ಟೋಕಿಯೋದಲ್ಲಿ ಕ್ವಾಡ್‌ ಸಭೆ ಡ್ರ್ಯಾಗನ್‌ ರಾಷ್ಟ್ರವೇ ಗುರಿ


Team Udayavani, Oct 7, 2020, 6:12 AM IST

ಟೋಕಿಯೋದಲ್ಲಿ ಕ್ವಾಡ್‌ ಸಭೆ ಡ್ರ್ಯಾಗನ್‌ ರಾಷ್ಟ್ರವೇ ಗುರಿ

ಜಪಾನ್‌ ರಾಜಧಾನಿ ಟೋಕಿಯೋದಲ್ಲಿ ಮಂಗಳವಾರ ಕ್ವಾಡ್‌ ಸಮೂಹದ ವಿದೇಶಾಂಗ ಸಚಿವರ ಸಭೆ ಆರಂಭಗೊಂಡಿದೆ.

ಭಾರತ, ಜಪಾನ್‌, ಅಮೆರಿಕ ಹಾಗೂ ಆಸ್ಟ್ರೇಲಿಯಾದ ವಿದೇಶಾಂಗ ಸಚಿವರ ನಡುವೆ ನಡೆದಿರುವ ಈ ಸಭೆಯು ಚೀನದ ರಾಜತಾಂತ್ರಿಕ ಉದ್ಧಟತನ, ಸಾಗರ ಪ್ರಾಂತ್ಯದಲ್ಲಿ ಅದರ ಆಕ್ರಮಣ ವರ್ತನೆಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಬಹುದೇ ಎನ್ನುವ ನಿರೀಕ್ಷೆ ಹೆಚ್ಚಿಸಿದೆ.

ಈ ನಾಲ್ಕೂ ರಾಷ್ಟ್ರಗಳು ಚೀನದೊಂದಿಗೆ ಒಂದಲ್ಲ ಒಂದು ರೀತಿಯ ಬಿಕ್ಕಟ್ಟು ಎದುರಿಸುತ್ತಲೇ ಇದ್ದು, ವ್ಯೂಹಾತ್ಮಕ ವಿಚಾರ ವಿನಿಮಯ, ಮಿಲಿಟರಿ ಸಹಭಾಗಿತ್ವ ಸೇರಿದಂತೆ ಇನ್ನೂ ಅನೇಕ ವಿಚಾರಗಳಲ್ಲಿ ಇವುಗಳ ಸಹಯೋಗವು ಈ ಹೊತ್ತಿನಲ್ಲಿ ಮತ್ತಷ್ಟು ಬಲಿಷ್ಟವಾಗಲೇಬೇಕಿದೆ.

ಗಡಿ ಭಾಗದಲ್ಲಿ ಭಾರತ-ಚೀನದ ನಡುವೆ ಬಿಕ್ಕಟ್ಟು ಸೃಷ್ಟಿಯಾಗಿರುವುದರಿಂದ, ಭಾರತಕ್ಕೆ ಈ ಸಭೆ ಅಗತ್ಯವಿತ್ತು ಎನ್ನುವುದು ನಿರ್ವಿವಾದ.

ಆದಾಗ್ಯೂ ಪರಸ್ಪರ ಮಿಲಿಟರಿ ಸಹಕಾರ, ತುರ್ತು ಸಮಯದಲ್ಲಿ ನೆರವಿನ ಉದ್ದೇಶಗಳಿಗಾಗಿ ಕ್ವಾಡ್‌ ಒಕ್ಕೂಟವನ್ನು ರಚಿಸಲಾಗಿದೆ ಎಂದು ಅಧಿಕೃತವಾಗಿ ಹೇಳಲಾಗುತ್ತದಾದರೂ ಇದರ ನಿಜವಾದ ಗುರಿ ಏಶ್ಯಾದಲ್ಲಿ ಹೆಚ್ಚುತ್ತಿರುವ ಚೀನದ ಆರ್ಥಿಕ ಹಾಗೂ ಮಿಲಿಟರಿ ಉದ್ಧಟತನವನ್ನು ತಡೆಯುವುದೇ ಆಗಿದೆ.

ಅದರಲ್ಲೂ ದಕ್ಷಿಣ ಚೀನ ಸಮುದ್ರ ಪ್ರಾಂತ್ಯದಲ್ಲಿ ಏಕಸ್ವಾಮ್ಯ ಸಾಧಿಸಬೇಕೆಂದು ಚೀನ ಪ್ರಯತ್ನಿಸುತ್ತಿದ್ದು, ತನ್ಮೂಲಕ ಆ ಕ್ಷೇತ್ರದಲ್ಲಿನ ವ್ಯಾಪಾರ ಶಕ್ತಿ ತಾನಾಗಬೇಕು ಎಂದು ಡ್ರ್ಯಾಗನ್‌ ರಾಷ್ಟ್ರ ಬಯಸುತ್ತದೆ. ಮುಖ್ಯವಾಗಿ ಪೆಸಿಫಿಕ್‌ ಹಾಗೂ ಹಿಂದೂ ಮಹಾಸಾಗರದ ನಡುವೆ ಇರುವ ಜಲಮಾರ್ಗವು ಅತೀ ಮಹತ್ವಪೂರ್ಣ ವ್ಯಾಪಾರ ಮಾರ್ಗವಾಗಿದ್ದು, ಜಗತ್ತಿನ 20 ಪ್ರತಿಶತಕ್ಕೂ ಅಧಿಕ ಸಾಗರ ವ್ಯಾಪಾರದ ಪಾಲನ್ನು ಈ ಪ್ರದೇಶವೇ ಹೊಂದಿದೆ.

ಈ ಕಾರಣಕ್ಕಾಗಿಯೇ 7 ದೇಶಗಳಿಂದ ಸುತ್ತುವರಿದಿರುವ ದಕ್ಷಿಣ ಚೀನ ಸಮುದ್ರದ ವಿಚಾರವಾಗಿ ಚೀನದೊಂದಿಗೆ ಉಳಿದ ದೇಶಗಳ ನಡುವೆ ಬಿಕ್ಕಟ್ಟು ಹೆಚ್ಚುತ್ತಲೇ ಇದೆ. ಆ ಪ್ರದೇಶದಲ್ಲಿನ ಚಿಕ್ಕ ರಾಷ್ಟ್ರಗಳನ್ನು ತನ್ನ ಮಿಲಿಟರಿ ಸಾಮರ್ಥ್ಯದ ಮೂಲಕ ಬೆದರಿಸುವ ಪ್ರಯತ್ನ ನಡೆಸಿದೆ ಚೀನ. ಕೇವಲ ವ್ಯವಹಾರದ ದೃಷ್ಟಿಯಿಂದಷ್ಟೇ ಅಲ್ಲದೆ, ಸಾಮರಿಕ ಆಯಾಮದಲ್ಲೂ ದಕ್ಷಿಣ ಚೀನ ಸಮುದ್ರವನ್ನು ಚೀನ ಪ್ರಮುಖವೆಂದು ಭಾವಿಸುತ್ತದೆ. ಹೀಗಾಗಿ ಈಗಾಗಲೆ ಆ ಪ್ರಾಂತ್ಯದಲ್ಲಿ ಹಲವೆಡೆ ದೊಡ್ಡ ಮಟ್ಟದಲ್ಲಿ ಸೇನಾ ಘಟಕಗಳನ್ನೂ ಸ್ಥಾಪಿಸಿದೆ.

ಕೆಲವು ಸಮಯಗಳ ಹಿಂದೆ ಈ ಸಾಗರ ಪ್ರಾಂತ್ಯದಲ್ಲಿ ಚೀನ ಯುದ್ಧ ವಿಮಾನ ನಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸುವ ಮೂಲಕ ಅಮೆರಿಕದ ನಿದ್ದೆಗೆಡಿಸಿದೆ. ಇತ್ತ ಲಡಾಖ್‌ನಲ್ಲಿ ಬಿಕ್ಕಟ್ಟು ಸೃಷ್ಟಿಸಿದೆ.

ಅತ್ತ ಆಸ್ಟ್ರೇಲಿಯಾವನ್ನು ವ್ಯಾವಹಾರಿಕವಾಗಿ ಕಟ್ಟಿಹಾಕಲು ಪ್ರಯತ್ನಿಸುತ್ತಿದೆ. ಇನ್ನು ತನ್ನ ಹಳೆಯ ಶತ್ರು ಜಪಾನ್‌ಗೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಮಾಡುತ್ತಲೇ ಇದೆ.

ಈ ಕಾರಣಕ್ಕಾಗಿಯೇ ಚೀನದ ಹೆಡೆಮುರಿಕಟ್ಟಲು ಈ ನಾಲ್ಕೂ ರಾಷ್ಟ್ರಗಳು ಪ್ರಬಲ ವ್ಯೂಹಾತ್ಮಕ ತಂತ್ರವನ್ನು ರಚಿಸಲೇಬೇಕಿರುವುದು ಅಗತ್ಯವಾಗಿದೆ.

ಕ್ವಾಡ್‌ ಸಮೂಹ ಸಭೆಯು ಕೇವಲ ಅಮೆರಿಕ, ಭಾರತ, ಜಪಾನ್‌ ಆಸ್ಟ್ರೇಲಿಯಾಕ್ಕಷ್ಟೇ ಅಲ್ಲದೇ, ಜಾಗತಿಕ ವ್ಯಾಪಾರ ವಲಯ ಹಾಗೂ ಏಷ್ಯನ್‌ ರಾಷ್ಟ್ರಗಳ ಸುರಕ್ಷತೆಯ ಹಿತದೃಷ್ಟಿಯಿಂದಲೂ ಮುಖ್ಯವಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.