ಪ್ರವಾಹ ನಿಭಾವಣೆಗೆ ತಯಾರಿ ಅಗತ್ಯ


ಸಂಪಾದಕೀಯ, Aug 12, 2019, 5:00 AM IST

KERALA

ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳು ಭೀಕರ ಪ್ರಳಯದಿಂದ ತತ್ತರಿಸಿ ಹೋಗಿವೆ. ಕಳೆದ ಸುಮಾರು ಹತ್ತು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಈ ಮೂರು ರಾಜ್ಯಗಳ ಎಲ್ಲ ನದಿಗಳು ತುಂಬಿ ಹರಿಯುತ್ತಿದ್ದು ನದಿ ಪಾತ್ರದ ಜನರ ಬದುಕು ಮೂರಾಬಟ್ಟೆಯಾಗಿದೆ. ಕರ್ನಾಟಕದ 17 ಜಿಲ್ಲೆಗಳ 80 ತಾಲೂಕುಗಳು ಪ್ರವಾಹ ಪೀಡಿತವಾಗಿವೆ ಎಂದು ಸರಕಾರ ಘೋಷಿಸಿದೆ. ಮಹಾರಾಷ್ಟ್ರದಲ್ಲಿ ಸುಮಾರು 5 ಲಕ್ಷ ಜನರು ಪ್ರವಾಹ ಸಂತ್ರಸ್ತರಾಗಿದ್ದಾರೆ. ಕೇರಳ ಸತತ ಎರಡನೇ ವರ್ಷ ಜಲ ಪ್ರಕೋಪಕ್ಕೆ ಗುರಿಯಾಗಿದೆ. ಕಳೆದ ವರ್ಷ ಉಂಟಾದ ಶತಮಾನದ ಪ್ರವಾಹದ ಹೊಡೆತದಿಂದ ಪೂರ್ತಿಯಾಗಿ ಚೇತರಿಸಿಕೊಳ್ಳುವ ಮೊದಲೇ ಈ ರಾಜ್ಯ ಮತ್ತೆ ಅದೇ ಪರಿಸ್ಥಿತಿಯನ್ನು ಎದುರಿಸಬೇಕಾಗಿರುವುದು ದುರದೃಷ್ಟಕರ.

ಮೂರೂ ರಾಜ್ಯಗಳಲ್ಲಿ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕೃಷಿ ಹಾಗೂ ಆಸ್ತಿಪಾಸ್ತಿ ಹಾನಿಯನ್ನು ಇನ್ನೂ ಅಂದಾಜಿಸಲಾಗಿಲ್ಲ ಮತ್ತು ಅದಕ್ಕೆ ಇದು ಸಮಯವೂ ಅಲ್ಲ. ಪ್ರವಾಹ ಪೀಡಿತ ಸ್ಥಳಗಳಿಂದ ಸಂತ್ರಸ್ತರನ್ನು ಪಾರು ಮಾಡಿ ಸುರಕ್ಷಿತ ಸ್ಥಳಗಳಿಗೆ ಸಾಗಿಸುವುದೇ ಈಗ ಆಡಳಿತದ ಮುಂದೆ ಇರುವ ದೊಡ್ಡ ಸವಾಲು. ಮೂರೂ ರಾಜ್ಯಗಳ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಶಕ್ತಿಮೀರಿ ಪ್ರಯತ್ನಿಸುತ್ತಿದ್ದಾರೆ. ಅದೇ ರೀತಿ ಕೇಂದ್ರದ ಸಚಿವರೂ ಬಂದು ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

ಆಶ್ರಯ ಕೇಂದ್ರಗಳಲ್ಲಿರುವ ಜನರ ಗೋಳು ಹೇಳತೀರದು. ಅದರಲ್ಲೂ ವೃದ್ಧರು, ಮಕ್ಕಳು, ಗರ್ಭಿಣಿಯರು ಮತ್ತು ಅಸ್ವಸ್ಥರು ಸರಿಯಾದ ಆರೈಕೆಯಿಲ್ಲದೆ ಬಳಲುತ್ತಿದ್ದಾರೆ. ಪ್ರಕೃತಿಯ ಮುಂದೆ ಮಾನವ ಎಷ್ಟು ನಿಸ್ಸಹಾಯಕ ಎನ್ನುವುದಕ್ಕೆ ಈ ಪ್ರಳಯವೇ ಸಾಕ್ಷಿ.

ಇತ್ತೀಚೆಗಿನ ವರ್ಷಗಳಲ್ಲಿ ಮುಂಗಾರು ಸ್ವರೂಪ ಬದಲಾಗಿರುವುದು ಗಮನಕ್ಕೆ ಬರುತ್ತಿದೆ.ಈ ವರ್ಷವೂ ಆರಂಭದಲ್ಲಿ ಸುಮಾರು ಒಂದು ತಿಂಗಳು ಕಣ್ಣಾಮುಚ್ಚಾಲೆಯಾಡಿದ ಮುಂಗಾರು ಅನಂತರ ಅಸಲು ಬಡ್ಡಿ ಸಮೇತ ಎಂಬಂತೆ ಅಪ್ಪಳಿಸಿದೆ. ಮುಂಗಾರಿನ ಈ ಕಣ್ಣಾಮುಚ್ಚಾಲೆಗೆ ಹವಾಮಾನ ಬದಲಾವಣೆಯೂ ಕಾರಣ ಎಂದು ತಜ್ಞರು ಎಚ್ಚರಿಸುತ್ತಿದ್ದರೂ ಯಾರ ಕಿವಿಗೂ ಅದು ಬೀಳುತ್ತಿಲ್ಲ.

ಪ್ರವಾಹದಂಥ ಪ್ರಕೃತಿ ವಿಕೋಪಗಳನ್ನು ನಿಯಂತ್ರಿಸುವುದು ಅಸಾಧ್ಯ. ಆದರೆ ಇಂಥ ಪರಿಸ್ಥಿತಿಯನ್ನು ಎದುರಿಸುವ ಸಮರ್ಪಕ ತಯಾರಿಯನ್ನು ಆಡಳಿತ ಮಾಡಿಟ್ಟುಕೊಂಡರೆ ಕನಿಷ್ಠ ಪ್ರಾಣ ಹಾನಿಯನ್ನಾದರೂ ಕಡಿಮೆ ಮಾಡಬಹುದು. ಆದರೆ ನಮ್ಮಲ್ಲಿ ಇನ್ನೂ ಸರಿಯಾದ ಪ್ರವಾಹ ಮುನ್ನೆಚ್ಚರಿಕೆ ವ್ಯವಸ್ಥೆಯೇ ಇಲ್ಲ. ಉತ್ತರ ಕರ್ನಾಟಕದ ಪ್ರವಾಹಕ್ಕೆ ಅಣೆಕಟ್ಟೆಗಳ ನೀರಿನ ಅಸಮರ್ಪಕ ನಿರ್ವಹಣೆಯೂ ಕಾರಣ. ಪ್ರತಿ ವರ್ಷ ಹೀಗಾಗುತ್ತಿದ್ದರೂ ಇದಕ್ಕೊಂದು ನೀತಿಯನ್ನು ರೂಪಿಸುವ ಕೆಲಸ ಇನ್ನೂ ಆಗಿಲ್ಲ. ಪ್ರವಾಹದ ಮೇಲೆ ಕಣ್ಗಾವಲು ಇಟ್ಟು ಕಾಲಕಾಲಕ್ಕೆ ಜನರಿಗೆ ಮಾಹಿತಿ ಕೊಡುವ ವ್ಯವಸ್ಥೆ ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ. ಪ್ರವಾಹದಂಥ ವಿಕೋಪಗಳ ಸಂದರ್ಭದಲ್ಲಿ ಮಾಹಿತಿಗಿಂತ ವದಂತಿಗಳ ಕಾರುಬಾರೇ ಹೆಚ್ಚಿರುತ್ತದೆ. ಪ್ರವಾಹ ಇಳಿಯುವ ತನಕ ಏನೂ ಮಾಡಲಾಗದ ಸ್ಥಿತಿ ನಮ್ಮದು. ನದಿ ಪಾತ್ರಗಳಲ್ಲಿರುವ ಊರುಗಳಿಗಾಗಿ ಸಮಗ್ರವಾದ ಪ್ರವಾಹ ನಿರ್ವಹಣಾ ಯೋಜನೆಯೊಂದನ್ನು ರಾಷ್ಟ್ರೀಯ ಮಟ್ಟದಲ್ಲಿ ತಯಾರಿಸುವ ಕೆಲಸ ಆಗಬೇಕಾಗಿದೆ.

ಪಶ್ಚಿಮ ಘಟ್ಟವನ್ನು ಸಂರಕ್ಷಿಸುವ ನಿಟ್ಟಿನಲ್ಲಿ 2011ರಲ್ಲೇ ಪ್ರೊ| ಮಾಧವ ಗಾಡ್ಗೀಳ್‌ ನೇತೃತ್ವದ ಸಮಿತಿಯೊಂದು ಕೇಂದ್ರಕ್ಕೆ ಅಧ್ಯಯನ ವರದಿಯನ್ನು ಸಲ್ಲಿಸಿತ್ತು. ಮುಂದಾಲೋಚನೆಯಿಲ್ಲದ ಅಭಿವೃದ್ಧಿ ಯೋಜನೆಗಳು ಪಶ್ಚಿಮ ಘಟ್ಟವನ್ನು ಅಸ್ಥಿರಗೊಳಿಸುತ್ತಿದೆ ಎಂದು ಗಾಡ್ಗೀಳ್‌ ಈ ವರದಿಯಲ್ಲಿ ಎಚ್ಚರಿಸಿದ್ದರು.ಘಟ್ಟದ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಸಲುವಾಗಿ ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬರುವ ರಾಜ್ಯಗಳು ಗಣಿಗಾರಿಕೆ, ಅಣೆಕಟ್ಟೆ ನಿರ್ಮಾಣ, ಕೃಷಿ ಕಾರ್ಯಗಳು ಮತ್ತು ವಸತಿ ಬಡಾವಣೆಗಳ ನಿರ್ಮಾಣ ಸಂದರ್ಭದಲ್ಲಿ ಸಂಯಮ ವಹಿಸಬೇಕೆಂಬ ಸಲಹೆ ಈ ವರದಿಯಲ್ಲಿತ್ತು. ಆದರೆ ವಿವಿಧ ಕಾರಣಗಳಿಂದಾಗಿ ಈ ವರದಿ ಅನುಷ್ಠಾನಗೊಂಡಿಲ್ಲ. ಕಳೆದ ವರ್ಷ ಮತ್ತು ಈ ವರ್ಷ ಸಂಭವಿಸಿರುವ ಪ್ರಳಯದ ಮೂಲ ಪಶ್ಚಿಮ ಘಟ್ಟದಲ್ಲಿದೆ ಎನ್ನುವುದು ಗಮನಾರ್ಹ ಅಂಶ. ನಮ್ಮ ವ್ಯವಸ್ಥೆ ಕಣ್ಣು ತೆರೆಯಲು ಇನ್ನೆಷ್ಟು ವಿಕೋಪಗಳು ಸಂಭವಿಸಬೇಕು?

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.