ಬೆಲೆ ಏರಿಕೆ: ಜನಹಿತ-ಆರ್ಥಿಕತೆ ನಡುವೆ ಸಮತೋಲನ ಅಗತ್ಯ


Team Udayavani, Apr 8, 2022, 6:00 AM IST

ಬೆಲೆ ಏರಿಕೆ: ಜನಹಿತ-ಆರ್ಥಿಕತೆ ನಡುವೆ ಸಮತೋಲನ ಅಗತ್ಯ

ಹೊಸ ಆರ್ಥಿಕ ವರ್ಷ ಆರಂಭಗೊಳ್ಳುತ್ತಿದ್ದಂತೆಯೇ ದೇಶದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟತೊಡಗಿದೆ. ದೇಶದಲ್ಲಿ ಕಳೆದ 16 ದಿನಗಳ ಅವಧಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಲೀಟರ್‌ಗೆ ತಲಾ 10 ರೂ. ಹೆಚ್ಚಳವಾಗಿದ್ದು ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ದೇಶಾದ್ಯಂತ ಕೆಲವೊಂದು ಪ್ರಮುಖ ಔಷಧಗಳು, ಅಡುಗೆ ಅನಿಲ, ಸಿಎನ್‌ಜಿ, ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗಿದೆ. ಇದರ ಪರಿಣಾಮ ಜನಸಾಮಾನ್ಯರ ದೈನಂದಿನ ಜೀವನ ದುಸ್ತರವಾಗಿದೆ.

ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಒಟ್ಟಾರೆ ಪರಿಸ್ಥಿತಿ ಆಶಾದಾಯಕವಾಗಿ­ಲ್ಲದಿರುವ ಹಿನ್ನೆಲೆಯಲ್ಲಿ ದೇಶದಲ್ಲಿಯೂ ಬೆಲೆ ಏರಿಕೆಯ ಸನ್ನಿವೇಶ ಸೃಷ್ಟಿಯಾಗಿದೆ ಎಂಬುದನ್ನು ಅಲ್ಲಗಳೆಯಲಾಗದು. ಒಂದೆಡೆ ರಷ್ಯಾ-­ಉಕ್ರೇನ್‌ ನಡುವೆ ನಡೆಯುತ್ತಿರುವ ಯುದ್ಧ, ಈ ಯುದ್ಧದ ಪರಿಣಾಮ ರಷ್ಯಾದ ವಿರುದ್ಧ ಅಮೆರಿಕ ಮತ್ತು ಐರೋಪ್ಯ ದೇಶಗಳು ಹೇರಿರುವ ಆರ್ಥಿಕ ದಿಗ್ಬಂಧನಗಳು, ದವಸ ಧಾನ್ಯ ಮತ್ತು ಖಾದ್ಯ ತೈಲಗಳಿಗಾಗಿ ರಷ್ಯಾ ಮತ್ತು ಉಕ್ರೇನ್‌ ಅನ್ನೇ ಅವಲಂಬಿಸಿದ ದೇಶಗಳಲ್ಲೀಗ ಆಹಾರ ಅಭಾವ ಕಾಣಿಸಿಕೊಂಡಿರುವುದು, ಜಾಗತಿಕವಾಗಿ ಎದುರಾಗಿರುವ ಆರ್ಥಿಕ ಸಂಕಷ್ಟ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುಗತಿಯ­ಲ್ಲಿಯೇ ಸಾಗಿರುವ ಕಚ್ಚಾ ತೈಲದ ಬೆಲೆ… ಈ ಎಲ್ಲ ಬೆಳವಣಿಗೆಗಳು ವಿಶ್ವದ ಪ್ರತಿಯೊಂದೂ ರಾಷ್ಟ್ರದ ಮೇಲೆ ಪರಿಣಾಮಗಳನ್ನು ಬೀರಿವೆ.

ಎರಡು ವರ್ಷಗಳಲ್ಲಿ ಕೊರೊನಾದಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದ್ದ ಜನಸಾಮಾನ್ಯರ ಬದುಕು ಇತ್ತೀಚೆಗೆ ತುಸು ಚೇತರಿಕೆ ಕಾಣತೊಡಗಿತ್ತು. ತೈಲ ಬೆಲೆ ಏರಿಕೆಯ ಬಿಸಿ ಕಳೆದ ವರ್ಷವೇ ದೇಶವನ್ನು ತಟ್ಟಬೇಕಿತ್ತಾದರೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಮಟ್ಟಿಗೆ ಮುಂದೂಡಲ್ಪಟ್ಟಿತು. ಫ‌ಲಿತಾಂಶ ಘೋಷಣೆಯಾದ ಎರಡು ವಾರಗಳ ಬಳಿಕ ತೈಲ ಬೆಲೆಯಾದಿಯಾಗಿ ಒಂದೊಂದೇ ವಸ್ತುಗಳ ಬೆಲೆ ಹೆಚ್ಚತೊಡಗಿದೆ. ಇದರಿಂದಾಗಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳತೊಡಗಿದೆ. ರಾಜ್ಯದಲ್ಲಿ ಮೂರು ದಿನಗಳ ಹಿಂದೆಯಷ್ಟೇ ವಿದ್ಯುತ್‌ ದರವನ್ನು ಅಲ್ಪ ಪ್ರಮಾಣದಲ್ಲಿ ಹೆಚ್ಚಿ ಸುವ ಮೂಲಕ ಗ್ರಾಹಕರಿಗೆ ಶಾಕ್‌ ನೀಡಲಾಗಿದ್ದರೆ, ಇದೀಗ ಹಾಲಿನ ಬೆಲೆ ಹೆಚ್ಚಳದ ಸುಳಿವನ್ನು ನೀಡಿದೆ. ಬಸ್‌ ಪ್ರಯಾಣ ದರ ಹೆಚ್ಚಳದ ಪ್ರಸ್ತಾವವೂ ಸರಕಾರದ ಮುಂದಿದ್ದು ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಇವೆರಡೂ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಒಪ್ಪಿದ್ದಲ್ಲಿ ಜನಸಾಮಾನ್ಯರ ಸಂಕಷ್ಟ ಬಿಗಡಾಯಿಸಲಿದೆ.

ಬೆಲೆ ಏರಿಕೆ ವಿಚಾರದಲ್ಲಿ ಸದ್ಯ ಕೇಂದ್ರ ಸರಕಾರದ ಸ್ಥಿತಿ ಹಗ್ಗದ ಮೇಲಣ ನಡಿಗೆಯಂತಾಗಿದೆ. ಆದರೆ ತೈಲ ಕಂಪೆನಿಗಳು, ತನ್ನ ಅಧೀನದ ಸಂಸ್ಥೆಗಳು ಮತ್ತು ಖಜಾನೆಯತ್ತಲೇ ಸರಕಾರ ತನ್ನ ಗಮನವನ್ನು ಕೇಂದ್ರೀಕರಿಸದೆ ಜನಸಾಮಾನ್ಯರತ್ತಲೂ ದೃಷ್ಟಿ ಹರಿಸುವುದು ಅನಿವಾರ್ಯವಾಗಿದೆ. ಬೆಲೆ ಏರಿಕೆಯ ನೇರ ಪರಿಣಾಮವನ್ನು ಜನಸಾಮಾನ್ಯರು ಅನುಭವಿಸಿದರೆ ಇದರ ಪಶ್ಚಾತ್‌ ಪರಿಣಾಮಗಳು ಜನರ ಖರೀದಿ ಸಾಮರ್ಥ್ಯ, ವ್ಯಾಪಾರ- ವಹಿವಾಟು, ಹಣದುಬ್ಬರ, ಆರ್ಥಿಕತೆಯ ಮೇಲಾಗಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಜನಸಾಮಾನ್ಯರ ಹಿತ ಮತ್ತು ಆರ್ಥಿಕತೆ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು. ಈ ನಿಟ್ಟಿನಲ್ಲಿ ಕೆಲವೊಂದು ಬೃಹತ್‌ ಯೋಜನೆಗಳನ್ನು ತಾತ್ಕಾಲಿಕವಾಗಿ ಮುಂದೂಡಿ ಜನಸಾಮಾನ್ಯರ ಮೇಲಣ ಹೊರೆ ಕಡಿಮೆಗೊಳಿಸಬೇಕು. ಸದ್ಯಕ್ಕಂತೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಟ್ಟಿಗೆ ಇದುವೇ ಮೊದಲ ಆದ್ಯತೆಯಾಗಬೇಕು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.