PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ


Team Udayavani, Apr 11, 2024, 6:30 AM IST

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪದವಿಪೂರ್ವ ಕಾಲೇಜಿನ(ಪಿಯುಸಿ) ವಾರ್ಷಿಕ ಪರೀಕ್ಷೆ-1ರಲ್ಲಿ ಪರೀಕ್ಷೆ ಬರೆದಿದ್ದ 6,81,079 ವಿದ್ಯಾರ್ಥಿಗಳ ಪೈಕಿ 5,52,690 ಮಂದಿ ಉತ್ತೀರ್ಣರಾಗಿದ್ದಾರೆ. ದಾಖಲೆಯ ಶೇ.81.15 ಫ‌ಲಿತಾಂಶ ದೊರೆತಿದೆ. ನಿರೀಕ್ಷೆಯಂತೆ ವಿದ್ಯಾರ್ಥಿನಿಯರ ಮೇಲುಗೈ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲೆ ಅಗ್ರ ಸ್ಥಾನ ಪಡೆದಿದ್ದರೆ, ಗದಗ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ವಿಶೇಷ ಎಂದರೆ, ಕೋವಿಡ್‌ ಅವಧಿಯ ಸಾಮೂಹಿಕ ಉತ್ತೀರ್ಣದ ಫ‌ಲಿತಾಂಶ ಹೊರತುಪಡಿಸಿದರೆ, ಕಳೆದ ವರ್ಷದ ಶೇ.74.67 ಫ‌ಲಿತಾಂಶದ ದಾಖಲೆ ನುಚ್ಚುನಾರಾಗಿದೆ. ಕಳೆದ ಬಾರಿಗಿಂತ ಈ ವರ್ಷ ಶೇ.6.48ರಷ್ಟು ಫ‌ಲಿತಾಂಶ ಏರಿಕೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ! ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ಇಲಾಖೆಯ ಅವಿರತ ಪ್ರಯತ್ನಕ್ಕೆ ಸಂದ ಫ‌ಲವಿದು.

ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಅತ್ಯಂತ ಮಹತ್ವದ ಘಟ್ಟ. ಮುಂದಿನ ಉನ್ನತ ವ್ಯಾಸಂಗಕ್ಕೆ ಇದೇ ಅಡಿಪಾಯ. ಮಕ್ಕಳು ಇಲ್ಲಿ ತೋರುವ ಅತ್ಯುತ್ತಮ ಪ್ರದರ್ಶನವು ಅವರ ಮುಂಬರುವ ಅಧ್ಯಯನದ ದಿಕ್ಸೂಚಿಯಾಗಿರುತ್ತದೆ. ಆ ಕಾರಣಕ್ಕಾಗಿಯೇ ದ್ವಿತೀಯ ಪರೀಕ್ಷೆಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚು ಮಹತ್ವ ನೀಡುತ್ತಾರೆ. ಅತ್ಯುತ್ತಮ ಫ‌ಲಿತಾಂಶ ಪಡೆದು ವಿದ್ಯಾರ್ಥಿಗಳು ತಮ್ಮ ಗುರಿಗಳತ್ತ ದಾಪುಗಾಲು ಹಾಕುತ್ತಾರೆ.

ಇನ್ನೂ ಇದೇ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರು ಅಥವಾ ಅನುತ್ತೀ ರ್ಣರಾದವರು ಬದುಕೇ ಮುಗಿದು ಹೋಯಿತು ಎಂದು ಭಾವಿಸಿಕೊಳ್ಳಬೇಕಿಲ್ಲ. ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಇಚ್ಛಿಸುವ ಮತ್ತು ಅನುತ್ತೀರ್ಣವಾದವರು ಉಳಿದ ಎರಡು ಪರೀಕ್ಷೆಗಳ ಅವಕಾಶವನ್ನು ಬಳಸಿಕೊಳ್ಳಬಹುದು. ಅಲ್ಲೂ ವಿಫ‌ಲವಾದರೆ ಬದುಕಿಗೆ ಹಲವು ಮಾರ್ಗಗಳಿವೆ; ಶೋಧಿಸಬೇಕಷ್ಟೇ. ಆದರೆ ಎದೆಗುಂದಿ ಅತಿರೇಕದ ಕ್ರಮಗಳಿಗೆ ಮುಂದಾಗಬಾರದು. ಅಂಥ ವಿದ್ಯಾರ್ಥಿ ಗಳನ್ನು ಗುರುತಿಸಿ, ಪೋಷಕರು ಮತ್ತು ಶಿಕ್ಷಕರು ಧೈರ್ಯ ತುಂಬುವ ಕೆಲಸ ಮಾಡಬೇಕು.

ಸರಕಾರಿ ಕಾಲೇಜು ಸೇರಿ ಒಟ್ಟು 469 ಕಾಲೇಜುಗಳು ಶೇ.100 ಫ‌ಲಿತಾಂಶ ಸಾಧಿಸಿದರೆ, 35 ಕಾಲೇಜುಗಳ ಶೂನ್ಯ ಸಾಧನೆ ಮಾಡಿವೆ. ಈ ಕಾಲೇಜುಗಳ ಶೂನ್ಯ ಸಾಧನೆಯ ಹಿಂದಿನ ಕಾರಣವನ್ನು ಪತ್ತೆ ಹಚ್ಚಬೇಕಾದ ಅಗತ್ಯವಿದೆ. ಇನ್ನು ಇಂಗ್ಲಿಷ್‌ ಮಾಧ್ಯಮಕ್ಕೆ ಹೋಲಿಸಿದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರ ಫ‌ಲಿತಾಂಶ ಕುಗ್ಗಿದೆ. ಇದು ಹೆಚ್ಚು ಆತಂಕಕ್ಕೆ ಕಾರಣವಾಗುವ ಸಂಗತಿ. ಕರ್ನಾಟಕದಲ್ಲೇ ಕನ್ನಡ ಮಾಧ್ಯಮ ಫ‌ಲಿತಾಂಶವು ಕುಗ್ಗುತ್ತಿರುವುದು ಶುಭ ಸೂಚನೆಯಲ್ಲ. ಈ ಕಳಪೆ ಸಾಧನೆಗೆ ಹಲವಾರು ಕಾರಣಗಳ ಇರಬಹುದು. ಆದರೆ ಅಂತಿಮವಾಗಿ ಫ‌ಲಿತಾಂಶವೇ ಮುಖ್ಯವಾಗುತ್ತದೆ. ಹಾಗಾಗಿ ಸರಕಾರ ಈ ನಿಟ್ಟಿನಲ್ಲಿ ಗಂಭೀರವಾಗಿ ಯೋಚಿಸಬೇಕು. ಯಾಕೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಹಿಂದೆ ಉಳಿಯುತ್ತಿದ್ದಾರೆ? ಅವರು ಎದುರಿಸುತ್ತಿರುವ ಸಮಸ್ಯೆಗಳೇನು? ಮೂಲಭೂತ ಸೌಕರ್ಯ ಕೊರತೆ ಸೇರಿ ಇತ್ಯಾದಿ ವಿಷ ಯಗಳ ಬಗ್ಗೆ ಕೂಲಂಕಷವಾಗಿ ಅಧ್ಯಯನ ನಡೆಸಬೇಕಾದ ಅಗತ್ಯವಿದೆ. ಇದು ಕೇವಲ ತೋರಿಕೆಯಾಗಬಾರದು. ಗಂಭೀರವಾಗಿ ವ್ಯವಸ್ಥೆಯನ್ನು ರೂಪಿಸಿ, ಮುಂಬರುವ ವರ್ಷದ ಹೊತ್ತಿಗೆ ಧನಾತ್ಮಕ ಫ‌ಲಿತಾಂಶವನ್ನು ಪಡೆಯುವ ಗುರಿ ಹಾಕಿಕೊಳ್ಳುವುದು ಸರಕಾರದ ಪ್ರಥಮ ಆದ್ಯತೆಯಾಗಬೇಕು.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.