಗಳ ಸಚಿವರಾಗಿ ಛಾಪು ಮೂಡಿಸಿದ್ದ ಅವರು ಭಾರತದ ಪ್ರಧಾನಿಯಾಗಬೇಕಿತ್ತು ಎನ್ನುವುದು ಬಹುಜನರ ನಿರೀಕ್ಷೆ ಹಾಗೂ ಬಯಕೆಯಾಗಿತ್ತಾದರೂ ಈ ವಿಚಾರದಲ್ಲಿ ಅವರಿಗೆ ಕಾಂಗ್ರೆಸ್‌ನಿಂದ ನ್ಯಾಯ ಸಲ್ಲಲೇ ಇಲ್ಲ. ಸ್ವಾತಂತ್ರ್ಯ ಹೋರಾಟಗಾರ ರಾಜಕೀಯ ಕುಟುಂಬದಲ್ಲಿ ಜನಿಸಿದ ಪ್ರಣವ್‌ ಬೋಧಕರಾಗಿ, ಪತ್ರಕರ್ತರಾಗಿ ದುಡಿದವರು.

ಇಂದಿರಾ, ರಾಜೀವ್‌, ಸೋನಿಯಾ ಹಾಗೂ ರಾಹುಲ್‌ ಗಾಂಧಿಯವರೆಗೆ ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಪ್ರಣವ್‌ ಕೆಲವೊಮ್ಮೆ ಈ ನಿಷ್ಠೆಯಿಂದಾಗಿ ಟೀಕೆಗೂ ಒಳಗಾಗಿದ್ದರು.

ರಾಷ್ಟ್ರಪತಿಯಾಗಿ ಅವರು ಕೈಗೊಂಡ ಕಾರ್ಯಗಳು ಎಲ್ಲ ವಲಯದಿಂದಲೂ ಶ್ಲಾಘನೆಗೆ ಒಳಗಾಗಿದ್ದವು. ಕಟ್ಟಾ ಕಾಂಗ್ರೆಸ್ಸಿಗರಾದರೂ, ಎದುರಾಳಿ ಪಕ್ಷಗಳ ನಾಯಕರೊಂದಿಗೂ ಉತ್ತಮ ಬಾಂಧವ್ಯ ಹೊಂದಿ ಅಜಾತಶತ್ರುವೇ ಆಗಿದ್ದರು.

ಪ್ರಧಾನಿ ಮೋದಿಯವರೊಂದಿಗೂ ಬಹಳ ಆಪ್ತತೆ ಇಟ್ಟುಕೊಂಡಿದ್ದ ಅವರು ಜಿಎಸ್‌ಟಿ ಸೇರಿದಂತೆ ಮೋದಿ ಸರಕಾರ ತಂದ ಹಲವು ಕಾನೂನುಗಳಿಗೆ ಅಂಕಿತಹಾಕಿದ್ದರು.

ಮೊದಲಿನಿಂದಲೂ ಉಗ್ರವಾದ, ಮೂಲಭೂತವಾದವನ್ನು ಕಟುಮಾತಿನಲ್ಲೇ ಟೀಕಿಸುತ್ತಾ ಬರುತ್ತಿದ್ದ ಅವರು ವೆಂಕಟರಾಮನ್‌ ಅನಂತರ ಅತಿಹೆಚ್ಚು ಕ್ಷ‌ಮಾದಾನ ಅರ್ಜಿಗಳನ್ನು ತಿರಸ್ಕರಿಸಿದ ರಾಷ್ಟ್ರಪತಿಯಾಗಿ ಗುರುತಿಸಿಕೊಂಡವರು.

ಒಟ್ಟಲ್ಲಿ ಪ್ರಣವ್‌ ಮುಖರ್ಜಿ ಪ್ರಧಾನಿಯಾಗಬೇಕಿತ್ತು ಎನ್ನುವ ಅನೇಕ ಕಾಂಗ್ರೆಸ್ಸಿಗರ ಬಯಕೆ ಬಯಕೆಯಾಗಿಯೇ ಉಳಿದುಹೋಯಿತು. ಆದರೆ ಜನಪರ ಕಾರ್ಯ ಮಾಡಲು ಪ್ರಧಾನಿ ಹುದ್ದೆಯೇ ಬೇಕಾಗಿಲ್ಲ ಎನ್ನುವುದನ್ನು ತಮಗೆ ಸಿಕ್ಕ ಜವಾಬ್ದಾರಿಗಳನ್ನು ದೇಶ ಹಿತದ ದೃಷ್ಟಿಯಿಂದ ನಿರ್ವಹಿಸುವ ಮೂಲಕ ತೋರಿಸಿಕೊಟ್ಟರು.

ಹಿರಿಯರೊಬ್ಬರು ಅಗಲಿದಾಗ ಎಂಡ್‌ ಆಫ್ ಆ್ಯನ್‌ ಎರಾ ಎನ್ನುವುದು ಒಂದು ಕ್ಲೀಷೆಯಾಗಿದೆ. ಆದರೆ ಪ್ರಣವ್‌ ಮುಖರ್ಜಿ ಅವರ ವಿಚಾರದಲ್ಲಿ ಈ ಮಾತು ಅಕ್ಷರಶಃ ಅನ್ವಯವಾಗುತ್ತದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.