ಪ್ರತಿಭಟನೆಗಳು ಇರಲಿ; ಸಾರ್ವಜನಿಕರಿಗೆ ಅಡ್ಡಿ ಸಲ್ಲದು


Team Udayavani, Oct 9, 2020, 6:50 AM IST

ಪ್ರತಿಭಟನೆಗಳು ಇರಲಿ; ಸಾರ್ವಜನಿಕರಿಗೆ ಅಡ್ಡಿ ಸಲ್ಲದು

ಭಿನ್ನಾಭಿಪ್ರಾಯಗಳು ಮತ್ತು ಆಡಳಿತ ವ್ಯವಸ್ಥೆ ಜತೆ ಜತೆಯಾಗಿಯೇ ಹೋಗಬೇಕು. ಆದರೆ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವ ವಿಚಾರದಲ್ಲಿ ಪ್ರತಿಭಟನೆ ಮತ್ತು ಧರಣಿಗಳ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಬಾರದು ಎಂಬ ಸುಪ್ರೀಂ ಕೋರ್ಟ್‌ನ ತೀರ್ಪು ಸ್ವಾಗತಾರ್ಹವಾಗಿದೆ.

ಸಿಎಎ ವಿರೋಧಿಸಿ ದಿಲ್ಲಿಯ ಶಹೀನ್‌ಬಾಗ್‌ನಲ್ಲಿ ಸುದೀರ್ಘಾವಧಿ ವರೆಗೆ ರಸ್ತೆ ತಡೆ ಮಾಡಿದ್ದ ಕುರಿತಂತೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ನಿರ್ದಿಷ್ಟ ಅಥವಾ ಪ್ರತಿಭಟನೆಗಳಿಗೆಂದೇ ನಿಗದಿ ಮಾಡಿರುವ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬೇಕೇ ಹೊರತು, ಜನರಿಗೆ ಸಮಸ್ಯೆ ತಂದೊಡ್ಡುವ ರೀತಿಯಲ್ಲಿ ವರ್ತಿಸಬಾರದು ಎಂದಿತ್ತು. ಅಷ್ಟೇ ಅಲ್ಲ, ಪ್ರತಿಭಟನನಿರತರು, ಅಧಿಕಾರಶಾಹಿಯ ಪಾತ್ರದ ಬಗ್ಗೆಯೂ ಸುಪ್ರೀಂ ಕೋರ್ಟ್‌ ಈ ತೀರ್ಪಿನಲ್ಲಿ ಸೂಚ್ಯವಾಗಿ ಹೇಳಿದೆ.

ವಸಾಹತುಶಾಹಿ ವಿರುದ್ಧದ ಪ್ರತಿಭಟನೆಗೂ, ಈಗ ನಮ್ಮ ನಡುವಿನವರೇ ಆಡಳಿತ ಮಾಡುತ್ತಿರುವ ಪ್ರಜಾಪ್ರಭುತ್ವದ ವಿರುದ್ಧ ನಡೆಸುವ ಪ್ರತಿಭಟನೆಗೂ ವ್ಯತ್ಯಾಸವಿದೆ. ಆಗಿನ ಪ್ರತಿಭಟನೆಯನ್ನು ಈಗಿನದ್ದಕ್ಕೆ ಹೋಲಿಕೆ ಮಾಡುವುದು ಸರಿಯಾದುದಲ್ಲ. ಹಾಗೆಂದು ಪ್ರತಿಭಟನೆಯನ್ನೇ ಮಾಡಬಾರದು ಎಂದು ಹೇಳಲೂ ಸಾಧ್ಯವಿಲ್ಲ ಎಂಬುದು ಸುಪ್ರೀಂ ಕೋರ್ಟ್‌ ಅಭಿಪ್ರಾಯ.

ಸರಕಾರದ ಕ್ರಮ ಅಥವಾ ನಿರ್ಲಕ್ಷ್ಯದ ಬಗ್ಗೆ ಧ್ವನಿ ಎತ್ತಬೇಕಾದುದು ಎಲ್ಲರ ಕರ್ತವ್ಯ. ಇದಕ್ಕೆ ಸಂವಿಧಾನವೇ ಅವಕಾಶ ನೀಡಿದೆ. ಅಷ್ಟೇ ಏಕೆ, ಭಿನ್ನಾಭಿಪ್ರಾಯಗಳು ಮತ್ತು ಆಡಳಿತವು ಜತೆ ಜತೆಯಾಗಿಯೇ ಸಾಗಬೇಕು. ಆಗಷ್ಟೇ ಪ್ರಜಾಪ್ರಭುತ್ವ ಇನ್ನಷ್ಟು ಗಟ್ಟಿಯಾಗುತ್ತದೆ ಎಂಬುದು ಸುಪ್ರೀಂ ಕೋರ್ಟ್‌ ತೀರ್ಪಿನ ಸಾರಾಂಶ.

ಆದರೆ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿರುವ ಅದು, ಈ ವಿಚಾರದಲ್ಲಿ ಸರಕಾರ ಏನಾದರೂ ಕ್ರಮ ತೆಗೆದುಕೊಳ್ಳಬಹುದಿತ್ತು ಎಂದೂ ಬೇಸರ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ ಈ ವಿಚಾರ ಕೋರ್ಟ್‌ನ ಮುಂದೆಯೂ ಬರಬೇಕಾಗಿರಲಿಲ್ಲ ಎಂದು ಹೇಳಿದೆ.

ಇಂಥ ಪ್ರತಿಭಟನೆಗಳ ಹಿಂದಿನ ಆತಂಕದ ಬಗ್ಗೆಯೂ ಸುಪ್ರೀಂ ಕೋರ್ಟ್‌ ಹೇಳಿರುವುದನ್ನು ಗಮನಿಸಬೇಕು. ಶಹೀನ್‌ಬಾಗ್‌ ಪ್ರತಿಭಟನೆಯಲ್ಲಿ ನಾಯಕತ್ವದ ಕೊರತೆ ಇತ್ತು, ಹಲವು ಗುಂಪುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರಿಂದ ಇವುಗಳು ತಮ್ಮ ಸ್ವಹಿತಾಸಕ್ತಿ ಈಡೇರಿಸಿಕೊಳ್ಳಲು ಹವಣಿಕೆ ಮಾಡುವ ಸಂಭವವು ಇತ್ತು. ಹೀಗಾಗಿ, ಅಂದಿನ ಶಹೀನ್‌ ಬಾಗ್‌ ಹೋರಾಟ, ಮಹಿಳೆಯರ ಧ್ವನಿಯನ್ನು ಸಶಕ್ತಗೊಳಿಸುವ ಏಕೈಕ ಧ್ವನಿಯಾಗಿ ಉಳಿದಿರಲಿಲ್ಲ. ಅಷ್ಟೇ ಅಲ್ಲದೆ ಪ್ರತಿಭಟನೆಯನ್ನು ಹಿಂಪಡೆಯುವ ಅಧಿಕಾರವನ್ನೂ ಆ ಮಹಿಳೆಯರು ಹೊಂದಿರಲಿಲ್ಲ ಎಂಬ ಅಂಶವನ್ನು ಉಲ್ಲೇಖೀಸಿದೆ.

ಜತೆಗೆ ಸಾರ್ವಜನಿಕರಿಗೆ ತೊಂದರೆ ನೀಡುವಂಥ ಸ್ಥಳದಲ್ಲಿ ಯಾರಾದರೂ ಪ್ರತಿಭಟನೆ ಅಥವಾ ಧರಣಿ ನಡೆಸುತ್ತಿದ್ದರೂ ಆಡಳಿತಶಾಹಿ ಅವರನ್ನು ಅಲ್ಲಿಂದ ಕಳುಹಿಸಬಹುದು ಎಂಬ ಮಾತುಗಳನ್ನೂ ಸುಪ್ರೀಂ ಕೋರ್ಟ್‌ ಹೇಳಿದೆ. ಮುಂದಿನ ದಿನಗಳಲ್ಲಿ ಇಂಥ ಪರಿಸ್ಥಿತಿಗಳು ಉದ್ಭವವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ನಿಗದಿತ ಸ್ಥಳದಲ್ಲಿ ಪ್ರತಿಭಟನೆಗಳು ನಡೆಯಲಿ, ಧರಣಿ, ಹೋರಾಟದ ವೇಳೆ ಮಾತುಕತೆಗೂ ಆಸ್ಪದವಿರಲಿ. ಆದರೆ, ಯಾವುದೇ ಕಾರಣಕ್ಕೂ ಪ್ರತಿಭಟನೆಗಳು ಕೈಮೀರಿ ಹೋಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಧೀಶರು ಖಡಕ್ಕಾಗಿಯೇ ಹೇಳಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಕೋರ್ಟ್‌ ಹೇಳಿರುವ ಅಂಶಗಳು ಒಪ್ಪತಕ್ಕಂತವುಗಳೇ ಆಗಿವೆ. ದಿಢೀರನೇ ರಸ್ತೆ ತಡೆ ನಡೆಸುವುದು, ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ನಿರ್ಬಂಧ ಒಡ್ಡುವುದು, ಜನರ ಓಡಾಟಕ್ಕೆ ಅನುಮತಿ ನೀಡದೇ ಇರುವುದು, ಎಷ್ಟೋ ಬಾರಿ ಈ ಟ್ರಾಫಿಕ್‌ ಜಾಮ್‌ನಲ್ಲಿ ಆ್ಯಂಬುಲೆನ್ಸ್‌ಗಳೇ ಸಿಲುಕಿರುವ ಘಟನೆಗಳೂ ನಡೆದಿವೆ. ಈ ಅಂಶಗಳನ್ನು ಗಮನಿಸಿದರೆ ಸುಪ್ರೀಂ ತೀರ್ಪು ಸರಿ ಅನ್ನಿಸುತ್ತದೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.