ನೆರೆ ಪರಿಹಾರ ದೂರದೃಷ್ಟಿ ಬೇಕಿದೆ


Team Udayavani, Aug 11, 2020, 6:30 AM IST

ನೆರೆ ಪರಿಹಾರ ದೂರದೃಷ್ಟಿ ಬೇಕಿದೆ

ಸಾಂದರ್ಭಿಕ ಚಿತ್ರ

ಸತತ ಮೂರನೇ ವರ್ಷ ರಾಜ್ಯ ನೆರೆಗೆ ತುತ್ತಾಗಿದೆ. ಆದರೆ ಈ ಬಾರಿ ಕೋವಿಡ್ ವೈರಸ್‌ ಹಾವಳಿ ಹಾಗೂ ಅದು ತಂದೊಡ್ಡಿದ ಆರ್ಥಿಕ ಸಂಕಷ್ಟದಂತಹ ಸವಾಲುಗಳ ಜತೆಗೆ ಮುಖ್ಯಮಂತ್ರಿಯಾದಿಯಾಗಿ ಹಲವು ಸಚಿವರ ಅನುಪಸ್ಥಿತಿಯಲ್ಲಿ ಇದನ್ನು ಎದುರಿಸಬೇಕಾಗಿದೆ. ಕೇವಲ ವಾರದ ಅಂತರದಲ್ಲಿ ಸುಮಾರು 32 ಸಾವಿರ ಹೆಕ್ಟೇರ್‌ ಕೃಷಿ ನಾಶವಾಗಿದ್ದು ನಾಲ್ಕು ಸಾವಿರ ಕೋಟಿ ರೂ. ಗೂ ಅಧಿಕ ನಷ್ಟವಾಗಿದೆ.

ಸಮಸ್ಯೆಯ ತೀವ್ರತೆ ಅರಿತ ಸರಕಾರ, ಮುಂಗಡ ಅನುದಾನಕ್ಕೆ ಮೊರೆ ಇಟ್ಟಿದೆ. ತಕ್ಷಣದ ಪರಿಹಾರ ಮತ್ತು ಪುನರ್‌ವಸತಿ ಕಾರ್ಯಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ಮೊದಲ ಕಂತು 395 ಕೋ. ರೂ. ತುರ್ತು ಬಿಡುಗಡೆ, ಹೆಚ್ಚುವರಿಯಾಗಿ ನಾಲ್ಕು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ಕಳುಹಿಸುವಂತೆಯೂ ಕೋರಿದೆ. ಈ ಮಧ್ಯೆ ದೀರ್ಘಾವಧಿಯ ಪರಿಹಾರವಾಗಿ ಕಾವೇರಿ ಮತ್ತು ಕೃಷ್ಣಾ ನದಿ ಪಾತ್ರಗಳಲ್ಲಿ, ಪಶ್ಚಿಮ ಘಟ್ಟಗಳು ವ್ಯಾಪಿಸಿರುವ ನೆರೆ ರಾಜ್ಯಗಳಲ್ಲಿ ಭೂಕುಸಿತ ಸಂಬಂಧ ಮ್ಯಾಪಿಂಗ್‌ ಮತ್ತು ಮುನ್ಸೂಚನಾ ವ್ಯವಸ್ಥೆ ಸ್ಥಾಪಿಸುವ ಸಂಬಂಧ ಕೇಂದ್ರ ಭೂವಿಜ್ಞಾನ ಸರ್ವೇಕ್ಷಣಾ ಇಲಾಖೆಯಿಂದ ಅಧ್ಯಯನ ಕೈಗೊಳ್ಳಲು ಮನವಿ ಮಾಡಲಾಗಿದೆ.

ಆದರೆ ಇದು ಶಾಶ್ವತ ಪರಿಹಾರಕ್ಕೆ ನಾಂದಿ ಹಾಡಬಲ್ಲದೇ? ಅನುಭವಗಳ ಹಿನ್ನೆಲೆಯಲ್ಲಿ ಹೇಳುವುದಾದರೆ, ಖಂಡಿತ ಇಲ್ಲ. ಪ್ರತಿ ಸಲ ನಿರ್ದಿಷ್ಟ ಪ್ರದೇಶಗಳಲ್ಲೇ ನೆರೆ ಉಕ್ಕಿ ಹರಿಯುತ್ತಿದೆ. ಈ ಸಂದರ್ಭದಲ್ಲಿ ನೆರವಿನ ಸಹಾಯಹಸ್ತಗಳು, ತಾತ್ಕಾಲಿಕ ಕಾಳಜಿ ಕೇಂದ್ರಗಳು, ಪರಿಹಾರಕ್ಕಾಗಿ ಮನವಿಯಿಂದ ಆಚೆಗೆ ನಾವು ಯೋಚಿಸಿದಂತೆ ಕಾಣುವುದಿಲ್ಲ. ಯಾಕೆಂದರೆ 2009ರಲ್ಲೂ ನೆರೆ ಹಾವಳಿ ಉಂಟಾಗಿತ್ತು. ಉತ್ತರ ಕರ್ನಾಟಕದ ನೂರಾರು ಹಳ್ಳಿಗಳನ್ನೇ ಸ್ಥಳಾಂತರಿಸಬೇಕಾಯಿತು.

ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ಪ್ರವಾಹಕ್ಕೆ ತುತ್ತಾದ ಕೊಡಗು ಜಿಲ್ಲೆ ಯನ್ನೇ ತೆಗೆದುಕೊಂಡರೆ, ಇತ್ತೀಚಿನ ವರ್ಷಗಳಲ್ಲಿ ಸಣ್ಣಹಿಡುವಳಿ ನೆಪದಲ್ಲಿ ಯಥೇತ್ಛವಾಗಿ ಭೂಮಿ ಪರಭಾರೆ ನಡೆದಿದೆ. ಅಲ್ಲಿ ವಿಲ್ಲಾ, ಹೋಂಸ್ಟೇಗಳು, ಲೇ ಔಟ್‌ ತಲೆಯೆತ್ತಿವೆ. ನದಿಪಾತ್ರದ ಆಸುಪಾಸು ಬಫ‌ರ್‌ಝೋನ್‌ಗಳನ್ನು ಉಲ್ಲಂಘಿಸಿ ಅಭಿವೃದ್ಧಿ ಚಟುವಟಿಕೆಗಳು ನಡೆದಿವೆ. ಇದಕ್ಕೆ ಬ್ರೇಕ್‌ ಹಾಕುವ ಪ್ರಯತ್ನಗಳು ನಡೆ ಯುತ್ತಿಲ್ಲ. ಆನೆಗಳಂತೆಯೇ ನದಿ, ಹಳ್ಳ- ಕೊಳ್ಳಗಳಿಗೂ ತನ್ನದೇ ಆದ “ಕಾರಿಡಾರ್‌’ ಗಳಿರುತ್ತವೆ. ತಾತ್ಕಾಲಿಕವಾಗಿ ಮನುಷ್ಯ ಅದನ್ನು “ಅಭಿವೃದ್ಧಿ’ಯಿಂದ ಪಳಗಿ ಸಿದಂತೆ ಕಂಡರೂ, ಕಾಲಾನುಕ್ರಮದಲ್ಲಿ ಅದು ಮತ್ತೆ ತನ್ನ ಮೂಲ ಪಾತ್ರದಂತೆಯೇ ಹರಿದುಬರುತ್ತದೆ. ಆಗ ಅದು ನಮಗೆ ಪ್ರವಾಹವಾಗಿ ಪರಿಣಮಿಸುತ್ತದೆ.

ಇದೆಲ್ಲದಕ್ಕಿಂತ ಹೆಚ್ಚಾಗಿ ನಿರಂತರ ಬರಕ್ಕೂ ತುತ್ತಾಗುವ ನಾವು ಈ ನೆರೆಯನ್ನು ಸಕಾರಾತ್ಮಕ ದೃಷ್ಟಿಕೋನದಿಂದ ನೋಡುವ ಅವಶ್ಯಕತೆ ಇದೆ. ಆ ಭಾಗದ ಕೆಲವು ಪ್ರದೇಶಗಳು ನಿರಂತರವಾಗಿ ಬರಕ್ಕೆ ತುತ್ತಾಗುತ್ತವೆ. ಬೆಳಗಾವಿಯಂತಹ ಹಲವು ಪ್ರದೇಶಗಳು ನೆರೆಗೆ ತುತ್ತಾಗುತ್ತವೆ. ಈಗ ಆ ನೀರು ವ್ಯರ್ಥವಾಗಿ ಹೋಗದಂತೆ ತಡೆ ಯುವ ಅವಶ್ಯಕತೆ ಇದೆ. ಅದನ್ನು ಅಂತರ್ಜಲ ಮರುಪೂರಣ ಆಗುವಂತೆ ಮಾಡ ಬೇಕು. ಇದಕ್ಕಾಗಿ ಅಲ್ಲಲ್ಲಿ ಹಸುರೀಕರಣ ಮಾಡಿ, ಹರಿವಿನ ವೇಗಕ್ಕೆ ತಡೆಯೊಡ್ಡಬೇಕು. ಚೆಕ್‌ ಡ್ಯಾಂ ನಿರ್ಮಿಸಬೇಕು. ಗಟ್ಟಿಕಲ್ಲಿನ ಭಾಗದಲ್ಲಿ ರಬ್ಬರ್‌ ಡ್ಯಾಂ ನಿರ್ಮಿಸಿ, ನೀರು ತಡೆಹಿಡಿಯಬೇಕು. ಕಾಲುವೆ ನಿರ್ಮಿಸಿ ಹೆಚ್ಚು ಬರಕ್ಕೆ ತುತ್ತಾಗಿರುವ ಪ್ರದೇಶಗಳತ್ತ ತಿರುಗಿಸಬೇಕು. ಇದೆಲ್ಲದಕ್ಕೂ ಸರಕಾರದ ದೂರದೃಷ್ಟಿಯ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಮುಂಗಾರಿನ ಪ್ರವೇಶ ವಿಳಂಬವಾಗುತ್ತಿದೆ. ವಾಡಿಕೆ ಮಳೆ ಯಾದರೂ, ಹಂಚಿಕೆ ಸಮಾನವಾಗಿ ಆಗುತ್ತಿಲ್ಲ. ಸಾಮಾನ್ಯವಾಗಿ ಬಂಗಾಲ ಕೊಲ್ಲಿ ಯಲ್ಲಿ ಕಂಡುಬರುತ್ತಿದ್ದ ಬೆಳವಣಿಗೆಗಳು ಅರಬಿ ಸಮುದ್ರದಲ್ಲೂ ಕಂಡು ಬರುತ್ತಿವೆ. ನಗರದ ನೆರೆ ಉಂಟಾಗಬಹುದಾದ ಪ್ರದೇಶಗಳ ಬಗ್ಗೆ ಮುನ್ಸೂಚನೆ ನೀಡುವ ತಂತ್ರಜ್ಞಾನ ನಮ್ಮ ಬಳಿ ಇದೆ. ಇದನ್ನು ನಾವು ಕೊಡಗು, ಬೆಳಗಾವಿ ಸೇರಿದಂತೆ ಪ್ರತಿ ವರ್ಷ ತುತ್ತಾಗುವ ಪ್ರದೇಶಗಳಲ್ಲಿ ಬಳಕೆ ಮಾಡಿಕೊಳ್ಳುವ ಅವಶ್ಯಕತೆ ಇದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.