ಒಲಿಂಪಿಕ್ಸ್‌ಗೆ ತಯಾರಿ: ಸರಕಾರದ ನಡೆ ಸ್ವಾಗತಾರ್ಹ


Team Udayavani, Aug 21, 2021, 7:05 AM IST

ಒಲಿಂಪಿಕ್ಸ್‌ಗೆ ತಯಾರಿ: ಸರಕಾರದ ನಡೆ ಸ್ವಾಗತಾರ್ಹ

ಟೋಕಿಯೊ ಒಲಿಂಪಿಕ್ಸ್‌ ಮುಗಿಯುತ್ತಿದ್ದಂತೆ ರಾಜ್ಯ ಸರಕಾರ ಸಮರೋಪಾದಿಯಲ್ಲಿ ಮುಂದಿನ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿದೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಈಗಲೇ ತಯಾರಿ ಶುರು ಮಾಡಿರುವ ರಾಜ್ಯದ ಕ್ರೀಡಾ ಇಲಾಖೆ, ಈಗಿನಿಂದಲೇ ಕ್ರೀಡಾಳುಗಳ ತಯಾರಿ ಮತ್ತು ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನೂ ಆರಂಭಿಸಿದೆ.

ಭಾರತೀಯರೇಕೆ ಹೆಚ್ಚು ಒಲಿಂಪಿಕ್ಸ್‌ ಪದಕ ಗೆಲ್ಲಲ್ಲ ಎಂಬುದು ಬಹು ಹಿಂದಿನಿಂದಲೂ ಇರುವ ಪ್ರಶ್ನೆ. ಇದಕ್ಕೆ ಉತ್ತರ ನಮ್ಮಲ್ಲಿ ಕ್ರೀಡೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ಸಿಗುತ್ತಿಲ್ಲ ಎಂಬುದು. ಹೌದು, ಇಡೀ ದೇಶಕ್ಕೆ ಅನ್ವಯಿಸಿ ಹೇಳುವುದಾದರೆ ಈ ಮಾತು ಒಪ್ಪುವಂಥದ್ದೇ. ಆದರೆ 2014ರಲ್ಲಿ ಕೇಂದ್ರದಲ್ಲಿ ಎನ್‌ಡಿಎ ಸರಕಾರ ಬಂದ ಮೇಲೆ ಒಲಿಂಪಿಕ್ಸ್‌ ಮೇಲೆ ಹೆಚ್ಚಿನ ಗಮನ ನೀಡಲಾಗಿತ್ತು. ಒಂದು ಒಲಿಂಪಿಕ್ಸ್‌ ಮುಗಿಯುತ್ತಿದ್ದಂತೆಯೇ ಮುಂದಿನ ಒಲಿಂಪಿಕ್ಸ್‌ ಗಾಗಿ ಮೊದಲೇ ತಯಾರಿ ಮತ್ತು ಶ್ರೇಷ್ಠ ಕ್ರೀಡಾಳುಗಳನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವುದು ಕೇಂದ್ರ ಸರಕಾರದ ಯೋಜನೆಯಲ್ಲಿ ಸೇರಿತ್ತು.

ಹಾಗೆಯೇ ಒಡಿಶಾ ಸರಕಾರ ಕೂಡ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಉತ್ತಮ ಕೆಲಸವನ್ನೇ ಮಾಡಿದೆ. ಮಹಿಳಾ ಮತ್ತು ಪುರುಷರ ಹಾಕಿ ತಂಡಗಳಿಗೆ ಪ್ರಾಯೋಜಕತ್ವ ಕೊಟ್ಟ ಒಡಿಶಾ ಸರಕಾರ, ಇವರ ಬೆಳವಣಿಗೆಗಾಗಿ 100 ಕೋಟಿ ರೂ.ಗಳನ್ನೂ ವೆಚ್ಚ ಮಾಡಿತ್ತು. ಹೀಗಾಗಿಯೇ ಪುರುಷರ ತಂಡ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಹಾಗೂ ಮಹಿಳಾ ತಂಡ ವಿರೋಚಿತ ಪ್ರದರ್ಶನ ನೀಡಲು ಕಾರಣವಾಯಿತು ಎಂಬ ಮಾತುಗಳು ಎಲ್ಲ ಕಡೆಯಿಂದಲೂ ಕೇಳಿಬರುತ್ತಿವೆ.

ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಇತ್ತೀಚಿನ ಕ್ರಮಗಳೂ ಅಷ್ಟೇ ಆಶಾದಾಯಕವಾಗಿವೆ. ಮೊದಲಿಗೆ ಪೊಲೀಸ್‌ ಇಲಾಖೆಯ ನೇಮಕಾತಿ ವೇಳೆಯಲ್ಲಿ ಶೇ.2ರಷ್ಟು ಕ್ರೀಡಾ ಮೀಸಲಾತಿ ಕೊಡುವ ನಿರ್ಧಾರ ತೆಗೆದುಕೊಳ್ಳಲಾಯಿತು. ಒಂದು ರೀತಿಯಲ್ಲಿ ಇದೂ ಉತ್ತಮವಾದ ಪ್ರೋತ್ಸಾಹಕ ಕ್ರಮವೇ. ಏಕೆಂದರೆ ಪೊಲೀಸ್‌ ಇಲಾಖೆಯಲ್ಲಿ ಸೇರುವ ದೃಷ್ಟಿಯಿಂದಾದರೂ ಕೆಲವರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬಹುದು. ಎಲ್ಲೋ ತೆರೆಮರೆಯಲ್ಲೇ ನಶಿಸಿ ಹೋಗುವಂಥ ಪ್ರತಿಭೆಗಳೂ ಅರಳಬಹುದು. ಇದರ ಜತೆಗೆ ಕಾಲೇಜುಗಳಲ್ಲಿ ಉತ್ತಮ ಕ್ರೀಡಾ ಸಾಧನೆ ಮಾಡಿದವರಿಗೆ 10 ಸಾವಿರ ವಿದ್ಯಾರ್ಥಿ ವೇತನದಂಥ ಕ್ರಮಗಳನ್ನು ತರಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಇದರ ಆಶಯವೂ ಕ್ರೀಡೆಯಲ್ಲಿ ಹೆಚ್ಚೆಚ್ಚು ಮಂದಿ ಪಾಲ್ಗೊಳ್ಳಬೇಕು ಎಂಬುದಷ್ಟೇ ಆಗಿದೆ.

ಈಗ ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ ಕ್ರೀಡಾ ಸಚಿವರಾದ ಡಾ| ನಾರಾಯಣ ಗೌಡ ನೇತೃತ್ವದಲ್ಲಿ ಉತ್ತಮವಾದ ಕ್ರೀಡಾ ಪಟುಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿ ಅವರಿಗೆ ಉತ್ತಮ ತರಬೇತಿ ಕೊಡಲು ರಾಜ್ಯ ಸರಕಾರ ಮುಂದಾಗಿದೆ. ತರಬೇತಿ ಶಿಬಿರಗಳು, ಕ್ರೀಡಾ ಕೂಟಗಳ ಮೂಲಕ ಅವರ ಕ್ರೀಡಾ ಸಾಮರ್ಥ್ಯ ಗುರುತಿಸಲಾಗುತ್ತದೆ. ಇದಕ್ಕಾಗಿ ಕ್ರೀಡಾ ಸಚಿವರ ನೇತೃತ್ವದಲ್ಲಿ ಉನ್ನತ ಅಧಿಕಾರ ಸಮಿತಿ ರಚಿಸಲಾಗಿದೆ. ಅಲ್ಲದೆ ಇಲಾಖೆಯ ಅಧಿಕಾರಿಗಳು, ಕ್ರೀಡಾ ಸಾಧಕರು ಈ ಸಮಿತಿಯಲ್ಲಿ ಇದ್ದಾರೆ. ಏನೇ ಆಗಲಿ, ಸರಕಾರ ಕ್ರೀಡೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿರುವುದು ಉತ್ತಮ ಸಂಗತಿಯೇ. ನಿಜವಾಗಿಯೂ ಕ್ರೀಡಾಪಟುಗಳನ್ನು ಹುಡುಕಿ ಅವರಿಗೆ ಉತ್ತಮ ತರಬೇತಿ ನೀಡಿದರೆ ನಿಜಕ್ಕೂ ಒಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಇನ್ನಷ್ಟು ಪದಕ ತಂದು ಕೊಟ್ಟೇ ಕೊಡುತ್ತಾರೆ. ಈ ನಿಟ್ಟಿನಲ್ಲಿ ಸರಕಾರದ ಶ್ರಮ ಸಫ‌ಲವಾಗಲಿ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.