Session ಅಧಿವೇಶನ ಕಲಾಪಗಳಲ್ಲಿರಲಿ ಜನಪರ ಕಾಳಜಿಗೆ ಆದ್ಯತೆ


Team Udayavani, Dec 5, 2023, 5:30 AM IST

1-qwwwqewq

ಸಂಸತ್‌ ಮತ್ತು ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಗಳು ಸೋಮವಾರ ಅಧಿಕೃತವಾಗಿ ಆರಂಭಗೊಂಡಿವೆ. ಪಂಚರಾಜ್ಯ ಚುನಾವಣೆಯ ಫ‌ಲಿತಾಂಶ ಪ್ರಕಟವಾದ ಮಾರನೆಯ ದಿನವೇ ಅಧಿವೇಶನ ಆರಂಭಗೊಂಡಿರುವುದರಿಂದ ಮೊದಲ ದಿನದಂದು ಸಂಸತ್‌ನಲ್ಲಾಗಲೀ, ವಿಧಾನಮಂಡಲದಲ್ಲಾಗಲೀ ಅಷ್ಟೇನೂ ಗದ್ದಲ, ಗೊಂದಲಗಳಿಲ್ಲದೆ ಕಲಾಪಗಳು ನಡೆದಿವೆ. ಅಧಿವೇಶನದ ಉಳಿದ ಅವಧಿಯಲ್ಲೂ ಇದೇ ತೆರನಾಗಿ ಸಂಸತ್‌ ಮತ್ತು ವಿಧಾನ ಮಂಡಲದ ಉಭಯ ಸದನಗಳ ಕಲಾಪಗಳು ಸುಲಲಿತವಾಗಿ ನಡೆದು, ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು, ಅವರ ಬೇಡಿಕೆಗಳ ಕುರಿತಂತೆ ಸವಿಸ್ತಾರವಾಗಿ ಚರ್ಚೆಗಳು ನಡೆಯಲಿ ಎಂಬ ಆಶಯ ಜನತೆಯದ್ದಾಗಿದೆ.

ದೇಶದ ಬಹುತೇಕ ಭಾಗಗಳಲ್ಲಿ ಬರದ ಛಾಯೆ ಆವರಿಸಿದ್ದು, ಕೇಂದ್ರ ಸರ್ಕಾರದಿಂದ ನೆರವು ಸಿಗಬೇಕಿದೆ. ವಿಪಕ್ಷ ಆಡಳಿತ­ವಿರುವ ರಾಜ್ಯಗಳಲ್ಲಿನ ರಾಜ್ಯಪಾಲರುಗಳ ಕಾರ್ಯ­ವೈಖರಿ ಕುರಿತಂತೆ ಸುಪ್ರೀಂ ಕೋರ್ಟ್‌, ರಾಜ್ಯಪಾಲರುಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಬಗ್ಗೆ ವಿಪಕ್ಷಗಳು ಅಧಿವೇಶನದಲ್ಲಿ ಪ್ರಸ್ತಾವಿಸಬಹುದು. ಎಲ್ಲದಕ್ಕಿಂತ ಪ್ರಮುಖವಾಗಿ, ಈಗಷ್ಟೇ ಬಹಿರಂಗವಾಗಿರುವ ಪಂಚರಾಜ್ಯಗಳ ಚುನಾವಣ ಫ‌ಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳದೇ ರಚನಾತ್ಮಕ ಚರ್ಚೆಯಲ್ಲಿ ಭಾಗಿಯಾಗಬೇಕು ಎಂದು ಪ್ರಧಾನಿ ಮೋದಿಯವರು ಹೇಳಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸುವುದು ಸೂಕ್ತ.

ಇನ್ನು ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿ, ಗ್ಯಾರಂಟಿ ಯೋಜನೆಗಳ ಅಸಮರ್ಪಕ ಜಾರಿ, ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸ್ಥಗಿತ, ವರ್ಗಾವಣೆಯಲ್ಲಿ ದಂಧೆ, ಭ್ರಷ್ಟಾಚಾರ ಆರೋಪ, ಹೆಣ್ಣು ಭ್ರೂಣ ಹತ್ಯೆ, ಶಿಶುಗಳ ಮಾರಾಟ, ರಾಜ್ಯದಲ್ಲಿನ ಕಾನೂನು-ಸುವ್ಯವಸ್ಥೆ ಮತ್ತಿತರ ವಿಷಯಗಳ ಕುರಿತಂತೆ ವಿಧಾನಮಂಡಲದ ಉಭಯ ಸದನಗಳಲ್ಲಿ ವಿಸ್ತೃತ ಚರ್ಚೆ ನಡೆಯಬೇಕಿದೆ.

ಆಡಳಿತಾರೂಢರು ಬಹುಮತವನ್ನು ಮುಂದಿಟ್ಟು ದೇಶ ಎದುರಿಸುತ್ತಿರುವ ಸಮಸ್ಯೆಗಳು, ವಿಪಕ್ಷಗಳು ಪ್ರಸ್ತಾವಿಸುವ ಗಂಭೀರ ವಿಷಯಗಳ ಕುರಿತಂತೆ ಹಾರಿಕೆಯ ಉತ್ತರ ನೀಡಿ ನುಣುಚಿಕೊಳ್ಳದೆ ಒಂದಿಷ್ಟು ದಿಟ್ಟತನವನ್ನು ಪ್ರದರ್ಶಿಸಬೇಕು. ಅಷ್ಟು ಮಾತ್ರವಲ್ಲದೆ ಸರಕಾರಗಳು ಮಂಡಿಸಲುದ್ದೇಶಿಸಿ­ರುವ ಹಲವು ಮಹತ್ತರ ಮಸೂದೆಗಳ ಕುರಿತಂತೆ ಸಮಗ್ರ ಚರ್ಚೆ ನಡೆದು ಅವುಗಳಿಗೆ ಸದನದ ಅಂಗೀಕಾರ ಪಡೆದುಕೊಳ್ಳುವ ನಿಟ್ಟಿನಲ್ಲಿ ಆಡಳಿತ ಪಕ್ಷಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.

ಸಂಸತ್‌ ಇರಲಿ, ವಿಧಾನಮಂಡಲವಿರಲಿ ಸದನದ ಕಲಾಪಗಳು ಕೇವಲ ರಾಜಕೀಯ ಮೇಲಾಟಕ್ಕೆ ವೇದಿಕೆಯಾಗದೆ ಕಲಾಪಗಳು ಸುಗಮವಾಗಿ ನಡೆಯಲು ಮತ್ತು ಫ‌ಲಪ್ರದವಾಗಲು ಆಡಳಿತ ಮತ್ತು ವಿಪಕ್ಷಗಳು ಅವಕಾಶ ಮಾಡಿಕೊಡಬೇಕು. ವರ್ಷಕ್ಕೆ ನಿರ್ದಿಷ್ಟ ದಿನಗಳ ಕಾಲ ಕಲಾಪ ನಡೆಯಬೇಕೆಂಬ ನಿಯಮವಿರುವುದರಿಂದ ಅದನ್ನು ಪೂರೈಸಲೆಂದು ಕಾಟಾಚಾರಕ್ಕಾಗಿ ಅಧಿವೇಶನದ ಕಲಾಪಗಳನ್ನು ನಡೆಸದೆ ಅಧಿವೇಶನಗಳು ಜನತೆಯ ಆಶಯ, ನಿರೀಕ್ಷೆಗೆ ತಕ್ಕಂತೆ ಸುಸೂತ್ರವಾಗಿ ನಡೆಯಬೇಕು. ರಾಜಕೀಯ ಏನಿದ್ದರೂ ಚುನಾವಣ ಅಖಾಡಕ್ಕೆ ಸೀಮಿತವಾಗಬೇಕೇ ವಿನಾ ಸದನದೊಳಗೆ ಜನಪರ ಕಾಳಜಿಗೆ ಮೊದಲ ಆದ್ಯತೆ ಲಭಿಸಬೇಕು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.