ಪಿಯುಸಿ ಫ‌ಲಿತಾಂಶ ಗುಣಾತ್ಮಕ ಮನಸ್ಥಿತಿ ಮುಖ್ಯ


Team Udayavani, Jul 15, 2020, 6:10 AM IST

ಪಿಯುಸಿ ಫ‌ಲಿತಾಂಶ ಗುಣಾತ್ಮಕ ಮನಸ್ಥಿತಿ ಮುಖ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜುಲೈ 18ರ ಹೊತ್ತಿಗೆ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳ ಫ‌ಲಿತಾಂಶ ನಾಲ್ಕು ದಿನ ಮುಂಚೆಯೇ ಹೊರಬಿದ್ದಿದೆ.

ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾಗಿರುವ ಪಿಯುಸಿ ಫ‌ಲಿತಾಂಶವು ಈ ಬಾರಿ ಕೋವಿಡ್‌-19 ಬಿಕ್ಕಟ್ಟಿನ ನಡುವೆಯೇ ಬಂದಿದೆ.

ಗಮನಾರ್ಹ ಸಂಗತಿಯೆಂದರೆ, ಕಳೆದ ಬಾರಿಗಿಂತ ಈ ವರ್ಷ ಫ‌ಲಿತಾಂಶದಲ್ಲಿ ಹೆಚ್ಚಳ ಕಂಡುಬಂದಿರುವುದು. ಮತ್ತೆ ಎಂದಿನಂತೆ ಬಾಲಕಿಯರೇ ಪಿಯುಸಿಯಲ್ಲಿ ಮೇಲುಗೈ ಸಾಧಿಸಿದ್ದಾರೆ.

ಉಡುಪಿ ಈ ಬಾರಿಯೂ ಪ್ರಥಮ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಮತ್ತು ಕೊಡಗು ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಅದರಲ್ಲೂ ಗಮನಾರ್ಹವಾಗಿ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರು ಆರು ಪ್ರಮುಖ ರ್‍ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆನ್ನುವುದು ಶ್ಲಾಘನೀಯ ವಿಚಾರ.

ಇನ್ನೊಂದೆಡೆ ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರ ಕೊನೆಯ ಮೂರು ಸ್ಥಾನಗಳಲ್ಲಿರುವುದು ಬೇಸರದ ವಿಷಯ. ಅಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಆಗಬೇಕಾದ ಅಗತ್ಯವನ್ನು ಇದು ಸಾರುತ್ತಿದೆ.

ಇದೇ ವೇಳೆಯಲ್ಲೇ, ಅನೇಕ ವಿದ್ಯಾರ್ಥಿಗಳು ಯಾವುದೋ ಕಾರಣಕ್ಕೆ ನಪಾಸಾಗಿದ್ದಾರೆ ಅಥವಾ ಅವರು ನಿರೀಕ್ಷಿಸಿದಷ್ಟು ಫ‌ಲಿತಾಂಶ ಸಿಗದಿರಬಹುದು. ಆದರೆ, ಈ ವಿಚಾರದಲ್ಲಿ ಅಧೀರರಾಗಬೇಕಾದ ಅಗತ್ಯವಿಲ್ಲ. ಪರೀಕ್ಷೆಯಲ್ಲಿ ನಪಾಸಾದಾಕ್ಷಣ ಎಲ್ಲಾ ಮುಗಿದುಹೋಯಿತು ಎಂದು ಚಿಂತಿಸುವುದರಲ್ಲಿ ಅರ್ಥವೇ ಇಲ್ಲ. ಮತ್ತೆ ಮರುಪರೀಕ್ಷೆಯ ಅವಕಾಶವಿದ್ದೇ ಇರುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ನೆನಪಿಡಬೇಕಾದ ಸಂಗತಿಯೆಂದರೆ, ಬದುಕು ಎಲ್ಲರಿಗೂ ಬೆಳೆಯುವ, ಬೆಳಗುವ ಅವಕಾಶಗಳನ್ನು ಖಂಡಿತ ಕಲ್ಪಿಸುತ್ತದೆ. ನಪಾಸಾದಾಕ್ಷಣ ಏನೋ ದೊಡ್ಡ ತಪ್ಪಾಗಿಬಿಟ್ಟಿದೆ ಎಂಬ ಭಾವನೆ, ಕೀಳರಿಮೆ ಖಂಡಿತ ಬೇಡ. ಜೀವನದಲ್ಲಿ ಎದುರಾಗುವ ಅಡ್ಡಿಗಳು ನಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿಸುವುದಕ್ಕೇ ಬಂದಿರುತ್ತವೆ ಎನ್ನುವುದನ್ನು ಮರೆಯದಿರಿ.

ನಿಮ್ಮೆಲ್ಲರ ಮುಂದೆ ಮತ್ತೆ ಅವಕಾಶವಿದ್ದು, ಈ ಬಾರಿ ಗುಣಾತ್ಮಕ ಮನಃಸ್ಥಿತಿಯೊಂದಿಗೆ ಸಜ್ಜಾಗಿ. ಆಪ್ತರೊಂದಿಗೆ ಮಾತನಾಡಿ, ಮನಸ್ಸನ್ನು ಹಗುರಾಗಿಸಿಕೊಳ್ಳಿ. ಪೋಷಕರೂ ಸಹ ತಮ್ಮ ಮಕ್ಕಳ ಮೇಲೆ ಈ ಫ‌ಲಿತಾಂಶಗಳಿಂದಾಗಿ ಋಣಾತ್ಮಕ ಪರಿಣಾಮ ಉಂಟಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ.

ಇನ್ನು, ಫ‌ಲಿತಾಂಶ ಬಂದಾಯಿತು, ಮುಂದೇನು? ಎಂದು ಕೆಲವು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸುತ್ತಿರುವ ವರದಿಗಳು ಬರುತ್ತಿವೆ. ಕೋವಿಡ್‌-19 ಬಿಕ್ಕಟ್ಟು ಮುಂದುವರಿದಿರುವುದರಿಂದ, ಅವರಲ್ಲಿ ಇಂಥ ಪ್ರಶ್ನೆ ಎದುರಾಗಿರುವುದು ಸಹಜವೇ.

ಆದರೆ, ಶಿಕ್ಷಣ ಇಲಾಖೆ ಆ ಬಗ್ಗೆ ಚಿಂತನೆ ನಡೆಸುತ್ತಿರುವ ಕಾರಣ, ನಿಮಗೆ ಆ ಬಗ್ಗೆ ಅನಗತ್ಯ ಚಿಂತೆ ಬೇಡ. ಎಲ್ಲವೂ ಸರಿಯಾಗುತ್ತದೆ. ಈ ಬಗ್ಗೆ ಹೆಚ್ಚು ನಿಮ್ಮಲ್ಲಿರಲಿ.

ಮುಂದಿನ ಪಯಣಕ್ಕೆ ಎಲ್ಲರಿಗೂ ಆಲ್‌ ದಿ ಬೆಸ್ಟ್‌!

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.