ಹೆಚ್ಚುವರಿ ಶಿಕ್ಷಕರಿಗೆ ಭಡ್ತಿ ನೀಡಿ ವರ್ಗಾವಣೆ ಮಾಡಿ


Team Udayavani, Jan 19, 2023, 6:00 AM IST

ಹೆಚ್ಚುವರಿ ಶಿಕ್ಷಕರಿಗೆ ಭಡ್ತಿ ನೀಡಿ ವರ್ಗಾವಣೆ ಮಾಡಿ

ರಾಜ್ಯದಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕವಷ್ಟೇ ಭಡ್ತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂಬ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಸ್ಪಷ್ಟೋಕ್ತಿ ಭಡ್ತಿಯ ನಿರೀಕ್ಷೆಯಲ್ಲಿದ್ದ ಹಿರಿಯ ಶಿಕ್ಷಕರಿಗೆ ನಿರಾಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದೀಚೆಗೆ ಭಡ್ತಿ ಲಭಿಸುವ ಇರಾದೆಯಲ್ಲಿದ್ದ ಸಾವಿರಾರು ಹಿರಿಯ ಶಿಕ್ಷಕರು ಸರಕಾರದ ಈ ನಿರ್ಧಾರದಿಂದ ತೀವ್ರ ಅಸಮಾಧಾನಗೊಂಡಿದ್ದಾರೆ.

ಶಿಕ್ಷಕರ ವರ್ಗಾವಣೆ, ಭಡ್ತಿ ಪ್ರಕ್ರಿಯೆಗಳು ಪ್ರತೀ ವರ್ಷ ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗುತ್ತಿದ್ದು ವಾರ್ಷಿಕ ಸಮಸ್ಯೆಯಾಗಿ ಮಾರ್ಪ ಟ್ಟಿದೆ. ಸರಕಾರ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗತ್ತಿ ಕೊಂಡ ಸಂದರ್ಭದಲ್ಲಿಯೇ ಈ ಬಗ್ಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆತಂಕ ವ್ಯಕ್ತಪಡಿಸಿತ್ತು. ಮಾತ್ರವಲ್ಲದೆ ಮೊದಲು ಅರ್ಹರಿಗೆ ಭಡ್ತಿ ನೀಡಿ ಆ ಬಳಿಕ ವರ್ಗಾವಣೆ ಪ್ರಕ್ರಿಯೆ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿತ್ತು.

ಆದರೆ ಶಿಕ್ಷಣ ಇಲಾಖೆ ಇದಕ್ಕೆ ತಲೆಕೆಡಿಸಿಕೊಳ್ಳದೆ ತನ್ನ ಪೂರ್ವನಿಗದಿತ ವೇಳಾಪಟ್ಟಿಯಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಮಾ.16ರ ವರೆಗೆ ನಡೆಯಲಿದೆ. ಹಂತವಾರು ಪ್ರಕ್ರಿಯೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಗೊಳಿಸಲಾಗುತ್ತಿದೆ. ಸರಕಾರದ ಈ ಬಿಗಿ ಧೋರಣೆಯಿಂದಾಗಿ ಮುಂದಿನ 2-3 ತಿಂಗಳುಗಳಲ್ಲಿ ನಿವೃತ್ತರಾಗಲಿರುವ ಹಿರಿಯ ಶಿಕ್ಷಕರಿಗೆ ಭಡ್ತಿಯ ಅವ ಕಾಶ ಕೈತಪ್ಪಿ ಹೋಗಲಿದೆ. ಮಾ.31ರೊಳಗೆ ಅರ್ಹರಿಗೆ ಭಡ್ತಿ ಸಿಗಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಅದಕ್ಕೂ ಮುನ್ನವೇ ನಿವೃತ್ತರಾಗಲಿರುವ ಶಿಕ್ಷಕರಿಗೆ ದ್ರೋಹ ಬಗೆದಂತಾಗಲಿದೆ.

ಹೆಚ್ಚುವರಿ ಶಿಕ್ಷಕರ ಪಟ್ಟಿಯಲ್ಲಿ ಸಾವಿರಕ್ಕೂ ಅಧಿಕ ಶಿಕ್ಷಕರು ಸದ್ಯ ದಲ್ಲಿಯೇ ನಿವೃತ್ತಿಯಾಗಲಿದ್ದಾರೆ. ಒಂದು ವೇಳೆ ಸರಕಾರ ಈಗಲೇ ಅವರಿಗೆ ಭಡ್ತಿ ನೀಡಿದಲ್ಲಿÉ ಒಂದಿಷ್ಟು ಹೆಚ್ಚುವರಿ ವೇತನ, ಸವಲತ್ತುಗಳು ಲಭಿಸುತ್ತಿದ್ದವು ಮಾತ್ರವಲ್ಲದೆ ಗೌರವವೂ ಹೆಚ್ಚುತ್ತಿತ್ತು. ಈ ಹಿಂದೆ ಮೀಸಲಾತಿ ವಿಚಾರದಲ್ಲಿನ ಗೊಂದಲದಿಂದಾಗಿ ಭಡ್ತಿಯನ್ನು ಮುಂದೂ ಡುತ್ತ ಬರಲಾಗಿತ್ತು. ವಾರಗಳ ಹಿಂದೆಯಷ್ಟೇ ಕೊನೆಗೊಂಡ ಬೆಳಗಾವಿ ಅಧಿವೇಶನದಲ್ಲಿ ಈ ಗೊಂದಲ ನಿವಾರಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಶೀಘ್ರ ಭಡ್ತಿ ದೊರೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಇವರೆಲ್ಲರ ನಿರೀಕ್ಷೆಗೆ ಸರಕಾರ ತಣ್ಣೀರೆರಚಿದೆ.

ದಶಕಗಳಿಗೂ ಅಧಿಕ ಕಾಲ ಶಿಕ್ಷಕರಾಗಿ ಮಕ್ಕಳಿಗೆ ವಿದ್ಯೆ ಧಾರೆ ಎರೆದ ಶಿಕ್ಷಕರನ್ನು ಸರಕಾರ ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ ಎಂಬ ವಾದ ಸಾರ್ವಜನಿಕ ವಲಯದಿಂದಲೂ ಕೇಳಿಬರತೊಡಗಿದೆ. ಒಂದೆರಡು ತಿಂಗಳ ಕಾಲ ಶಾಲಾ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುವ ಅವಕಾಶದಿಂದ ವಂಚಿತರಾಗಿಸುತ್ತಿರುವುದು ಖೇದನೀಯ.

ಅದಾಗ್ಯೂ ಈಗ ಹೆಚ್ಚುವರಿ ಶಿಕ್ಷಕರನ್ನು ವರ್ಗಾಯಿಸಿದರೂ ಅದು ಅಧಿಕೃತವಾಗಿ ಜಾರಿಗೆ ಬರುವುದು ಮುಂದಿನ ಶೈಕ್ಷಣಿಕ ವರ್ಷದ ಆರಂಭ ದಲ್ಲಿಯೇ. ಸರಕಾರ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಇಷ್ಟೊಂದು ಆತುರ ತೋರುತ್ತಿರುವುದಾದರೂ ಏಕೆ ಎಂಬುದು ಶಿಕ್ಷಕರ ಸಂಘದ ಪ್ರಶ್ನೆ. ಈ ವಿಚಾರದಲ್ಲಿ ಶಿಕ್ಷಕರ ಸಂಘ ಮತ್ತು ಅಧಿಕಾರಗಳ ನಡುವೆ ಹಗ್ಗ ಜಗ್ಗಾಟ ನಡೆದಿದೆ. ಹೆಚ್ಚುವರಿ ಶಿಕ್ಷಕರು ಮೊದಲು ಭಡ್ತಿ ನೀಡಿ ಬಳಿಕ ವರ್ಗಾವಣೆ ನಡೆಸಿ ಎಂದು ಮನವಿ ಮಾಡಿಕೊಂಡಿದ್ದಾರೆಯೇ ಹೊರತು ವರ್ಗದ ಬಗೆಗಲ್ಲ ಎಂಬುದನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.